Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ – ಆರ್.ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ – ಆರ್.ಅಶೋಕ್

Bengaluru City

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ – ಆರ್.ಅಶೋಕ್

Public TV
Last updated: September 17, 2025 5:29 pm
Public TV
Share
3 Min Read
R Ashok
SHARE

– ಯೋಜನೆಗಳಲ್ಲಿ ಹಣ ಉಳಿಸಲು ರೇಷನ್ ಕಾರ್ಡ್ ರದ್ದು

ಬೆಂಗಳೂರು: ಹಿಂದಿನ ಯುಪಿಎ ಸರ್ಕಾರ ಕುಟುಂಬ ರಾಜಕಾರಣ ಮಾಡಿಕೊಂಡು ಭ್ರಷ್ಟ ಆಡಳಿತ ನೀಡಿತ್ತು. ನರೇಂದ್ರ ಮೋದಿ (Narendra Modi) ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದರು.

ಜಯನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರು ಸ್ವಯಂಸೇವಕನಿಂದ ಆರಂಭವಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಬೆಳೆದಿದ್ದಾರೆ. ಕಾಂಗ್ರೆಸ್ ಕುಟುಂಬದಲ್ಲಿ ಹುಟ್ಟಿದರೆ ನೇರವಾಗಿ ಪಕ್ಷದ ಅಧ್ಯಕ್ಷ ಆಗಬಹುದು. ದೇಶವನ್ನು ಲೂಟಿ ಮಾಡಿದ ಕುಟುಂಬದಲ್ಲಿ ಹೀಗೆಯೇ ನಡೆಯುತ್ತದೆ. ಮನಮೋಹನ್ ಸಿಂಗ್ ಅವಧಿಯಲ್ಲಿ ಎಲ್ಲ ಬಗೆಯ ಭ್ರಷ್ಟಾಚಾರ ಮಾಡಲಾಗಿತ್ತು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ವಚ್ಛ ಆಡಳಿತ ನೀಡಿದ್ದಾರೆ ಎಂದರು.ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯಕ್ಕೆ ರಾಜ್ಯ ಸರ್ಕಾರ ಅಸ್ತು

ಈಗ ಕಾಂಗ್ರೆಸ್‌ನವರು ಪ್ರಧಾನಿ ಮೇಲೆ ಇವಿಎಂ ಕುರಿತು ಆಪಾದನೆ ಮಾಡಿದ್ದಾರೆ. ಗೆದ್ದಾಗ ಮಾತಾಡದೇ ಸೋತಾಗ ಮಾತಾಡುತ್ತಾರೆ. ಮಾಲೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕನೇ ಅಕ್ರಮ ಮಾಡಿ ಗೆದ್ದಿದ್ದಾನೆ ಎಂದು ಕೋರ್ಟ್ ಹೇಳಿದೆ. ಬಿಹಾರದಲ್ಲಿ ಸೋಲುವ ಭಯದಿಂದ ಭ್ರಮನಿರಸನಾಗಿ ಇಂತಹ ಆರೋಪ ಮಾಡಿದ್ದಾರೆ. ಆದರೆ ಪ್ರಧಾನಿ ಮೋದಿ ಈ ಬಗ್ಗೆ ತಲೆಕೆಡಿಸಿಕೊಳ್ಳದೇ ದೇಶಸೇವೆ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮುಂದೆಯೂ ಅಧಿಕಾರಕ್ಕೆ ಬಂದು ದೇಶವನ್ನು ನಂ.1 ಸ್ಥಾನಕ್ಕೆ ಏರಿಸಲಿದ್ದಾರೆ ಎಂದು ಹೇಳಿದರು.

ಆರ್ಥಿಕತೆಯಲ್ಲಿ ನಾಲ್ಕನೇ ಸ್ಥಾನ, ಸೇನಾಬಲದಲ್ಲಿ ಐದನೇ ಸ್ಥಾನದಲ್ಲಿ ಭಾರತ ಇದೆ. ಪ್ರಪಂಚಕ್ಕೆ ಸವಾಲು ಹಾಕುವ ಚೀನಾ, ಅಮೆರಿಕ ಕೂಡ ಭಾರತದ ಸ್ನೇಹ ಬಯಸಿದೆ. ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ. ವಯಸ್ಸಿನ ಆಧಾರದಲ್ಲಿ ಬಿಜೆಪಿಯಲ್ಲಿ ಯಾರನ್ನೂ ಮನೆಗೆ ಕಳುಹಿಸಿಲ್ಲ. ನಮ್ಮಲ್ಲಿ ಅನೇಕ ನಾಯಕರು ವಯಸ್ಸಾದರೂ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ ಮೋದಿಯವರು ಮುಂದೆಯೂ ಪ್ರಧಾನಿಯಾಗಲಿ ಎಂದು ತಿಳಿಸಿದರು.ಇದನ್ನೂ ಓದಿ: ಟ್ರೋಲ್‌ ಮಾಡಿದ ಕಿಡಿಗೇಡಿಗಳಿಗೆ ಮಾರ್ಮಿಕ ಉತ್ತರ ನೀಡಿದ ವಿಜಯಲಕ್ಷ್ಮಿ

