Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ದೆಹಲಿಯಲ್ಲಿ ಸಿನಿಮೀಯ ರೀತಿಯಲ್ಲಿ ಗುಂಡಿನ ಚಕಮಕಿ- ಇಬ್ಬರು ಶಾರ್ಪ್ ಶೂಟರ್‌ಗಳ ಬಂಧನ

Public TV
Last updated: November 27, 2023 2:02 pm
Public TV
Share
2 Min Read
POLICE 2
SHARE

ನವದೆಹಲಿ: ಕೆನಡಾ (Canada) ಮೂಲದ ಖಲಿಸ್ತಾನಿ ಭಯೋತ್ಪಾದಕ, ಗ್ಯಾಂಗ್‌ಸ್ಟರ್ ಅರ್ಷದೀಪ್ ದಲ್ಲಾ (Arshdeep Dalla) ಕಡೆಯ ಸದಸ್ಯರು ಮತ್ತು ದೆಹಲಿ ವಿಶೇಷ ಪೊಲೀಸರ ತಂಡ ನಡುವೆ ಸಿನಿಮೀಯ ರೀತಿಯಲ್ಲಿ ಗುಂಡಿನ ಚಕಮಕಿ ನಡೆದಿದೆ. ಭಾನುವಾರ ತಡರಾತ್ರಿ ಮಯೂರ್ ವಿಹಾರದ ಅಕ್ಷರಧಾಮ ಮಂದಿರ ಬಳಿ ಘಟನೆ ನಡೆದಿದ್ದು, ಘಟನೆ ಬಳಿಕ ಇಬ್ಬರು ಕ್ರಿಮಿನಲ್‌ಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ರಾಜ್‌ಪ್ರೀತ್ ಸಿಂಗ್ ಅಲಿಯಾಸ್ ರಾಜಾ ಅಲಿಯಾಸ್ ಬಾಂಬ್ ಮತ್ತು ವೀರೇಂದ್ರ ಸಿಂಗ್ ಅಲಿಯಾಸ್ ವಿಮ್ಮಿ ಎಂಬವರನ್ನು ಬಂಧಿಸಿದ್ದು, ಇಬ್ಬರೂ ಶಾರ್ಪ್ ಶೂಟರ್‌ಗಳಾಗಿ (Sharp Shooters) ಗ್ಯಾಂಗ್‌ಸ್ಟರ್ ಅರ್ಷದೀಪ್ ಸಿಂಗ್ ಜೊತೆಗೆ ಗುರುತಿಸಿಕೊಂಡಿದ್ದರು. ಪೊಲೀಸ್ ಮೂಲಗಳ ಪ್ರಕಾರ, ಇಬ್ಬರೂ ಶೂಟರ್‌ಗಳು ಪರೋಲ್ ಅಂತ್ಯಗೊಂಡ ನಂತರವೂ ತಲೆಮರೆಸಿಕೊಂಡಿದ್ದರು. ಇದನ್ನೂ ಓದಿ: ಫೇಸ್‍ಬುಕ್‍ನಲ್ಲಿ ಪರಿಚಯ- ಸ್ನೇಹಿತನಿಂದ ಅಪ್ರಾಪ್ತೆಯ ಅಪಹರಿಸಿ ಗ್ಯಾಂಗ್ ರೇಪ್

ಪಂಜಾಬ್ ಮೂಲದ ಜನಪ್ರಿಯ ಗಾಯಕನನ್ನು ಹತ್ಯೆ ಮಾಡಲು ಗ್ಯಾಂಗ್‌ಸ್ಟರ್ ಅರ್ಷದೀಪ್ ಸಿಂಗ್ ಕಡೆಯಿಂದ ಸುಪಾರಿ ಪಡೆದಿದ್ದ ಆರೋಪಿಗಳು ಕಳೆದ ತಿಂಗಳು ಬಟಿಂಡಾದಲ್ಲಿ ಗಾಯಕನ ಹತ್ಯೆ ವಿಫಲ ಯತ್ನ ಮಾಡಿದ್ದರು. ಮನೆಯಲ್ಲಿ ನಿರ್ದಿಷ್ಟ ಗುರಿ ಸಿಗದ ಕಾರಣ ಪ್ರಯತ್ನ ವಿಫಲವಾಗಿತ್ತು. ಆರೋಪಿಗಳು ದೆಹಲಿಯಲ್ಲಿರುವ ರಹಸ್ಯ ಮಾಹಿತಿ ಪಡೆದ ಪೊಲೀಸರು ಅವರನ್ನು ಬಂಧಿಸಲು ಮಯೂರ್ ವಿಹಾರ್ (Mayur Vihar) ಬಳಿ ತೆರಳಿದ್ದರು. ಇದನ್ನೂ ಓದಿ: ಮನೆ ಕ್ಲೀನ್‌ ಮಾಡು ಅಂತ ಹೇಳಿದ್ದಕ್ಕೆ ಜಗಳ – ಗಂಡನ ಕಿವಿ ಕಚ್ಚಿ ತುಂಡು ಮಾಡಿದ ಹೆಂಡ್ತಿ ವಿರುದ್ಧ ಕೇಸ್‌!

