Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಗೆ ಕಾಟಕ್ಕೆ ಚಿತ್ರದುರ್ಗದ ಓಬಳಾಪುರ ಜನ ಸುಸ್ತು..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಕಾಗೆ ಕಾಟಕ್ಕೆ ಚಿತ್ರದುರ್ಗದ ಓಬಳಾಪುರ ಜನ ಸುಸ್ತು..!

Chitradurga

ಕಾಗೆ ಕಾಟಕ್ಕೆ ಚಿತ್ರದುರ್ಗದ ಓಬಳಾಪುರ ಜನ ಸುಸ್ತು..!

Public TV
Last updated: January 27, 2022 9:12 pm
Public TV
Share
4 Min Read
CTD CROW 4
SHARE

ಚಿತ್ರದುರ್ಗ: ಅದೊಂದು ಅಪರೂಪದ ಪಕ್ಷಿ. ಹಿಂದೂ ಸಂಪ್ರದಾಯದ ಕೆಲ ಸಮುದಾಯಗಳಲ್ಲಿ ಆ ಪಕ್ಷಿಗೆ ಊಟವಿಟ್ಟು ಅದರ ಆಗಮನಕ್ಕಾಗಿ ಜನರು ಕಾಯ್ತಾರೆ. ಆ ಪಕ್ಷಿ ಊಟವನ್ನು ಸೇವಿಸಿದ್ರೆ ಮನುಷ್ಯನ ಜನ್ಮಕ್ಕೆ ಮುಕ್ತಿ ಎಂಬ ನಂಬಿಕೆ ಸಹ ಇದೆ. ಆದರೆ ಈ ಊರಲ್ಲಿ ಮಾತ್ರ ಆ ಪಕ್ಷಿಯ ಹೆಸರು ಕೇಳಿದ್ರೆ ಸಾಕು, ಜನರು ಬೆಚ್ಚಿ ಬೀಳ್ತಾರೆ. ರಸ್ತೆಯಲ್ಲಿ ಒಬ್ಬರೇ ಓಡಾಡಬೇಕೆಂದರೂ ಒಮ್ಮೆ ಯೋಚಿಸ್ತಾರೆ.

CTD CROW 6

ಚಿತ್ರದುರ್ಗ ಜಿಲ್ಲೆ ಭರಮಸಾಗರ ಹೋಬಳಿಯ ಓಬಳಾಪುರ ಗ್ರಾಮದ ರಸ್ತೆಯಲ್ಲಿ ಒಂಟಿಯಾಗಿ ಓಡಾಡೋರನ್ನು ಕಂಡರೆ ವಿಮಾನದಷ್ಟೇ ಸರ್ರನೆ ಬಂದು ತಲೆ ಮೇಲೆ ಕುಟುಕಿ ಹೋಗುತ್ತದೆ. ಕಳೆದ 6 – 7 ತಿಂಗಳುಗಳಿಂದ ಒಂಟಿ ಕಾಗೆಯೊಂದು ಗ್ರಾಮಸ್ಥರಿಗೆ ಸಿಕ್ಕಾಪಟ್ಟೆ ಕ್ವಾಟ್ಲೆ ಕೊಡ್ತಿದೆ. ಕಾಗೆಯ ವಿಚಿತ್ರ ಕಾಟದಿಂದ ಗ್ರಾಮಸ್ಥರು ಅಕ್ಷರಶಃ ಹೈರಾಣಾಗಿದ್ದಾರೆ. ಒಂಟಿ ಮನುಷ್ಯರಿಗೆ ಕುಟುಕೋ ಈ ಕಾಗೆಗೆ ಮನೆ ಕಿಟಕಿಯ ಗಾಜು, ಬೈಕ್ ಮಿರರ್, ಕಾರಿನ ಗ್ಲಾಸ್ ಕಂಡ್ರೂ ಬಿಪಿ ನೆತ್ತಿಗೇರಿ ಪಟಪಟ ಅಂತ ಕುಕ್ಕುತ್ತಂತೆ. ಹಾಗೆಯೇ ಗಾಜುಗಳೇನಾದ್ರೂ ಕಣ್ಣಿಗೆ ಬಿದ್ರೆ ಸಾಕಾಗೋವರೆಗೂ ಕುಟುಕುತ್ತಲೇ ಇರುತ್ತದೆ. ಹೀಗೆ ಕಾಗೆ ಕುಟುಕಿ ಕುಟುಕಿ ಕೆಲವರ ತಲೆಗೆ ಭಾರೀ ಗಾಯ ಆಗಿವೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

