Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್‌ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್‌ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು

Chamarajanagar

ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್‌ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು

Public TV
Last updated: August 25, 2025 5:20 pm
Public TV
Share
3 Min Read
Chinnayya Wife 3
SHARE

– ನನ್ನ ಪತಿಗೆ ಯಾರೂ ಬ್ರೈನ್‌ ವಾಶ್‌ ಮಾಡಿಲ್ಲ, ತುಂಬಾ ಒಳ್ಳುವರು
– ಧರ್ಮಸ್ಥಳದಲ್ಲಿದ್ದಾಗಲೇ ಮ್ಯಾನೇಜರ್‌ಗೆ ಹೇಳಿ ನಾವು ಮದ್ವೆ ಆಗಿದ್ವಿ

ಚಾಮರಾಜನಗರ: ನಾವು ಮತಾಂತರ ಆಗಿದ್ವಿ, ಆದ್ದರಿಂದ ಫಂಡಿಂಗ್‌ ಬರ್ತಿತ್ತು, ಧರ್ಮಸ್ಥಳದ (Dharmasthala) ವಿರುದ್ಧ ಕಟ್ಟು ಕಥೆ ಸೃಷ್ಟಿಸಿದ್ರು ಅನ್ನೋದೆಲ್ಲ ಸುಳ್ಳು. 11 ವರ್ಷಗಳಿಂದಲೇ ತಮಿಳುನಾಡಿನಲ್ಲೇ ಕೂಲಿ ಕೆಲಸ ಮಾಡಿಕೊಂಡಿದ್ವಿ. ಅವರು ಕೆಲಸಕ್ಕೆ ಹೋದರಷ್ಟೇ ಜೀವನ ನಡೆಯುತ್ತಿತ್ತು. ಈಗ ಅವರಿಲ್ಲದೇ ಜೀವನವೇ ಇಲ್ಲದಂತಾಗಿದೆ. ಎಲ್ಲಿ ಹೋಗ್ಬೇಕು, ಏನ್‌ ಮಾಡ್ಬೇಕು ಒಂದೂ ಗೊತ್ತಾಗ್ತಿಲ್ಲ…. ಬುರುಡೆ ಪ್ರಕರಣದಲ್ಲಿ ಎಸ್‌ಐಟಿ ಕಸ್ಟಡಿಯಲ್ಲಿರುವ ಚಿನ್ನಯ್ಯನ 2ನೇ ಪತ್ನಿ ಮಲ್ಲಿಕಾ ಬಿಕ್ಕಿ ಬಿಕ್ಕಿ ಅಳುತ್ತಾ ʻಪಬ್ಲಿಕ್‌ ಟಿವಿʼ ಜೊತೆಗೆ ತನ್ನ ಅಳಲು ತೋಡಿಕೊಂಡದ್ದು ಹೀಗೆ.

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿ ಪ್ರಕರಣದ ʻಬುರುಡೆʼ ಚಿನ್ನಯ್ಯ (Chinnayya) ಮೂಲತಃ ಮಂಡ್ಯ ಜಿಲ್ಲೆಯವನಾದರೂ ನೆಲೆಸಿದ್ದು ತಮಿಳುನಾಡಿನ (Tamil Nadu) ಸತ್ಯಮಂಗಲಂನ ಚಿಕ್ಕರಸಂಪಾಳ್ಯಂದಲ್ಲಿ. ಸದ್ಯ ಪ್ರಕರಣದಲ್ಲಿ ಸಿಲುಕಿ ಎಸ್‌ಐಟಿ ಕಸ್ಟಡಿಯಲ್ಲಿದ್ದಾನೆ. ಆದ್ರೆ ಚಿಕ್ಕರಸಂಪಾಳ್ಯಂನಲ್ಲಿ ನೆಲೆಸಿರುವ ಚಿನ್ನಯ್ಯನ 2ನೇ ಪತ್ನಿ ಮಲ್ಲಿಕಾ ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದ್ದಾರೆ. ಚಿನ್ನಯ್ಯನ ಸ್ಥಿತಿ ಕಂಡು ಕಣ್ಣೀರಿದ್ದಾರೆ. ನನ್ನ ಪತಿ ಹಾಗೆ ಮಾಡೋನಲ್ಲ. ಏನಾಗ್ತಿದೆ ಅನ್ನೋದೆ ಗೊತ್ತಿಲ್ಲ. ಎಲ್ಲವೂ ಟಿವಿಯಲ್ಲಿ ನೋಡಿದ ನಂತರ ಗೊತ್ತಾಗ್ತಿದೆ ಎಂದಿದ್ದಾರೆ. ಇದನ್ನೂ ಓದಿ: ನನ್ನ ಪತಿಯ ಅಣ್ಣ ಕೈಸ್ತ ಪಾದ್ರಿ, ಆದ್ರೆ ಚಿನ್ನಯ್ಯ ಮತಾಂತರ ಆಗಿಲ್ಲ: 2ನೇ ಪತ್ನಿ ಮಲ್ಲಿಕಾ

