ಚಿತ್ರದುರ್ಗ: ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಚಿಕಿತ್ಸೆ ಫಲಿಸದೇ ಇದೀಗ ಕೋಲಾರ (Kolar) ಮೂಲದ ಮಧುಸೂದನ್(24) ಮೃತಪಟ್ಟಿದ್ದಾರೆ. ಪಿಎಸ್ಐ ಪರೀಕ್ಷೆಗೆ ಕೋಚಿಂಗ್ ಪಡೆಯುತ್ತಿದ್ದ ಮಧುಸೂದನ್, ಸ್ನೇಹಿತ ಭೀಮಾಶಂಕರ ಕುಟುಂಬದ ಜೊತೆ ಟ್ರಿಪ್ಗೆ ಬಂದಿದ್ದರು.
- Advertisement 2
- Advertisement 3
ಚಿತ್ರದುರ್ಗ (Accident in Chitradura) ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ವಿಜಯಪುರದಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಇದನ್ನೂ ಓದಿ: ಭೀಕರ ಅಪಘಾತ- ಒಂದೇ ಕುಟುಂಬದ ನಾಲ್ವರ ದುರ್ಮರಣ
- Advertisement 4
ನಿದ್ದೆ ಮಂಪರು, ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಕೆ.ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Web Stories