CTD CROW 5

ಈ ಕಾಗೆಯೊಂದು ಇಷ್ಟು ಸಿಟ್ಟಿನಿಂದ ಗ್ರಾಮಸ್ಥರಿಗೆ ಕಾಟ ಕೊಡ್ತಿರೋದಕ್ಕೆ ಗ್ರಾಮದ ಆಂಜನೇಯ ಸ್ವಾಮಿಯ ಶಾಪವೇ ಕಾರಣವಂತೆ. ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನ ಪಾಳು ಬಿದ್ದು, ಹಲವು ವರ್ಷಗಳೇ ಕಳೆದಿವೆಯಂತೆ. ಅದರ ಅಭಿವೃದ್ಧಿ ಕಾರ್ಯ, ಮರು ಪ್ರತಿಷ್ಠಾಪನೆಗೆ, 10 ವರ್ಷದ ಹಿಂದೆ ಗ್ರಾಮಸ್ಥರು ಕೈ ಹಾಕಿದ್ದರು. ಆದರೆ ಆ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಆಂಜನೇಯ ಸ್ವಾಮಿ ಗ್ರಾಮಕ್ಕೆ ಶಾಪ ಹಾಕಿದ್ದಾರಂತೆ. ಹಾಗಾಗಿ ಶನಿ ಮಹಾತ್ಮ ವಾಹನವಾಗಿರುವ ಕಾಗೆ ರೂಪದಲ್ಲಿ ಈ ರೀತಿ ಕಾಟ ಕೊಡ್ತಿದ್ದಾನಂತೆ.

CTD CROW 1

ಒಂಟಿ ಕಾಗೆಯ ಕಿರಕ್ ಗೆ ಗ್ರಾಮದ ಮಕ್ಕಳು, ಮಹಿಳೆಯರು ಸೇರಿದಂತೆ ಎಲ್ಲರೂ ಬೆಚ್ಚಿ ಬಿದ್ದಿದ್ದಾರೆ. ಕಾಗೆ ದಾಳಿಯಿಂದ ಈಗಾಗಲೇ ವ್ಯಕ್ತಿಯೊಬ್ಬನ ತಲೆಗೆ ಗಂಭೀರ ಗಾಯವಾಗಿ ನೆಂಟರ ಮನೆಯಲ್ಲೇ ಅವರು ನೆಲೆಸಿದ್ದಾರಂತೆ. ಅಲ್ಲದೆ ಓಬಳಾಪುರ ಗ್ರಾಮಕ್ಕೆ ಹೊರಗಿನ ಜನ ಬರೋದಕ್ಕೂ ಹೆದರಿಕೊಳ್ತಿದ್ದಾರಂತೆ. ಇಷ್ಟು ದಿನ ಒಬ್ಬಂಟಿಯಾಗಿ ಓಡಾಡ್ತಿದ್ದವರು ಈಗ ಗುಂಪು ಗುಂಪಾಗಿ ಓಡಾಡ್ತಿದ್ದಾರೆ. ಕೆಲವರಂತು ಮನೆಯಿಂದ ಹೊರಗೆ ಬರೋವಾಗ ಆಕಾಶ ನೋಡ್ಕೊಂಡು ಹೊರ ಬರ್ತಾರೆ. ಎಲ್ಲಾದ್ರೂ ಕಾಗೆ ಸುಳಿವು ಅಥವಾ ಶಬ್ದ ಕೇಳಿದ್ರೆ ಸಾಕು, ಮನೆಯಿಂದ ಹೊರಗೆ ಬರದೇ ಮನೆಯೊಳಗೆ ಅವಿತು ಕೂರುವಂತಾಗಿದೆ.

CTD CROW

ಹಿಂದೂ ಸಂಪ್ರದಾಯದಲ್ಲಿ ಬದುಕಿದ್ದ ಮನುಷ್ಯನನ್ನು ಕಾಗೆ ಮುಟ್ಟಿದ್ರೆ ಅಪಶಕುನ. ಹಾಗಾಗಿ ಕಾಗೆ ಕಂಡ್ರೆ ಸಹಜವಾಗಿಯೇ ಜನ ಹೆದರಿಕೊಳ್ತಾರೆ. ಕಾಗೆ ಮನುಷ್ಯನ ಮೇಲೆ ಕೂತ್ರೆ, ತಲೆ ಕುಟುಕಿದ್ರೆ ಅವರು ಮನೆಯೊಳಗೆ ಹೋಗೋದಿಲ್ಲ. ಮೊದಲು ಸ್ನಾನ ಮಾಡಿ, ಶನಿ ಮಹಾತ್ಮನಿಗೆ ಪೂಜೆ ಮಾಡಿ ಬಳಿಕ ಓಡಾಡ್ತಾರೆ. ಅಲ್ಲದೆ ಸಮೀಪದ ಶನಿ ಮಹಾತ್ಮನ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿಕೊಂಡು ಶನಿದೇವನಿಗೆ ಶಾಂತಿ ಮಾಡಿಸ್ತಾರೆ. ಈ ಗ್ರಾಮಸ್ಥರು ಕೂಡ ಹೋಗದ ಶನಿ ದೇವಾಲಯವಿಲ್ಲ, ಪೂಜೆ ಮಾಡದ ಆಂಜನೇಯನಿಲ್ಲ. ಕಂಡ ಕಂಡ ದೇವರಿಗೆ ಕೈಮುಗಿದು, ಹರಕೆ ಹೊತ್ತರೂ ಈ ಕಾಗೆ ಕ್ಯಾತೆ ಮಾತ್ರ ಕಡಿಮೆ ಆಗಿಲ್ಲ. ಹೀಗಾಗಿ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಯಾರಿಗೆ ಏನು ಕೇಡು ಕಾದಿದ್ಯೊ ಎಂಬ ಭಯ ಶುರುವಾಗಿದೆ.

CTD CROW 2

ಅದರಲ್ಲೂ ಬಹುತೇಕ ಹಳ್ಳಿಗಳಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನ ಊರ ಹೊರಗೆ ಅಥವಾ ಗಡಿ ಭಾಗದಲ್ಲಿ ಇರತ್ತೆ. ಪುರಾಣದ ಪ್ರಕಾರ ಗ್ರಾಮಕ್ಕೆ ಶನಿಕಾಟ ಆಗಬಾರದು, ಊರ ಹೊರಗೆ ಆಂಜನೇಯ ಸ್ವಾಮಿ ಇದ್ರೆ ಶನಿದೇವ ಬರೋದನ್ನ ತಡೆಯುತ್ತಾನ್ನೆ ಅನ್ನೋ ಪ್ರತಿತಿ ಸಹ ಇದೆ. ಆದರೆ ಇಲ್ಲಿ ಆಂಜನೇಯ ಸ್ವಾಮಿಗಾಗಿ ಶನಿದೇವ ಕ್ಯಾತೆ ತೆಗೆದಿದ್ದಾನೆ. ಆಂಜನೇಯ ಸ್ವಾಮಿ ದೇವಸ್ಥಾನ ನಿರ್ಮಾಣ ಮಾಡಿದ್ರೆ ಶನಿ ಕಾಟ ಕಡಿಮೆ ಆಗತ್ತೆ, ಕಾಗೆ ಕ್ಯಾತೆ ತೆಗೆಯೋದು ಬಿಡತ್ತೆ ಅನ್ನೋದು ಇಲ್ಲಿನ ಗ್ರಾಮಸ್ಥರ ನಂಬಿಕೆ.

