– ಒಂದು ಗಂಟೆಗಳ ಕಾಲ ಜಿಲ್ಲಾಧಿಕಾರಿ ಜಗದೀಶ್ರಿಂದ ದಯಾನಂದ್ ವಿಚಾರಣೆ
ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ (Chinnaswamy Stampede) ಪ್ರಕರಣ ಸಂಬಂಧ ಅಮಾನತು ಆದ ಐಪಿಎಸ್ ಅಧಿಕಾರಿ ದಯಾನಂದ್ (B Dayanand) ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಎರಡು ನೋಟಿಸ್ಗಳ ಜಾರಿ ಬಳಿಕ ಇಂದು ದಯಾನಂದ್ ವಿಚಾರಣೆಗೆ ಹಾಜರಾಗಿದ್ದರು
ಒಂದು ಗಂಟೆಗೂ ಹೆಚ್ಚು ಕಾಲ ಜಿಲ್ಲಾಧಿಕಾರಿ ಜಗದೀಶ್ ದಯಾನಂದ್ ಅವರ ಹೇಳಿಕೆಯನ್ನು ದಾಖಲು ಮಾಡಿಕೊಂಡರು. ಭದ್ರತಾ ಲೋಪ, ಕರ್ತವ್ಯ ಲೋಪ ಸಂಬಂಧ ಪ್ರಶ್ನೆಗಳ ಸುರಿಮಳೆಗೈದರು. ಡಿಸಿಪಿ ವಿಧಾನಸೌಧ ಕರಿ ಬಸವನಗೌಡ ಪತ್ರದ ಬಗ್ಗೆಯೂ ಜಿಲ್ಲಾಧಿಕಾರಿ ಮಾಹಿತಿ ಕೇಳಿದರು. ಇದನ್ನೂ ಓದಿ: ಮಂಗಳೂರು| ಹೆತ್ತ ತಾಯಿಯನ್ನೇ ಕೊಲೆಗೈದು ಸುಟ್ಟು ಹಾಕಿದ ಪಾಪಿ ಮಗ
ಆರ್ಸಿಬಿ ಹಾಗೂ ಡಿಎನ್ಎ ಅಧಿಕಾರಿಗಳಿಗೆ ನೀವೇನಾದರೂ ಇವೆಂಟ್ ಮಾಡಲು ತಿಳಿಸಿದ್ದೀರಾ ಎಂದು ಪ್ರಶ್ನೆ ಮಾಡಿದರು. ಅಲ್ಲದೇ ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ನಿಮಗೆ ಮಾಹಿತಿ ನೀಡಿದ್ದಾರಾ? ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಬರುತ್ತಾರೆ ಎಂದು ನಿರೀಕ್ಷೆ ಇತ್ತಾ? ಒಂದು ವೇಳೆ ನಿರೀಕ್ಷೆ ಇಟ್ಟಿದ್ದರೆ ಯಾಕೆ ನೀವು ಸರಿಯಾದ ರೀತಿ ಬಂದೋಬಸ್ತ್ ಮಾಡಲಿಲ್ಲ? ನೀವು ಆರ್ಸಿಬಿ ತಂಡಕ್ಕೆ ಅಥವಾ ಡಿಎನ್ಎ ತಂಡಕ್ಕೆ ನೋಟಿಸ್ ನೀಡಿದ್ದೀರಾ? ನಿಮಗೆ ಸಾವಿನ ಬಗ್ಗೆ ಯಾವಾಗ ತಿಳಿಯಿತು? ಮಧ್ಯಾಹ್ನ ಮೂರು ಗಂಟೆಗೆ ಇರುವ ಕಾರ್ಯಕ್ರಮಕ್ಕೆ ಬೆಳಗ್ಗೆ ಯಾಕೆ ಬಂದೋಬಸ್ತ್ ಮಾಡಲು ತಡವಾಯಿತು ಎಂಬ ಪ್ರಶ್ನೆಗಳನ್ನು ಕೇಳಲಾಯಿತು. ಈ ಎಲ್ಲಾ ಪ್ರಶ್ನೆಗಳಿಗೆ ದಯಾನಂದ್ ಉತ್ತರಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಜೀವನ ತುಂಬಾ ಆಕರ್ಷಕ: ವರ್ಗಾವಣೆ ವಿರೋಧಿಸಿ ವೈದ್ಯರು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ
ಈಗಾಗಲೇ 65 ಗಾಯಾಳುಗಳು, ಮೃತರಾದ 11 ಕುಟುಂಗಳ ಜೊತೆಗೆ ಭದ್ರತೆಗೆ ಇದ್ದ ಎಸಿಪಿ, ಡಿಸಿಪಿ, ಇನ್ಸ್ಪೆಕ್ಟರ್ ಸೇರಿ 60ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವಿಚಾರಣೆ ಮುಕ್ತಾಯ ಆಗಿದ್ದು, ಏನಾದ್ರು ಸ್ಪಷ್ಟನೆ ಬೇಕಿದ್ದರೆ ಕೆಲ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ. ಮ್ಯಾಜಿಸ್ಟ್ರೇಟ್ ತನಿಖೆ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಈ ವಾರ ಅಥವಾ ಮುಂದಿನ ವಾರದಲ್ಲಿ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳು ವರದಿ ಸಲ್ಲಿಕೆ ಮಾಡಲಿದ್ದಾರೆ. ಇದನ್ನೂ ಓದಿ: ಮೈಕ್ರೋಸಾಫ್ಟ್ ಹಿಂದಿಕ್ಕಿ ವಿಶ್ವದ ಮೌಲ್ಯಯುತ ಕಂಪನಿಯಾದ ಎನ್ವಿಡಿಯಾ