Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಲ ಮನ್ನಾದ ಹಣ ರೀಫಂಡ್ – ಮತ್ತೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಾಲ ಮನ್ನಾದ ಹಣ ರೀಫಂಡ್ – ಮತ್ತೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದ ಸಿಎಂ

Bengaluru City

ಸಾಲ ಮನ್ನಾದ ಹಣ ರೀಫಂಡ್ – ಮತ್ತೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದ ಸಿಎಂ

Public TV
Last updated: June 11, 2019 11:08 pm
Public TV
Share
4 Min Read
cm saala
SHARE

ಬೆಂಗಳೂರು: ಯಾದಗಿರಿ ರೈತರ ಖಾತೆಗೆ ಜಮೆಯಾಗಿದ್ದ ಸಾಲ ಮನ್ನಾದ ಹಣ ರೀಫಂಡ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮತ್ತೆ ಮಾಧ್ಯಮಗಳ ಮೇಲೆಯೇ ಗೂಬೆ ಕೂರಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಬ್ಯಾಂಕ್ ನವರೇ ನಮ್ಮಿಂದ ತಪ್ಪಾಗಿದೆ ಅಂತ ಹೇಳಿದ್ದಾರೆ. ಮಾಧ್ಯಮಗಳು ಸುಮ್ಮನೆ ಸುದ್ದಿ ಮಾಡುತ್ತಿದ್ದೀರಿ. ಇದರಿಂದ ನಿಮಗೆ ಏನು ಲಾಭ? ನಿಮ್ಮ ಎಡಿಟರ್ ಗಳಿಗೆ ಈ ಬಗ್ಗೆ ಹೇಳಿ ಎಂದು ಕಿಡಿ ಕಾರಿದ್ದಾರೆ.

ydr sala manna 3

ಬೆಳಗ್ಗೆಯಿಂದ ನೀವು ಸುದ್ದಿ ಮಾಡುತ್ತಿದ್ದೀರಿ. ಇದರಿಂದ ನಿಮಗೆ ಏನು ಪ್ರಯೋಜನ? ರಾಷ್ಟ್ರೀಯ ಬ್ಯಾಂಕಿನಿಂದ ಆಗಿರುವ ತಪ್ಪಿಗೆ ನಮ್ಮನ್ನು ಯಾಕೆ ದೂಷಣೆ ಮಾಡುತ್ತೀರಿ. ಮೋದಿ ಬಗ್ಗೆ ದಿನಾ ಹೊಗಳುತ್ತೀರಿ ಅಲ್ಲವೇ? ಇದರ ಬಗ್ಗೆಯೂ ಮಾತನಾಡಿ. ರಾಜ್ಯ ಅಭಿವೃದ್ಧಿಯಾಗಬೇಕೇ ಅಥವಾ ಹಾಳಾಗಬೇಕೇ ನೀವೇ ನಿರ್ಧಾರ ಮಾಡಿ ಎಂದು ಗರಂ ಆಗಿದ್ದಾರೆ.

ವಾಣಿಜ್ಯ ಬ್ಯಾಂಕುಗಳಲ್ಲಿ 7 ಲಕ್ಷ 49 ಸಾವಿರ ರೈತರಿಗೆ 3,021 ಕೋಟಿ ಹಣ ಬಿಡುಗಡೆ ಮಾಡಿದ್ದೇವೆ. ಸಹಕಾರಿ ಬ್ಯಾಂಕ್ ನಿಂದ 11 ಲಕ್ಷಕ್ಕೂ ಹೆಚ್ಚು ರೈತರಿಗೆ ಹಣ ಬಿಡುಗಡೆ ಮಾಡಿದ್ದೇವೆ. ಈ ರೈತರಿಗೆ 4 ಸಾವಿರ ಕೋಟಿಗೂ ಹೆಚ್ಚು ಹಣ ಬಿಡುಗಡೆ ಮಾಡಿದ್ದೇವೆ. 2017-18-20ನೇ ಸಾಲಿನಲ್ಲಿ ಸಾಲ ಮನ್ನಾಗೆ 25 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ ಎಂದು ಸಿಎಂ ತಿಳಿಸಿದರು.

ydr sala manna

ಸಿಎಂ ಸ್ಪಷ್ಟನೆ:
ಯಾದಗಿರಿ ಜಿಲ್ಲೆಯ ರಾಷ್ಟ್ರೀಕೃತ ಬ್ಯಾಂಕುಗಳು ರೈತರ ಸಾಲಗಳ ವರ್ಗೀಕರಣ ಮಾಡುವಲ್ಲಿ ಆಗಿರುವ ಲೋಪದಿಂದಾಗಿ ಈ ಗೊಂದಲ ಉಂಟಾಗಿದೆ. ಪ್ರತಿ ಸಾಲ ಮನ್ನಾ ನಂತರ ರಾಜ್ಯ ಸರ್ಕಾರ ನಡೆಸುವ ಆಡಿಟ್ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಈ ವರೆಗೆ 13,988 ರೈತರ ಸಾಲ ಖಾತೆಗಳಲ್ಲಿ ಈ ಗೊಂದಲ ಉಂಟಾಗಿದೆ. ಸ್ಥಳೀಯ ಬ್ಯಾಂಕುಗಳು ತಮ್ಮಿಂದ ಆಗಿರುವ ಲೋಪದ ಕುರಿತು ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಶುಕ್ರವಾರ, ಜೂನ್ 14ರಂದು ಮಧ್ಯಾಹ್ನ 2.30 ಗಂಟೆಗೆ ರಾಜ್ಯ ಮಟ್ಟದ ಬ್ಯಾಂಕರುಗಳ ಸಭೆ ಕರೆಯಲಾಗಿದೆ.

