Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರಿಗಳಿಗೆ ಶ್ರೀರಾಮುಲು ಕ್ಲಾಸ್- ಸಭೆಗೆ ಗೈರಾಗಿದ್ದ ಟಿಎಚ್‍ಓ ಸಸ್ಪೆಂಡ್‍ಗೆ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಅಧಿಕಾರಿಗಳಿಗೆ ಶ್ರೀರಾಮುಲು ಕ್ಲಾಸ್- ಸಭೆಗೆ ಗೈರಾಗಿದ್ದ ಟಿಎಚ್‍ಓ ಸಸ್ಪೆಂಡ್‍ಗೆ ಸೂಚನೆ

Chitradurga

ಅಧಿಕಾರಿಗಳಿಗೆ ಶ್ರೀರಾಮುಲು ಕ್ಲಾಸ್- ಸಭೆಗೆ ಗೈರಾಗಿದ್ದ ಟಿಎಚ್‍ಓ ಸಸ್ಪೆಂಡ್‍ಗೆ ಸೂಚನೆ

Public TV
Last updated: January 7, 2020 11:38 pm
Public TV
Share
3 Min Read
CTD SRIRAMULU A
SHARE

ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಅವರು ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಸಮಯಕ್ಕೆ ಸರಿಯಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಅಷ್ಟೇ ಅಲ್ಲದೆ ಹಲವು ಸಭೆಗಳಿಗೆ ಪದೇ ಪದೇ ಗೈರು ಹಾಜರಾಗುತ್ತಿದ್ದ ಮೊಳಕಾಲ್ಮೂರಿನ ಟಿಎಚ್‍ಓ ತುಳಸಿ ರಂಗನಾಥ್ ಅವರನ್ನು ಅಮಾನತುಗೊಳಿಸಲು ಸೂಚನೆ ನೀಡಿದ್ದಾರೆ.

ಮೊಳಕಾಲ್ಮೂರು ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕುಂಟಿತವಾಗಲು ಎಇಇ ಶಿವಕುಮಾರ್ ಪವಾರ್ ಕಾರಣವಾಗಿದ್ದಾರೆ. ಅವರಿಗೆ ನೋಟಿಸ್ ನೀಡಬೇಕು ಎಂದು ಉನ್ನತ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಇದೇ ವೇಳೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿನ ಸಮಸ್ಯೆ ಕುರಿತು ತೀವ್ರ ಕಾಳಜಿವಹಿಸಿ, ಸಭೆಯಲ್ಲಿನ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಜೊತೆಗೆ ಆಸ್ಪತ್ರೆಗೆ ಅಗತ್ಯವಿರುವ ರೇಡಿಯಾಲಜಿಸ್ಟ್, ಅರವಳಿಕೆ ತಜ್ಞರು, ಮಕ್ಕಳ ತಜ್ಞರು, ಚರ್ಮ ರೋಗ ತಜ್ಞರು, ಫಿಸಿಯೋಥೆರಪಿಸ್ಟ್, 3 ಔಷಧ ವಿತರಕರು, 11 ಶುಶ್ರೂಷಕಿಯರು ಹಾಗೂ ಅತಿ ಮುಖ್ಯವಾಗಿ ಅಲ್ಟ್ರಾ ಸ್ಕ್ಯಾನಿಂಗ್ ಮೆಷಿನ್, ಪಲ್ಸ್ ಆಕ್ಸಿ ಮೀಟರ್, ಎಕ್ಸ್ ರೇ ಮೆಷಿನ್‍ಗಳನ್ನು ಆದಷ್ಟು ಬೇಗ ಒದಗಿಸಲು ಅಗತ್ಯವಿರುವ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

CTD SRIRAMULU B

ಸಚಿವ ಶ್ರೀರಾಮುಲು ಅವರು ಮೊಳಕಾಲ್ಮೂರು ಕ್ಷೇತ್ರದ ರಾಯಪುರದಲ್ಲಿ ಆಯುರ್ವೇದ ಮೆಡಿಕಲ್ ಕಾಲೇಜ್ ಹಾಗೂ ಹೋಮಿಯೋಪತಿ ಕಾಲೇಜ್ ಸಹ ಸ್ಥಾಪನೆ ಮಾಡುವ ಇಂಗಿತ ವ್ಯಕ್ತಪಡಿಸಿದರು. ಪಶುಸಂಗೋಪನೆ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆಗೂ ಸಭೆಯಲ್ಲಿ ಮನವಿ ಮಾಡಿದಾಗ, ಸಂಪುಟದಲ್ಲಿ ಈ ಬಗ್ಗೆ ಚರ್ಚಿಸುವ ಭರವಸೆ ನೀಡಿದರು.

ಶಾಲಾ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅಂಗನವಾಡಿಗಳ ಬಳಿ ನೆಲ್ಲಿಕಾಯಿ, ಸೀಬೆಕಾಯಿ, ಹುಣಸೆ ಕಾಯಿ ಮರಗಳ ಸಸಿ ನೆಟ್ಟು ಬೆಳೆಸಲು ವೈದ್ಯರ ನೀಡಿದ ಸಲಹೆ ಹಾಗೂ ಮನವಿಯನ್ನು ಸಚಿವರು ಪಡೆದರು. ಬಳಿಕ ಅಂಗನವಾಡಿಗಳ ಬಳಿ ಕುಡಿಯುವ ನೀರಿನ ಸೌಲಭ್ಯ ಜೊತೆಗೆ ಗಿಡಮರಗಳನ್ನು ಬೆಳೆಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಹಾಗೆಯೇ ಅಂಗನವಾಡಿಗಳಲ್ಲಿ ಶೌಚಾಲಯ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಅಂಗನವಾಡಿ ಸಿಬ್ಬಂದಿಗೆ ಗೌರವಧನ ಹಾಗೂ ಮೊಟ್ಟೆಗೆ ಹಣ ಬಿಡುಗಡೆಯಲ್ಲಿ ವಿಳಂಭವಾದ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಸಚಿವ ಶ್ರೀರಾಮುಲು ಅವರು ಗರಂ ಆದರು.