ನಾನೂ ಕೂಡ ಧರ್ಮಸ್ಥಳಕ್ಕೆ ಕೆಲಸಕ್ಕೆ ಹೋಗ್ತಿದ್ದೆ. ಮನೆಯಲ್ಲಿ ಚಿಕ್ಕ ಮಗು ಇದ್ದಿದ್ದರಿಂದ ನಾಲ್ಕೂವರೆ ಗಂಟೆಗೆಲ್ಲ ನಾನು ವಾಪಸ್‌ ಬರ್ತಿದ್ದೆ.‌ ನನ್ನ ಪತಿ ಉಳಿದವರು ಆರೂವರೆ ಗಂಟೆಗೆ ಬರ್ತಿದ್ದರು. ಆದ್ರೆ ಒಂದು ದಿನ ಸೂಪರ್‌ವೈಸರ್‌ ನಡುವೆ ಜಗಳ ಆಗಿ ಕೆಲಸದಿಂದ ತೆಗೆದರು ಅಂತ ಹೇಳಿದ್ದರು. ಅದಾದ ಮೇಲೆ ಧರ್ಮಸ್ಥಳ ಬಿಟ್ಟೆವು. ಒಂದು ವರ್ಷ ಮಂಡ್ಯದ ಚಿಕ್ಕಬಳ್ಳಿಯಲ್ಲಿ ಇದ್ವಿ. ಚಿಕ್ಕಬಳ್ಳಿ ಗ್ರಾಮಸ್ಥರೆಲ್ಲ ಒಳ್ಳೆಯವರು ಈಗ ಯಾಕೆ ಮಾತಾಡ್ತಿದ್ದಾರೆ ಗೊತ್ತಿಲ್ಲ. ಅಲ್ಲಿ ಕೆಲಸ ಮಾಡುವಾಗ ಕೆಲವರು ಸಂಬಳ ಕೊಡ್ತಿರಲಿಲ್ಲ. ನಂತರ ತಮಿಳುನಾಡಿಗೆ ಬಂದ್ವಿ. ಇಲ್ಲಿಗೆ ಬಂದು ಈಗ 11 ವರ್ಷಗಳಾಯ್ತು. ಆ ಬಳಿಕ ತಮಿಳುನಾಡು ಸುತ್ತಲಿನ ತಿರುಪೂರು, ಕೊಯಮತ್ತೂರಲ್ಲಿ ಕೂಲಿ ಕೆಲಸಕ್ಕೆ ಹೋಗ್ತಿದ್ದರು. ಈಗಲೂ ಕೆಲಸಕ್ಕೆ ಹೋದರಷ್ಟೇ ಸಂಬಳ ಇಲ್ಲಿದ್ದರೆ, ಇಲ್ಲ ಎನ್ನುವಂತಿದೆ. ಇಲ್ಲಿಗೆ ಬಂದ 3 ವರ್ಷದ ನಂತರ 10 ವರ್ಷ ಲೀಸ್‌ಗೆ 2 ಲಕ್ಷ ರೂ. ಕೊಟ್ಟು ಮನೆ ಮಾಡಿಕೊಂಡ್ವಿ. ಇನ್ನೂ 2 ವರ್ಷ ಬಾಕಿಯಿದೆ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ಈ ಬಾರಿ ಗಣೇಶೋತ್ಸವದಲ್ಲಿ ರಾರಾಜಿಸಲಿದೆ ಧರ್ಮಸ್ಥಳ

