ಬುದ್ದಿ ಹೇಳಿದ್ದಕ್ಕೆ 10ನೇ ತರಗತಿ ವಿದ್ಯಾರ್ಥಿಯಿಂದಲೇ ಶಿಕ್ಷಕನಿಗೆ ಗುಂಡೇಟು

Public TV
1 Min Read
Crime-Scene

ಲಕ್ನೋ: 10ನೇ ತರಗತಿಯ ವಿದ್ಯಾರ್ಥಿಯೊಬ್ಬ (Student) ತನ್ನ ಶಿಕ್ಷಕನ (Teacher) ಮೇಲೆ ದೇಸೀ ಗನ್‌ನಿಂದ (Gun) ಗುಂಡು ಹಾರಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ (Uttar Pradesh) ಸೀತಾಪುರದಲ್ಲಿ ಶನಿವಾರ ನಡೆದಿದೆ.

10ನೇ ತರಗತಿಯ ವಿದ್ಯಾರ್ಥಿ ಇನ್ನೊಬ್ಬ ವಿದ್ಯಾರ್ಥಿಯೊಂದಿಗೆ ಜಗಳವಾಡಿದ ಬಳಿಕ ಶಿಕ್ಷಕ ಬುದ್ದಿ ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಆತ ಶಿಕ್ಷಕನ ಮೇಲೆ 3 ಬಾರಿ ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಮದುವೆ ಭರವಸೆ – ಹುಡುಗಿ ಸ್ನಾನದ ವೀಡಿಯೋ ಕಳಿಸಿಕೊಂಡು ಬ್ಲ್ಯಾಕ್‌ಮೇಲ್‌

POLICE JEEP

ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಲಕ್ನೋಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕರಿ ರಾಜೀವ್ ದೀಕ್ಷಿತ್ ತಿಳಿಸಿದ್ದಾರೆ. ಇದನ್ನೂ ಓದಿ: ಕೋಮಾದಲ್ಲಿದ್ದಾನೆಂದು 18 ತಿಂಗಳು ಮನೆಯಲ್ಲೇ ಶವ ಇಟ್ಕೊಂಡಿದ್ದ ಕುಟುಂಬ

ಘಟನೆಯ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರಲ್ಲಿ ವಿದ್ಯಾರ್ಥಿ ಗನ್ ಹಿಡಿದುಕೊಂಡು ಶಿಕ್ಷಕನನ್ನು ಹಿಂಬಾಲಿಸುತ್ತಿರುವುದು ಕಂಡುಬಂದಿದೆ. ಘಟನಾ ಸ್ಥಳದಲ್ಲಿದ್ದವರು ವಿದ್ಯಾರ್ಥಿಯ ಕೈಯಿಂದ ಗನ್ ಅನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೂ ಆತ ಹಠ ಬಿಡದೇ 3 ಸುತ್ತು ಗುಂಡು ಹಾರಿಸಿದ್ದಾನೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *