ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಕುರಿತು ಸಿನಿಮಾ: ಸಂದೀಪ್ ತಂದೆಯ ಪಾತ್ರದಲ್ಲಿ ಪ್ರಕಾಶ್ ರೈ

Public TV
1 Min Read
FotoJet 43

ದಿಮೂರು ವರ್ಷಗಳ ಹಿಂದೆ ಮುಂಬೈನ ತಾಜ್ ಹೋಟೆಲ್ ನಲ್ಲಿ ನಡೆದ ಟೆರರ್ ಅಟ್ಯಾಕ್ ನಲ್ಲಿ ಪ್ರಾಣ ತೆತ್ತ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಕುರಿತಾಗಿ ತೆಲುಗುನಲ್ಲಿ ಸಿನಿಮಾವೊಂದು ತಯಾರಾಗಿದೆ. ಅವರ ತ್ಯಾಗ, ಬಲಿದಾನಗಳ ಕಥಾ ಹಂದರ ಹೊತ್ತ ತಯಾರಾಗುತ್ತಿರುವ ಸಿನಿಮಾದಲ್ಲಿ ಸಂದೀಪ್ ಅವರ ಲೈಫ್ ಜರ್ನಿ ಕೂಡ ಇದೆಯಂತೆ. ಸಂದೀಪ್ ಉನ್ನಿಕೃಷ್ಣನ್ ಪಾತ್ರದಲ್ಲಿ ಅಡವಿ ಶೇಷು ಕಾಣಿಸಿಕೊಂಡಿದ್ದರೆ, ಸಂದೀಪ್ ಅವರ ತಂದೆಯಾಗಿ ಕನ್ನಡಿಗ ಪ್ರಕಾಶ್ ರೈ ನಟಿಸಿದ್ದಾರೆ. ಇದನ್ನೂ ಓದಿ : ಮಗುವಿಗಾಗಿ ಪ್ಲ್ಯಾನ್ ಮಾಡಿದ್ದಾರಂತೆ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್

FotoJet 3 14

ಮುಂಬೈ ತಾಜ್ ಹೋಟೆಲ್ ಹೈಜಾಕ್ ಮಾಡಿ, ಸಾವು ನೋವಿಗೆ ಕಾರಣವಾದ ಆ ಘಟನೆಯನ್ನು 26/11 ಅಟ್ಯಾಕ್ ಎಂದೇ ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಈ ಕರಾಳ ಅಧ್ಯಾಯವನ್ನು ಸಿನಿಮಾ ಮಾಡಿ, ಅದನ್ನು ತೆರೆಗೆ ತರುತ್ತಿದ್ದಾರೆ ಪ್ರಿನ್ಸ್ ಮಹೇಶ್ ಬಾಬು ಪ್ರೊಡಕ್ಷನ್ ಕಂಪೆನಿ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ವಿವಾದ : ಶಶಿ ತರೂರು ಮತ್ತು ಅನುಪಮ್ ಖೇರ್ ಜಟಾಪಟಿ

FotoJet 2 21

ಸಂದೀಪ್ ಉನ್ನಿಕೃಷ್ಣನ್ ಮೂಲತಃ ಕೇರಳದವರು. ಆದರೆ, ವಾಸವಾಗಿದ್ದು ಬೆಂಗಳೂರಿನಲ್ಲಿ ಹಾಗಾಗಿ ಕೇರಳ, ಕರ್ನಾಟಕ ಸೇರಿದಂತೆ ಹಲವು ಕಡೆ ಈ ಸಿನಿಮಾವನ್ನು ಚಿತ್ರೀಕರಿಸಲಾಗಿದೆಯಂತೆ. ಈಗಾಗಲೇ ಟ್ರೈಲರ್ ರಿಲೀಸ್ ಆಗಿದ್ದು, ನೋಡುಗರು ಟ್ರೈಲರ್ ಗೆ ಫಿದಾ ಆಗಿದ್ದಾರೆ. ದೇಶಭಕ್ತಿ ಸಾರುವಂತಹ ಇಂತಹ ಸಿನಿಮಾಗಳು ಇನ್ನಷ್ಟು ಬರಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ : ಜ್ಯೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿ ನಾರಾಯಣ್ ನಿಧನ

FotoJet 1 23

ಈ ಸಿನಿಮಾಗಾಗಿ ಸತತ ಹತ್ತು ವರ್ಷಗಳಿಂದ ಪ್ರಯತ್ನ ನಡೆದಿದೆಯಂತೆ. ಕೊನೆಗೂ ಸಂದೀಪ್ ಅವರ ತಂದೆ ತಾಯಿಯನ್ನು ಒಪ್ಪಿಸಿ, ಇಂಥದ್ದೊಂದು ಪಾತ್ರದಲ್ಲಿ ನಾನು ಕಾಣಿಸಿಕೊಂಡಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ ಶೇಷು. ಈ ಚಿತ್ರಕ್ಕೆ ಶಶಿ ಕಿರಣ್ ಅವರು ನಿರ್ದೇಶನ ಮಾಡಿದ್ದು ಪ್ರಿನ್ಸ್ ಮಹೇಶ್ ಬಾಬು ನಿರ್ಮಾಪಕರು. ಹೀಗಾಗಿ ಹಿಂದಿ, ತೆಲುಗು ಮತ್ತು ಮಲಯಾಳಂನಲ್ಲಿ ಈ ಸಿನಿಮಾ ತಯಾರಾಗಿದೆ. ಈ ಚಿತ್ರಕ್ಕೆ ಮೇಜರ್ ಎಂದು ಹೆಸರಿಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *