ತುಮಕೂರು: ಚಿತ್ರದುರ್ಗ ಬಿಜೆಪಿ ಸಂಸದ ನಾರಾಯಣಸ್ವಾಮಿ ಅವರು ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಕಸ ಸ್ವಚ್ಛಗೊಳಿಸಿದ್ದಾರೆ.
ಸಂಸದ ನಾರಾಯಣಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಚ ಭಾರತ್ ಹೇಳಿಕೆಯನ್ನು ಪಾಲಿಸಿದ್ದಾರೆ. ಭಾನುವಾರ ನಡೆದ ಗಣೇಶೋತ್ಸವದಲ್ಲಿ ರಸ್ತೆಗಳು ಮಲೀನವಾಗಿತ್ತು. ಹಾಗಾಗಿ ನಾರಾಯಣಗೌಡ ಅವರು ನಮ್ಮ ಕಸ ನಾವು ತೆಗೆಯಬೇಕು ಎಂದು ಹೇಳುವ ಮೂಲಕ ರಸ್ತೆಗಳನ್ನು ಸ್ವಚ್ಛ ಮಾಡಿದ್ದಾರೆ.
ನಾರಾಯಣಸ್ವಾಮಿ ಅವರು ಭಾನುವಾರ ಬೆಳಗ್ಗೆನಿಂದಲೂ ಗಣೇಶೋತ್ಸವದಲ್ಲಿ ಭಾಗವಹಿಸಿದ್ದರು. ಮೆರವಣಿಗೆ ಮುಗಿದ ಮೇಲೆ ರಾತ್ರಿ ಎಲ್ಲಾ ರಸ್ತೆಗಳನ್ನು ಪೊರಕೆ ಹಿಡಿದು ಸ್ವಚ್ಛಗೊಳಿಸಿದ್ದಾರೆ. ಸಂಸದರಿಗೆ ಸ್ಥಳೀಯ ಬಿಜೆಪಿ ಮುಖಂಡರ ಎಸ್.ಆರ್ ಗೌಡ ಸೇರಿದಂತೆ ಹಲವರು ಸಾಥ್ ನೀಡಿದ್ದರು.
ಸದ್ಯ ಸಂಸದರು ಭಾನುವಾರ ತುಮಕೂರು ಜಿಲ್ಲೆ ಶಿರಾನಗರದ ಮಲಿಕ್ ರೇಹಾನ್ ದರ್ಗಾ ಮತ್ತು ಬಸ್ ನಿಲ್ದಾಣಗಳಲ್ಲಿ ಸ್ವಚ್ಛಗೊಳಿಸಿದ್ದಾರೆ.