ರೇಷನ್ ಕಾರ್ಡ್ ರದ್ದು:
ಕಾಂಗ್ರೆಸ್ ಸರ್ಕಾರ 13 ಲಕ್ಷ ರೇಷನ್ ಕಾರ್ಡ್ ರದ್ದು ಎಂದು ಹೇಳಿ ಒಳಗೊಳಗೆ 25 ಲಕ್ಷ ಕಾರ್ಡ್ ರದ್ದು ಮಾಡಲಿದೆ. ಇದರಿಂದಾಗಿ ಬಡವರಿಗೆ ಯಾವುದೇ ಸೌಲಭ್ಯ ಸಿಗುವುದಿಲ್ಲ. ರೇಷನ್ ಕಾರ್ಡ್ ಇದ್ದವರಿಗೆ ಔಷಧಿ, ಚಿಕಿತ್ಸೆ ಉಚಿತವಿದೆ. ಇಂತಹ ಚಿಕಿತ್ಸೆಗಳಲ್ಲಿ ಹಣ ಉಳಿತಾಯ ಮಾಡಬಹುದು. ಬಡವರಿಗೆ ಎಲ್ಲ ಸೌಲಭ್ಯಗಳು ಸ್ಥಗಿತಗೊಳ್ಳಲಿದೆ ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚದೆ ಸುರಂಗ ರಸ್ತೆ ನಿರ್ಮಿಸಲಾಗುತ್ತದೆ. ರಿಂಗ್ ರಸ್ತೆಯಲ್ಲೂ ವಾಹನ ಚಲಾಯಿಸಲು ಆಗುವುದಿಲ್ಲ. ಬಿಎಂಟಿಸಿ ಬಸ್‌ಗಳು ಬಹಳ ನಿಧಾನವಾಗಿ ಚಲಿಸುವಂತಾಗಿದೆ. ಅನೇಕ ಐಟಿ ಕಂಪನಿಗಳು ಹೈದರಾಬಾದ್, ಚೆನ್ನೈಗೆ ಹೋಗಲು ಯತ್ನಿಸುತ್ತಿವೆ. ಬಿಜೆಪಿ ಸರ್ಕಾರ ಇದ್ದಾಗ, ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೂ 100 ಕೋಟಿ ರೂ. ನೀಡಲಾಗಿತ್ತು. ಆದರೆ ಈಗ ಅನುದಾನವೇ ಇಲ್ಲ ಎಂದು ಹೇಳಿದರು.ಇದನ್ನೂ ಓದಿ: ದಿ ಬಿ.ಸರೋಜಾದೇವಿ ಹೆಸರಿನಲ್ಲಿ `ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಿಸಿದ ರಾಜ್ಯ ಸರ್ಕಾರ

ಸರ್ಕಾರ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದೆ. ಈ ಸಮೀಕ್ಷೆಗೆ ಹಣ ಹಾಳು ಮಾಡದೆ ಮುಂದೂಡುವುದು ಉತ್ತಮ. ಹಬ್ಬ ಇರುವುದರಿಂದ ಸಮೀಕ್ಷೆಯನ್ನು ಮುಂದೂಡಬೇಕು. ಬೇರೆ ಯಾವುದೇ ಕೆಲಸ ನಡೆಯುತ್ತಿದೆ. ಆರ್ಥಿಕ ಸ್ಥಿತಿ ಹಾಳಾಗಿಹೋಗಿದೆ. ಬೆಳೆ ಹಾನಿ ಪರಿಹಾರಕ್ಕೆ ಹಣ ಕೊಡಲು ಗತಿ ಇಲ್ಲ. ಅನುದಾನ ನೀಡುವುದರಲ್ಲೂ ತಾರತಮ್ಯ ಮಾಡಲಾಗುತ್ತಿದೆ. ಪ್ರತಿ ಕ್ಷೇತ್ರವನ್ನೂ ಪ್ರತ್ಯೇಕವಾಗಿ ನೋಡಿ ಅನುದಾನ ನೀಡಬೇಕಾಗುತ್ತದೆ. ಹಾಗಾದರೆ ಮಾತ್ರ ಅದನ್ನು ಅಭಿವೃದ್ಧಿಯ ಪಥ ಎನ್ನಬಹುದು ಎಂದರು.

