Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚೆಕ್ ಬೌನ್ಸ್, ಖಾತೆಗೆ ಜಮಾ ಆಗದ ಪರಿಹಾರದ ಹಣ – ವಿಕಲಚೇತನ ರೈತ ಕಂಗಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಚೆಕ್ ಬೌನ್ಸ್, ಖಾತೆಗೆ ಜಮಾ ಆಗದ ಪರಿಹಾರದ ಹಣ – ವಿಕಲಚೇತನ ರೈತ ಕಂಗಾಲು

Chitradurga

ಚೆಕ್ ಬೌನ್ಸ್, ಖಾತೆಗೆ ಜಮಾ ಆಗದ ಪರಿಹಾರದ ಹಣ – ವಿಕಲಚೇತನ ರೈತ ಕಂಗಾಲು

Public TV
Last updated: December 20, 2019 6:52 pm
Public TV
Share
2 Min Read
CTD Farmer
SHARE

ಚಿತ್ರದುರ್ಗ: ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಭದ್ರಾ ಮೇಲ್ದಂಡೆ ಯೋಜನೆ ಬೇಗ ಮುಗಿದು ಜಿಲ್ಲೆಗೆ ನೀರು ಹರಿದು ಬರದನಾಡು ಬಂಗಾರವಾಗಲಿ ಅಂತ ರೈತರು ಉಳುಮೆ ಮಾಡುವ ಭೂಮಿಗಳನ್ನೇ ನೀಡಿದ್ದಾರೆ. ಆದರೆ ಯೋಜನೆ ತರುವುದನ್ನೇ ನೆಪವಾಗಿಸಿಕೊಂಡ ಅಧಿಕಾರಿಗಳು ರೈತರಿಗೆ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯೆ ತೋರಿದ್ದಾರೆ. ಮನಸಿಗೆ ಬಂದಷ್ಟು ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡಿದ್ದಾರೆ. ಅಧಿಕಾರಿಗಳ ಈ ಎಡವಟ್ಟಿನಿಂದಾಗಿ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕಳೆದ ಒಂದು ವರ್ಷದಿಂದಲೂ ಇಂದು, ನಾಳೆ ಭದ್ರೆ ಬರದನಾಡಿಗೆ ಬರುತ್ತಾಳೆ ಅಂತ ಕಾಲಾಹರಣ ಮಾಡುತ್ತಿದ್ದ ಸರ್ಕಾರ ಹಾಗೂ ಅಧಿಕಾರಿಗಳು 2019ರ ನವೆಂಬರ್ ತಿಂಗಳಿಂದ ವಾಣಿವಿಲಾಸ ಸಾಗರಕ್ಕೆ ಕಾಲುವೆ ಮೂಲಕ ಭದ್ರೆ ನೀರನ್ನು ಹರಿಸುತ್ತಿದ್ದಾರೆ. ಆದರೆ ಭದ್ರಾ ಕಾಮಗಾರಿಗಾಗಿ ವಶಕ್ಕೆ ಪಡೆದ ರೈತರ ಜಮೀನುಗಳಿಗೆ ಮಾತ್ರ ಈವರೆಗೆ ಸರಿಯಾದ ಪರಿಹಾರ ನೀಡಿಲ್ಲ. ಅಲ್ಲದೆ ಕಾಮಗಾರಿಯಲ್ಲಿ ಕಳಪೆ ಹಾಗೂ ಅಕ್ರಮದ ಆರೋಪ ಸಹ ಕೇಳಿ ಬಂದಿದ್ದು, ಉದ್ಘಾಟನೆಗೂ ಮುನ್ನವೇ ಕಾಲುವೆ ಕುಸಿತ ಸಹ ಆಗಿ ಆತಂಕಸೃಷ್ಟಿಸಿತ್ತು.