ಮತಾಂತರ ಆಗಿದ್ರಾ? ಫಂಡಿಂಗ್‌ ಬರ್ತಿತ್ತಾ?
ʻಪಬ್ಲಿಕ್‌ ಟಿವಿʼಯ ಈ ಪ್ರಶ್ನೆಗೆ ಉತ್ತರಿಸಿದ ಚಿನ್ನಯ್ಯನ ಪತ್ನಿ ಮಲ್ಲಿಕಾ, ಮತಾಂತರ ಆಗಿದ್ದರಿಂದ ಫಂಡಿಂಗ್‌ ಬರ್ತಿದೆ, ಆದ್ದರಿಂದ ಧರ್ಮಸ್ಥಳದ ವಿರುದ್ಧ ಕಟ್ಟು ಕಥೆ ಕಟ್ತಿದ್ದಾನೆ ಅನ್ನೋದೆಲ್ಲ ಸುಳ್ಳು. ಧರ್ಮಸ್ಥಳದಲ್ಲಿದ್ದಾಗಲೇ ಮ್ಯಾನೇಜರ್‌ಗೆ ಹೇಳಿ ನಾವು ಮದ್ವೆ ಆಗಿದ್ದು. ಆಗಿನಿಂದಲೂ ಮಂಜುನಾಥಸ್ವಾಮಿ ಮೇಲೆ ನಮಗೆ ಅಪಾರ ಭಕ್ತಿ. ಚಿಕ್ಕಬಳ್ಳಿಯಿಂದಲೂ ತುಂಬಾ ಜನ ಧರ್ಮಸ್ಥಳಕ್ಕೆ ಬರುತ್ತಿದ್ದರು. ಅವರಿಗೆಲ್ಲ ಇವರೇ ರೂಮ್‌ ವ್ಯವಸ್ಥೆ ಮಾಡಿಕೊಡ್ತಿದ್ರು. ವಿಶೇಷ ಪೂಜೆ ಮಾಡಿಸಿಕೊಡ್ತಿದ್ದರು ಎಂದು ಹೇಳಿದ್ದಾರೆ.

ಚಿನ್ನಯ್ಯನ ಅಣ್ಣ ಕೈಸ್ತ ಪಾದ್ರಿ, ಆದ್ರೆ ಅವರಿಗೆ ಕಣ್ಣು ಕಾಣ್ತಿರಲಿಲ್ಲ. ಚರ್ಚ್‌ನಲ್ಲಿ ಹುಡುಗರು ಇಲ್ಲದೇ ಇದ್ದಾಗ ಚಿನ್ನಯ್ಯನಿಗೆ ಫೋನ್‌ ಮಾಡ್ತಿದ್ದರು. ಅಲ್ಲದೇ ಹೊರಗೆ ಹೋಗಬೇಕು ಅಂತಾ ಚಿನ್ನಯ್ಯನನ್ನ ಕರೀತಿದ್ರು. ಆಗಷ್ಟೇ ಚಿನ್ನಯ ಹೋಗ್ತಿದ್ದರು. ಆದ್ರೆ ಯಾವುದೇ ಧರ್ಮಕ್ಕೆ ಮತಾಂತರ ಆಗಿರಲಿಲ್ಲ. ಯಾವುದೇ ಗ್ಯಾಂಗ್ ಬಗ್ಗೆ ಕೂಡ ನನ್ನ ಜೊತೆಗೆ ಒಂದು ದಿನವೂ ಮಾತನಾಡಿರಲಿಲ್ಲ. ಹಾಗೇನಾದರೂ ಇದ್ದಿದ್ದರೆ ಹೇಳ್ತಿದ್ರು ಅಂತ ವಿವರಿಸಿದ್ರು. ಇದನ್ನೂ ಓದಿ: ಒಡಿಶಾ | ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಕೊಚ್ಚಿಹೋದ ಯೂಟ್ಯೂಬರ್