ಪೊಲೀಸರು ಬಂಧನಕ್ಕೆ ಆಗಮಿಸುತ್ತಿದ್ದಂತೆ ಆರೋಪಿಗಳು ಗುಂಡಿನ ದಾಳಿ ಆರಂಭಿಸಿದ್ದಾರೆ. ಗುಂಡಿನ ದಾಳಿ ವೇಳೆ ಆರೋಪಿಗಳು ಐದು ಸುತ್ತು ಗುಂಡು ಹಾರಿಸಿದ್ದು, ಎರಡು ಸುತ್ತು ಪೊಲೀಸರ ಬುಲೆಟ್ ಪ್ರೂಫ್ ಜಾಕೆಟ್‌ಗೆ ತಗುಲಿದೆ, ಆರೋಪಿಗಳ ಮೇಲೆ ಪೊಲೀಸ್‌ರ ತಂಡ ಆರು ಸುತ್ತು ಗುಂಡು ಹಾರಿಸಿ ಪ್ರತಿ ದಾಳಿ ಮಾಡಿದೆ. ಬಳಿಕ ಎನ್‌ಕೌಂಟರ್ (Encounter) ನಂತರ ಇಬ್ಬರನ್ನೂ ಅಕ್ಷರಧಾಮ ಮಂದಿರ ರಸ್ತೆಯ ಮಯೂರ್ ವಿಹಾರ್‌ನಲ್ಲಿರುವ ಸಮಾಚಾರ್ ಅಪಾರ್ಟ್ಮೆಂಟ್ ಬಳಿ ಬಂಧಿಸಲಾಯಿತು. ಇದನ್ನೂ ಓದಿ: ಸೋಶಿಯಲ್‌ ಮೀಡಿಯಾದಲ್ಲಿ ಯುವತಿಯರ ಫೋಟೋ ಬಳಸಿಕೊಂಡು ಲಕ್ಷ ಲಕ್ಷ ದೋಚಿದ ಖದೀಮ

ಈ ಎನ್‌ಕೌಂಟರ್ ವೇಳೆ ಶಾರ್ಪ್ ಶೂಟರ್ ವೀರೇಂದ್ರ ಸಿಂಗ್ ಅವರ ಬಲಗಾಲಿಗೆ ಗುಂಡು ತಗುಲಿದೆ. ಇದರಿಂದಾಗಿ ಅವರು ಗಾಯಗೊಂಡಿದ್ದಾರೆ. ಎನ್‌ಕೌಂಟರ್ ನಂತರ ಇಬ್ಬರೂ ಆರೋಪಿಗಳನ್ನು ಎಲ್‌ಬಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳಿಂದ ಒಂದು ರಿವಾಲ್ವರ್, 45 ಎಂಎಂ 06 ಸಜೀವ ಕಾಟ್ರಿಡ್ಜ್‌ಗಳು, ಇನ್ನೊಂದು ಪಿಸ್ತೋಲ್ 30 ಎಂಎಂ 07 ಸಜೀವ ಕಾಟ್ರಿಡ್ಜ್‌ಗಳು, ಮಾರಕಾಸ್ತ್ರಗಳು ಮತ್ತು ಕದ್ದ ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ದೆಹಲಿ ವಿಶೇಷ ಪೊಲೀಸ್ ಆಯುಕ್ತ ಎಚ್‌ಜಿಎಸ್ ಧಲಿವಾಲ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹಣಕ್ಕಾಗಿ ಪಾಕ್‍ಗೆ ಸೇನಾ ಮಾಹಿತಿ – ಇಬ್ಬರು ಶಂಕಿತರು ಅರೆಸ್ಟ್

TAGGED:Arshdeep DallaencounterNew DelhipoliceSharp Shootersಅರ್ಷದೀಪ್ ದಲ್ಲಾಎನ್‍ಕೌಂಟರ್ನವದೆಹಲಿಪೊಲೀಸ್ಶಾರ್ಪ್ ಶೂಟರ್
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
45 minutes ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
16 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
23 minutes ago
Weather 1
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
25 minutes ago
Bellary ED Raid
Bellary

ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

Public TV
By Public TV
46 minutes ago
KRS Toll Price Hike
Districts

ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

Public TV
By Public TV
1 hour ago
weather
Chikkamagaluru

ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ – ಉತ್ತರ ಕನ್ನಡದಲ್ಲಿ ಇಂದು ಶಾಲೆಗಳಿಗೆ ರಜೆ

Public TV
By Public TV
2 hours ago
Electronic City Flyover Accident copy
Bengaluru City

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?