ಉಡುಪಿ: ಸಿಗರೇಟ್ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಚಿತ್ರಹಿಂಸೆ ನೀಡುತ್ತಿದ್ದ ಪತಿಯನ್ನು ಕುಂದಾಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪ್ರದೀಪ್ ಪೂಜಾರಿ ಬಂಧಿತ ಆರೋಪಿ. ಈತ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಬರೆಗಟ್ಟು ನಿವಾಸಿಯಾಗಿದ್ದಾನೆ. ಸಿಗರೇಟ್ ನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಚಿತ್ರಹಿಂಸೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾನೆ. ಪತ್ನಿಯನ್ನು ಥಳಿಸಿ, ಸಿಗರೇಟ್ ಹಿಡಿದು ಕಿರುಕುಳ ನೀಡುವ ವೀಡಿಯೋ ವೈರಲ್ ಆಗಿತ್ತು.
ಪ್ರದೀಪ್ ಹಾಗೂ ಪ್ರಿಯಾಂಕ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಪತ್ನಿಗೆ ವರದಕ್ಷಿಣೆಗಾಗಿ ಪ್ರತೀ ದಿನ ಹಿಂಸೆ ನೀಡುತ್ತದ್ದನು. ಈ ಬಗ್ಗೆ ಪತ್ನಿ ಪ್ರಿಯಾಂಕ ವರದಕ್ಷಿಣೆಗಾಗಿ ಹಿಂಸೆ ನೀಡಿತ್ತಿದ್ದಾನೆ ಎಂದು ಪ್ರಕರಣ ದಾಖಲಿಸಿದ್ದರು. ಪ್ರತೀ ದಿನ ಚಿನ್ನ ಹಾಗೂ ಹಣ ನೀಡುವಂತೆ ಒತ್ತಾಯಿಸುತ್ತಿದ್ದ ಪ್ರದೀಪ್, ಎರಡು ಲಕ್ಷ ರುಪಾಯಿ, ನಾಲ್ಕು ಪವನ್ ಚಿನ್ನಕ್ಕಾಗಿ ಭೇಡಿಕೆ ಇಟ್ಟಿದ್ದನು.