ಚಿನ್ನಯ್ಯನಿಗೆ ಬ್ರೈನ್‌ ವಾಶ್‌ ಮಾಡಿದ್ರಾ?
ನಮ್ಮ ಮನೆಗೆ ಯಾರೂ ಬಂದಿಲ್ಲ, ಏನೂ ಮಾತನಾಡಿಲ್ಲ, ದುಡ್ಡು ಕಾಸು ಸಹ ಕೊಟ್ಟಿಲ್ಲ. ಪತಿ ಮನೆಗೆ ಬಂದು 2 ತಿಂಗಳಾಯ್ತು. 17 ವರ್ಷ ಜೊತೆಗೆ ಇದ್ವಿ. ನನ್ನನ್ನ ಒಂಟಿಯಾಗಿ ಎಲ್ಲಿಗೂ ಕಳಿಸುತ್ತಿರಲಿಲ್ಲ. ಚೆನ್ನಾಗಿ ನೋಡಿಕೊಳ್ತಿದ್ರು. ತಂದೆ- ತಾಯಿ ಎಲ್ಲವೂ ಅವರೇ ಆಗಿದ್ದರು. ಕುಡಿಯುವ ಚಟ ಕೂಡ ಇರಲಿಲ್ಲ. ಮನೆಗೆ ಅವರೇ ಆಧಾರವಾಗಿದ್ದರು. ಈಗ 2 ತಿಂಗಳಿಂದ ಕಷ್ಟ ಆಗ್ತಿದೆ. ಎಲ್ಲಿ ಹೋಗಬೇಕು? ಏನು ಮಾಡಬೇಕು? ಏನೂ ಗೊತ್ತಾಗ್ತಿಲ್ಲ ಅಂತ ಕಣ್ಣೀರಿಟ್ಟರಲ್ಲದೇ ಅವರು ಬರೋತನಕ ಇಲ್ಲೇ ಇರ್ತೀನಿ ಅಂತ ಬಿಕ್ಕಿ ಬಿಕ್ಕಿ ಅತ್ತರು.  ಇದನ್ನೂ ಓದಿ: AI ವೀಡಿಯೋಗೆ ಸಾಕ್ಷಿ ಕೊಡಲು ತಡಬಡಿಸಿದ ಬುರುಡೆ ಸಮೀರ್

TAGGED:ಚಿನ್ನಯ್ಯತಮಿಳುನಾಡುಧರ್ಮಸ್ಥಳ ಪ್ರಕರಣಮಂಜುನಾಥ ದೇವಾಲಯಮಾಸ್ಕ್‌ ಮ್ಯಾನ್‌
Share This Article
Facebook Whatsapp Whatsapp Telegram

