Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮೊಂದಿಗೆ ನಾವಿದ್ದೇವೆ.. ಸಿಎಂಗೆ ಶಾಸಕರ ಬಲ; ರಾಷ್ಟ್ರಪತಿಗಳ ಮುಂದೆ 135 ಶಾಸಕರಿಂದ ಪೆರೇಡ್‌ಗೆ ಸಂಪುಟ ನಿರ್ಧಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಮ್ಮೊಂದಿಗೆ ನಾವಿದ್ದೇವೆ.. ಸಿಎಂಗೆ ಶಾಸಕರ ಬಲ; ರಾಷ್ಟ್ರಪತಿಗಳ ಮುಂದೆ 135 ಶಾಸಕರಿಂದ ಪೆರೇಡ್‌ಗೆ ಸಂಪುಟ ನಿರ್ಧಾರ

Bengaluru City

ನಿಮ್ಮೊಂದಿಗೆ ನಾವಿದ್ದೇವೆ.. ಸಿಎಂಗೆ ಶಾಸಕರ ಬಲ; ರಾಷ್ಟ್ರಪತಿಗಳ ಮುಂದೆ 135 ಶಾಸಕರಿಂದ ಪೆರೇಡ್‌ಗೆ ಸಂಪುಟ ನಿರ್ಧಾರ

Public TV
Last updated: August 22, 2024 7:27 pm
Public TV
Share
3 Min Read
DK Shivakumar 2
SHARE

ಬೆಂಗಳೂರು: ಮುಡಾ ಹಗರಣವೀಗ ಸರ್ಕಾರ (Karnataka Govt.) ವರ್ಸಸ್ ಗೌರ್ನರ್ ಎನ್ನುವಂತಾಗಿದೆ. ನಾವಾ ನೀವಾ.. ನೋಡೇ ಬಿಡೋಣ ಎನ್ನುತ್ತಾ ರಾಜ್ಯಪಾಲರು ಮತ್ತು ವಿಪಕ್ಷಗಳ ವಿರುದ್ಧ ರಾಜ್ಯ ಸರ್ಕಾರ ರಾಜಕಾರಣ ಶುರು ಮಾಡಿಕೊಂಡಂತೆ ಕಾಣುತ್ತಿದೆ. ಆರ್ಟಿಕಲ್ 163ರ ಅಡಿ ಮಂತ್ರಿ ಪರಿಷತ್‌ಗೆ ಇರುವ ಅಧಿಕಾರ ಬಳಸಿಕೊಂಡಿರುವ ಸಿದ್ದರಾಮಯ್ಯ (Siddaramaiah) ಸಂಪುಟ, ವಿಪಕ್ಷಗಳ ನಾಯಕರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿ, ಬಾಕಿ ಉಳಿದಿರುವ ಪ್ರಕರಣದ ವಿಚಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಮನವಿಗೆ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ.

