Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಲ ಮನ್ನಾದ ಹಣ ರೀಫಂಡ್ – ಮತ್ತೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಾಲ ಮನ್ನಾದ ಹಣ ರೀಫಂಡ್ – ಮತ್ತೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದ ಸಿಎಂ

Bengaluru City

ಸಾಲ ಮನ್ನಾದ ಹಣ ರೀಫಂಡ್ – ಮತ್ತೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದ ಸಿಎಂ

Public TV
Last updated: June 11, 2019 11:08 pm
Public TV
Share
4 Min Read
cm saala
SHARE

ಬೆಂಗಳೂರು: ಯಾದಗಿರಿ ರೈತರ ಖಾತೆಗೆ ಜಮೆಯಾಗಿದ್ದ ಸಾಲ ಮನ್ನಾದ ಹಣ ರೀಫಂಡ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮತ್ತೆ ಮಾಧ್ಯಮಗಳ ಮೇಲೆಯೇ ಗೂಬೆ ಕೂರಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಬ್ಯಾಂಕ್ ನವರೇ ನಮ್ಮಿಂದ ತಪ್ಪಾಗಿದೆ ಅಂತ ಹೇಳಿದ್ದಾರೆ. ಮಾಧ್ಯಮಗಳು ಸುಮ್ಮನೆ ಸುದ್ದಿ ಮಾಡುತ್ತಿದ್ದೀರಿ. ಇದರಿಂದ ನಿಮಗೆ ಏನು ಲಾಭ? ನಿಮ್ಮ ಎಡಿಟರ್ ಗಳಿಗೆ ಈ ಬಗ್ಗೆ ಹೇಳಿ ಎಂದು ಕಿಡಿ ಕಾರಿದ್ದಾರೆ.

ydr sala manna 3

ಬೆಳಗ್ಗೆಯಿಂದ ನೀವು ಸುದ್ದಿ ಮಾಡುತ್ತಿದ್ದೀರಿ. ಇದರಿಂದ ನಿಮಗೆ ಏನು ಪ್ರಯೋಜನ? ರಾಷ್ಟ್ರೀಯ ಬ್ಯಾಂಕಿನಿಂದ ಆಗಿರುವ ತಪ್ಪಿಗೆ ನಮ್ಮನ್ನು ಯಾಕೆ ದೂಷಣೆ ಮಾಡುತ್ತೀರಿ. ಮೋದಿ ಬಗ್ಗೆ ದಿನಾ ಹೊಗಳುತ್ತೀರಿ ಅಲ್ಲವೇ? ಇದರ ಬಗ್ಗೆಯೂ ಮಾತನಾಡಿ. ರಾಜ್ಯ ಅಭಿವೃದ್ಧಿಯಾಗಬೇಕೇ ಅಥವಾ ಹಾಳಾಗಬೇಕೇ ನೀವೇ ನಿರ್ಧಾರ ಮಾಡಿ ಎಂದು ಗರಂ ಆಗಿದ್ದಾರೆ.

ವಾಣಿಜ್ಯ ಬ್ಯಾಂಕುಗಳಲ್ಲಿ 7 ಲಕ್ಷ 49 ಸಾವಿರ ರೈತರಿಗೆ 3,021 ಕೋಟಿ ಹಣ ಬಿಡುಗಡೆ ಮಾಡಿದ್ದೇವೆ. ಸಹಕಾರಿ ಬ್ಯಾಂಕ್ ನಿಂದ 11 ಲಕ್ಷಕ್ಕೂ ಹೆಚ್ಚು ರೈತರಿಗೆ ಹಣ ಬಿಡುಗಡೆ ಮಾಡಿದ್ದೇವೆ. ಈ ರೈತರಿಗೆ 4 ಸಾವಿರ ಕೋಟಿಗೂ ಹೆಚ್ಚು ಹಣ ಬಿಡುಗಡೆ ಮಾಡಿದ್ದೇವೆ. 2017-18-20ನೇ ಸಾಲಿನಲ್ಲಿ ಸಾಲ ಮನ್ನಾಗೆ 25 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ ಎಂದು ಸಿಎಂ ತಿಳಿಸಿದರು.