ಇದೇ ವೇಳೆ ಮುಡಾ ಹಗರಣ ಸಂಬಂಧ ಮಾತನಾಡಿ, ಮುಡಾ ಮಾಜಿ ಆಯುಕ್ತರನ್ನು ಇಡಿ ಬಂಧಿಸಿದೆ. ಮುಡಾ ಹಗರಣದಲ್ಲಿ ನಷ್ಟವಾದ ಎಲ್ಲ ಹಣ ವಾಪಸ್ ಬರಬೇಕು. ಎಲ್ಲ ರೀತಿಯ ತನಿಖೆಯಾಗಿ ತಪ್ಪಿತಸ್ಥರ ಬಂಧನವಾಗಬೇಕೆಂಬುದು ಬಿಜೆಪಿಯ ಆಗ್ರಹ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊಸ ಕುಲಗಳನ್ನು ರೂಪಿಸಿದ್ದಾರೆ. ಕುಲವೆಂದು ಹೊಡೆದಾಡಬೇಡಿ ಎಂದು ಕನಕದಾಸರು ಹೇಳಿದರೆ, ಸಿಎಂ ಸಿದ್ದರಾಮಯ್ಯ ಕುಲಗಳು ಹೊಡೆದಾಡಿ ಎನ್ನುವಂತೆ ಮಾಡಿದ್ದಾರೆ. ಕ್ರೈಸ್ತರಲ್ಲೂ ಹಿಂದೂ ಜಾತಿಗಳು ಬಂದಿವೆ. ಹಿಂದೆ ವೀರಶೈವ ಲಿಂಗಾಯತರನ್ನು ಒಡೆದಿದ್ದರು. ಈಗ ಅದನ್ನೇ ಮಾಡಲು ಹೋದರೆ ಕಾಂಗ್ರೆಸ್ ಪಕ್ಷವೇ ಒಡೆದುಹೋಗುತ್ತದೆ ಎಂದರು.ಇದನ್ನೂ ಓದಿ: ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

TAGGED:bengalurubjpcongressPM Modir ashok
Share This Article
Facebook Whatsapp Whatsapp Telegram

Cinema news

yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi
3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories

You Might Also Like

West Bengal Elections Phase 2violence BJP worker attacked TMC vandalises BJP booth
Latest

ಬಂಗಾಳ ಚುನಾವಣೆಯಲ್ಲಿ ಹಿಂಸಾಚಾರ – ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ, ಟಿಎಂಸಿಯಿಂದ ಬೂತ್ ಧ್ವಂಸ

Public TV
By Public TV
27 minutes ago
CID to investigate missing Bengaluru Vidyaranyapura PUC student case
Bengaluru City

ಆಧಾರ್ ಹಿಡಿದು ಹೋದವರು ಮರಳಿ ಬರಲೇ ಇಲ್ಲ – ಬೆಂಗಳೂರು ಪಿಯುಸಿ ವಿದ್ಯಾರ್ಥಿನಿಯರ ಕೇಸ್ ಈಗ ಸಿಐಡಿಗೆ

Public TV
By Public TV
1 hour ago
United Arab Emirates will leave OPEC in a blow to the oil cartel Why is the UAE leaving OPEC Saudi Arabia UAE cold war
Latest

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ – ತೈಲ ಮಾರುಕಟ್ಟೆಯಲ್ಲಿ ‘ದುಬೈ’ ಸ್ವತಂತ್ರ ಆಟ ಶುರು| ಸೌದಿ ಜೊತೆ ಯುಎಇ ಕಿತ್ತಾಟ ಯಾಕೆ?

Public TV
By Public TV
2 hours ago
Chikkamagaluru Sub Inspector Wife Suicide copy
Chikkamagaluru

ಕೌಟುಂಬಿಕ ಕಲಹ – ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು

Public TV
By Public TV
2 hours ago
Haveri Man Drown in River copy
Districts

ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

Public TV
By Public TV
3 hours ago
Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?