ಬೆಳಗಾವಿ: ಪ್ರಾರ್ಥನೆ ಮುಗಿಸಿ ಉಪಹಾರ ಸೇವಿಸಲು ಹೋಟೆಲ್ಗೆ (Hotel) ಬಂದಾಗ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಸೋಡಾ ಬಾಟಲಿ ಹಾಗೂ ನೀರಿನ ಬಾಟಲಿಯಿಂದ ಪರಸ್ಪರ ಹೊಡೆದಾಡಿಕೊಂಡ ಘಟನೆ ಬೆಳಗಾವಿ (Belagavi) ನಗರದಲ್ಲಿ ನಡೆದಿದೆ.
ಎರಡು ಗುಂಪುಗಳ ಯುವಕರು ಪರಸ್ಪರ ಹೊಡೆದಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಿಂದ ಕೆಲಕಾಲ ತ್ವೇಷಮಯ ವಾತಾವರಣ ಉಂಟಾಗಿತ್ತು. ಏಕಾಏಕಿ ಘರ್ಷಣೆ ಉಂಟಾದ ಹಿನ್ನೆಲೆ ಸಿಬ್ಬಂದಿ ಹೋಟೆಲ್ನ ಬಾಗಿಲು ಮುಚ್ಚಿದ್ದಾರೆ. ಇದನ್ನೂ ಓದಿ: ರಾಜ್ಯದ ಮೊಟ್ಟ ಮೊದಲ ಮೇಕೆ ಹಾಲು ಉತ್ಪಾದನಾ ಘಟಕ ಕಾಡುಪಾಲು
ಬೆಳಗಾವಿಯ ಕೃಷ್ಣ ದೇವರಾಯ ಸರ್ಕಲ್ ಬಳಿಯಿರುವ ಸಾಯಿ ಹೋಟೆಲ್ನಲ್ಲಿ ಘಟನೆ ನಡೆದಿದೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಮೊದಲ ಮಗುವಿಗೆ 45 ವರ್ಷ – ಈಗ 66ನೇ ವಯಸ್ಸಿನಲ್ಲಿ 10ನೇ ಮಗು!