Cabinet

ಗುರುವಾರ ಸಿಎಂ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ (CLP Meeting) ಕಾಂಗ್ರೆಸ್ ಶಾಸಕರು, ಸಚಿವರು ಸಿಎಂಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ. ನೀವು ಯಾವುದೇ ಕಾರಣಕ್ಕೂ ಎದೆಗುಂದಬೇಡಿ. ಕಾನೂನು ಹೋರಾಟ ನಡೆಸಿ ಅಂತ ಶಾಸಕರು ಸಲಹೆ ಕೊಟ್ಟಿದ್ದಾರೆ. ಅದಕ್ಕೆ ಸಿಎಂ ಸಹ ಧನ್ಯವಾದ ಹೇಳಿದರು. ನನ್ನ ಪರವಾಗಿ ಹೋರಾಡುತ್ತಿದ್ದೀರಿ, ನಿಮಗೆ ಧನ್ಯವಾದ ಅಂತ ಹೇಳಿದ್ದಾರೆ. ನಾಳೆ (ಆ.23) ಹೈಕಮಾಂಡ್ ಭೇಟಿಗಾಗಿ ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದು, ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಇವತ್ತು ನಡೆದ ಮಂತ್ರಿ ಪರಿಷತ್ ಸಭೆಯಲ್ಲಿ ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿ ಪೆಂಡಿಂಗ್ ಇರುವ ನಾಲ್ಕು ಪ್ರಕರಣಗಳ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಸಲಹೆ ರೂಪದ ನಿರ್ಣಯ ಕೈಗೊಳ್ಳಲಾಗಿದೆ. ಈ ಮೂಲಕ ಭ್ರಷ್ಟಚಾರ ತಡೆ ಕಾಯ್ದೆ 1988ರ ಅಡಿ ಪ್ರಮುಖ 4 ಪ್ರಕರಣಗಳ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಬೇಕೆಂದು ನಿರ್ಣಯ ಕೈಗೊಳ್ಳಲಾಗಿದೆ. As soon as possible ಪ್ರಾಸಿಕ್ಯೂಷನ್ ನೀಡುವ ಬಗ್ಗೆ ಕ್ರಮ ತೆಗೆದುಕೊಳ್ಳಿ. ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಪ್ರಕರಣ, ಜನಾರ್ದನ ರೆಡ್ಡಿ ಪ್ರಕರಣ, ಮುರುಗೇಶ್ ನಿರಾಣಿ ಪ್ರಕರಣ, ಶಶಿಕಲಾ ಜೊಲ್ಲೆ ಪ್ರಕರಣಗಳ ಪ್ರಾಸಿಕ್ಯೂಶನ್ ಅನುಮತಿ ಮನವಿ ಅರ್ಜಿಗಳನ್ನ ಇತ್ಯರ್ಥಗೊಳಿಸಬೇಕೆಂದು ಸಲಹೆ ನೀಡಿ ನಿರ್ಣಯ ಕೈಗೊಳ್ಳಲಾಗಿದೆ.

ಈ ಮೂಲಕ ರಾಜ್ಯಪಾಲರಿಗೆ ತಿರುಗೇಟು ಕೊಡುವುದು ಒಂದು ಕಡೆಯಾದ್ರೆ, ಹೆಚ್‌ಡಿಕೆ ಹಾಗೂ ವಿಪಕ್ಷ ನಾಯಕರಿಗೆ ಬಿಸಿ ಮುಟ್ಟಿಸಲು ಸಿದ್ದರಾಮಯ್ಯ ಕ್ಯಾಬಿನೆಟ್ ಯತ್ನಿಸಿದಂತಿದೆ. ಆದ್ರೆ ಈ ಮೊದಲು ಆಗಸ್ಟ್ 1ರಂದು ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ತೆಗೆದುಕೊಂಡಿದ್ದ ನಿರ್ಣಯಕ್ಕೆ ಕ್ಯಾರೇ ಎನ್ನದ ರಾಜ್ಯಪಾಲರು, ಮಂತ್ರಿ ಪರಿಷತ್ ನಿರ್ಣಯ ವಿಶ್ವಾಸಾರ್ಹ ಅಲ್ಲ ಎಂದು ತಿರುಗೇಟು ನೀಡಿ ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದರು. ‌ಹಾಗಾಗಿ ಇವತ್ತಿನ ನಿರ್ಣಯಕ್ಕೆ ರಾಜ್ಯಪಾಲರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬ ಕುತೂಹಲವಿದ್ದು, ರಾಜಭವನ ವರ್ಸಸ್ ಸರ್ಕಾರದ ಸಂಘರ್ಷ ಇನ್ನಷ್ಟು ತಾರಕಕ್ಕೇರುತ್ತಾ ಕಾದುನೋಡಬೇಕಿದೆ.

