ಶ್ರೀನಗರ: ರಜೆ ಮೇಲೆ ಮನೆಗೆ ಬಂದಿದ್ದ ಯೋಧರೊಬ್ಬರನ್ನು ಉಗ್ರರು ಅಪಹರಣಗೈದಿದ್ದಾರೆ ಎನ್ನುವ ಒಂದು ಸುದ್ದಿ ಪ್ರಕಟವಾಗಿತ್ತು. ಆದರೆ ಯೋಧ ಅಪಹರಣಗೊಂಡಿಲ್ಲ ಅವರು ಸುರಕ್ಷಿತವಾಗಿದ್ದಾರೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ.
ಜಮ್ಮು ಕಾಶ್ಮೀರದ ಲೈಟ್ ಇನ್ಫ್ಯಾಂಟ್ರಿಗೆ ಸೇರಿದ ಯಾಸೀನ್ ಭಟ್ ಅವರನ್ನು ಉಗ್ರರು ಕಿಡ್ನಾಪ್ ಮಾಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಕಟಿಸಿತ್ತು.
ಈ ಸುದ್ದಿಗೆ ಸ್ಪಷ್ಟನೆ ನೀಡಿದ ರಕ್ಷಣಾ ಇಲಾಖೆ, ಬದ್ಗಾಮ್ ಬಳಿಯ ಖಾಜಿಪೋರದಿಂದ ಯೋಧರೊಬ್ಬರನ್ನು ಅಪಹರಣ ಮಾಡಲಾಗಿದೆ ಎನ್ನುವ ಸುದ್ದಿ ನಿಜವಲ್ಲ. ಅವರು ಸುರಕ್ಷಿತವಾಗಿದ್ದು, ವದಂತಿಗಳನ್ನು ನಂಬಬೇಡಿ ಎಂದು ತಿಳಿಸಿದೆ.
Clarification. Media reports of the abduction of a serving Army soldier on leave from Qazipora, Chadoora, Budgam are incorrect. Individual is safe. Speculations may please be avoided.@PMOIndia @nsitharaman @DefenceMinIndia @PIB_India @adgpi
— A. Bharat Bhushan Babu (@SpokespersonMoD) March 9, 2019
ಕಳೆದ ವರ್ಷ ಜೂನ್ ತಿಂಗಳಿನಲ್ಲೂ ಯೋಧರೊಬ್ಬರನ್ನು ಉಗ್ರರು ಅಪಹರಿಸಿ ಹತ್ಯೆ ಮಾಡಿದ್ದರು. ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಉಗ್ರ ಸಮೀರ್ ಟೈಗರ್ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈದಿದ್ದ ಔರಂಗಜೇಬ್ ಅವರನ್ನು ಅಪಹರಣ ಮಾಡಿದ್ದರು.
23 ರಾಷ್ಟ್ರೀಯ ರೈಫಲ್ಸ್ ಗೆ ಸೇರಿದ್ದ ಔರಂಗಜೇಬ್ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಪುಲ್ವಾಮಾದಲ್ಲಿ ಶಸ್ತ್ರ ಸಜ್ಜಿತ ಉಗ್ರರು ಸುತ್ತುವರಿದು ಅಪಹರಣ ಮಾಡಿ ಹತ್ಯೆಗೈದಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv