ಐವರ ಅಸ್ಥಿಪಂಜರ ಪತ್ತೆ ಕೇಸ್‌ – ಮರಣೋತ್ತರ ಪರೀಕ್ಷಾ ವರದಿಯಲ್ಲೂ ಪತ್ತೆಯಾಗದ ಸತ್ಯಾಂಶ

Public TV
2 Min Read
Chitradurga

ಚಿತ್ರದುರ್ಗ: ಇಲ್ಲಿನ ಪಾಳುಬಿದ್ದ ಮನೆಯಲ್ಲಿ ಪತ್ತೆಯಾಗಿದ್ದ ಐವರ ಅಸ್ಥಿಪಂಜರಗಳ (Skeleton) ಮರಣೋತ್ತರ ಪರೀಕ್ಷಾ ವರದಿ ಪೊಲೀಸರ ಕೈ ಸೇರಿದೆ. ಆದರೆ ಅದು ಕೊಲೆಯೊ? ಆತ್ಮಹತ್ಯೆಯೊ? ಎಂಬ ಅನುಮಾನಕ್ಕೆ ತೆರೆಬಿದ್ದಿಲ್ಲ.

2023ರ ಡಿಸೆಂಬರ್ 28ರಂದು ಚಿತ್ರದುರ್ಗದ (Chitradurga) ಜಗನ್ನಾಥರೆಡ್ಡಿ ಅವರ ಪಾಳುಬಿದ್ದ ಮನೆಯಲ್ಲಿ ಪತ್ತೆಯಾಗಿದ್ದ ಐವರ ಅಸ್ಥಿಪಂಜರಗಳಿಂದಾಗಿ ಈ ಪ್ರಕರಣದ ಸುತ್ತ ಹಲವು ಅನುಮಾನಗಳ ಹುತ್ತ ಬೆಳೆದಿತ್ತು. ಹೀಗಾಗಿ ಮರಣೋತ್ತರ ಪರೀಕ್ಷಾ ವರದಿಯಿಂದ ಸತ್ಯಾಂಶ ಹೊರಬೀಳುವ ಭರವಸೆ ಪೊಲೀಸರಲ್ಲಿತ್ತು.

chitradurga skeleton

ಇನ್ನು ಕಳೆದ‌ ಒಂದು ‌ವಾರದ ಹಿಂದೆ ಅಸ್ತಿ ಪಂಜರಗಳ ಮರಣೋತ್ತರ ಪರೀಕ್ಷೆ ನಡೆಸಿದ್ದ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ತಜ್ಞ ವೈದ್ಯ ವೇಣು ಅವರು, ಭಾನುವಾರ (ಜ.7) ರಾತ್ರಿ ಆ ವರದಿಯನ್ನು, ಬಡಾವಣೆ ಠಾಣೆ ಪಿಐ ನಯೂಮ್ ಅವರಿಗೆ ಹಸ್ತಾಂತರಿಸಿದ್ದಾರೆ‌. ಆದರೆ ಆ ವರದಿಯಲ್ಲಿ ಘಟನೆಗೆ ಸಂಬಂಧಿಸಿದಂತೆ ಯಾವುದೇ ಸುಳಿವು ಸಿಕ್ಕಿಲ್ಲ. ವರದಿಯಲ್ಲಿ ಕೇವಲ FSL ವರದಿ ಬಾಕಿ ಇದೆ ಎಂದಷ್ಟೇ ಉಲ್ಲೇಖವಾಗಿದೆ. ಹೀಗಾಗಿ ಇದು ಕೊಲೆಯೋ? ಆತ್ಮಹತ್ಯೆಯೋ? ಎಂಬ ಶಂಕೆಗೆ ತೆರೆ ಎಳೆಯಲಾಗದೇ ಪೊಲೀಸರು ಮತ್ತೆ ಗೊಂದಲಕ್ಕೀಡಾಗಿದ್ದಾರೆ.

ಇದು ವಿಷ ಸೇವಿಸಿ ಆತ್ಮಹತ್ಯೆಯೋ? ಸೈನಡ್ ಸೇವಿಸಿ ಆತಹತ್ಯೆಯೋ? ಅಥವಾ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರಾ? ಅನ್ನೋ ಬಗ್ಗೆ ಅನುಮಾನಗಳು ಮೂಡಿದ್ದು, ಪೊಲೀಸರು ಹೆಚ್ಚಿನ ತನಿಖೆಗೆ ಮುಂದಾಗಿದ್ದಾರೆ. ಎಫ್‌ಎಸ್‌ಎಲ್‌ ವರದಿಗೆ ಸಾಧ್ಯತೆ ಇದೆ‌ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಐವರ ಅಸ್ಥಿಪಂಜರ ಪತ್ತೆ ಕೇಸ್‍ಗೆ ಟ್ವಿಸ್ಟ್- ಪಾಳು ಬಿದ್ದ ಮನೆಯಲ್ಲಿ ಸಿಕ್ಕ ಡೆತ್‍ನೋಟ್‍ನಲ್ಲೇನಿದೆ?

