Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chitradurga

ಸರ್ಕಾರದ ಖಡಕ್ ಎಚ್ಚರಿಕೆಯ ಬೆನ್ನಲ್ಲೇ 2 ಸಾವಿರ ಅಕ್ರಮ ಬಿಪಿಎಲ್ ಕಾರ್ಡ್ ವಾಪಸ್

Public TV
Last updated: December 19, 2019 5:03 pm
Public TV
Share
2 Min Read
ration cards
SHARE

ಚಿತ್ರದುರ್ಗ: ಸರ್ಕಾರದಿಂದ ಕಡು ಬಡವರಿಗೆ ಎಂದು ನೀಡುತ್ತಿರುವ ಬಿಪಿಎಲ್ ಕಾರ್ಡ್ ಪಡೆದು ಅಕ್ಕಿ, ಬೇಳೆ ಪಡೆಯುತಿದ್ದ ಸಾವಿರಾರು ಜನ ಅಕ್ರಮ ಫಲಾನುಭವಿಗಳು ತಮ್ಮ ಪಡಿತರ ಕಾರ್ಡ್ ಗಳನ್ನು ಸರ್ಕಾರಕ್ಕೆ ವಾಪಸ್ ನೀಡಿದ್ದಾರೆ. ಸರ್ಕಾರ ನೀಡಿದ ಖಡಕ್ ಎಚ್ಚರಿಕೆಗೆ ಹೆದರಿದ ಫಲಾನುಭಾವಿಗಳು ಅನಿವಾರ್ಯವಾಗಿ ಆಹಾರ ಇಲಾಖೆಗೆ ಬಂದು ಪಡಿತರ ಚೀಟಿಗಳನ್ನು ವಾಪಸ್ ಮಾಡಿದ್ದಾರೆ.

ಕಳೆದ ಸೆಪ್ಟಂಬರ್ ತಿಂಗಳಲ್ಲಿ ಸರ್ಕಾರ ತಪ್ಪು ಮಾಹಿತಿ ನೀಡಿ ಪಡೆದ ಅಕ್ರಮ ಬಿಪಿಎಲ್ ಪಡಿತರ ಚೀಟಿಗಳನ್ನು ಸ್ವಯಂಪ್ರೇರಣೆಯಿಂದ ಸರ್ಕಾರಕ್ಕೆ ಮರಳಿಸಿದರೆ ಉತ್ತಮ. ಇಲ್ಲದೇ ಹೋದಲ್ಲಿ ತಾವು ಪಡಿತರ ಚೀಟಿ ಪಡೆದ ದಿನದಿಂದ ಇಲ್ಲಿಯವರೆಗೂ ಪಡೆದ ಪಡಿತರವನ್ನು, ಹಣದ ರೂಪದಲ್ಲಿ ವಾಪಸ್ ಮರಳಿಸುವುದಲ್ಲದೇ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುತ್ತೇವೆ ಎಂದು ಆಹಾರ ಇಲಾಖೆ ಎಚ್ಚರಿಸಿತ್ತು.

ration card 5

ಈ ಆದೇಶದಿಂದ ಎಚ್ಚತ್ತುಕೊಂಡ ಅಕ್ರಮ ಪಡಿತರ ಕಾರ್ಡ್ ಹೊಂದಿದ್ದ ಚಿತ್ರದುರ್ಗ ಜಿಲ್ಲೆಯ ಹಲವಾರು ಕುಟುಂಬಗಳು ಸುಮಾರು 2,321 ಕಾರ್ಡ್ ಗಳನ್ನು ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ. ಅದರಲ್ಲಿ 265 ಕಾರ್ಡಗಳನ್ನು ಸ್ವಯಂಪ್ರೇರಿತರಾಗಿ ಕಚೇರಿಗೆ ಬಂದು ಹಿಂತಿರುಗಿಸಿದ್ದು, ಅವರಲ್ಲಿ 148 ಸರ್ಕಾರಿ ನೌಕರರು ಹಾಗೂ ಇತರ ಕಾರಣಗಳಿಂದ ಕಾರ್ಡ್ ಪಡೆದಿದ್ದ 105 ಸೇರಿದಂತೆ ಒಟ್ಟು 265 ಅಕ್ರಮ ಫಲಾನುಭವಿಗಳು ತಮ್ಮ ಪಡಿತರ ಚೀಟಿಯನ್ನು ಸ್ವಯಂ ಪ್ರೇರಣೆಯಿಂದ ವಾಪಸ್ ಮಾಡಿದ್ದಾರೆ.

ಹಲವು ಜನರ ಬಳಿ ಅಕ್ರಮವಾಗಿ ಪಡೆದಿರುವ ಬಿಪಿಎಲ್ ಕಾರ್ಡ್‍ಗಳಿವೆ. ಆದರೆ ಅವು ಇನ್ನು ವಾಪಸಾಗಿಲ್ಲ. ಈ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಸಹ ಸುಮ್ಮನೆ ಕುಳಿತಿಲ್ಲ. ಸ್ವಯಂಪ್ರೇರಣೆಯಿಂದ ವಾಪಸ್ ಮಾಡದೇ ಹೋದಲ್ಲಿ ಅವರ ವಿರುದ್ಧ ತನಿಖೆ ನಡೆಸಲು ಇಲಾಖೆ ಈಗ ಸಿದ್ಧತೆ ನಡೆಸುತ್ತಿದೆ.

ctd

ಜೊತೆಗೆ ಇ-ಕೆವೈಸಿ ಮೂಲಕ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಕುಟುಂಬ ಸದಸ್ಯರ ಬಯೋ ಅಥೆಂಟಿಕೇಶನ್ ಮಾಡಲಾಗುತ್ತಿದೆ. ಸದ್ಯಕ್ಕೆ 3,54,143 ಜನಸಂಖ್ಯೆಯಿದ್ದು, 4,11,439 ಒಟ್ಟು ಕಾರ್ಡ್‍ಗಳಿವೆ. ಅದರಲ್ಲಿ 1,24,004 ಇ-ಕೆವೈಸಿ ಬಿಪಿಎಲ್ ಕಾರ್ಡ್‍ಗಳು ಮತ್ತು 6,942 ಎಪಿಎಲ್ ಕಾರ್ಡ್ ಗಳಿವೆ. 1,30,946 ಒಟ್ಟು ಇ-ಕೆವೈಸಿಯಾದ ಕಾರ್ಡ್ ಗಳು ಎಂದು ಆಹಾರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೀಗಾಗಿ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಹೊಂದಿರುವವರು ಅದಷ್ಟು ಬೇಗ ಸಂಬಂಧ ಪಟ್ಟ ಇಲಾಖೆ ಹಿಂತಿರುಗಿಸಬೇಕು. ಇಲ್ಲವಾದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಹಾರ ಇಲಾಖೆ ಅಧಿಕಾರಿಗಳು ಎಚ್ಚರಿಸಿದ್ದಾರೆ.

TAGGED:BPL cardsChitradurgaFood Departmentillegal usersPublic TVration cardಅಕ್ರಮ ಬಳಕೆದಾರರುಆಹಾರ ಇಲಾಖೆಚಿತ್ರದುರ್ಗಪಡಿತರ ಚೀಟಿಪಬ್ಲಿಕ್ ಟಿವಿಬಿಪಿಎಲ್ ಕಾರ್ಡ್
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
2 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
21 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
21 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
22 hours ago

You Might Also Like

Modi 1
Latest

ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ – ಅಹಮದಾಬಾದ್‌ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮೋದಿ

Public TV
By Public TV
13 minutes ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
55 minutes ago
Pratik Joshi Family
Latest

ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

Public TV
By Public TV
1 hour ago
Modi
Latest

Ahmedabad | ವಿಮಾನ ದುರಂತ ನಡೆದ ಸ್ಥಳಕ್ಕೆ ಇಂದು ಮೋದಿ ಭೇಟಿ

Public TV
By Public TV
2 hours ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
2 hours ago
Ahmedabad Planecrash 5
Latest

ಅಹಮದಾಬಾದ್‌ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್‌ ಇಂಡಿಯಾ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?