Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನಸಂಪರ್ಕ ಬೆಳೆಸಿಕೊಳ್ಳಿ – ಜಿ.ಪಂ. ಸಿಇಓಗಳಿಗೆ ಬೊಮ್ಮಾಯಿ ಸಲಹೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜನಸಂಪರ್ಕ ಬೆಳೆಸಿಕೊಳ್ಳಿ – ಜಿ.ಪಂ. ಸಿಇಓಗಳಿಗೆ ಬೊಮ್ಮಾಯಿ ಸಲಹೆ

Districts

ಜನಸಂಪರ್ಕ ಬೆಳೆಸಿಕೊಳ್ಳಿ – ಜಿ.ಪಂ. ಸಿಇಓಗಳಿಗೆ ಬೊಮ್ಮಾಯಿ ಸಲಹೆ

Public TV
Last updated: December 30, 2021 9:31 pm
Public TV
Share
3 Min Read
BASAVARJ BOMMAI 7
SHARE

ಬೆಂಗಳೂರು: ಸಿಇಓಗಳು ಜನಸಂಪರ್ಕ ಹೊಂದಬೇಕು. ಹಳ್ಳಿಗರು ಸಮಸ್ಯೆಯ ಜೊತೆ ಜೀವನ ಮಾಡುತ್ತಾರೆ. ಸಮಸ್ಯೆಯ ಬಗ್ಗೆ ಚರ್ಚೆ ಮಾಡುವುದು ಬೇರೆ. ಸಮಸ್ಯೆಯ ಜೊತೆ ಬದುಕುವುದು ಬೇರೆ. ಅಧಿಕಾರಿಗಳು ತಳಮಟ್ಟಕ್ಕೆ ಹೋಗಿ ಸಮಸ್ಯೆಗಳ ಪರಿಹಾರದ ಬಗ್ಗೆ ಚಿಂತನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

BASAVARJ BOMMAI MEETING

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿ, ವಿವಿಧ ವಿಷಯಗಳ ಚರ್ಚೆ ನಡೆಸಿದ ನಂತರ ಮಾತನಾಡಿ, ಹಳ್ಳಿಗರು ಸಮಸ್ಯೆಯ ಜೊತೆ ಜೀವನ ಮಾಡುತ್ತಾರೆ. ಸಮಸ್ಯೆಯ ಬಗ್ಗೆ ಚರ್ಚೆ ಮಾಡುವುದು ಬೇರೆ. ಸಮಸ್ಯೆಯ ಜೊತೆ ಬದುಕುವುದು ಬೇರೆ. ಆದ್ದರಿಂದ ಅವರ ಸಮಸ್ಯೆ ಬಗೆಹರಿಸಲು ಶ್ರಮಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: 58 ನಗರ ಸ್ಥಳೀಯ ಚುನಾವಣೆಗಳಲ್ಲಿ ಬಿಜೆಪಿಗೆ ಹಿನ್ನಡೆ – ಹೆಚ್ಚು ಸ್ಥಾನ ಗೆದ್ದು ಕಾಂಗ್ರೆಸ್ ಕಮಾಲ್

ವಾರದಲ್ಲಿ ಮೂರು ದಿನ ಹಳ್ಳಿಗಳಿಗೆ ಭೇಟಿ ನೀಡಬೇಕು. ದಿಢೀರ್ ಭೇಟಿ ನೀಡಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಿ, ಮಾನವೀಯತೆಯಿಂದ ಪರಿಹಾರದ ಚಿಂತನೆ ಮಾಡಿ, ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ಇರಬೇಕು. ಗ್ರಾಮೀಣ ಜನರ ಬದುಕನ್ನುಹಸನು ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

BASAVARJ BOMMAI METTING

ಜಿಲ್ಲೆಗಳಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಅಭಿನಂದನೀಯ. ಜಲಜೀವನ ಮಿಷನ್, ವಸತಿ, ಶಾಲೆಗಳ ದುರಸ್ತಿ ಸೇರಿದಂತೆ ಇಂದು ನಿಗದಿಪಡಿಸಿರುವ ಗುರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಎನ್‍ಆರ್‍ಇಜಿ ಯೋಜನೆಯಡಿ ಕ್ರಿಯಾತ್ಮಕವಾಗಿ ಕಾರ್ಯಕ್ರಮಗಳನ್ನು ರೂಪಿಸಿ. ಸರ್ಕಾರದ ಕಟ್ಟಡಗಳ ಆಸ್ತಿ ಸೃಜನೆಯ ಬಗ್ಗೆ ಗಮನ ನೀಡಬೇಕು ಎಂದು ನುಡಿದರು. ಇದನ್ನೂ ಓದಿ: ವಯಸ್ಕರಿಗಿಂತ 2 ರಿಂದ 18 ವರ್ಷದ ಮಕ್ಕಳಲ್ಲಿ ಕೋವ್ಯಾಕ್ಸಿನ್ ಹೆಚ್ಚು ಪರಿಣಾಮಕಾರಿ: ಭಾರತ್ ಬಯೋಟೆಕ್