CTD SRIRAMULU

ಮೊಳಕಾಲ್ಮೂರು ಕ್ಷೇತ್ರದಲ್ಲಿ 1.35 ಲಕ್ಷ ಬಿಪಿಎಲ್ ಕಾರ್ಡ್ ಗಳಿವೆ. ಆದರೆ ಸಂಪೂರ್ಣ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನೀಡದ ಅಧಿಕಾರಿಗೆ ಸಚಿವರು ತರಾಟೆ ತೆಗೆದುಕೊಂಡರು. ತಕ್ಷಣ ಕಾರ್ಡ್ ವಿತರಿಸಲು ಸೂಚಿಸಿದರು. ಮಹಿಳಾ ಹಾಸ್ಟೆಲ್ ನಿರ್ಮಾಣಕ್ಕೆ ಬೇಡಿಕೆಗೂ ಸ್ಪಂದಿಸಿದ ಅವರು, ವಿದ್ಯಾರ್ಥಿಗಳ ಹಾಸ್ಟೆಲ್ ಪೂರ್ಣಗೊಂಡ ಬಳಿಕ ಆರಂಭಿಸುವ ಭರವಸೆ ನೀಡಿದರು.

ಭಾಗ್ಯ ಲಕ್ಷ್ಮಿ ಬಾಂಡ್ ವಿತರಣೆ ಮತ್ತೆ ಆರಂಭ:
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ಈ ಹಿಂದೆ ಜಾರಿಗೆ ತರಲಾಗಿದ್ದ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ ವಿಳಂಬದ ಬಗ್ಗೆ ಅಧಿಕಾರಿಗಳನ್ನು ಸಚಿವರು ಪ್ರಶ್ನಿಸಿದರು. ಆಗ ಅವರ ಮಾತಿಗೆ ಉತ್ತರಿಸಿದ ಅಧಿಕಾರಿಗಳು, 2015-16ರಿಂದ ಈಚೆಗೆ ವಿತರಣೆ ಆಗಿರಲಿಲ್ಲ. ಬಿಜೆಪಿ ಸರ್ಕಾರ ಬಂದ ನಂತರ ಬಾಂಡ್ ವಿತರಿಸುತ್ತಿರುವುದಾಗಿ ತಿಳಿಸಿದರು.

CTD SRIRAMULU C

ದೇವರಾಜ ಅರಸು ಭವನ ನಿರ್ಮಾಣಕ್ಕೆ 50 ಲಕ್ಷ ರೂ. ಬಿಡುಗಡೆ ಆಗಿದೆ. ಕೆಲಸ ಕೂಡ ನಡೆಯುತ್ತಿದ್ದು, ಉಳಿದ 50 ಲಕ್ಷ ರೂ. ಬಿಡುಗಡೆಗೆ ಅಧಿಕಾರಿಗಳಿಂದ ಮನವಿ ಸಲ್ಲಿಸಲಾಯಿತು. ಆಗ ಸಚಿವರು ತಕ್ಷಣ ಹಣ ಬಿಡುಗಡೆ ಮಾಡುವ ಭರವಸೆ ನೀಡಿದರು.

ಗಡಿಭಾಗದ ಅಧಿಕಾರಿಗಳು ನಿಷ್ಠೆ ಹಾಗೂ ಬದ್ಧತೆಯಿಂದ ಕೆಲಸ ಮಾಡಬೇಕು. ತಾಲೂಕು ಕೇಂದ್ರಗಳಲ್ಲಿರುವ ಅಧಿಕಾರಿಗಳು ಹೆಡ್ ಕ್ವಾರ್ಟರ್ಸ್ ನಲ್ಲಿಯೇ ಉಳಿಯಬೇಕು. ಒಂದು ವೇಳೆ ಸರಿಯಾಗಿ ಕೆಲಸ ಮಾಡಲು ಆಗದವರು ಹೊರಗಡೆಗೆ ವರ್ಗಾವಣೆ ಮಾಡಿಸಿಕೊಂಡು ಹೋಗಬಹುದು. ಕ್ಷೇತ್ರದಲ್ಲಿ ಯಾವುದೇ ಸಮಸ್ಯೆಗಳು ಬಾರದ ರೀತಿ ಜನರಿಗೆ ಸ್ಪಂದಿಸಬೇಕು, ಜನರ ಕೆಲಸ ಮಾಡಬೇಕು ಎಂದು ಸಚಿವ ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದರು.

TAGGED:B. SriramuluChitradurgamolakalmuruofficersPublic TVTaluk Panchayatಅಧಿಕಾರಿಗಳುಚಿತ್ರದುರ್ಗಟಿಎಚ್‍ಓಪಬ್ಲಿಕ್ ಟಿವಿಬಿ.ಶ್ರೀರಾಮುಲುಮೊಳಕಾಲ್ಮೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
4 minutes ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
37 minutes ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
39 minutes ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
54 minutes ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
2 hours ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?