ಕಾರವಾರ: ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ (Gokarna Mahabaleshwara Temple) ಪೂಜೆಯ ಹಕ್ಕಿಗಾಗಿ ಅರ್ಚಕರ ನಡುವೆ ಗಲಾಟೆ ನಡೆದಿದೆ. ದೇವಸ್ಥಾನದ ಗರ್ಭಗುಡಿಯಲ್ಲಿ ಭಕ್ತರಿಗೆ ದೇವರ ದರ್ಶನಕ್ಕೂ ಬಿಡದೇ ಪ್ರತಿಭಟನೆ ನಡೆಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ದೇವಾಲಯದಲ್ಲಿ ಈ ಘಟನೆ ನಡೆದಿದೆ. ನಂದಿ ಮಂಟಪದಲ್ಲಿ ತೀರ್ಥ ನೀಡುವ ಬಾರಿಗಾಗಿ ಎರಡು ಕುಟುಂಬದವರು ಕಾದಾಡಿದ್ದಾರೆ. ಜಂಬೆ ಕುಟುಂಬ ಹಾಗೂ ಗೋಪಿ ಕುಟುಂಬ ಹಕ್ಕಿಗಾಗಿ ಕೋರ್ಟ್ ಮೊರೆ ಹೋಗಿದ್ದವು. ಇದನ್ನೂ ಓದಿ: SSLCಯಲ್ಲಿ ರಾಜ್ಯಕ್ಕೆ ಪ್ರಥಮ ಬಂದ ಅಂಕಿತಾಗೆ ಜಿ.ಪಂ ಸಿಇಓ ಅಭಿನಂದನೆ
- Advertisement 2
- Advertisement 3
ಕಳೆದ ಕೆಲವು ತಿಂಗಳಿಂದ ನಂದಿ ಮಂಟಪದಲ್ಲಿ ಜಂಬೆ ಕುಟುಂಬ ತೀರ್ಥ ನೀಡುತ್ತಿದೆ. ಇಂದಿನಿಂದ ನಂದಿ ಮಂಟಪದಲ್ಲಿ ತೀರ್ಥ ನೀಡುವ ಹಕ್ಕು ನಮ್ಮ ಬಾರಿ ಎಂದು ದೇವಸ್ಥಾನದ ಗರ್ಭಗುಡಿಯಲ್ಲಿ ಗೋಪಿ ಕುಟುಂಬ ತಗಾದೆ ತೆಗೆದಿದೆ.
- Advertisement 4
ನಂದಿ ಮಂಟಪದಲ್ಲಿ ತೀರ್ಥ ಕೊಡುವ ಹಕ್ಕಿನ ವಿಷಯವಾಗಿ ಎರಡು ಕುಟುಂಬಗಳ ನಡುವೆ ಗಲಾಟೆಯಾಗಿದೆ. ದೇವಸ್ಥಾನದ ಒಳಗೇ ಗೋಪಿ ಕುಟುಂಬ ಪ್ರತಿಭಟನೆ ನಡೆಸಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ಶಾಂತಗೊಳಿಸಲು ಹರಸಾಹಸ ಪಟ್ಟರು. ಇದನ್ನೂ ಓದಿ: SSLC Result: 73.40 % ಫಲಿತಾಂಶ – ಬಾಲಕಿಯರೇ ಮೇಲುಗೈ; ಉಡುಪಿಗೆ ಮೊದಲ ಸ್ಥಾನ