– 5 ಕಡೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
ಬೆಂಗಳೂರು: ರಿಯಲ್ ಎಸ್ಟೇಟ್ ದಂಧೆಗೆ ಬ್ರೇಕ್ ಹಾಕುವ ಕರ್ನಾಟಕ ರಿಯಲ್ ಎಸ್ಟೇಟ್ ರೂಲ್ಸ್ ಕಾಯ್ದೆಯನ್ನ ಜಾರಿಗೆ ತರಲು ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. ಮೋಡ ಬಿತ್ತನೆ ಕಾರ್ಯಕ್ಕೂ ಅಸ್ತು ಎಂದಿದೆ.
ಕಾವೇರಿ, ಮಲಪ್ರಭಾ, ತುಂಗಭದ್ರಾ ಜಲಾನಯನ ವ್ಯಾಪ್ತಿಯಲ್ಲಿ 30 ಕೋಟಿ ರೂಪಾಯಿ ವೆಚ್ಚದಲ್ಲಿ 60 ದಿನಗಳೊಳಗೆ ಮೋಡ ಬಿತ್ತನೆಗೆ ಹೊಯ್ಸಳ ಕಂಪನಿಗೆ ಗುತ್ತಿಗೆ ನೀಡಲು ಸಂಪುಟ ಸಭೆ ಒಪ್ಪಿಗೆ ಕೊಟ್ಟಿದೆ. ಕೆಲ ಸಚಿವರು ವಿರೋಧದ ನಡುವೆಯೂ RERA(Real Estate Regulation Act) ಕಾಯ್ದೆ ಜಾರಿಗೆ ಸಂಪುಟದಲ್ಲಿ ನಿರ್ಧರಿಸಲಾಗಿದೆ.
ಇದಲ್ಲದೆ ಕ್ಯಾಬಿನೆಟ್ನಲ್ಲಿ ಹಲವು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ:
* ರೇರಾ ಕಾಯ್ದೆ – 2016 ಜಾರಿಗೆ ಕ್ಯಾಬಿನೆಟ್ ಅಸ್ತು.
* ಕಾವೇರಿ, ಮಲಪ್ರಭಾ, ತುಂಗಭದ್ರಾ ಜಲಾನಯನ ವ್ಯಾಪ್ತಿಯಲ್ಲಿ ಮೋಡ ಬಿತ್ತನೆ.
* ಕ್ಷೀರ ಭಾಗ್ಯ ಯೋಜನೆ ವಿಸ್ತರಣೆ- ವಾರದಲ್ಲಿ 5 ದಿನ ಮಕ್ಕಳಿಗೆ ಹಾಲು.
* ಮೈಸೂರು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಸುವಾಸಿತ ಹಾಲು ವಿತರಣೆ.
* ಬಿಎಸ್ಎನ್ಎಲ್ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ವೈ-ಫೈ ಸೇವೆ.
* ಬಳ್ಳಾರಿಯ ವಿಮ್ಸ್, ಹುಬ್ಬಳಿಯ ಕಿಮ್ಸ್ನಲ್ಲಿ 160 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ.
* ದಾವಣಗೆರೆ, ಕನಕಪುರ, ತುಮಕೂರು, ವಿಜಯಪುರ, ಕೋಲಾರಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ.
* ಬಿಸಿಯೂಟ ತಯಾರಿಕರು, ಅಡುಗೆ ಸಹಾಯಕರಿಗೆ 200 ಗೌರವ ಧನ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ.
* ರೇಷ್ಮೆ ನೂಲು ಬಿಚ್ಚಣಿಕೆದಾರರಿಗೆ 3 ಲಕ್ಷ ರೂ ವರಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ.
60 ದಿನದಲ್ಲಿ ಮೋಡ ಬಿತ್ತನೆ ಮಾಡ್ತೀವಿ ಅಂತಿದ್ದಾರೆ. ಆದರೆ ಮಳೆ ಅವಶ್ಯಕತೆ ಇರೋದು ಈಗ. ಈಗ ಬಿಟ್ಟು 2 ತಿಂಗಳಾದ್ಮೇಲೆ ಮೋಡ ಬಿತ್ತನೆ ಮಾಡಿದ್ರೆ ಏನ್ ಪ್ರಯೋಜನ ಅನ್ನೋದು ಸಾರ್ವಜನಿಕರ ಪ್ರಶ್ನೆಯಾಗಿದೆ.