ಚಿತ್ರದುರ್ಗ: ಟೈಫಾಯಿಡ್ ಜ್ವರದಿಂದ ಬಳಲುತ್ತಿದ್ದ ರೋಗಿಯನ್ನು ನಡೆಸಿಕೊಂಡು ಹೋಗುವಂತೆ ಹೇಳಿರುವ ಘಟನೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಆನೆಸಿದ್ರಿ ಗ್ರಾಮದ ಪಲ್ಲವಿ ಎಂಬ ಬಾಲಕಿ ಟೈಫಾಯಿಡ್ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತೆಗೆ ದಾಖಲಿಸಿದ್ದರು. ಆದರೆ ತೀವ್ರ ಜ್ವರದಿಂದ ಬಳುತ್ತಿದ್ದ ಬಾಲಕಿಗೆ ಪ್ರಥಮ ಚಿಕಿತ್ಸೆಯನ್ನು ನೀಡಿದ ವೈದ್ಯರು ವಾರ್ಡ್ ಗೆ ಗಾಡಿಯಲ್ಲಿ ಕರೆದುಕೊಂಡು ಹೋಗುವ ಬದಲಾಗಿ ಸಂಬಂಧಿ ಕೈಗೆ ಗ್ಲೂಕೋಸ್ ಬಾಟಲ್ ನೀಡಿದ್ದು, ತುರ್ತು ನಿಗಾ ಘಟಕದಿಂದ ವಾರ್ಡ್ ವರೆಗೂ ನಡೆದುಕೊಂಡು ಹೋಗಿದ್ದಾರೆ.
ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ನಿರ್ಲಕ್ಷ ತೋರಿದ್ದು, ಜಿಲ್ಲಾ ಆಸ್ಪತ್ರೆ ಬಂದಿರೋ ರೋಗಿಗೆ ಚಿಕಿತ್ಸೆ ಬದಲಾಗಿ ನರಕ ದರ್ಶನ ಮಾಡಿಸಿದ್ದಾರೆ. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳ ನಿರ್ಲಕ್ಷಕ್ಕೆ ಇಲ್ಲಿನ ಜನರು ಹಿಡಿಶಾಪ ಹಾಕಿದ್ದಾರೆ.