Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್‌ – ಪೊಲೀಸರನ್ನ ಸಂಪರ್ಕಿಸದೇ ವಿಕ್ಟರಿ ಪೆರೇಡ್‌ ಘೋಷಿಸಿದ್ದ RCB ಫ್ರಾಂಚೈಸಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್‌ – ಪೊಲೀಸರನ್ನ ಸಂಪರ್ಕಿಸದೇ ವಿಕ್ಟರಿ ಪೆರೇಡ್‌ ಘೋಷಿಸಿದ್ದ RCB ಫ್ರಾಂಚೈಸಿ

Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಕೇಸ್‌ – ಪೊಲೀಸರನ್ನ ಸಂಪರ್ಕಿಸದೇ ವಿಕ್ಟರಿ ಪೆರೇಡ್‌ ಘೋಷಿಸಿದ್ದ RCB ಫ್ರಾಂಚೈಸಿ

Public TV
Last updated: June 5, 2025 12:28 pm
Public TV
Share
2 Min Read
Chinnaswamy Stampede
SHARE

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನ ಮುಡಿಗೇರಿಸಿಕೊಂಡಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್‌ಗಳು ಈ ಐತಿಹಾಸಿಕ ಕ್ಷಣವನ್ನು ಸಂಭ್ರಮಿಸುತ್ತಿದ್ದಾಗಲೇ ದುರಂತ ಸಂಭವಿಸಿದೆ. ಕಾಲ್ತುಳಿತದಲ್ಲಿ (Chinnaswamy Stampede) ಉಂಟಾದ ಅಭಿಮಾನಿಗಳ ಸಾವು-ನೋವಿಗೆ ಆರ್‌ಸಿಬಿ ಫ್ರಾಂಚೈಸಿ ಹಾಗೂ ಪೊಲೀಸ್‌ ಇಲಾಖೆಯ ವೈಫಲ್ಯವೇ ಕಾರಣ ಅನ್ನೋದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಹೌದು. ಮಂಗಳ ರಾತ್ರಿ 11:20ರ ಸುಮಾರಿಗೆ ಆರ್‌ಸಿಬಿ ವಿಜಯಶಾಲಿಯಾಗಿತ್ತು, ಇದರಿಂದ ರಾತ್ರಿಯಿಡೀ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಬುಧವಾರ ಸಹ ಬೆಂಗಳೂರು ನಗರದ ವಿವಿಧೆಡೆ ಅಭಿಮಾನಿಗಳು ಸಂಭ್ರಮಾಚರಣೆ ಕೈಗೊಂಡಿದ್ದರು. ಹೀಗಿರುವಾಗಲೇ ಬೆಳಗ್ಗೆ 7:01 ಗಂಟೆಗೆ ಆರ್‌ಸಿಬಿ ಫ್ರಾಂಚೈಸಿ ಇಂದು 3:30ರ ಬಳಿಕ ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂ ವರೆಗೆ ವಿಕ್ಟರಿ ಪೆರೇಡ್‌ ನಡೆಸೋದಾಗಿ ತನ್ನ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನ ಹಂಚಿಕೊಂಡಿತ್ತು. ಆದ್ರೆ ಘೋಷಣೆಗೂ ಮುನ್ನ ಯಾವುದೇ ಪೊಲೀಸ್‌ (Bengaluru Police Department) ಅನುಮತಿ ಪಡೆದಿರಲಿಲ್ಲ. ಪೊಲೀಸರು ಸಹ ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಮ್ಯಾನೇಜ್ಮೆಂಟ್‌ಗೂ ಸರಿಯಾದ ಸೂಚನೆ ಕೊಡದೇ 11 ಗಂಟೆಯಾದ್ರೂ ಸಭೆ ಮಾಡುವುದರಲ್ಲೇ ಕಾಲ ಕಳೆದರು. ನಿರಂತರ ಸಭೆ ನಡೆಸುತ್ತಿದ್ದ ಪೊಲೀಸರು 12 ಗಂಟೆ ಕಳೆದರೂ ಸರಿಯಾದ ತೀರ್ಮಾನಕ್ಕೆ ಬರೋದ್ರಲ್ಲಿ ವಿಫಲರಾಗಿದ್ದರು. ಇದನ್ನೂ ಓದಿ: ಮಾತೇ ಬರುತ್ತಿಲ್ಲ, ತುಂಬಾ ದುಃಖವಾಗಿದೆ: ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಸಂತಾಪ

ಈ ನಡುವೆ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಿದ್ದರಿಂದ ಸ್ಟೇಡಿಯಂಗಿಂತ ವಿಧಾನಸೌಧ ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿತ್ತು. ಅಲ್ಲಿ ಅತಿಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿತ್ತು. ಇದಾದ ಬಳಿಕ ಪೊಲೀಸರು ಮಧ್ಯಾಹ್ನ 2 ಗಂಟೆ ವೇಳೆಗೆ ಟಿಕೆಟ್‌, ಪಾಸ್‌ ಇದ್ದವರಿಗೆ ಮಾತ್ರ ಅವಕಾಶ ಅಂತ ಪ್ರೆಸ್‌ನೋಟ್‌ ಹೊರಡಿಸಿದ್ದರು. ಆದ್ರೆ ಟಿಕೆಟ್‌ ಎಲ್ಲಿ ಸಿಗುತ್ತೆ ಅನ್ನೋದನ್ನ ಫ್ರಾಂಚೈಸಿ ಸ್ಪಷ್ಟಪಡಿಸಿರಲಿಲ್ಲ, ಪೊಲೀಸರು ಇದನ್ನ ಪ್ರಶ್ನೆ ಮಾಡಲಿಲ್ಲ. ಅಲ್ಲದೇ ಮಧ್ಯಾಹ್ನ 3:30ರ ಸುಮಾರಿಗೆ ಫ್ರೀ ಪಾಸ್‌ ಸಿಗುತ್ತೆ ಅಂತ ತನ್ನ ವೆಬ್‌ಸೈಟ್‌ ಮತ್ತು ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿತ್ತು. ಸಂಜೆ 5 ರಿಂದ 6 ಗಂಟೆ ವರೆಗೆ ಪೆರೇಡ್‌ ನಡೆಯಲಿದೆ ಅಂತ ಪೋಸ್ಟ್‌ ಹಂಚಿಕೊಂಡಿತ್ತು. ಆದ್ರೆ ಅಷ್ಟರಲ್ಲಾಗಲೇ ಸ್ಟೇಡಿಯಂ ಬಳಿ ಲಕ್ಷಾಂತರ ಜನ ಜಮಾಯಿಸಿದ್ದರು. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ; ಫ್ಯಾನ್ಸ್‌ ಸಾವು-ನೋವಿಗೆ ಆರ್‌ಸಿಬಿ ಶೋಕ

ಈ ನಡುವೆ ಗೃಹಸಚಿವ ಪರಮೇಶ್ವರ್‌ ಅವರು ವಿಕ್ಟರಿ ಪೆರೇಡ್ ಇಲ್ಲ, ವಿಧಾನಸೌಧಕ್ಕೆ ಎಂಟ್ರಿ ಇಲ್ಲ, ಸ್ಟೇಡಿಯಂಗೆ ಹೋಗಿ ಅಂದುಬಿಟ್ಟರು. ಮಾಹಿತಿ ತಿಳಿದ ಜನ ಸ್ಟೇಡಿಯಂಗೆ ನುಗ್ಗಲು ಯತ್ನಿಸಿದ್ರು ಈ ಎಲ್ಲ ಬೆಳವಣಿಗೆಯಿಂದ ಅಭಿಮಾನಿಗಳ ಸಾವು ನೋವಾಗಿದೆ. ಇದನ್ನೂ ಓದಿ: ಟೀಂ ಇಂಡಿಯಾದ್ದು 5 ದಿನ, ಸಿಎಸ್‌ಕೆ 3 ದಿನದ ನಂತರ ಆಚರಣೆ ಮಾಡಿದ್ರೆ ಒಂದೇ ದಿನದಲ್ಲಿ ವಿಜಯೋತ್ಸವ ಆಚರಿಸಿದ್ದು ಯಾಕೆ? – ಜೆಡಿಎಸ್‌ ಆಕ್ರೋಶ

ದುರಂತಕ್ಕೆ ಪ್ರಮುಖ ಕಾರಣಗಳೇನು?
* ವಿಕ್ಟರಿ ಪೆರೇಡ್‌ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಪೊಲೀಸರು ತಡ ಮಾಡಿದ್ದು
* ಆಡಳಿತ ಮಂಡಳಿಗೆ ಖಡಕ್ ಸೂಚನೆ ಕೊಡೋದಕ್ಕೆ ಹಿಂದೇಟು ಹಾಕಿದ್ದು
* ಟಿಕೆಟ್ ಮತ್ತು ಪಾಸ್ ಬಗ್ಗೆ ಪೊಲೀಸರಿಗೆ ಮಾಹಿತಿಯೇ ಇರಲಿಲ್ಲ
* ಜನಕ್ಕೆ ಮಾಹಿತಿ ನೀಡೋದಕ್ಕೆ ಪೊಲೀಸರಿಗೆ ಆಸಕ್ತಿಯೇ ಇರಲ್ಲಿಲ್ಲ
* ಕಾರ್ಯಕ್ರಮ ಬೇಡ ಅನ್ನೋದಕ್ಕೆ ಪೊಲೀಸರ ಮೇಲೆ ಇದ್ದ ಒತ್ತಡ
* ವಿಧಾನಸೌದದ ಕಾರ್ಯಕ್ರಮ, ಪೆರೇಡ್ ಎರಡೂ ಬೇಡ ಅಂದಿದ್ದ ಆಯುಕ್ತರು
* ಪೊಲೀಸ್ ನಿಯೋಜನೆಯಲ್ಲಿ ನಿರಂತರವಾಗಿ ಯಡವಟ್ಟು
* ಗೇಟ್ ತೆಗೆಯಲು ಹಿಂದೆಟು

TAGGED:Bengaluru Policechinnaswamy stadiumChinnaswamy StampedeIPL 2025rcbstampedeಆರ್‍ಸಿಬಿಐಪಿಎಲ್‌ ಚಾಂಪಿಯನ್ಸ್‌ಚಿನ್ನಸ್ವಾಮಿ ಸ್ಟೇಡಿಯಂಬೆಂಗಳೂರುವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

mattighatt falls
Districts

ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Public TV
By Public TV
4 hours ago
Hardik Pandya Suryakumar Yadav
Cricket

ʻThis is for Indiaʼ – ಗೆದ್ದ ಬೆನ್ನಲ್ಲೇ ಸೂರ್ಯ ಮೊದಲ ಮಾತು

Public TV
By Public TV
4 hours ago
India Pakistan
Cricket

ಒಂದೇ ದಿನ ಪಾಕ್‌ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ 

Public TV
By Public TV
4 hours ago
Tilak Varma Suryakumar Yadav
Cricket

ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಭಾರತಕ್ಕೆ 16-1 ಮುನ್ನಡೆ

Public TV
By Public TV
4 hours ago
MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
5 hours ago
Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?