DK Shivakumar 1 1

ಪ್ರಮುಖ ನಿರ್ಣಯಗಳೇನು?
ಅಲ್ಲದೇ ಸಿಎಂ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನೂ ಕೈಗೊಳ್ಳಲಾಯಿತು. ರಾಷ್ಟ್ರಪತಿಗಳ ಮುಂದೆ ಶಾಸಕರ ಪೆರೇಡ್‌ಗೆ ನಿರ್ಧರಿಸಲಾಯಿತು. ಆ.23ರಂದು ಹೈ ಕಮಾಂಡ್ ಬಳಿ ಈ ವಿಚಾರ ಮಾತನಾಡಲು ನಿರ್ಧಾರ ಕೈಗೊಳ್ಳಲಾಯಿತು. ಹೈಕಮಾಂಡ್ ಅನುಮತಿ ಕೊಟ್ಟರೇ, ಅಲ್ಲೇ ದಿನಾಂಕ ನಿಗದಿಪಡಿಸಲಿರುವ ಸಿಎಂ ಹಾಗೂ ಡಿಸಿಎಂ ಎಲ್ಲಾ 135 ಶಾಸಕರನ್ನ ದೆಹಲಿಗೆ ಕರೆದೊಯ್ದು, ರಾಷ್ಟ್ರಪತಿಗಳ ಮುಂದೆ ಪೆರೆಡ್ ಮಾಡಿಸಿ, ರಾಜ್ಯಪಾಲರ ವಿರುದ್ಧ ದೂರು ಕೊಡಲು ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಪ್ರದೀಪ್ ಈಶ್ವರ್, ವಿನಯ್ ಕುಲಕರ್ಣಿ, ರಾಜು ಕಾಗೆ, ಮಂಜುನಾಥ್ ಭಂಡಾರಿ, ಸುಧಾಮ್ ದಾಸ್, ಹ್ಯಾರಿಸ್, ಬೋಸರಾಜು, ನಾರಾಯಣಸ್ವಾಮಿ, ಕೆ.ಜೆ ಜಾರ್ಜ್, ಶರಣು ಪ್ರಕಾಶ್ ಪಾಟೀಲ್, ನರೇಂದ್ರ ಸ್ವಾಮಿ, ಶ್ರೀನಿವಾಸ ಮಾನೆ, ಉಮಾಶ್ರೀ, ರಾಜೇಗೌಡ, ರಾಮೋಜಿಗೌಡ, ಜಮೀರ್ ಅಹಮದ್ ಪಾಲ್ಗೊಂಡಿದ್ದರು.

ರಾಜ್ಯಪಾಲರ ಒಪ್ಪಿಗೆಗೆ ಕಾದಿರುವ ಪ್ರಕರಗಳು
1 ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಗಣಿ ಗುತ್ತಿಗೆ ಲೈಸೆನ್ಸ್ ಪ್ರಕರಣ
2. ಜನಾರ್ದನ ರೆಡ್ಡಿ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣ
3. ಮುರುಗೇಶ ನಿರಾಣಿ ವಿರುದ್ಧ `ಇನ್ವೆಸ್ಟ್ ವೀಡಿಯೋ’ ಪ್ರಕರಣ
4. ಮಾಜಿ ಮಂತ್ರಿ ಶಶಿಕಲಾ ಜಿಲ್ಲೆ ವಿರುದ್ಧ ಮೊಟ್ಟೆ ಪ್ರಕರಣ

TAGGED:bengaluruCabinet DecisionDK ShivakumarMUDA Scampresident of Indiasiddaramaiahಥಾವರ್ ಚಂದ್ ಗೆಹ್ಲೋಟ್ಬೆಂಗಳೂರುಮುಡಾ ಹಗರಣರಾಷ್ಟ್ರಪತಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
19 minutes ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
37 minutes ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
1 hour ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
1 hour ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
1 hour ago
submarine cable 1
Latest

ಡಿಜಿಟಲ್ ಹೆದ್ದಾರಿಯನ್ನೇ ಕತ್ತರಿಸುತ್ತೇವೆ – ವಿಶ್ವಕ್ಕೆ ಇರಾನ್‌ ಬೆದರಿಕೆ | ಭಾರತಕ್ಕೆ ಏನು?

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?