ಚಿತ್ರದುರ್ಗ: ವ್ಯಕ್ತಿಯೋರ್ವ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟಕ್ಕೆ (Alcohol Sale in Shop) ಅನುಮತಿ ಕೋರಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ.
ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು ತಾಲೂಕಿನ ಹೊಸನಾಯಕರಹಟ್ಟಿ ಗ್ರಾಮಸ್ಥ ಚಂದ್ರಶೇಖರ್, ಹಲವು ಬಾರಿ ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿದರು. ಆದರೆ ಪ್ರಯೋಜನವಾಗದೇ ಗೂಡಂಗಡಿಗಳಲ್ಲಿ ಎಗ್ಗಿಲ್ಲದೇ ನಿರ್ಭಯವಾಗಿ ಮದ್ಯ ಮಾರಾಟವಾಗ್ತಿರುವ ಹಿನ್ನೆಲೆಯಲ್ಲಿ ತಾವು ಸಹ ಮದ್ಯ ಮಾರಾಟಕ್ಕೆ ಉತ್ಸುಕರಾಗಿದ್ದು, ಕಿರಾಣಿ ಅಂಗಡಿ ಹಾಗೂ ವಾಸದ ಮನೆಯಲ್ಲೇ ಮದ್ಯ ಮಾರಾಟಕ್ಕೆ ಅನುಮತಿ ನೀಡುವಂತೆ ಅಬಕಾರಿ ಇಲಾಖೆ ಹಾಗು ಗ್ರಾ.ಪಂ ಅಧಿಕಾರಿಗಳಿಗೆ ಕೋರಿಕೆ ಪತ್ರ ಸಲ್ಲಿಸಿದ್ದಾರೆ.
ಈ ಪತ್ರ ಎಲ್ಲೆಡೆ ವೈರಲ್ ಆಗಿದ್ದು, ಸಾಮಾಜಿಕ ಜಾಲಾತಾಣಗಳಲ್ಲಿ ಪರ-ವಿರೋಧ ಚರ್ಚೆ ಶುರುವಾಗಿದೆ. ಅಲ್ಲದೇ ಅಬಕಾರಿ ಇಲಾಖೆ ಹಾಗೂ ಗ್ರಾಪಂ.ನಿಂದ ಅನುಮತಿ ನೀಡದಿದ್ರೆ ಕಚೇರಿಗಳ ಮುಂದೆ ಬುಟ್ಟಿಯಲ್ಲಿ ಮದ್ಯ ಇಟ್ಕೊಂಡು ಮಾರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ. ಹೀಗಾಗಿ ಇವರ ಮನವಿಗೆ ಸ್ಪಂದಿಸಿ ಅನುಮತಿ ಸಿಕ್ರೆ ಗತಿತೇನು ಎಂಬ ಆತಂಕ ಸಹ ಸಾರ್ವಜನಿಕವಲಯದಿಂದ ವ್ಯಕ್ತವಾಗಿದೆ. ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಗಲಾಟೆ- ಮಾರಾಕಾಸ್ತ್ರ, ಮೊಬೈಲ್, ನಗದು ವಶಕ್ಕೆ