Cinema news

Love Mocktail 3 Darling Krishna
ಜಾಹೀರಾಯ್ತು ಲವ್ ಮಾಕ್ಟೇಲ್ 3 ಬಿಡುಗಡೆ ದಿನಾಂಕ!
Cinema Latest Sandalwood Top Stories
yash mother pushpa compound demolition
ನಾವು ಒತ್ತುವರಿ ಮಾಡಿಲ್ಲ, ಕಾನೂನು ಪ್ರಕಾರ ಜಾಗ ಪಡೆದಿದ್ದೇವೆ: ಯಶ್‌ ತಾಯಿ ರಿಯಾಕ್ಷನ್‌
Cinema Hassan Latest Sandalwood Top Stories
yash mother compound demolition
ಅಕ್ರಮ ಕಾಂಪೌಂಡ್ ನಿರ್ಮಾಣ ಆರೋಪ; ಯಶ್ ತಾಯಿಗೆ ಕೋರ್ಟ್ ಶಾಕ್ – ಕಾಂಪೌಂಡ್ ಧ್ವಂಸ
Cinema Hassan Latest Main Post Sandalwood
gilli bracelet gift by kavya father
ನಮ್‌ ಕಡೆ ಬ್ರೇಸ್‌ಲೇಟ್‌ ಎಂಗೇಜ್‌ಮೆಂಟ್‌ಗೆ ಕೊಡ್ತಾರೆ: ಕಾವ್ಯ ತಂದೆ ಕೊಟ್ಟ ಗಿಫ್ಟ್‌ ಬಗ್ಗೆ ಸುದೀಪ್‌ ಬಳಿ ಗಿಲ್ಲಿ ಹೇಳಿದ್ದೇನು?
Cinema Latest Top Stories TV Shows

You Might Also Like

mustafizur rahman 1
Cricket

IPL ನಿಂದ ಮುಸ್ತಾಫಿಜುರ್ ಔಟ್‌ – ವಿಶ್ವಕಪ್‌ ಆಡಲು ಭಾರತಕ್ಕೆ ಬರಲ್ಲ; ಪಾಕ್‌ ರೀತಿ ಕ್ಯಾತೆ ತೆಗೆದ ಬಾಂಗ್ಲಾ

Public TV
By Public TV
30 minutes ago
Janardhan Reddy DK Shivakumar
Bengaluru City

ಜನಾರ್ದನ ರೆಡ್ಡಿ ಇರಾನ್‌ನಿಂದಾದ್ರೂ ಭದ್ರತೆ ತರಿಸಿಕೊಳ್ಳಲಿ, ಅಮೆರಿಕದಿಂದಾದ್ರೂ ತರಿಸಿಕೊಳ್ಳಲಿ: ಡಿಕೆಶಿ ಲೇವಡಿ

Public TV
By Public TV
1 hour ago
Nicolas Maduro 2
Latest

ಬಸ್‌ ಡ್ರೈವರ್‌ನಿಂದ ವೆನೆಜುವೆಲಾ ಅಧ್ಯಕ್ಷನಾಗುವವರೆಗೆ – ನಿಕೋಲಸ್ ಮಡುರೊ ಬದುಕಿನ ರೋಚಕ ಕಥೆ!

Public TV
By Public TV
2 hours ago
Shobha Karandlaje
Bellary

ರಾಜ್ಯ ಸರ್ಕಾರ ಎಸ್ಪಿ ಪವನ್‌ ನೆಜ್ಜೂರ್‌ ಡೆತ್‌ನೋಟ್‌ ಮುಚ್ಚಿಟ್ಟಿದೆ: ಶೋಭಾ ಕರಂದ್ಲಾಜೆ ಬಾಂಬ್‌

Public TV
By Public TV
2 hours ago
bengaluru roadside parking
Bengaluru City

ಬೆಂಗಳೂರು| ರೋಡ್ ಸೈಡ್ ಪಾರ್ಕಿಂಗ್‌ಗೆ ಕಟ್ಟಬೇಕು ಕಾಸು – ಜಿಬಿಎ ಪೇ & ಪಾರ್ಕಿಂಗ್ ರೂಲ್ಸ್ ಶೀಘ್ರ ಜಾರಿ?

Public TV
By Public TV
2 hours ago
Dharmendra Pradhan
Bengaluru City

VB-G RAM G ಕಾಯ್ದೆ ಕೇಂದ್ರ ಸರ್ಕಾರ ವಾಪಸ್ ಪಡೆಯಲ್ಲ: ಧರ್ಮೇಂದ್ರ ಪ್ರಧಾನ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?