Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ವಿವಿಗಳನ್ನು ಮುಚ್ಚುವುದರಿಂದ ಎಸ್ಸಿ-ಎಸ್ಟಿ, ಒಬಿಸಿ, ಮಹಿಳೆಯರಿಗೆ ಅನ್ಯಾಯವಾಗಲಿದೆ – ಬೊಮ್ಮಾಯಿ

Public TV
Last updated: February 16, 2025 7:27 pm
Public TV
Share
3 Min Read
Basavaraj Bommai
SHARE

-ಜಲಜೀವನ್ ಮಿಷನ್ ವಿಚಾರವಾಗಿ ರಾಜ್ಯ ಸರ್ಕಾರ ಸತ್ಯ ಹೇಳಿದರೆ ಸಹಕಾರ ನೀಡುತ್ತೇವೆ ಎಂದ ಸಂಸದ

ಬೆಂಗಳೂರು: ವಿಶ್ವವಿದ್ಯಾಲಯ ಮುಚ್ಚುವುದರಿಂದ ಎಸ್ಸಿ-ಎಸ್ಟಿ, ಒಬಿಸಿ, ಮಹಿಳೆಯರಿಗೆ ಅನ್ಯಾಯವಾಗಲಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ಹಾವೇರಿಯಲ್ಲಿ (Haveri) ಜನ ಸಂಪರ್ಕ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ರಾಜ್ಯ ಸರ್ಕಾರ ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ವಿಶ್ವವಿದ್ಯಾಲಯಗಳ ಪರಿಕಲ್ಪನೆ ಬದಲಾವಣೆಯಾಗಿದೆ. ರಾಜ್ಯದಲ್ಲಿ 50, 60ನೇ ದಶಕದಲ್ಲಿ ವಿಶ್ವವಿದ್ಯಾಲಯಗಳು ಸ್ಥಾಪನೆಯಾಗಿದ್ದವು. ಆವತ್ತಿನ ಕಾಲೇಜು ಸಂಖ್ಯೆ, ವಿದ್ಯಾರ್ಥಿಗಳ ಸಂಖ್ಯೆಗೂ ಇಂದಿಗೂ ಬಹಳ ವ್ಯತ್ಯಾಸ ಇದೆ. ನಾವು ಹಿಂದುಳಿದ ಜಿಲ್ಲೆಯನ್ನು ಗಮನದಲ್ಲಿಟ್ಟುಕೊಂಡು ಎಸ್ಸಿ-ಎಸ್ಟಿ, ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎಂದು ವಿಶ್ವವಿದ್ಯಾಲಯ ಮಾಡಿದ್ದೇವೆ. ಈ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಅನುದಾನ ಬೇಕಿಲ್ಲ. ಆದರೂ ಕೂಡ ಒಂದು ನಯಾ ಪೈಸೆಯನ್ನು ಕಾಂಗ್ರೆಸ್ ಸರ್ಕಾರ ನೀಡಿಲ್ಲ. ಆದರೂ, ವಿದ್ಯಾರ್ಥಿಗಳು ನೀಡುವ ಫೀಯಿಂದಲೇ ವಿಶ್ವವಿದ್ಯಾಲಯಗಳನ್ನು ನಡೆಸುತ್ತಿದ್ದಾರೆ. ಎಲ್ಲವೂ ಪಿಜಿ ಕೇಂದ್ರದಲ್ಲಿಯೇ ನಡೆಯುತ್ತಿರುವುದರಿಂದ ಸರ್ಕಾರ ಯಾವುದೇ ಭೂಮಿಯನ್ನು ನೀಡಿಲ್ಲ. ಡಿಜಿಟಲ್ ಶಿಕ್ಷಣ, ದೂರ ಶಿಕ್ಷಣ ಎಲ್ಲವನ್ನೂ ಸಮರ್ಪಕವಾಗಿ ಮಾಡುತ್ತಿದ್ದಾರೆ. ಜಿಲ್ಲೆಯ ಎಸ್ಸಿ-ಎಸ್ಟಿ, ಒಬಿಸಿ ವಿದ್ಯಾರ್ಥಿಗಳು ಹಾಗೂ ಹೆಣ್ಣು ಮಕ್ಕಳಿಗೆ ದೊಡ್ಡ ಪ್ರಮಾಣದಲ್ಲಿ ಅನುಕೂಲವಾಗಿದೆ. ಇದನ್ನು ಸ್ಥಗಿತಗೊಳಿಸಿದರೆ ಎಸ್ಸಿ-ಎಸ್ಟಿ, ಒಬಿಸಿ ಹಾಗೂ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಬಹಳ ದೊಡ್ಡ ಅನ್ಯಾಯ ಮಾಡಿದಂತಾಗುತ್ತದೆ. ಈಗಾಗಲೇ ಎಲ್ಲ ಜಿಲ್ಲೆಯ ಜನರು, ವಿದ್ಯಾರ್ಥಿಗಳು, ಪೋಷಕರು, ಬುದ್ಧಿ ಜೀವಿಗಳು ವಿರೋಧ ಮಾಡುತ್ತಿದ್ದಾರೆ. ಇವುಗಳನ್ನು ಅಲ್ಪ ದುಡ್ಡಿನಲ್ಲಿಯೇ ಬಲವರ್ಧನೆ ಮಾಡದೇ ಅವುಗಳನ್ನು ಮುಚ್ಚಿಸುವ ಕೆಲಸ ಮಾಡುತ್ತಿರುವುದು ಘೋರ ಅನ್ಯಾಯ ಎಂದು ತಿಳಿಸಿದರು.ಇದನ್ನೂ ಓದಿ: 422 ವಸ್ತುಗಳನ್ನು ಗುರುತಿಸಿ, ನೊಬೆಲ್ ವರ್ಲ್ಡ್ ರೆಕಾರ್ಡ್ ಪುಟ ಸೇರಿದ 9 ತಿಂಗಳ ಐರಾ