crows

ಮನುಷ್ಯ ಬದುಕಿದ್ದಾಗ ಕಾಗೆ ಅಪಶಕುನ, ಸತ್ತಾಗ ಪಿಂಡ ತಿನ್ನೋಕೆ ಬರದಿದ್ರೆ ಅಪಶಕುನ. ಮನುಷ್ಯ ಬದುಕಿದ್ದಾಗ ಕಾಗೆ ಕಂಡರೆ ಓಡಿಸ್ತಾರೆ. ಸತ್ತಾಗ ಪಿಂಡ ತಿನ್ನೋಕೆ ಕರೆಯುತ್ತಾರೆ. ಈ ಕಾಗೆ ಪಿಂಡ ತಿನ್ನೋದಕ್ಕೂ ಬರೋದಿಲ್ಲ, ಓಡಿಸಿದ್ರೆ ಓಡೋದು ಇಲ್ಲ. ಕಾಗೆ ಓಡಿಸೋದಕ್ಕೆ 6 ತಿಂಗಳಿಂದ ಜನರು ಹರಸಾಹಸ ಪ್ರಯತ್ನ ಪಡ್ತಿದ್ರೂ ಪ್ರಯೋಜನವಾಗಿಲ್ಲ. ಈ ಗ್ರಾಮದೊಳಗಿನ ದೇವಸ್ಥಾನದ 500 ಮೀಟರ್ ವ್ಯಾಪ್ತಿಯಲ್ಲಿ ಓಡಾಡೋ ಜನರ ಗೋಳು ಕೇಳೋರಿಲ್ಲ.

crow

ಆಂಜನೇಯ ಸ್ವಾಮಿ ದೇವಸ್ಥಾನ ಸುಸ್ತಿತಿಯಲ್ಲಿ ಇರೋವರೆಗೂ ಗ್ರಾಮಕ್ಕೆ ಯಾವುದೇ ಕಂಟಕ ಇರಲಿಲ್ಲ. ಆದರೆ 10 ವರ್ಷಗಳ ಹಿಂದೆ ಗ್ರಾಮಸ್ಥರೆಲ್ಲ ಸೇರಿ ದೇವಸ್ಥಾನ ಜೀರ್ಣೋದ್ಧಾರ ಮಾಡೋಣ, ದೇವರಿಗೆ ಪ್ರಾಣ ಪ್ರತಿಷ್ಠಾನೆ ಮಾಡೋಣ ಅಂತ ದೇವರ ಕಾರ್ಯಕ್ಕೆ ಮುಂದಾಗಿದ್ರು. ದೇವಾಲಯ ಮರು ನಿರ್ಮಾಣಕ್ಕೆ ಅನುದಾನ ಕೊಡುವಂತೆ ಆಗಿನ ಶಾಸಕರಿಂದ ಹಿಡಿದು ಈಗಿನ ಶಾಸಕರವರೆಗೆ ಎಲ್ಲರೂ ಮನವಿ ಮಾಡಿದ್ದಾರೆ. ಆದರೆ ಯಾರೊಬ್ಬರೂ ಸ್ಪಂದಿಸಿಲ್ಲ. ಸರ್ಕಾರ ಅನುದಾನ ನೀಡಿ ದೇವಾಲಯ ಜೀರ್ಣೋದ್ಧಾರ ಮಾಡಿ, ಪ್ರಾಣ ಪ್ರತಿಷ್ಠಾಪನೆ ಮಾಡಿದ್ರೆ ಕಾಗೆ ಕಾಟ ತಪ್ಪಬಹುದು ಎಂದು ಗ್ರಾಮಸ್ಥರು ಹೇಳಿದ್ದಾರೆ.

CTD CROW 1111111111

ಸಾಮಾನ್ಯವಾಗಿ ಕಾಗೆಗಳು ಸಮೂಹದಲ್ಲಿ ಇದ್ದಾಗ ಯಾರಾದರೂ ಸಾಯಿಸಿದರೆ ಅಥವಾ ಕಾಗೆಗಳು ಸತ್ತರೆ ಅವರು ಸಿಟ್ಟಿನಿಂದ ಮನುಷ್ಯರ ಮೇಲೆ ದಾಳಿ ಮಾಡೋದು ಸಹಜ. ಆದರೆ ಈ ಗ್ರಾಮದಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲ. ಅಲ್ಲದೆ ಯಾರೊಬ್ಬರೂ ಕಾಗೆ ಸಹವಾಸಕ್ಕೆ ಹೋಗಿಲ್ಲ. ಆದರೂ ಕಾಗೆ ಮಾತ್ರ ದಿನೇ ದಿನೆ ವೈಲೆಂಟ್ ಆಗ್ತಿದೆ. ಕಾಗೆಯನ್ನ ಸಾಯಿಸೋದ್ ಇರ್ಲಿ ಬೆಳಗೆದ್ದು ಅದರ ಮುಖ ನೋಡೋಕೆ ಹೆದರೋ ಜನ ಈಗ ನಿತ್ಯ ಅದರ ಭಯದಲ್ಲೇ ಬದುಕುತ್ತಿದ್ದಾರೆ.

CTD BIKE

ಒಟ್ಟಾರೆ ಕಳೆದ 6 ತಿಂಗಳಿಂದ ಕಾಗೆ ಕಿರಿಕ್ ಗೆ ಗ್ರಾಮಸ್ಥರು ಹೈರಾಣಾಗಿದ್ದಾರೆ. ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನ ಮರು ನಿರ್ಮಾಣ ಮಾಡಿ ದೇಗುಲಕ್ಕೆ ಜೀವಕಳೆ ತುಂಬಿ ಪ್ರತಿಷ್ಠಾಪನೆ ಮಾಡಿದ್ರೆ ಗ್ರಾಮಕ್ಕೂ ಒಳ್ಳೆಯದಾಗುತ್ತೆ. ಕಾಗೆ ಆಕ್ರೋಶ ಶಮನವಾಗಿ ಗ್ರಾಮದಲ್ಲಿ ಶಾಂತಿ ನೆಲೆಸುತ್ತದೆ ಅನ್ನೋದು ಹಿರಿಯರ ನಂಬಿಕೆಯಾಗಿದೆ.

TAGGED:ChitradurgaCrowಕಾಗೆಚಿತ್ರದುರ್ಗ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
20 minutes ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
31 minutes ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
33 minutes ago
Chikkamagaluru School 2
Chikkamagaluru

ಮಕ್ಕಳ ಭವಿಷ್ಯಕ್ಕಾಗಿ ಅಡಿಕೆ ತೋಟ ಬೆಳೆಸಿದ ಸರ್ಕಾರಿ ಶಾಲೆ – ವಿದ್ಯಾರ್ಥಿಗಳನ್ನ ವಿಮಾನದಲ್ಲಿ ಕರೆದೊಯ್ಯಬೇಕೆಂಬ ಆಸೆ

Public TV
By Public TV
41 minutes ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
1 hour ago
Israel Strikes Iran
Latest

ಕದನ ವಿರಾಮಕ್ಕೆ ಒಪ್ಪದ ಇರಾನ್‌ ಮೇಲೆ ಮಿಸೈಲ್‌ ಮಳೆಗರೆದ ಇಸ್ರೇಲ್‌ – ಹಲವೆಡೆ ಸ್ಫೋಟ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?