ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ (Chinnaswamy Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ (IPS) ಅಧಿಕಾರಿಗಳ ಅಮಾನತು ಆದೇಶವನ್ನು ರದ್ದು ಮಾಡಿರುವ ಸಿಎಟಿಗೆ (ಕೇಂದ್ರೀಯ ಆಡಳಿತ ನ್ಯಾಯಮಂಡಳಿ) ಮೇಲ್ಮನವಿ ಸಲ್ಲಿಸುವ ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.
ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿ ವಾರ್ತಾ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ರದ್ದು ಮಾಡಿರುವ ಕೇಂದ್ರೀಯ ಆಡಳಿತ ನ್ಯಾಯಮಂಡಳಿಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಇದನ್ನೂ ಓದಿ: ಸಿದ್ದು ಫುಲ್ ಟರ್ಮ್ ಸಿಎಂ ಅಸ್ತ್ರಕ್ಕೆ ಡಿಕೆಶಿ ನೆಕ್ಸ್ಟ್ ಸಿಎಂ ಬ್ರಹ್ಮಾಸ್ತ್ರ: ಸಂಖ್ಯಾಬಲ ಡಿಸಿಎಂಗೆ ಇದೆ – ಇಕ್ಬಾಲ್ ಹುಸೇನ್
ಶಾಸಕ ಬಿ.ಆರ್.ಪಾಟೀಲ್ (BR Patil) ಅವರ ಸಿದ್ದರಾಮಯ್ಯನವರು ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಅವರ ಹೇಳಿಕೆ ಬಗ್ಗೆ ಮಾಹಿತಿಯಿಲ್ಲ. ಬಿ.ಆರ್.ಪಾಟೀಲ್ ಹಾಗೂ ನಾನು ಒಟ್ಟಿಗೆ ಶಾಸಕರಾಗಿದ್ದರಿಂದ ಹಾಗೂ ನನಗೆ ಮುಖ್ಯಮಂತ್ರಿಯಾಗಲು ಅವಕಾಶ ದೊರೆತಿದ್ದರಿಂದ, ಬಿ.ಆರ್.ಪಾಟೀಲ್ರವರು ಈ ರೀತಿ ಹೇಳಿಕೆ ನೀಡಿರಬಹುದು ಎಂದರು.
ಇದೇ ವೇಳೆ ಜಾತಿಗಣತಿ (Caste Census) ನಡೆಸಲಾಗಿದೆ ಎಂಬ ಪೋಸ್ಟರ್ಗಳನ್ನು ಮನೆಗಳಿಗೆ ಭೇಟಿ ನೀಡದೇ, ಮನೆಯ ಮುಂದೆ ಅಂಟಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸುವ ಬಗ್ಗೆ, ಜಾತಿಗಣತಿ ನಡೆಸಲು ಹಲವು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆನ್ಲೈನ್ ಮೂಲಕವೂ ಜಾತಿವಿವರಗಳನ್ನು ನೀಡಬಹುದು ಅಥವಾ ಮನೆಗಳಿಗೆ ಭೇಟಿ ನೀಡಿ ವಿವರಗಳನ್ನು ಪಡೆಯಬಹುದು. ಈ ಬಗ್ಗೆ ಸತ್ಯಾಸತ್ಯತೆ ತಿಳಿದು ಮಾಧ್ಯಮದವರು ಪ್ರಶ್ನಿಸಬೇಕು ಎಂದರು.ಇದನ್ನೂ ಓದಿ: ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಿಎಲ್ಓಗಳಾಗಿ ನೇಮಿಸದಂತೆ ಚುನಾವಣೆ ಆಯೋಗಕ್ಕೆ ಶಿಕ್ಷಣ ಇಲಾಖೆ ಪತ್ರ