Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಬ್ರಹ್ಮಪುತ್ರದ ನದಿಗೆ ಬೃಹತ್ ಡ್ಯಾಮ್‌ ಕಟ್ಟಲು ಮುಂದಾದ ಚೀನಾ – ಭಾರತದ ಆತಂಕವೇನು?

Public TV
Last updated: January 22, 2025 7:24 am
Public TV
Share
3 Min Read
Brahmaputra River
SHARE

ಬ್ರಹ್ಮಪುತ್ರ ನದಿಗೆ ವಿಶ್ವದಲ್ಲೇ ಅತಿ ದೊಡ್ಡ ಅಣೆಕಟ್ಟು (Brahmaputra Dam) ನಿರ್ಮಾಣಕ್ಕೆ ಚೀನಾ (China) ಮುಂದಾಗಿದೆ. ಇದಕ್ಕಾಗಿ ಚೀನಾ ಸುಮಾರು 11.67 ಲಕ್ಷ ಕೋಟಿ ರೂ. ವೆಚ್ಚ ಮಾಡಲಿದೆ. ಈ ನದಿಯ ನೀರಿನಲ್ಲಿ ಭಾರತ (India) ಹಾಗೂ ಬಾಂಗ್ಲಾದೇಶ ಪಾಲು ಹೊಂದಿದ್ದು, ಈ ಎರಡೂ ದೇಶಗಳು ತೀವ್ರ ಕಳವಳ ವ್ಯಕ್ತಪಡಿಸಿವೆ.

ಈ ಅಣೆಕಟ್ಟು ಪೂರ್ಣಗೊಂಡ ನಂತರ 60,000 MW ವಿದ್ಯುತ್‌ ಉತ್ಪಾದನೆ ಆಗಲಿದೆ. ಈ ಮೂಲಕ ಯೋಜನೆಯು ವಿಶ್ವದ ಅತಿದೊಡ್ಡ ಜಲವಿದ್ಯುತ್ ಯೋಜನೆಯಾಗಿ ಹೊರಹೊಮ್ಮಲಿದೆ. ಇದು ಮಧ್ಯ ಚೀನಾದಲ್ಲಿರುವ ತ್ರೀ ಗಾರ್ಜಸ್ ಅಣೆಕಟ್ಟಿಗಿಂತಲೂ ಮೂರು ಪಟ್ಟು ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ವರದಿಯಾಗಿದೆ.

BrahmaPutra dam 3

ಟಿಬೆಟ್‌ನಲ್ಲಿ ಈ ನದಿಯನ್ನು ಯಾರ್ಲುಂಗ್ ತ್ಸಾಂಗ್ಪೊ ಎನ್ನಲಾಗುತ್ತದೆ. ಅಲ್ಲಿಂದ ಅರುಣಾಚಲ ಪ್ರದೇಶವನ್ನು ಈ ನದಿ ಪ್ರವೇಶಿಸುತ್ತದೆ, ಅಲ್ಲಿ ಈ ನದಿಯನ್ನು ಸಿಯಾಂಗ್ ಎಂದು ಕರೆಯಲಾಗುತ್ತದೆ. ಅಸ್ಸಾಂನಲ್ಲಿ, ಇದು ದಿಬಾಂಗ್ ಮತ್ತು ಲೋಹಿತ್‌ನಂತಹ ಉಪನದಿಗಳಿಂದ ಸೇರಿಕೊಂಡು ಬ್ರಹ್ಮಪುತ್ರ ಎಂದು ಕರೆಯಲಾಗುತ್ತದೆ. ನದಿಯು ನಂತರ ಬಾಂಗ್ಲಾದೇಶವನ್ನು ಪ್ರವೇಶಿಸುತ್ತದೆ. ಬಳಿಕ ಬಂಗಾಳ ಕೊಲ್ಲಿಗೆ ಸೇರುತ್ತದೆ. ಈಗ ಚೀನಾ ಯೋಜನೆಯಿಂದ ಈ ಪ್ರದೇಶಗಳಲ್ಲಿ ವಾಸಿಸುವ ಲಕ್ಷಾಂತರ ಜನರ ಹಾಗೂ ಪರಿಸರದ ಮೇಲೆ ಪರಿಣಾಮ ಬೀರಬಹುದು ಎಂಬ ಕಳವಳ ಕೂಡ ವ್ಯಕ್ತವಾಗುತ್ತಿದೆ.