ಈಗಾಗಲೇ ಇರುವ ಹಳೆಯ ವಿಶ್ವ ವಿದ್ಯಾಲಯಗಳಿಗೆ ನೂರಾರು ಕೋಟಿ ರೂ. ಖರ್ಚು ಮಾಡುತ್ತಾರೆ. ಅವುಗಳ ಸ್ಥಿತಿಗತಿ ಏನಿದೆ. ಖಾಲಿ ಹುದ್ದೆಗಳಿವೆ. ಎಷ್ಟೋ ಕೋರ್ಸ್ ಗಳಿಗೆ ವಿದ್ಯಾರ್ಥಿಗಳಿಲ್ಲ. ಅತ್ಯಂತ ಅಧೋಗತಿಗೆ ಹೋಗಿವೆ. ಭ್ರಷ್ಟಾಚಾರದ ಕೂಪಗಳಾಗಿವೆ. ಈಗಾಗಲೇ ಎರಡು ವರ್ಷದಲ್ಲಿ ಉತ್ತಮ ಕೆಲಸ ಮಾಡುತ್ತಿರುವ ಹೊಸ ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಹೋಗುತ್ತಿರುವುದು ನಿಜವಾಗಲು ಉನ್ನತ ಶಿಕ್ಷಣಕ್ಕೆ ದೊಡ್ಡ ಕೊಡಲಿ ಪೆಟ್ಟು ನೀಡಿದಂತಾಗುತ್ತದೆ, ಎನ್‌ಇಪಿ ವಿಚಾರದಲ್ಲಿಯೂ ರಾಜ್ಯ ಸರ್ಕಾರ ಇದೇ ರೀತಿ ಮಾಡಿತ್ತು. ಇದರ ವಿರುದ್ಧ ಬುದ್ದಿ ಜೀವಿಗಳಿಂದ ಹಿಡಿದು ಎಲ್ಲ ಜನರೂ ಹೋರಾಟ ಮಾಡಬೇಕು. ಕಾನೂನು ಸಮರ ಮಾಡಬೇಕು ಎಂದು ಹೇಳಿದರು.

ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ರಾಜ್ಯಕ್ಕೆ 18 ಸಾವಿರ ಕೋಟಿ ರೂ. ಅನ್ಯಾಯವಾಗಿದೆ ಎನ್ನುವುದು ಶುದ್ಧ ಸುಳ್ಳು. ರಾಜ್ಯ ಸರ್ಕಾರ ಸುಳ್ಳು ಹೇಳುವುದನ್ನು ಬಿಟ್ಟು, ಸತ್ಯವೆನಿದೆ ಎನ್ನುವುದನ್ನು ನಮಗೆ ತಿಳಿಸಿದರೆ ನಾವೂ ಸಹಕಾರ ಮಾಡುತ್ತೇವೆ. ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಿ ಹಣ ಬಿಡುಗಡೆ ಮಾಡಿಸುವ ಕೆಲಸ ಮಾಡುತ್ತೇವೆ. ಇದರಲ್ಲಿ ರಾಜಕಾರಣ ಮಾಡಬಾರದು ಎಂದು ಆಗ್ರಹಿಸಿದರು.ಇದನ್ನೂ ಓದಿ: ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ: ಕೊತ್ತೂರು ಮಂಜುನಾಥ್

ಕಳೆದ ನಾಲ್ಕು ವರ್ಷಗಳಿಂದ ಜಲಜೀಪನ್ ಮಿಷನ್ ಯೋಜನೆ ನಡೆಯುತ್ತಿದೆ. ಕೇಂದ್ರ, ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಈ ಯೋಜನೆ ಜಾರಿಯಾಗಿದೆ. ರಾಜ್ಯ ಸರ್ಕಾರ ಖರ್ಚು ಮಾಡಿದ ಮೇಲೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತದೆ. ರಾಜ್ಯ ಸರ್ಕಾರ ತನ್ನ ಖಜಾನೆ ಖಾಲಿ ಮಾಡಿಕೊಂಡು ಸಂಪೂರ್ಣ ದಿವಾಳಿಯಾಗಿ ಹಣ ಖರ್ಚು ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಖರ್ಚು ಮಾಡಿದ ಮೇಲೆ ಅದರ ದಾಖಲೆಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದರೆ, ಖರ್ಚು ಮಾಡಿದ ಎಲ್ಲ ಹಣವೂ ರಾಜ್ಯ ಸರ್ಕಾರಕ್ಕೆ ಬರುತ್ತದೆ ಎಂದರು.

ಗೋದಾವರಿ ಕಾವೇರಿ ನದಿ ಜೋಡಣೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ದೇವೇಗೌಡರಿಗೆ ಯಾವ ಮಾಹಿತಿ ಇದೆಯೋ ಗೊತ್ತಿಲ್ಲ. ಖಂಡಿತವಾಗಿಯೂ ರಾಜ್ಯಕ್ಕೆ ಅನ್ಯಾಯವಾಗಿದ್ದರೆ ನಾವು ಯಾವಾಗಲೂ ಪಕ್ಷಾತೀತವಾಗಿಯೇ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಇದೇ ವೇಳೆ, ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲುಳಿತದಿಂದ ಕುಂಭಮೇಳಕ್ಕೆ ತೆರಳುವ ಭಕ್ತರು ಸಾವಿಗೀಡಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಯಾರೋ ತಪ್ಪು ಮಾಹಿತಿ ನೀಡಿದ್ದರಿಂದ ಅಲ್ಲಿ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಹೇಳಿದರು.ಇದನ್ನೂ ಓದಿ: IPL 2025 Schedule | ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್‌ KKR vs RCB ಕಾದಾಟ – ಪಂದ್ಯ ಯಾವಾಗ?

 

TAGGED:Basavaraj Bommaihaveriಬಸವರಾಜ ಬೊಮ್ಮಾಯಿಹಾವೇರಿ
Share This Article
Facebook Whatsapp Whatsapp Telegram

You Might Also Like

LORRY
Districts

ಮಡಿಕೇರಿ | ಮಳೆ ಹಿನ್ನೆಲೆ ಭಾರೀ ವಾಹನಗಳಿಗೆ ನಿಷೇಧ – ಆದೇಶ ಉಲ್ಲಂಘಿಸಿದ 12 ಲಾರಿಗಳು ವಶಕ್ಕೆ

Public TV
By Public TV
1 hour ago
04 BYTE
Bengaluru City

ಸರೋಜಮ್ಮ ತುಂಬಾ ನೆಮ್ಮಯಿಂದ ಹೋಗಿದ್ದಾರೆ – ತಮಿಳುನಟ ಕಾರ್ತಿ ಕಂಬನಿ

Public TV
By Public TV
1 hour ago
03 VISHAL
Bengaluru City

ಸರೋಜಮ್ಮ ದಂತಕಥೆ, ಅವರ ಸ್ಥಾನ ತುಂಬಲೂ ಯಾರಿಂದಲೂ ಸಾಧ್ಯವಿಲ್ಲ: ನಟ ವಿಶಾಲ್‌ ಭಾವುಕ

Public TV
By Public TV
1 hour ago
ANAND DEATH
Districts

ಸಂತೆ ಮುಗಿಸಿಕೊಂಡು ಮನೆಗೆ ಹೊರಟಿದ್ದ ವ್ಯಕ್ತಿ ಕುಸಿದುಬಿದ್ದು ಸಾವು

Public TV
By Public TV
1 hour ago
AUTO
Bengaluru City

ಬೆಂಗಳೂರು ಜನಕ್ಕೆ ಆಟೋ ದರ ಏರಿಕೆ ಶಾಕ್ – ಕನಿಷ್ಠ ದರ 36 ರೂ.ಗೆ ಏರಿಕೆ

Public TV
By Public TV
2 hours ago
Vibhu Bakhru
Bengaluru City

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?