ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ರೈಸ್ತ ಸಮುದಾಯ ಸೇಫ್ – ಕೆನಡಿ

Public TV
1 Min Read
CHRIST

ಶಿವಮೊಗ್ಗ: ಬಿಜೆಪಿ ಸರ್ಕಾರ ಬಂದ ಮೇಲೆ ಯಾವುದೇ ಸಮುದಾಯವು ನಿರ್ಲಕ್ಷ್ಯಕ್ಕೆ ಒಳಗಾಗಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲೇ ಕ್ರೈಸ್ತ ಸಮುದಾಯ ಸುರಕ್ಷಿತವಾಗಿದೆ ಎಂದು ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಂತಕುಮಾರ ಕೆನಡಿ ತಿಳಿಸಿದ್ದಾರೆ.

KENADI PRESSMEET

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸರ್ಕಾರ ಇರುವುದು ಎಲ್ಲ ಸಮುದಾಯದ ಏಳಿಗೆಗಾಗಿ. ಬಿಜೆಪಿ ಸರ್ಕಾರ ಬಂದ ಮೇಲೆ ಯಾವುದೇ ಸಮುದಾಯ ನಿರ್ಲಕ್ಷ್ಯಕ್ಕೆ ಒಳಗಾಗಿಲ್ಲ. ಕ್ರೈಸ್ತ ಸಮುದಾಯವೂ ಅತ್ಯಂತ ಸುರಕ್ಷಿತವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಕಬ್ಬನ್ ಪಾರ್ಕ್, ಲಾಲ್‍ಬಾಗ್‍ಗಳಿಗಿಂತ ದೊಡ್ಡ ಪಾರ್ಕ್ ನಿರ್ಮಾಣ: ಮುನಿರತ್ನ

KENADI PRESSMEET

ಮತಾಂತರ ನಿಷೇಧ ಕಾಯ್ದೆಯನ್ನು ಕ್ರೈಸ್ತ ಸಮುದಾಯ ವಿರೋಧಿಸಿಲ್ಲ. ಆದರೆ ಕಾಯ್ದೆ ಜಾರಿಗೆ ತರುವ ಮೊದಲು ಚರ್ಚೆಗೆ ಒಳಪಡಿಸಬೇಕಿತ್ತು ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ ಅಷ್ಟೇ. ಮತಾಂತರ ನಿಷೇಧ ಕಾಯ್ದೆಯಲ್ಲಿ ಸರ್ಕಾರದ ನಿರ್ಧಾರ ಏನಿದೆಯೋ, ಅದನ್ನು ಗೌರವಿಸಬೇಕಾಗುತ್ತದೆ. ಅಲ್ಲಲ್ಲಿ ಸಮುದಾಯದ ಪರವಾಗಿ ಸಣ್ಣಪುಟ್ಟ ವ್ಯತ್ಯಾಸ ಇರಬಹುದು. ಅದನ್ನೇ ವಿರೋಧ ಎನ್ನುವುದು ಸರಿಯಲ್ಲ. ವಿರೋಧವನ್ನು ಯಾರು ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ನನ್ನ ವಿಷಯಕ್ಕೆ ಬಂದು ಡಿಕೆಶಿ ಶೇಪ್ ಔಟ್ ಮಾಡಿಕೊಂಡಿದ್ದಾರೆ: ಅಶ್ವಥ್ ನಾರಾಯಣ

Share This Article
Leave a Comment

Leave a Reply

Your email address will not be published. Required fields are marked *