ಯೋಜನೆಯ ಪ್ರಮುಖ ಅಂಶಗಳೇನು?
ಈ ಡ್ಯಾಂ ಚೀನಾದ 14ನೇ ಪಂಚವಾರ್ಷಿಕ ಯೋಜನೆಯ ಪ್ರಮುಖ ಅಂಶವಾಗಿದೆ. ವಾರ್ಷಿಕವಾಗಿ 300 ಶತಕೋಟಿ kWh ವಿದ್ಯುತ್ ಉತ್ಪಾದಿಸುವ ಗುರಿಯನ್ನು ಹೊಂದಿದೆ. ಯೋಜನೆಗೆ 137 ಶತಕೋಟಿ ಡಾಲರ್‌ (11.67 ಲಕ್ಷ ಕೋಟಿ ರೂ) ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

ಚೀನಾಗೆ ಈ ಡ್ಯಾಂ ಯಾಕೆ ಬೇಕು?
ಹೆಚ್ಚಿನ ವಿದ್ಯುತ್‌ ಉತ್ಪಾದನೆಯಿಂದ ಸಾಂಪ್ರದಾಯಿಕ ಇಂಧನ ಮೂಲಗಳಿಂದ ದೂರ ಸರಿಯಲು ಚೀನಾ ಯೋಜಿಸಿದೆ. ಇನ್ನೂ, 2060ರ ವೇಳೆಗೆ ಇಂಗಾಲದ ಪ್ರಮಾಣ ತಗ್ಗಿಸಲು ಈ ಅಣೆಕಟ್ಟು ಸಹಾಯ ಮಾಡುತ್ತದೆ ಎಂದು ಚೀನಾ ಹೇಳಿಕೊಂಡಿದೆ. ಅಲ್ಲದೇ ನೀರಾವರಿ, ಕೈಗಾರಿಕೆ ಬೆಳವಣಿಗೆ, ಸಾರಿಗೆ ವ್ಯವಸ್ಥೆ ಸುಧಾರಣೆ, ವ್ಯಾಪಾರ ವೃದ್ಧಿ, ಉದ್ಯೋಗ ಸೃಷ್ಟಿಯಾಗಲಿದೆ ಎಂದು ಚೀನಾ ಮಾಧ್ಯಮಗಳು ವರದಿ ಮಾಡಿವೆ.

BrahmaPutra dam 1

ಭಾರತದ ಆತಂಕವೇನು?
ಡ್ಯಾಮ್‌ಗಳನ್ನು ಜಲ ಬಾಂಬ್‌ಗಳೆಂದೆ ಕರೆಯಲಾಗುತ್ತದೆ. ಅದೇ ಕಾರಣಕ್ಕೆ ಶತೃದೇಶಗಳ ಕೈಗೆ ಹಾಗೂ ಉಗ್ರರಿಗೆ ಡ್ಯಾಮ್‌ಗಳ ಮಾಹಿತಿ, ಗೌಪ್ಯತೆ ತಿಳಿಯದಂತೆ ಫೋಟೋ, ಚಿತ್ರೀಕರಣಕ್ಕೆ ನಿಷೇಧ ಹೇರಲಾಗುತ್ತದೆ.

ಈಗ ಚೀನಾ ನಿರ್ಮಿಸುತ್ತಿರುವ ವಿಶ್ವದ ಅತೀ ದೊಡ್ಡ ಡ್ಯಾಮ್‌ನ್ನು ಭಾರತ ಮತ್ತು ಬಾಂಗ್ಲಾದೇಶದ ಮೇಲೆ ದಾಳಿ ನಡೆಸಲು ಚೀನಾ ಬಳಸುವ ಆತಂಕವಿದೆ. ಹೌದು! ಯಾವುದೇ ಸೂಚನೆ ನೀಡದೇ ಕುತಂತ್ರದಿಂದ ಚೀನಾ ತನ್ನ ಡ್ಯಾಮ್‌ನಿಂದ ನೀರನ್ನು ಹರಿಸಿದರೆ ಹಲವಾರು ಪ್ರದೇಶಗಳು ಕೊಚ್ಚಿ ಹೋಗುವ ಭೀತಿ ಇದೆ. ಇದರಿಂದ ಜನ, ಜಾನುವಾರು, ಮೂಲಭೂತ ಸೌಕರ್ಯಗಳು ಹಾನಿಗೊಳಗಾಗುವ ಆತಂಕ ಸಹ ಇದೆ. ಇದೀಗ ಭಾರತದ ಮೇಲೆ ದಾಳಿಯ ಉದ್ದೇಶದಿಂದಲೇ ಚೀನಾ ಈ ಡ್ಯಾಮ್‌ ನಿರ್ಮಾಣಕ್ಕೆ ಮುಂದಾಯಿತಾ ಎಂಬ ಪ್ರಶ್ನೆ ಸಹ ಉದ್ಭವಿಸಿದೆ.