ydr sala manna

ಸಿಎಂ ಸ್ಪಷ್ಟನೆ:
ಯಾದಗಿರಿ ಜಿಲ್ಲೆಯ ರಾಷ್ಟ್ರೀಕೃತ ಬ್ಯಾಂಕುಗಳು ರೈತರ ಸಾಲಗಳ ವರ್ಗೀಕರಣ ಮಾಡುವಲ್ಲಿ ಆಗಿರುವ ಲೋಪದಿಂದಾಗಿ ಈ ಗೊಂದಲ ಉಂಟಾಗಿದೆ. ಪ್ರತಿ ಸಾಲ ಮನ್ನಾ ನಂತರ ರಾಜ್ಯ ಸರ್ಕಾರ ನಡೆಸುವ ಆಡಿಟ್ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಈ ವರೆಗೆ 13,988 ರೈತರ ಸಾಲ ಖಾತೆಗಳಲ್ಲಿ ಈ ಗೊಂದಲ ಉಂಟಾಗಿದೆ. ಸ್ಥಳೀಯ ಬ್ಯಾಂಕುಗಳು ತಮ್ಮಿಂದ ಆಗಿರುವ ಲೋಪದ ಕುರಿತು ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಶುಕ್ರವಾರ, ಜೂನ್ 14ರಂದು ಮಧ್ಯಾಹ್ನ 2.30 ಗಂಟೆಗೆ ರಾಜ್ಯ ಮಟ್ಟದ ಬ್ಯಾಂಕರುಗಳ ಸಭೆ ಕರೆಯಲಾಗಿದೆ.

ರೈತರ ಸಾಲ ಮನ್ನಾ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರವು ಅತ್ಯಂತ ಜವಾಬ್ದಾರಿಯುತವಾಗಿ ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯ ಸರ್ಕಾರದಿಂದ ಈ ಗೊಂದಲ ಉಂಟಾಗಿಲ್ಲ. ಹಾಗೂ ಚುನಾವಣೆಗೂ ಈ ಗೊಂದಲಕ್ಕೂ ಸಂಬಂಧವಿಲ್ಲ ಎನ್ನುವುದನ್ನೂ ಈ ಮೂಲಕ ಸ್ಪಷ್ಟಪಡಿಸಿದೆ. ಮಾಧ್ಯಮಗಳು ಇಂತಹ ವಿಷಯಗಳನ್ನು ಅಧಿಕೃತ ಮಾಹಿತಿ ಪಡೆದುಕೊಂಡ ನಂತರವೇ ಸತ್ಯಾಸತ್ಯತೆ ಪರಿಶೀಲಿಸಿ ವರದಿ ಮಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ.

ಏನಿದು ಪ್ರಕರಣ?
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರೈತರೊಬ್ಬರ ಖಾತೆಗೆ ಬಂದಿದ್ದ ಸಾಲ ಮನ್ನಾದ ಹಣ, ಹೇಗೆ ಬಂದಿದೆಯೋ ಹಾಗೇ ವಾಪಸ್ ಆಗಿದೆ. ಮುಖ್ಯಮಂತ್ರಿ ಸಾಲ ಮನ್ನಾ ಯೋಜನೆಯಡಿಯಲ್ಲಿ ಲೋಕಸಭಾ ಚುನಾವಣೆಗೂ ಮುನ್ನ ರೈತರ ಖಾತೆಗೆ ಹಣ ಜಮಾ ಆಗಿತ್ತು. ಆದ್ರೆ ಚುನಾವಣೆ ಮುಗಿದ ಬಳಿಕ ರೈತರ ಖಾತೆಯಲ್ಲಿದ್ದ ಹಣ ಇದ್ದಕ್ಕಿದ್ದಂತೆ ಮಾಯವಾಗಿದೆ.

ಜಿಲ್ಲೆಯ ಸುಮಾರು 200 ರೈತರ ಖಾತೆಯ ಹಣ ರೀಫಂಡ್ ಆಗಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ. ಶಹಾಪುರದ ಸಗರ ಗ್ರಾಮದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆ ಹೊಂದಿದ್ದ ಶಿವಪ್ಪ ಅವರಿಗೆ ಏಪ್ರಿಲ್ ತಿಂಗಳಲ್ಲಿ 43,535 ಹಣ ಜಮಾ ಅಗಿತ್ತು. ಮೇ 23ಕ್ಕೆ ಅಂದರೆ ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ನಂತರ ರೈತ ಶಿವಪ್ಪ ಅಕೌಂಟ್ ಚೆಕ್ ಮಾಡಿದ ವೇಳೆ ಹಣ ರೀಫಂಡ್ ಅಗಿರುವುದು ಬೆಳಕಿಗೆ ಬಂದಿದೆ.

ydr sala manna 2

ಇದೇ ರೀತಿ 200 ರೈತರ ಹಣ ರೀಫಂಡ್ ಅಗಿದೆ ಎಂದು ರೈತರು ಆರೋಪಿಸಿದ್ದಾರೆ. ಆದರೆ ಸಗರ ಗ್ರಾಮ ಎಸ್‍ಬಿಐ ಬ್ಯಾಂಕ್ ಅಧಿಕಾರಿಗಳು ಅರ್ಹ ಫಲಾನುಭವಿಗಳ ಪಟ್ಟಿ ಕಳಿಸುವಲ್ಲಿ ಗೊಂದಲವಾಗಿದೆ. ಕೆಲ ರೈತರಿಗೆ ಇರುವ ಸಾಲಕ್ಕಿಂತ ಹೆಚ್ಚಿನ ಹಣ ಅವರ ಖಾತೆಗೆ ಹಣ ಜಮೆ ಅಗಿದ್ದು, ಪರಿಶೀಲನೆ ಬಳಿಕ ಹೆಚ್ಚಿನ ಹಣ ರೀಫಂಡ್ ಅಗಿದೆ ಎನ್ನುತ್ತಾರೆ ಬ್ಯಾಂಕ್ ಅಧಿಕಾರಿಗಳು.

ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರೈತ ಶಿವಪ್ಪ, ಫೆ.28 ರಂದು 50 ಸಾವಿರ ಹಣ ಬಂದರೆ, ಏಪ್ರಿಲ್ 17 ರಂದು 43,535 ರೂ. ಹಣ ಜಮೆ ಆಗಿತ್ತು. ಆದರೆ ಮೇ 2 ರಂದು 43,535 ರೀಫಂಡ್ ಆಗಿದೆ. ಮೇ 23 ರಂದು ಮತ್ತೆ 50 ಸಾವಿರ ರೀಫಂಡ್ ಆಗಿದೆ. ಒಟ್ಟಿನಲ್ಲಿ ಜಮೆಯಾಗಿ 93,535 ಹಣ ರೀಫಂಡ್ ಆಗಿದ್ದು, ಬ್ಯಾಂಕ್ ಮ್ಯಾನೇಜರ್ ಅವರನ್ನು ಕೇಳಿದರೆ ರೀಫಂಡ್ ಯಾಕಾಯ್ತು ಎನ್ನುವುದರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ನಮಗೆ ಏನು ಗೊತ್ತಿಲ್ಲ ಕಂದಾಯ ಇಲಾಖೆಯನ್ನು ಕೇಳಿ ಎಂದು ಉತ್ತರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ydr sala manna 1

ಖಾತೆಗೆ ಮೊದಲ ಬಾರಿಗೆ ಜಮೆಯಾದಾಗ ರೈತರು ಹಣ ತೆಗೆಯಲು ಹೋಗಿದ್ದಾರೆ. ಈ ವೇಳೆ ಹಣ ತೆಗೆಯಲು ಮೇಲಿನ ಅಧಿಕಾರಿಗಳಿಂದ ಸೂಚನೆ ಬರಬೇಕು. ಅಧಿಕಾರಿಗಳಿಂದ ಸೂಚನೆ ಬಂದ ನಂತರ ಹಣ ತೆಗೆಯಲು ಅನುಮತಿ ನೀಡಲಾಗುತ್ತದೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.

ವರದಿ ಕೇಳಿದ ಸಿಎಂ:
ಸಾಲಮನ್ನಾದ ಹಣ ರೈತರ ಖಾತೆಯಿಂದ ವಾಪಸ್ ಆದ ಸುದ್ದಿ ಪ್ರಕಟವಾಗುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದೆ. ಎಷ್ಟು ಹಣ ವಾಪಸ್ಸಾಗಿದೆ? ಚಾಲ್ತಿ ಸಾಲವೇ ಅಥವಾ ಸುಸ್ತಿ ಸಾಲದ ಹಣವೇ? ಯಾವ ಕಾರಣಕ್ಕೆ ವಾಪಸ್ಸಾಗಿದೆ ಎಂದು ಸರ್ಕಾರ ಮಾಹಿತಿಯನ್ನು ಪಡೆದುಕೊಂಡಿದೆ. ತಕ್ಷಣವೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

TAGGED:bengalurucmdebtmediaPublic TVಪಬ್ಲಿಕ್ ಟಿವಿಬೆಂಗಳೂರುಮಾಧ್ಯಮಸಾಲಮನ್ನಾಸಿಎಂ
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

01 20
Big Bulletin

ಬಿಗ್‌ ಬುಲೆಟಿನ್‌ 21 January 2026 ಭಾಗ-1

Public TV
By Public TV
5 minutes ago
02 17
Big Bulletin

ಬಿಗ್‌ ಬುಲೆಟಿನ್‌ 21 January 2026 ಭಾಗ-2

Public TV
By Public TV
8 minutes ago
03 14
Big Bulletin

ಬಿಗ್‌ ಬುಲೆಟಿನ್‌ 21 January 2026 ಭಾಗ-3

Public TV
By Public TV
11 minutes ago
Rink Singh Abhishek Sharma
Cricket

ಅಭಿಷೇಕ್‌, ರಿಂಕು ಸಿಡಿಲಬ್ಬರದ ಬ್ಯಾಟಿಂಗ್‌ – ಸಿಕ್ಸರ್‌, ಬೌಂಡರಿ ಆಟದಲ್ಲಿ ಭಾರತಕ್ಕೆ 48 ರನ್‌ ಜಯ

Public TV
By Public TV
15 minutes ago
Thawar Chand Gehlot Siddaramaiah
Bengaluru City

ರಾಜ್ಯಪಾಲರ ಜೊತೆ ಸಂಘರ್ಷಕ್ಕೆ ಸಿದ್ಧ – ಕಾನೂನು ಹೋರಾಟಕ್ಕೆ ಮುಂದಾದ ಸರ್ಕಾರ

Public TV
By Public TV
19 minutes ago
Silver Jubilee of CMR Technical College Vice President inaugurates new incubation centre
Bengaluru City

ಸಿಎಂಆರ್ ತಾಂತ್ರಿಕ ಮಹಾವಿದ್ಯಾಲದ ಬೆಳ್ಳಿ ಹಬ್ಬ – ನೂತನ ಇನ್‌ಕ್ಯುಬೇಷನ್ ಸೆಂಟರ್ ಲೋಕಾರ್ಪಣೆಗೊಳಿಸಿದ ಉಪರಾಷ್ಟ್ರಪತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?