ಮಂಗಳೂರು: ಬಿಜೆಪಿ (BJP) ಹಾಗೂ ಕಾಂಗ್ರೆಸ್ (Congress) ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟಿದ್ದು ಕೈ ಅಭ್ಯರ್ಥಿ ಮಿಥುನ್ ರೈ (Mithun Rai) ಅವರ ಕಾರ್ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಮಂಗಳೂರು (Mangaluru) ಹೊರವಲಯದ ಮೂಡುಶೆಡ್ಡೆಯಲ್ಲಿ ನಡೆದಿದೆ.
ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟಿದೆ. ಮುಲ್ಕಿ-ಮೂಡುಬಿದ್ರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಕಾರ್ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ಏರ್ಪಟ್ಟಿದೆ.
ವರದಿಗಳ ಪ್ರಕಾರ ಪಕ್ಷದ ಬೂತ್ಗೆ ಅಭ್ಯರ್ಥಿ ಮಿಥುನ್ ರೈ ಬಂದಾಗ ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದ್ದಾರೆ. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿದೆ. ಬಳಿಕ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು, ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ. ಇದನ್ನೂ ಓದಿ: ಮತಗಟ್ಟೆಗೆ ನುಗ್ಗಿ ನಿವೃತ್ತ ಅಧಿಕಾರಿಯಿಂದ ಗಲಾಟೆ – ಯಾದಗಿರಿಯಲ್ಲಿ ನಿಷೇಧಾಜ್ಞೆ ಜಾರಿ
ತಕ್ಷಣ ಸ್ಥಳಕ್ಕೆ ಆಗಮಿಸಿದ ಮಂಗಳೂರು ಪೊಲೀಸ್ ಕಮಿಷನರ್ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಯತ್ನಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಈ ಬಾರಿ ಬಿಜೆಪಿ 125ರಿಂದ 130 ಸ್ಥಾನಗಳನ್ನು ಗೆಲ್ಲಲಿದೆ: ಯಡಿಯೂರಪ್ಪ ವಿಶ್ವಾಸ