BrahmaPutra dam 2

ನದಿಯಲ್ಲಿ ಹರಿಯುವ ನೀರಿನ ಮೇಲೆ ಚೀನಾ ತನ್ನ ಹಿಡಿತ ಸಾಧಿಸಲು ಯತ್ನಿಸುತ್ತಿದೆ ಎಂದು ಭಾರತ ಆರೋಪಿಸಿದೆ. ಅಣೆಕಟ್ಟಿನ ಗಾತ್ರದ ಲೆಕ್ಕಾಚಾರದಂತೆ ನದಿಯಿಂದ ದೊಡ್ಡ ಪ್ರಮಾಣದಲ್ಲಿ ನೀರು ಹರಿಸಿದರೆ, ಕೆಳಭಾಗದಲ್ಲಿ ದೊಡ್ಡ ಪ್ರಮಾಣದ ಪ್ರವಾಹ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಭಾರತದ ಅರುಣಾಚಲ ಪ್ರದೇಶಕ್ಕೆ ಪ್ರವೇಶಕ್ಕೂ ಮುನ್ನ ನದಿಯು ದೊಡ್ಡದಾಗಿ ತಿರುವು ಪಡೆಯುತ್ತದೆ. ಆ ಭಾಗದಲ್ಲಿ ಹಿಮಾಲಯದ ಆಳವಾದ ಕಮರಿ ಪ್ರದೇಶದಲ್ಲಿ ಈ ಅಣೆಕಟ್ಟು ನಿರ್ಮಾಣವಾಗುತ್ತದೆ. ಇದರಿಂದಾಗಿ ಚೀನಾದಿಂದ ಭಾರತಕ್ಕೆ ನೀರಿನ ಹರಿವಿನ ಮೇಲೆ ಈ ಆಣೆಕಟ್ಟು ಪರಿಣಾಮ ಬೀರಬಹುದು. ಕೃಷಿಗೆ ಇದರಿಂದ ಸಮಸ್ಯೆಯಾಗಬಹುದು.

ನದಿಯ ಹರಿವಿನ ಬದಲಾವಣೆಗಳು ಸ್ಥಳೀಯ ಜೀವವೈವಿಧ್ಯತೆಯ ಮೇಲೆ ಪರಿಣಾಮ ಬೀರಬಹುದು ಎಂದು ಭಾರತ ಆತಂಕ ವ್ಯಕ್ತಪಡಿಸಿದೆ. ಅಲ್ಲದೇ ಈ ಪ್ರದೇಶವು ಪ್ರಪಂಚದ ಅತ್ಯಂತ ದುರ್ಬಲವಾದ ಮತ್ತು ಭೂಕಂಪ ಪೀಡಿತ ಪ್ರದೇಶವಾಗಿದೆ. 2004 ರಲ್ಲಿ ಭೂಕುಸಿತವು ಹಿಮಾಚಲ ಪ್ರದೇಶದ ಬಳಿ ಟಿಬೆಟಿಯನ್ ಹಿಮಾಲಯದಲ್ಲಿ ಗ್ಲೇಶಿಯಲ್ ಪರೇಚು ಸರೋವರವನ್ನು ಸೃಷ್ಟಿಸಿದೆ ಎಂಬುದನ್ನು ನಾವಿಲ್ಲಿ ಸ್ಮರಿಸಬಹುದು. ಇದರಿಂದ ಮುಂದಾಗುವ ಅನಾಹುತಗಳನ್ನು ತಪ್ಪಿಸಲು ಎರಡೂ ದೇಶಗಳ ಮಾತುಕತೆ ಅಗತ್ಯ ಎಂಬುದು ತಜ್ಞರ ಅಭಿಪ್ರಾಯ.

ಗಾರ್ಜಸ್ ಡ್ಯಾಂನಿಂದ ಭೂಮಿ ವೇಗದ ಮೇಲೆ ಪರಿಣಾಮ!

ಇನ್ನೂ ಚೀನಾ ಈ ಹಿಂದೆ ನಿರ್ಮಿಸಿದ್ದ ಗಾರ್ಜಸ್ ಅಣೆಕಟ್ಟಿನಿಂದ ಭೂಮಿಯ ತಿರುಗುವಿಕೆ 0.06 ಮೈಕ್ರೋಸೆಕೆಂಡ್‌ಗಳಷ್ಟು ನಿಧಾನವಾಗಿದೆ. ಅದೇ ರೀತಿ ಈಗ ನಿರ್ಮಾಣವಾಗುತ್ತಿರುವ ಆಣೆಕಟ್ಟಿನಿಂದಲೂ ಸಮಸ್ಯೆಯಾಗುವ ಸಾಧ್ಯತೆ ಇದೆ ಎಂಬ ಆತಂಕ ಎದುರಾಗಿದೆ.

ಭಾರತ ಮತ್ತು ಬಾಂಗ್ಲಾದೇಶ ದೇಶಗಳ ಮೇಲೆ ಈ ಡ್ಯಾಂ ಯಾವುದೇ ಋಣಾತ್ಮಕ ಪರಿಣಾಮ ಬೀರುವುದಿಲ್ಲ ಎಂದು ಚೀನಾ ಹೇಳಿಕೊಂಡಿದೆ.

TAGGED:Brahmaputra damBrahmaputra Riverchinaindiaಬ್ರಹ್ಮಪುತ್ರ ನದಿ
Share This Article
Facebook Whatsapp Whatsapp Telegram

You Might Also Like

hawaii mosquito
Latest

ದೊಡ್ಡ ದೊಡ್ಡ ಡ್ರೋನ್ ಬಳಸಿ ಹವಾಯ್‌ಗೆ ಸೊಳ್ಳೆಗಳ ಬಿಡುಗಡೆ – ಇಲ್ಲದಿದ್ರೆ ಈ ಜೀವಸಂಕುಲವೇ ನಾಶವಾಗುತ್ತಂತೆ!

Public TV
By Public TV
2 minutes ago
Masoud Pezeshkian Narendra Modi
Latest

ಇರಾನ್ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಕರೆ – ಇಸ್ರೇಲ್‌ನೊಂದಿಗಿನ ಸಂಘರ್ಷ ಶಮನಕ್ಕೆ ಸಲಹೆ

Public TV
By Public TV
15 minutes ago
Chikkaballapura 5
Chikkaballapur

ಕೃಷಿ ಹೊಂಡದಲ್ಲಿ ತಾಯಿ-ಮಗಳ ಶವ ಪತ್ತೆ; ಪತಿ, ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ

Public TV
By Public TV
42 minutes ago
Social worker Nishad Ahmed
Districts

ಹಾಸನ | ಅನಾಥ ಶವಗಳಿಗೆ ಮುಕ್ತಿ ನೀಡುತ್ತಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ ಹೃದಯಾಘಾತದಿಂದ ನಿಧನ

Public TV
By Public TV
1 hour ago
G Parameshwar 2
Bellary

ತುಂಗಭದ್ರಾ ಡ್ಯಾಂಗೆ ಪರಮೇಶ್ವರ್ ಭೇಟಿ – ಕೊಚ್ಚಿ ಹೋಗಿದ್ದ ಕ್ರಸ್ಟ್ ಗೇಟ್ ಸ್ಥಳ ವೀಕ್ಷಣೆ

Public TV
By Public TV
1 hour ago
mohan das pai
Bengaluru City

ಬೈಕ್ ಟ್ಯಾಕ್ಸಿಗೆ ಬೆಂಬಲಿಸಿದ ಉದ್ಯಮಿ ಮೋಹನ್ ದಾಸ್ ಪೈ ವಿರುದ್ಧ ದೂರು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?