ಬೆಟ್ಟದಲ್ಲಿ ಆಕಸ್ಮಿಕ ಬೆಂಕಿಗೆ 300 ಕುರಿಗಳು ಭಸ್ಮ

Public TV
1 Min Read
CTD KURI DEATH

ಚಿತ್ರದುರ್ಗ: ಬೆಟ್ಟದಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಗೆ 300 ಕುರಿಗಳು ಆಹುತಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಹೊರಕೇರೆದೇವಪುರದ ಬಳಿ ನಡೆದಿದೆ.

ಹೊಸದುರ್ಗ ತಾಲೂಕಿನ ಅಮೃತಾಪುರ ಗ್ರಾಮದ ತಿಮ್ಮಪ್ಪ ಎಂಬವರಿಗೆ ಸೇರಿರುವ ಒಂದು ಸಾವಿರ ಕುರಿಗಳನ್ನು ಮೇಯಿಸಲು ಹೊರಕೆರೆದೇವರಪುರ ಅರಣ್ಯ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಗಿಡಗಳಿಗೆ ಹತ್ತಿದ ಬೆಂಕಿಯಿಂದಾಗಿ 300 ಕುರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಉಳಿದ 700 ಕುರಿಗಳು ಪ್ರಾಣಾಪಾಯದಿಂದ ಪಾರಾಗಿವೆ.

CTD KURI DAETH4

ಇದರಿಂದಾಗಿ ರೈತ ತಿಮ್ಮಪ್ಪನಿಗೆ ಸುಮಾರು 12 ಲಕ್ಷಕ್ಕೂ ಅಧಿಕ ನಷ್ಟವಾಗಿದೆ. ಈ ಪ್ರಕರಣ ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದೂ, ಸ್ಥಳಕ್ಕೆ ಪಶು ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

CTD KURI DEATH 3

ಸ್ಥಳದಲ್ಲಿ ಕುರಿ ಕಳೆದುಕೊಂಡ ರೈತನ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಉಣ್ಣೆ ಅಭಿವೃದ್ಧಿ ನಿಗಮದಿಂದ ಅಧಿಕಾರಿಗಳು ಪರಿಹಾರ ಒದಗಿಸುವ ಭರವಸೆಯನ್ನು ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *