ಮುಂಬೈ: ವ್ಯಕ್ತಿ ಓರ್ವನನ್ನು ಕೊಲೆ ಮಾಡಿ ಮೃತದೇಹವನ್ನು ಪೀಸ್ ಪೀಸ್ ಮಾಡಿ ಬ್ಯಾಗೊಂದರಲ್ಲಿ ತುಂಬಿ ಬಿಸಾಕಿರುವ ಘಟನೆ ನಲಸೋಪರಾ ಪೂರ್ವದ ಧನಿವ್ ಬಾಗ್ ಶ್ರೀರಾಮ್ ನಗರ ಪ್ರದೇಶದ ನುಲ್ಲಾದಲ್ಲಿ ನಡೆದಿದೆ.
ವ್ಯಕ್ತಿಯನ್ನು ಕ್ರೂರವಾಗಿ ಕೊಲೆ ಮಾಡಲಾಗಿದ್ದು, ಬಳಿಕ ಅವನ ದೇಹವನ್ನು ಅನೇಕ ತುಂಡುಗಳಾಗಿ ಕತ್ತರಿಸಿ ಅದನ್ನು ನೈಲಾನ್ ಬ್ಯಾಗಿನಲ್ಲಿ ತುಂಬಿ ಬಿಸಾಕಿದ್ದಾರೆ. ಬ್ಯಾಗನ್ನು ನೋಡಿ ಅನುಮಾನಗೊಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದು ಸ್ಥಳೀಯ ತುಲಿನ್ಜ್ ಪೊಲೀಸರೊಂದಿಗೆ ಪಾಲ್ಘರ್ ಜಿಲ್ಲಾ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಂತರ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಮೊದಲಿಗೆ ವ್ಯಕ್ತಿಯ ಕತ್ತರಿಸಿದ ದೇಹದ ತುಂಡುಗಳನ್ನು ಕಪ್ಪು ಬಣ್ಣದ ಪ್ಲಾಸ್ಟಿಕ್ ಕವರ್ ನಲ್ಲಿ ಸುತ್ತಿ ನಂತರ ಬ್ಯಾಗ್ಗೆ ತುಂಬಿಸಿದ್ದಾರೆ. ಆದರೆ ಇನ್ನೂ ಮೃತರ ಗುರುತು ಪತ್ತೆಯಾಗಿಲ್ಲ. ಬ್ಯಾಗಿನಲ್ಲಿದ್ದ ಕೆಲವು ಬಟ್ಟೆಗಳನ್ನು ಸಹ ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ತುಲಿನ್ಜ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]