chitradurga homeಏನಾಗಿತ್ತು?
ಚಿತ್ರದುರ್ಗ ನಗರದ ಚಳ್ಳಕೆರೆ ಟೋಲ್ ಗೇಟ್ ಬಳಿಯ ಜಿಲ್ಲಾಕಾರಗೃಹ ರಸ್ತೆಯ ಮನೆಯಲ್ಲಿರುವ ಮನೆಯೊಂದರಲ್ಲಿ ಐವರ ಅಸ್ಥಿಪಂಜರ ಪತ್ತೆಯಾಗಿತ್ತು. ಈ ಮನೆ ನಿವೃತ್ತ ಇಂಜಿನಿಯರ್ ಜಗನ್ನಾಥ್ ರೆಡ್ಡಿಯವರದ್ದಾಗಿದೆ. ಮನೆಯಲ್ಲಿ ಜಗನ್ನಾಥ್ ಪತ್ನಿ ಪ್ರೇಮಕ್ಕ ಮಕ್ಕಳಾದ ಕೃಷ್ಣರೆಡ್ಡಿ, ನರೇಂದ್ರ, ತ್ರಿವೇಣಿ ವಾಸವಾಗಿದ್ದರು. ಆದ್ರೆ ಹಲವು ವರ್ಷಗಳಿಂದ ಅವರ ಸಂಬಂಧಿಗಳು, ಸ್ನೇಹಿತರು ಹಾಗೂ ಅಕ್ಕಪಕ್ಕದ ನಿವಾಸಿಗಳ ಸಂಪರ್ಕಕ್ಕೂ ಕುಟುಂಬಸ್ಥರು ಬಂದಿರಲಿಲ್ಲ. ಎಲ್ಲೊ ದೂರದ ಊರಲ್ಲಿ ಅನಾಥಾಶ್ರಮದಲ್ಲಿ ನೆಲೆಸಿರಬಹುದು ಅಂತಲೇ ಎಲ್ರೂ ಭಾವಿಸಿದ್ರು. ಅಲ್ದೇ ಜಗನ್ನಾಥ್ ರೆಡ್ಡಿಯ ಮೂವರು ಮಕ್ಕಳಿಗೂ ವಿವಾಹವಾಗಿರಲಿಲ್ಲ. ಇದನ್ನೂ ಓದಿ: ಅಸ್ಥಿಪಂಜರ ಪತ್ತೆ ಕೇಸ್‌: ಮಾನಸಿಕ ಅಸ್ವಸ್ಥತೆಯಿಂದ ಆತ್ಮಹತ್ಯೆಗೆ ಶರಣಾಗಿತ್ತಾ ಇಡೀ ಕುಟುಂಬ? – ಪೊಲೀಸರ ತನಿಖೆ ಚುರುಕು

ಮೊದಲ ಮಗ ಕೃಷ್ಣರೆಡ್ಡಿ ನಿರುದ್ಯೋಗಿಯಾಗಿದ್ದರಂತೆ, ಮತ್ತೋರ್ವ ನರೇಂದ್ರರೆಡ್ಡಿ 2013ರಲ್ಲಿ ಬೆಂಗಳೂರಿನ ಬಿಡದಿಯಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡೋದನ್ನ ಬಿಟ್ಟು ದರೋಡೆ ಕೇಸ್‌ನಲ್ಲಿ ಕೆಲದಿನ ಜೈಲು ಶಿಕ್ಷೆಗೆ ಗುರಿಯಾದರು. ಹಾಗೆಯೇ ಇದ್ದ ಓರ್ವ ಪುತ್ರಿಯಾದ ತ್ರಿವೇಣಿ ಬೋನ್ ಮ್ಯಾರೊ ಎಂಬ ಮೂಳೆ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಇವರ ಹಿರಿಯ ಮಗ ಮಂಜುನಾಥ ರೆಡ್ಡಿ ಕೇರಳದಲ್ಲಿ ಸಾವನ್ನಪ್ಪಿದ್ರು. ಹೀಗಾಗಿ ಇಡೀ ಕುಟುಂಬ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಕಳೆದ 8 ವರ್ಷಗಳಿಂದ ಯಾರ ಸಂಪರ್ಕದಲ್ಲಿರಲಿಲ್ಲ ಎಂದು ಜಗನ್ನಾಥ್ ಪತ್ನಿಯಾದ ಪ್ರೇಮಕ್ಕ ಅವರ ಸಹೋದರಿ ಲಲಿತಮ್ಮ ತಿಳಿಸಿದ್ದರು.

Share This Article