CTD Farmer A

ಕಾಮಗಾರಿಗಾಗಿ ವಶಕ್ಕೆ ಪಡೆದ ರೈತರ ಜಮೀನುಗಳಿಗೆ ಸೂಕ್ತ ಪರಿಹಾರ ನೀಡುವಲ್ಲಿ ಸಹ ಅಧಿಕಾರಿಗಳು ವಿಫಲರಾಗಿದ್ದಾರೆಂಬ ಮಾತುಗಳು ಕೇಳಿಬಂದಿರುವುದು ಸರ್ಕಾರಕ್ಕೆ ಭಾರೀ ಮುಖಭಂಗ ಎನಿಸಿದೆ. ಅಧಿಕಾರಿಗಳ ಎಡವಟ್ಟಿನಿಂದಾಗಿ ಅನ್ನದಾತರಿಗೆ ಪರಿಹಾರ ತಲುಪದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೋಟೆನಾಡು ಚಿತ್ರದುರ್ಗದ ಅನ್ನದಾತರು ಬೀದಿಗಳಿದು ಪ್ರತಿಭಟನೆ ಮಾಡಿದರೂ ಈವರೆಗೆ ರೈತರಿಗೆ ಪರಿಹಾರ ಮಾತ್ರ ದೊರೆತಿಲ್ಲ. ಅಲ್ಲದೆ ಚಿತ್ರದುರ್ಗ ತಾಲೂಕಿನ ಚಿಕ್ಕಸಿದ್ದವನಹಳ್ಳಿ ಗ್ರಾಮದ ಅಂಗವಿಕಲ ರೈತ ವೀರಭದ್ರಪ್ಪ ಅವರಿಗೂ ಅಧಿಕಾರಿಗಳು ವಂಚಿಸಿದ್ದಾರೆ.

ವೀರಭದ್ರಪ್ಪ ಅವರ ಜಮೀನನ್ನು ಭದ್ರಾ ಕಾಮಗಾರಿಗಾಗಿ ವಶಪಡಿಸಿಕೊಂಡಿದ್ದು, 1.5 ಲಕ್ಷ ರೂ. ಪರಿಹಾರದ ಹಣವನ್ನು ಚೆಕ್ ರೂಪದಲ್ಲಿ ಅಧಿಕಾರಿಗಳು ನೀಡಿದ್ದಾರೆ. ಆದರೆ ವೀರಭದ್ರಪ್ಪ ಅವರ ಬ್ಯಾಂಕ್ ಖಾತೆಯಲ್ಲಿ ಒಂದು ಸಾವಿರ ರೂಪಾಯಿ ಮಾತ್ರ ಜಮಾ ಆಗಿದ್ದು, ಚೆಕ್ ಬೌನ್ಸ್ ಆರೋಪ ಸಹ ಕೇಳಿಬಂದಿದೆ. ಇದರಿಂದಾಗಿ ಆತಂಕಗೊಂಡ ರೈತ ಜಿಲ್ಲಾಧಿಕಾರಿ ಕಚೇರಿಗೆ ಅಲೆದಾಡಿ, ಅಲೆದಾಡಿ ಸುಸ್ತಾಗಿದ್ದಾರೆ. ಆದರೆ ಈವರೆಗೂ ಅತ್ತ ಜಮೀನು ಇಲ್ಲ, ಇತ್ತ ಪರಿಹಾರದ ಹಣವೂ ಸಿಗದೆ ವೀರಭದ್ರಪ್ಪ ಅವರು ಕಂಗಾಲಾಗಿದ್ದಾರೆ.

CTD Farmer B

ತನಗಾದ ಅನ್ಯಾಯ ಬೇರೆ ಯಾರಿಗೂ ಆಗುವುದು ಬೇಡ ಅಂತ ಕಣ್ಣೀರಿಟ್ಟಿರುವ ರೈತ ವೀರಭದ್ರಪ್ಪ ಅವರು ಆದಷ್ಟು ಬೇಗ ಸರ್ಕಾರ ನನಗೆ ಅಗತ್ಯ ಪರಿಹಾರ ನೀಡಲಿ ಅಂತ ಅಂಗಲಾಚಿದ್ದಾರೆ.

ಭದ್ರಾ ಕಾಮಗಾರಿಯಿಂದ ಆಗುತ್ತಿರುವ ಅವಾಂತರ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಅನ್ನದಾತರು ಸಹ ಶುಕ್ರವಾರ ಧರಣಿ ನಡೆಸಿದರು. ಅಪರ ಜಿಲ್ಲಾಧಿಕಾರಿ ಸಂಗಪ್ಪ ಧರಣಿ ನಡೆಸಿದ್ದ ಸ್ಥಳಕ್ಕೆ ಆಗಮಿಸಿ, ರೈತರಿಗೆ ಆಗಿರುವ ಸಮಸ್ಯೆಯನ್ನು ಆಲಿಸಿದರು. ಅಲ್ಲದೆ 2020ರ ಜನವರಿ ತಿಂಗಳ ಮೊದಲ ವಾರದಲ್ಲಿ ಅಧಿಕಾರಿಗಳು ಹಾಗೂ ಭದ್ರಾ ಮೇಲ್ದಂಡೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಭದ್ರಾ ಯೋಜನೆಯಿಂದ ರೈತರಿಗೆ ಆಗಿರುವ ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನು ನೀಡಿದ್ದಾರೆ.

vlcsnap 2019 12 20 18h45m36s32

TAGGED:Bank checkBhadra meldande projectChitradurgaFarmermPublic TVಅಧಿಕಾರಿಗಳುಚಿತ್ರದುರ್ಗಪಬ್ಲಿಕ್ ಟಿವಿಭದ್ರಾ ಮೇಲ್ದಂಡೆ ಯೋಜನೆರೈತ
Share This Article
Facebook Whatsapp Whatsapp Telegram

Cinema news

Dy CM Pawan Kalyan Gifted a Costly Car to OG Director Sujeeth
ಓಜಿ ನಿರ್ದೇಶಕನಿಗೆ 3 ಕೋಟಿಯ ಕಾರ್ ಗಿಫ್ಟ್ ಕೊಟ್ಟ ಪವನ್‌ ಕಲ್ಯಾಣ್‌
Cinema Latest South cinema
darshan vijayalakshmi
ದರ್ಶನ್‌ಗೆ ಬೆನ್ನುನೋವು ಇರೋದು ನಿಜ: ನಟನ ಬದುಕಿನ ಏಳುಬೀಳಿನ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಮಾತು
Cinema Latest Sandalwood Top Stories
Ugram Manju
ಸರಳವಾಗಿ ಮದುವೆಯಾಗಲು ರೆಡಿಯಾದ ಉಗ್ರಂ ಮಂಜು
Cinema Latest Sandalwood Top Stories
Rakshita Shetty Dhruvanth Secret Room Fight
`ರಕ್ಷಿತಾ ಆರ್ ಕೂಡ ನೀವಲ್ಲ’- ರಕ್ಷಿತಾ ಧ್ರುವಂತ್ ಸಿಕ್ಕಾಪಟ್ಟೆ ಕಿತ್ತಾಟ!
Cinema Latest Sandalwood Top Stories TV Shows

You Might Also Like

Rahul Gandhi 3
Latest

ಮೋದಿಯಿಂದ ಗ್ರಾಮೀಣ ಕುಟುಂಬಗಳಿಗೆ ವರವಾಗಿದ್ದ ಯೋಜನೆ ನಾಶ: ರಾಹುಲ್‌ ಆಕ್ರೋಶ

Public TV
By Public TV
40 minutes ago
urea godown seized
Bengaluru City

ರೈತರಿಗೆ ಕೊಡಬೇಕಿದ್ದ ಯೂರಿಯಾ ಕಾಳಸಂತೆಯಲ್ಲಿ ಮಾರಾಟ; ಗೋಡೌನ್ ಮೇಲೆ ಡಿಆರ್‌ಐ ದಾಳಿ, 190 ಟನ್ ವಶಕ್ಕೆ

Public TV
By Public TV
1 hour ago
Raichuru YTPS
Districts

PUBLiC TV Impact – ಕಲ್ಲಿದ್ದಲು ಕಳ್ಳತನದ ಬಗ್ಗೆ ಪ್ರಕರಣ ದಾಖಲಿಸಿದ ವೈಟಿಪಿಎಸ್

Public TV
By Public TV
1 hour ago
Aroop Biswas
Latest

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ – ಪಶ್ಚಿಮ ಬಂಗಾಳ ಕ್ರೀಡಾ ಸಚಿವ ರಾಜೀನಾಮೆ

Public TV
By Public TV
1 hour ago
IPL 2022 VENKATESH IYER
Cricket

ಸಂಬಳದಲ್ಲಿ 70% ಇಳಿಕೆ – 7 ಕೋಟಿಗೆ ಆರ್‌ಸಿಬಿಗೆ ವೆಂಕಟೇಶ್‌ ಅಯ್ಯರ್‌ ಮಾರಾಟ

Public TV
By Public TV
2 hours ago
Dinesh Gundurao
Belgaum

ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ನಿಂತಿಲ್ಲ: ದಿನೇಶ್ ಗುಂಡೂರಾವ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?