ರೈತರ ಸಾಲ ಮನ್ನಾ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರವು ಅತ್ಯಂತ ಜವಾಬ್ದಾರಿಯುತವಾಗಿ ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯ ಸರ್ಕಾರದಿಂದ ಈ ಗೊಂದಲ ಉಂಟಾಗಿಲ್ಲ. ಹಾಗೂ ಚುನಾವಣೆಗೂ ಈ ಗೊಂದಲಕ್ಕೂ ಸಂಬಂಧವಿಲ್ಲ ಎನ್ನುವುದನ್ನೂ ಈ ಮೂಲಕ ಸ್ಪಷ್ಟಪಡಿಸಿದೆ. ಮಾಧ್ಯಮಗಳು ಇಂತಹ ವಿಷಯಗಳನ್ನು ಅಧಿಕೃತ ಮಾಹಿತಿ ಪಡೆದುಕೊಂಡ ನಂತರವೇ ಸತ್ಯಾಸತ್ಯತೆ ಪರಿಶೀಲಿಸಿ ವರದಿ ಮಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ.

ಏನಿದು ಪ್ರಕರಣ?
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರೈತರೊಬ್ಬರ ಖಾತೆಗೆ ಬಂದಿದ್ದ ಸಾಲ ಮನ್ನಾದ ಹಣ, ಹೇಗೆ ಬಂದಿದೆಯೋ ಹಾಗೇ ವಾಪಸ್ ಆಗಿದೆ. ಮುಖ್ಯಮಂತ್ರಿ ಸಾಲ ಮನ್ನಾ ಯೋಜನೆಯಡಿಯಲ್ಲಿ ಲೋಕಸಭಾ ಚುನಾವಣೆಗೂ ಮುನ್ನ ರೈತರ ಖಾತೆಗೆ ಹಣ ಜಮಾ ಆಗಿತ್ತು. ಆದ್ರೆ ಚುನಾವಣೆ ಮುಗಿದ ಬಳಿಕ ರೈತರ ಖಾತೆಯಲ್ಲಿದ್ದ ಹಣ ಇದ್ದಕ್ಕಿದ್ದಂತೆ ಮಾಯವಾಗಿದೆ.

ಜಿಲ್ಲೆಯ ಸುಮಾರು 200 ರೈತರ ಖಾತೆಯ ಹಣ ರೀಫಂಡ್ ಆಗಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ. ಶಹಾಪುರದ ಸಗರ ಗ್ರಾಮದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆ ಹೊಂದಿದ್ದ ಶಿವಪ್ಪ ಅವರಿಗೆ ಏಪ್ರಿಲ್ ತಿಂಗಳಲ್ಲಿ 43,535 ಹಣ ಜಮಾ ಅಗಿತ್ತು. ಮೇ 23ಕ್ಕೆ ಅಂದರೆ ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ನಂತರ ರೈತ ಶಿವಪ್ಪ ಅಕೌಂಟ್ ಚೆಕ್ ಮಾಡಿದ ವೇಳೆ ಹಣ ರೀಫಂಡ್ ಅಗಿರುವುದು ಬೆಳಕಿಗೆ ಬಂದಿದೆ.

ydr sala manna 2

ಇದೇ ರೀತಿ 200 ರೈತರ ಹಣ ರೀಫಂಡ್ ಅಗಿದೆ ಎಂದು ರೈತರು ಆರೋಪಿಸಿದ್ದಾರೆ. ಆದರೆ ಸಗರ ಗ್ರಾಮ ಎಸ್‍ಬಿಐ ಬ್ಯಾಂಕ್ ಅಧಿಕಾರಿಗಳು ಅರ್ಹ ಫಲಾನುಭವಿಗಳ ಪಟ್ಟಿ ಕಳಿಸುವಲ್ಲಿ ಗೊಂದಲವಾಗಿದೆ. ಕೆಲ ರೈತರಿಗೆ ಇರುವ ಸಾಲಕ್ಕಿಂತ ಹೆಚ್ಚಿನ ಹಣ ಅವರ ಖಾತೆಗೆ ಹಣ ಜಮೆ ಅಗಿದ್ದು, ಪರಿಶೀಲನೆ ಬಳಿಕ ಹೆಚ್ಚಿನ ಹಣ ರೀಫಂಡ್ ಅಗಿದೆ ಎನ್ನುತ್ತಾರೆ ಬ್ಯಾಂಕ್ ಅಧಿಕಾರಿಗಳು.

ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರೈತ ಶಿವಪ್ಪ, ಫೆ.28 ರಂದು 50 ಸಾವಿರ ಹಣ ಬಂದರೆ, ಏಪ್ರಿಲ್ 17 ರಂದು 43,535 ರೂ. ಹಣ ಜಮೆ ಆಗಿತ್ತು. ಆದರೆ ಮೇ 2 ರಂದು 43,535 ರೀಫಂಡ್ ಆಗಿದೆ. ಮೇ 23 ರಂದು ಮತ್ತೆ 50 ಸಾವಿರ ರೀಫಂಡ್ ಆಗಿದೆ. ಒಟ್ಟಿನಲ್ಲಿ ಜಮೆಯಾಗಿ 93,535 ಹಣ ರೀಫಂಡ್ ಆಗಿದ್ದು, ಬ್ಯಾಂಕ್ ಮ್ಯಾನೇಜರ್ ಅವರನ್ನು ಕೇಳಿದರೆ ರೀಫಂಡ್ ಯಾಕಾಯ್ತು ಎನ್ನುವುದರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ನಮಗೆ ಏನು ಗೊತ್ತಿಲ್ಲ ಕಂದಾಯ ಇಲಾಖೆಯನ್ನು ಕೇಳಿ ಎಂದು ಉತ್ತರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ydr sala manna 1

ಖಾತೆಗೆ ಮೊದಲ ಬಾರಿಗೆ ಜಮೆಯಾದಾಗ ರೈತರು ಹಣ ತೆಗೆಯಲು ಹೋಗಿದ್ದಾರೆ. ಈ ವೇಳೆ ಹಣ ತೆಗೆಯಲು ಮೇಲಿನ ಅಧಿಕಾರಿಗಳಿಂದ ಸೂಚನೆ ಬರಬೇಕು. ಅಧಿಕಾರಿಗಳಿಂದ ಸೂಚನೆ ಬಂದ ನಂತರ ಹಣ ತೆಗೆಯಲು ಅನುಮತಿ ನೀಡಲಾಗುತ್ತದೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.

ವರದಿ ಕೇಳಿದ ಸಿಎಂ:
ಸಾಲಮನ್ನಾದ ಹಣ ರೈತರ ಖಾತೆಯಿಂದ ವಾಪಸ್ ಆದ ಸುದ್ದಿ ಪ್ರಕಟವಾಗುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದೆ. ಎಷ್ಟು ಹಣ ವಾಪಸ್ಸಾಗಿದೆ? ಚಾಲ್ತಿ ಸಾಲವೇ ಅಥವಾ ಸುಸ್ತಿ ಸಾಲದ ಹಣವೇ? ಯಾವ ಕಾರಣಕ್ಕೆ ವಾಪಸ್ಸಾಗಿದೆ ಎಂದು ಸರ್ಕಾರ ಮಾಹಿತಿಯನ್ನು ಪಡೆದುಕೊಂಡಿದೆ. ತಕ್ಷಣವೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

TAGGED:bengalurucmdebtmediaPublic TVಪಬ್ಲಿಕ್ ಟಿವಿಬೆಂಗಳೂರುಮಾಧ್ಯಮಸಾಲಮನ್ನಾಸಿಎಂ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Amit shah
Latest

ಅಮಿತ್‌ ಶಾ ಹೆಲಿಕಾಪ್ಟರ್‌ನಲ್ಲಿ ಇಳಿಯುವಾಗ ತಾಂತ್ರಿಕ ದೋಷ – ಅಸ್ಸಾಂ ರ‍್ಯಾಲಿ ರದ್ದು

Public TV
By Public TV
10 minutes ago
amit shah
Latest

ನಾವು ಯುಸಿಸಿ ಜಾರಿಗೆ ತರುತ್ತೇವೆ.. ಆಗ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ: ಅಮಿತ್‌ ಶಾ

Public TV
By Public TV
10 minutes ago
CongressFlags1 e1613454851608
Latest

ತಮಿಳುನಾಡು ಚುನಾವಣೆಗೆ 28 ಅಭ್ಯರ್ಥಿಗಳನ್ನ ಘೋಷಿಸಿದ ಕಾಂಗ್ರೆಸ್ – ಹೊಸ ಮುಖಗಳಿಗೂ ಮಣೆ

Public TV
By Public TV
12 minutes ago
g.parameshwar
Crime

ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Public TV
By Public TV
28 minutes ago
Auto Driver
Bengaluru City

ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ – ನಸುಕಿನಲ್ಲೇ ಕ್ಯೂ ನಿಂತ್ರೂ ಸಿಗ್ತಿಲ್ಲ ಆಟೋ ಗ್ಯಾಸ್

Public TV
By Public TV
44 minutes ago
INS Aridhaman
Latest

ನ್ಯೂಕ್ಲಿಯರ್ ಸಾಮರ್ಥ್ಯದ 3ನೇ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿದಮನ್ ಭಾರತೀಯ ಸೇನೆಗೆ ಸೇರ್ಪಡೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?