Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೌರತ್ವ ತಿದ್ದುಪಡಿ ಕಾಯ್ದೆ ಗೊಂದಲ ನಿವಾರಣೆಗೆ ಮುಂದಾದ ಬಿಜೆಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪೌರತ್ವ ತಿದ್ದುಪಡಿ ಕಾಯ್ದೆ ಗೊಂದಲ ನಿವಾರಣೆಗೆ ಮುಂದಾದ ಬಿಜೆಪಿ

Bengaluru City

ಪೌರತ್ವ ತಿದ್ದುಪಡಿ ಕಾಯ್ದೆ ಗೊಂದಲ ನಿವಾರಣೆಗೆ ಮುಂದಾದ ಬಿಜೆಪಿ

Public TV
Last updated: December 21, 2019 2:41 pm
Public TV
Share
3 Min Read
BJP 3
SHARE

-ಬಿಜೆಪಿಯಿಂದ ಕಾರ್ಯಾಗಾರಗಳ ಆಯೋಜನೆ

ಬೆಂಗಳೂರು: ಪೌರತ್ವ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ತೀವ್ರಗೊಂಡಿದೆ. ಹಲವೆಡೆ ಹಿಂಸಾಚಾರ ಭುಗಿಲೆದ್ದು, ಕರ್ಪ್ಯೂ, ನಿಷೇಧಾಜ್ಞೆ ಜಾರಿಯಲ್ಲಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಸಮರ್ಪಕ ಮಾಹಿತಿ ಇಲ್ಲದ ಕಾರಣದಿಂದಲೇ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ ಎನ್ನುವ ಮಾತುಗಳೂ ಕೇಳಿಬರುತ್ತಿವೆ. ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಅರಿವು ಮೂಡಿಸುವ, ಗೊಂದಲ ನಿವಾರಿಸುವ ಕಾರ್ಯಕ್ಕೆ ಬಿಜೆಪಿ ಕೈಹಾಕಿದೆ.

ಈ ಕಾರ್ಯವನ್ನು ಹಂತಹಂತವಾಗಿ ಕೈಗೊಳ್ಳಲು ಮುಂದಾಗಿರುವ ರಾಜ್ಯ ಬಿಜೆಪಿ ಮೊದಲ ಭಾಗವಾಗಿ ಪಕ್ಷದ ಕಾರ್ಯಕರ್ತರಲ್ಲಿ ಅರಿವು ಮೂಡಿಸಲು ಮುಂದಾಯ್ತು. ಇವತ್ತು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಯಲ್ಲಿ ಪೌರತ್ವ ಕಾಯ್ದೆ ಕುರಿತು ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರದಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ವಿವರಣೆ ನೀಡಿದರು. ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳ ಪಕ್ಷದ ಮುಖಂಡರು, ಪದಾಧಿಕಾರಿಗಳು ಕಾರ್ಯಾಗಾರಾದಲ್ಲಿ ಭಾಗವಹಿಸಿದ್ದರು.

'ಪೌರತ್ವ ಕಾಯಿದೆ' ಕುರಿತ @BJP4Karnataka ದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಹಲವು ಬಿಜೆಪಿ ನಾಯಕರೊಂದಿಗೆ ಪಾಲ್ಗೊಂಡೆ.

ಪೌರತ್ವ ತಿದ್ದುಪಡಿ ಕಾಯಿದೆ ಬಗ್ಗೆ ಜನತೆ ವಾಸ್ತವತೆ ಅರಿತು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಾಗಿದೆ. ಈ ಬಗ್ಗೆ ಸರಿಯಾದ ಮಾಹಿತಿಯನ್ನು ಇತರರಿಗೂ ತಿಳಿಯಪಡಿಸಿ, ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡೋಣ. pic.twitter.com/l9ZBNA3Uru

