ನಟಿ ಶೃತಿ ಪ್ರಚಾರದ ವೇಳೆ ಆತಂಕದ ವಾತಾವರಣ ನಿರ್ಮಾಣ

Public TV
0 Min Read
Dwd Shruthi

ಧಾರವಾಡ: ನಟಿ ಹಾಗು ಬಿಜೆಪಿ ವಕ್ತಾರೆ ಶೃತಿ ಧಾರವಾಡ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ವೇಳೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಏಕಕಾಲದಲ್ಲಿ ಎದುರುಗೊಂಡಾಗ ಒಬ್ಬರ ಮೇಲೋಬ್ಬರಂತೆ ಕಾರ್ಯಕರ್ತರು ಪಕ್ಷದ ಪರ ಘೋಷಣೆಗಳನ್ನು ಕೂಗಲು ಆರಂಭಿಸಿದ್ರು. ಪರಿಣಾಮ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕೂಡಲೇ ಎಚ್ಚೆತ್ತ ಪೊಲೀಸರು ಎರಡು ಪಕ್ಷದ ಕಾರ್ಯಕರ್ತರನ್ನು ನಿಯಂತ್ರಿಸಿ ಕಳುಹಿಸಿದ್ರು.

ಶೃತಿ ಅವರ ಪ್ರಚಾರದ ಸಮಯದಲ್ಲಿಯೇ ಸಚಿವ ವಿನಯ್ ಕುಲಕರ್ಣಿ ಪ್ರಚಾರದ ವೇಳೆ ನಿಗದಿ ಆಗಿತ್ತು. ಈ ಹಿನ್ನೆಲೆಯಲ್ಲಿ ಮುಖಾಮುಖಿಯಾದ ಎರಡು ಪಕ್ಷದ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿರತು.

vlcsnap 2018 05 10 09h56m25s409

Dwd Shruti 1

Share This Article
Leave a Comment

Leave a Reply

Your email address will not be published. Required fields are marked *