Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದ್ಯಾರ್ಥಿ ಮೇಲೆ ಹಲ್ಲೆಗೈದು ಗುದದ್ವಾರಕ್ಕೆ ಮರದ ಕೋಲು ತುರುಕಿದ ಸ್ನೇಹಿತರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ವಿದ್ಯಾರ್ಥಿ ಮೇಲೆ ಹಲ್ಲೆಗೈದು ಗುದದ್ವಾರಕ್ಕೆ ಮರದ ಕೋಲು ತುರುಕಿದ ಸ್ನೇಹಿತರು!

Crime

ವಿದ್ಯಾರ್ಥಿ ಮೇಲೆ ಹಲ್ಲೆಗೈದು ಗುದದ್ವಾರಕ್ಕೆ ಮರದ ಕೋಲು ತುರುಕಿದ ಸ್ನೇಹಿತರು!

Public TV
Last updated: April 6, 2024 8:38 pm
Public TV
Share
2 Min Read
school bench
SHARE

-ವಿಚಾರ ಬಯಲು ಮಾಡಿದ್ರೆ ಸಹೋದರಿಗೆ ತೊಂದರೆ ಬೆದರಿಕೆ

ನವದೆಹಲಿ: ಎಂಟನೇ ತರಗತಿ ವಿದ್ಯಾರ್ಥಿಯೊಬ್ಬನ ಮೇಲೆ ಆತನ ಸ್ನೇಹಿತರೇ ಹಲ್ಲೆ ಮಾಡಿ ಬಳಿಕ ಅವರಲ್ಲಿ ಓರ್ವ ಆತನ ಗುದದ್ವಾರಕ್ಕೆ ಮರದ ಕೋಲನ್ನು ತುರುಕಿದ ವಿಲಕ್ಷಣ ಘಟನೆಯೊಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (NewDelhi) ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

ಈ ಘಟನೆ ಮಾರ್ಚ್‌ 18 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ನಡೆದಿದ್ದೇನು..?: 14 ವರ್ಷದ ಬಾಲಕ ಶಾಲೆಯಲ್ಲಿ (School Boy) ತನ್ನ ಸ್ನೇಹಿತರ ಜೊತೆ ವಿಚಾರವೊಂದಕ್ಕೆ ಜಗಳವಾಡಿದ್ದಾನೆ. ಈ ಗಲಾಟೆಯು ತಾರಕಕ್ಕೇರಿದ್ದು, ನಾಲ್ವರು ಸ್ನೇಹಿತರು ಬಾಲಕನನ್ನು ಮೂಲೆಗೆ ತಳ್ಳಿ ಮನಬಂದಂತೆ ಥಳಿಸಿದ್ದಾರೆ. ಅಲ್ಲದೇ ನಾಲ್ವರಲ್ಲಿ ಓರ್ವ ಮರದ ತುಂಡಿನಿಂದ ಬಾಲಕನ ಗುದದ್ವಾರಕ್ಕೆ (Anal Region) ಹಾನಿ ಮಾಡಿದ್ದಾನೆ. ಈ ಸಂಬಂಧ ವಿದ್ಯಾರ್ಥಿಯ ಪೋಷಕರು, ಪೊಲೀಸರು ಮತ್ತು ಶಾಲಾ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

school class room bench

ಘಟನೆಯನ್ನು ಯಾರಿಗೂ ಹೇಳದಂತೆ ವಿದ್ಯಾರ್ಥಿಗೆ ಆತನ ಗೆಳೆಯರು ಬೆದರಿಕೆ ಹಾಕಿದ್ದಾರೆ. ಒಂದು ವೇಳೆ ವಿಚಾರವನ್ನು ಬಯಲು ಮಾಡಿದರೆ ಅದೇ ಶಾಲೆಯಲ್ಲಿ ಓದುತ್ತಿರುವ ತನ್ನ ಸಹೋದರಿ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಬೆದರಿಸಿರುವುದಾಗಿ ವಿದ್ಯಾರ್ಥಿ ಹೇಳಿದ್ದಾನೆ.

ದೂರಿನ ಪ್ರಕಾರ, ಮಾರ್ಚ್ 13 ರಂದು ತನ್ನ ಸಹಪಾಠಿಯೊಂದಿಗೆ ವಿದ್ಯಾರ್ಥಿ ಜಗಳವಾಡಿದ್ದಾನೆ. ಇದೇ ವಿಚಾರಕ್ಕೆ ಮಾರ್ಚ್ 18 ರಂದು ಆರೋಪಿಗಳು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದಾರೆ. ಆದರೆ ಪ್ರತೀಕಾರದ ಭಯದಿಂದ ವಿದ್ಯಾರ್ಥಿ, ಮೊದಲು ಘಟನೆಯ ಬಗ್ಗೆ ಯಾರಿಗೂ ಹೇಳಲಿಲ್ಲ. ಇತ್ತ ಮಾರ್ಚ್ 20 ರಂದು ವಿದ್ಯಾರ್ಥಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಪೋಷಕರು ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಲ್ಲಿ ವಿದ್ಯಾರ್ಥಿ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿಲ್ಲ.

ಮಾರ್ಚ್ 28 ರಂದು ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಆಪರೇಷನ್ ಮಾಡಬೇಕು. ಯಾವುದೋ ಅಹಿತಕರ ಘಟನೆಗೆ ಮಗು ಬಲಿಯಾಗಿರಬಹುದು ಎಂದು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಅಂತೆಯೇ ಆತನಿಗೆ ಆಪರೇಷನ್‌ ಕೂಡ ಮಾಡಲಾಗಿದೆ. ಏಪ್ರಿಲ್ 2 ರಂದು ವಿದ್ಯಾರ್ಥಿಗೆ ಪ್ರಜ್ಞೆ ಬಂದಾಗ, ಅವನು ತನ್ನ ಕುಟುಂಬಕ್ಕೆ ನಡೆದ ಘಟನೆಯನ್ನು ಸಂಪೂರ್ಣವಾಗಿ ವಿವರಿಸಿದ್ದಾನೆ. ನಂತರ ಪೊಲೀಸ್ ದೂರು ದಾಖಲಿಸಲಾಗಿದೆ.

ವಿದ್ಯಾರ್ಥಿಯ ಗುದದ್ವಾರದಲ್ಲಿ ಮರದ ಕೋಲನ್ನು ತೂರಿಸಲು ಪ್ರಯತ್ನಿಸಿದ್ದರಿಂದ ಅಲ್ಲಿ ತೀವ್ರ ಗಾಯಗಳಾಗಿವೆ ಎಂದು ವೈದ್ಯಕೀಯ ವರದಿಯು ಬಹಿರಂಗಪಡಿಸಿತು. ಅಂತೆಯೇ ವಿದ್ಯಾರ್ಥಿ ಕೂಡ ಇದನ್ನು ಒಪ್ಪಿಕೊಂಡಿದ್ದಾನೆ. ತನ್ನ ಗೆಳೆಯ ಮರದ ಕೋಲನ್ನು ತುರುಕಿಸಲು ಪ್ರಯತ್ನಿಸಿದ್ದಾನೆ ಎಂದು ಬಾಯ್ಬಿಟ್ಟಿದ್ದಾನೆ. ಅಲ್ಲದೇ ಘಟನೆಯನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಲಾಗಿದೆ ಎಂದು ತಿಳಿಸಿದ್ದು, ಇದನ್ನು ಪೊಲೀಸರು ಎಫ್‌ಐಆರ್‌ ನಲ್ಲಿ ದಾಖಲಿಸಿಕೊಂಡಿದ್ದಾರೆ.

ಸದ್ಯ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 341 (ತಪ್ಪು ಸಂಯಮ), 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಮತ್ತು 377 (ಅಸ್ವಾಭಾವಿಕ ಅಪರಾಧಗಳು), ಜೊತೆಗೆ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಮತ್ತು ಪೋಕ್ಸೊ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

TAGGED:anal regionfriendsnewdelhistudentsಗುದದ್ವಾರನವದೆಹಲಿವಿದ್ಯಾರ್ಥಿಸ್ನೇಹಿತರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
5 minutes ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
10 minutes ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
21 minutes ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
44 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
53 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?