— Dr. C.N. Ashwath Narayan (@drashwathcn) December 21, 2019

ಕಾರ್ಯಾಗಾರ ಉದ್ದೇಶಿಸಿ ಮೊದಲಿಗೆ ಸಚಿವ ಜೆ.ಸಿ.ಮಾಧುಸ್ವಾಮಿ ಮಾತಾಡಿ ಪೌರತ್ವ ಕಾಯ್ದೆ ಎಂದರೇನು, ಅದರ ಉದ್ದೇಶ, ಕಾರಣ, ಯಾಕೆ ವಿರೋಧ ಎಂಬ ವಿಚಾರಗಳ ಕುರಿತು ಅರ್ಥವತ್ತಾಗಿ ವಿವರಿಸಿದರು. ಹಲವು ರಾಜಕೀಯ ಪಕ್ಷಗಳು ಈ ಕಾಯ್ದೆ ಸಂಬಂಧ ಅಲ್ಪಸಂಖ್ಯಾತರಿಗೆ ಕುಮ್ಮಕ್ಕು ಕೊಟ್ಟು, ಷಡ್ಯಂತ್ರ ಮಾಡುತ್ತಿದ್ದಾರೆ. ಈ ಕಾಯ್ದೆಯಿಂದ ಅಲ್ಪಸಂಖ್ಯಾತರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಭಾರತೀಯ ಜನತಾ ಪಕ್ಷದವರು ಯಾವುದೇ ತಪ್ಪು ಮಾಡಿಲ್ಲ. ಸಂವಿಧಾನ ಬದ್ಧವಾದ ಕೆಲಸವನ್ನೇ ಮಾಡಿದ್ದೇವೆ. ನಾವು ಯಾವುದೇ ಧರ್ಮವನ್ನು ಇಬ್ಭಾಗ ಮಾಡಿಲ್ಲ. ಕಿರುಕುಳ ಅನುಭವಿಸಿ ಬಂದವರಿಗೆ ಸಹಾಯ ಹಸ್ತ ಚಾಚುತ್ತಿದ್ದೇವೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

ಪೌರತ್ವ ಕೊಡಲು ಕಾಯ್ದೆಯಲ್ಲಿ ಮುಸ್ಲಿಮರನ್ನು ಯಾಕೆ ಸೇರಿಸಿಲ್ಲ ಎಂದು ವಿಶ್ವಸಂಸ್ಥೆಯಲ್ಲಿ ಪ್ರಶ್ನಿಸುತ್ತಿರುವವರು ಅಂದು ಆ ಮೂರು ರಾಷ್ಟ್ರಗಳಲ್ಲಿ ಆರು ಧರ್ಮೀಯರು ಕಿರುಕುಳ ಅನುಭವಿಸುತ್ತಿದ್ದಾಗ ಯಾಕೆ ಪ್ರಶ್ನಿಸಿಲ್ಲ ಎಂದರು. ಆಗಿಲ್ಲದ ಮಾನವ ಹಕ್ಕುಗಳ ಉಲ್ಲಂಘನೆ ಈಗ ಹೇಗೆ ಆಗುತ್ತದೆ ಎಂದು ವಿಶ್ವಸಂಸ್ಥೆ ವಿರುದ್ಧ ಸಚಿವ ಮಾಧುಸ್ವಾಮಿ ತಮ್ಮ ಆಕ್ಷೇಪ ವ್ಯಕ್ತಪಡಿಸಿದರು.

CAA Lucknow 2

ಪಶ್ಚಿಮ ಬಂಗಾಳದಲ್ಲಿ ಗಡಿಯೇ ಇಲ್ಲ, ಒಂದೊಂದು ಎಲೆಕ್ಷನ್ ಗೆ 10 ಲಕ್ಷ ಜನ ಬಂದು ವೋಟ್ ಹಾಕಿ ಹೋಗುತ್ತಾರೆ. ಹಾಗಾಗಿ ಅವರಿಗೆ ಸ್ವಲ್ಪ ಆತಂಕ ಶುರುವಾಗಿದೆ. ಪ್ರಮುಖವಾಗಿ ಆರು ಧರ್ಮಗಳ ಜನ ಅಲ್ಲಿ ಇರಲು ಸಾಧ್ಯವೇ ಇಲ್ಲ ಎಂದು ತಮ್ಮ ಮೂಲಮನೆಯನ್ನು ಹುಡುಕಿಕೊಂಡು ಬಂದಾಗ ಅವರಿಗೆ ಸ್ಟೇಟ್ ಲೆಸ್ ಪರಿಸ್ಥಿತಿ ನೀಡಬೇಕಾ? ಸರಿಯಾದ ದಾಖಲೆ ಇಲ್ಲದೇ ಈ ರೀತಿ ಬಂದಿರುವವರು ಸುಮಾರು 30,000 ಜನ ಇದ್ದಾರೆ. ಇವರಿಗೆ ಪೌರತ್ವ ಕೊಡಬೇಕು ಎಂಬುದಷ್ಟೇ ನಮ್ಮ ಇಚ್ಛೆ ಎಂದು ಇದೇ ವೇಳೆ ಸಚಿವ ಮಾಧುಸ್ವಾಮಿ ತಿಳಿಸಿದರು.

CAA 2

ಡಾ.ಸಿ.ಎನ್.ಅಶ್ವಥ ನಾರಾಯಣ:
ಪೌರತ್ವ ತಿದ್ದುಪಡಿ ಕಾಯ್ದೆಯ ವಿಚಾರದಲ್ಲಿ ಗೊಂದಲ ಮೂಡಿಸುವ ಯತ್ನಗಳು ನಡೆಯುತ್ತಿವೆ ಎಂದು ಕಾರ್ಯಾಗಾರದಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ್ ತಿಳಿಸಿದರು. ಗೊಂದಲ ಹುಟ್ಟಿಸೋರಲ್ಲಿ ಕಾಯ್ದೆ ಕುರಿತು ಸ್ಪಷ್ಟತೆ ಮೂಡಿಸಬೇಕಿದೆ. 2014ಕ್ಕೂ ಮುಂಚೆ ವಲಸೆ ಬಂದವರಿಗಾಗಿ ಪೌರತ್ವ ಕೊಡಲು ಸಿಎಎ ಕಾಯ್ದೆ ತರಲಾಯಿತು. ಅಮೆರಿಕದ ಕಾಯ್ದೆಯಲ್ಲೂ ವಲಸಿಗ ಕ್ರೈಸ್ತರಿಗೆ ಪೌರತ್ವ ಕೊಡಲು ಆದ್ಯತೆ ಕೊಡಲಾಗಿದೆ. ಆದರೆ ನಮ್ಮಲ್ಲಿ ಆ ರೀತಿ ಮಾಡಿಲ್ಲ. ಪಾಕಿಸ್ತಾನ, ಬಾಂಗ್ಲಾದೇಶ, ಆಫ್ಘಾನಿಸ್ತಾನ ಗಳಲ್ಲಿ ನಡೆದ ದೌರ್ಜನ್ಯಕ್ಕೆ ಇಲ್ಲಿ ನ್ಯಾಯ ಕೊಡಲಾಗಿದೆ ಎಂದು ತಿಳಿಸಿದರು. ಈ ಕಾಯ್ದೆ ಮೂಲಕ ಅಲ್ಲಿನ ಧಾರ್ಮಿಕ ಅಲ್ಪಸಂಖ್ಯಾತರಿಗೆ ನ್ಯಾಯ ಕೊಡಲಾಗಿದೆ. ಆದರೆ ಆ ದೇಶಗಳ ಮುಸ್ಲಿಮರಿಗೂ ಪೌರತ್ವ ಕೊಡಿ ಅನ್ನುವ ಆಗ್ರಹ ಕೇಳಿಬರುತ್ತಿದೆ. ಇದು ಎಷ್ಟರ ಮಟ್ಟಿಗೆ ನ್ಯಾಯ? ರೋಹಿಂಗ್ಯ ಮುಸ್ಲಿಮರಿಗೆ ಚೀನಾ ಗಡಿ 400 ಕಿ.ಮೀ.ದೂರದಲ್ಲಿದೆ. ನಮ್ಮ ದೇಶದ ಗಡಿ 2,700 ಕಿ.ಮೀ ಇದೆ. ಅವರು ಚೀನಾಕ್ಕೆ ಹೋಗದೇ ನಮ್ಮ ದೇಶಕ್ಕೆ ಯಾಕೆ ಬಂದರು ಎಂದು ಪ್ರಶ್ನಿಸಿದರು.

ಇನ್ನು ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಬಿಜೆಪಿಯಿಂದ ಎಲ್ಲ ಜಿಲ್ಲಾ ಮಟ್ಟದಲ್ಲೂ ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತಿದೆ. ಸಾರ್ವಜನಿಕರಿಗೂ ಜಾಗೃತಿ ಮೂಡಿಸಲು ಸದ್ಯದಲ್ಲೇ ಕಾರ್ಯಾಗಾರಗಳನ್ನೂ ನಡೆಸಲು ನಿರ್ಧರಿಸಲಾಗಿದೆ.

TAGGED:Ashwath NarayanbjpCitizenShip Actjc madhuswamyKarnataka BJPPublic TVಅಶ್ವಥ್ ನಾರಾಯಣ್ಕರ್ನಾಟಕ ಬಿಜೆಪಿಜೆ.ಸಿ ಮಾಧುಸ್ವಾಮಿಪಬ್ಲಿಕ್ ಟಿವಿಪೌರತ್ವ ಕಾಯ್ದೆಬಿಜೆಪಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
2 minutes ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
8 minutes ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
22 minutes ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
1 hour ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
2 hours ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?