ದಾವಣಗೆರೆ ಗಾಜಿನ ಮನೆಗೆ ಹೆಸರಿಡೋ ವಿಚಾರದಲ್ಲಿ ಜಗಳ-ರಣರಂಗವಾದ ಪಾಲಿಕೆ ಸಾಮಾನ್ಯ ಸಭೆ

Public TV
1 Min Read
DVG

ದಾವಣಗೆರೆ: ನಗರದಲ್ಲಿ ನಿರ್ಮಿಸಲಾಗಿರುವ ಗಾಜಿನ ಮನೆಗೆ ಹೆಸರಿಡುವ ವಿಚಾರವಾಗಿ ಎರಡು ಪಕ್ಷಗಳ ಪಾಲಿಕೆ ಸದಸ್ಯರು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ಘಟನೆ ದಾವಣಗೆರೆಯ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಡೆದಿದೆ.

ನಗರದ ಗಾಜಿನ ಮನೆಗೆ ಹೆಸರಿಡುವ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ಸದಸ್ಯರು ಜಗಳವಾಡಿ ಕೈ ಮಿಲಾಯಿಸುವ ಹಂತಕ್ಕೆ ತಲುಪಿದರು. ಗಾಜಿನ ಮನೆಗೆ ಶಾಸಕ ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡರಾದ ಶಾಮನೂರು ಶಿವಶಂಕರಪ್ಪ ರವರ ಹೆಸರಿಡುವ ವಿಚಾರವನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಯಿತು. ಆದರೆ ಇದಕ್ಕೆ ಬಿಜೆಪಿ ಸದಸ್ಯರು ಅಕ್ಷೇಪ ವ್ಯಕ್ತಪಡಿಸಿದರು.

DVG 1

ಬಿಜೆಪಿ ಸದಸ್ಯ ಕುಮಾರ್ ಇದಕ್ಕೆ ಅಕ್ಷೇಪ ವ್ಯಕ್ತಪಡಿಸಿ ಅಸಂವಿಧಾನಿಕ ಪದ ಬಳಕೆ ಮಾಡಿದರು. ಇದರಿಂದ ತಾಳ್ಮೆ ಕಳೆದುಕೊಂಡ ಕಾಂಗ್ರೆಸ್ ಪಕ್ಷದ ದಿನೇಶ್ ಶೆಟ್ಟಿ ಬಿಜೆಪಿ ಸದಸ್ಯರ ವಿರುದ್ಧ ಮುಗಿಬಿದ್ದರು. ಈ ನಡುವೆ ಇಬ್ಬರ ನಡುವೆ ವಾಗ್ವಾದ ನಡೆದು ಕೈಕೈ ಮಿಲಾಯಿಸಿ ಹೊಡೆದಾಟ ನಡೆಸಲು ಮುಂದಾದರು.

ಈ ಹಂತದಲ್ಲಿ ಮಧ್ಯ ಪ್ರವೇಶಿಸಿದ ಇತರೇ ಸದಸ್ಯರು ಇಬ್ಬರನ್ನು ಸಮಾಧಾನಪಡಿಸಿದರು. ಮೇಯರ್ ಶೋಭಾ ಪಲ್ಲಾಘಟ್ಟೆ ಅಧ್ಯಕ್ಷತೆಯಲ್ಲಿ ನಡೆದ ಸಭೆ ಕೆಲ ಕಾಲ ರಣರಂಗವಾಗಿ ಮಾರ್ಪಟ್ಟಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

vlcsnap 2018 09 24 20h43m12s181

Share This Article
Leave a Comment

Leave a Reply

Your email address will not be published. Required fields are marked *