ಸ್ತ್ರೀ ಶಕ್ತಿ ಮಾನವ ಸಂಪನ್ಮೂಲದ ದೊಡ್ಡ ಆಸ್ತಿ. ಎಸ್‍ಸಿ, ಎಸ್‍ಟಿ, ಓಬಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲರಾಗಿಸಬೇಕು. ಕರ್ನಾಟಕ ರಾಜ್ಯ ತಲಾವಾರು ಆದಾಯದಲ್ಲಿ 4ನೇ ಸ್ಥಾನದಲ್ಲಿದೆ. ತಲಾವಾರು ಆದಾಯಕ್ಕೆ ಕೇವಲ 30% ಜನ ಮಾತ್ರ ಕೊಡುಗೆ ನೀಡುತ್ತಿದ್ದಾರೆ. ಉಳಿದ ಶೇ.70ರಷ್ಟು ಜನ ದಿನನಿತ್ಯದ ಬದುಕಿಗೆ ದುಡಿಯುವುದಾಗಿದೆ. ಈ ವರ್ಗದವರಿಗೆ ಆರ್ಥಿಕ ನೆರವು, ತರಬೇತಿ ನೀಡಿದರೆ ಅವರ ಜೀವನ ಮಟ್ಟ ಸುಧಾರಿಸುತ್ತದೆ. ಕೃಷಿಯಲ್ಲಿ ಶೇ.1ರಷ್ಟು ಅಭಿವೃದ್ಧಿಯಾದರೆ, ಕೈಗಾರಿಕೆಗಳಲ್ಲಿ ಶೇ.4ರಷ್ಟು ಹಾಗೂ ಸೇವಾ ಕ್ಷೇತ್ರದಲ್ಲಿ ಶೇ.10ರಷ್ಟು ಅಭಿವೃದ್ಧಿಯಾಗುತ್ತದೆ ಎಂದರು.

ಮುಖ್ಯಮಂತ್ರಿ @BSBommai ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದರು. (1/2) pic.twitter.com/hbBgYXDdoS

— CM of Karnataka (@CMofKarnataka) December 30, 2021

ಸಿಇಓಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಕನಿಷ್ಟ ಶೇ.1 ರಷ್ಟಾದರೂ ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿಪಡಿಸಿದರೆ, ಗ್ರಾಮೀಣ ಜನರ ಜೀವನದಲ್ಲಿ ಬದಲಾವಣೆ ತಂದಂತಾಗುತ್ತದೆ. ಜನರಿಗೆ ಇದರಿಂದ ವ್ಯವಸ್ಥೆಯ ಮೇಲೆ ವಿಶ್ವಾಸ ಮೂಡಿಸಲು ಸಾಧ್ಯ ಎಂದು ತಿಳಿಸಿದರು. ಇದನ್ನೂ ಓದಿ: ನಾಳೆಯ ಕರ್ನಾಟಕ ಬಂದ್ ವಾಪಸ್

ಪ್ರಧಾನಿಯವರು ಮಧ್ಯವರ್ತಿಗಳ ಹಾವಳಿ ತಡೆಯಲು ಡಿಬಿಟಿ ವ್ಯವಸ್ಥೆ ಜಾರಿಗೆ ತಂದರು. ಅಂತೆಯೇ ರೈತರ ಸಂಕಷ್ಟವನ್ನು ಕಣ್ಣಾರೆ ಕಂಡು, ಅವರ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ರೈತ ವಿದ್ಯಾನಿಧಿ ಜಾರಿಗೆ ತರಲಾಗಿದೆ. ಹಿಂದೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಸೈಕಲ್ ನೀಡಿದ್ದರಿಂದ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಹೆಚ್ಚಿನ ಸುಧಾರಣೆ ಆಗಿತ್ತು. ಆದ್ದರಿಂದ ಶಿಕ್ಷಣ, ಆರೋಗ್ಯ, ಉದ್ಯೋಗ ಸೃಜನೆಗೆ ಒತ್ತು ನೀಡಿ. ಶಿಶು ಮರಣ ಪ್ರಮಾಣ, ತಾಯಂದಿರ ಮರಣ ಪ್ರಮಾಣ ಹಾಗೂ ಅಪೌಷ್ಟಿಕತೆ ನಿವಾರಣೆಗೆ ಆದ್ಯತೆ ನೀಡಬೇಕು. ಬಡವರು, ತಳವರ್ಗದ ಜನರ ಜೀವನ ಮಟ್ಟ ಸುಧಾರಣೆಗೆ ಶಿಕ್ಷಣ, ಉದ್ಯೋಗ, ಸಬಲೀಕರಣದ ಮಂತ್ರವನ್ನು ಅನುಷ್ಠಾನಗೊಳಿಸಬೇಕು. ಇದರಿಂದ ಅವರು ಸ್ವಾಭಿಮಾನದ ಬದುಕು ನಡೆಸಲು ಸಾಧ್ಯ ಎಂದು ತಿಳಿಸಿದರು. ಅಂತೆಯೇ ಗ್ರಾಮ ಒನ್ ಯೋಜನೆಯಡಿ 30 ನಾಗರಿಕ ಸೇವೆಗಳನ್ನು ಪಂಚಾಯತ್ ಮಟ್ಟದಲ್ಲಿ ಒದಗಿಸಲಾಗುವುದು. ಅಂತೆಯೇ ಜನಸ್ಪಂದನದಡಿ ದಾಖಲಾದ ದೂರುಗಳ ನಿವಾರಣೆಗೆ, ಸಮಸ್ಯೆ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ದಿನಕ್ಕೆ 10 ತಾಸು ಕೆಲಸ ಮಾಡಿ, 3 ದಿನ ಹಳ್ಳಿಗಳಲ್ಲಿ ಪ್ರವಾಸ ಕೈಗೊಳ್ಳಿ ಎಂದು ಸಲಹೆ ನೀಡಿದರು. ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಗಮನ ಕೇಂದ್ರೀಕರಿಸಿ, ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ನೆರವು ಪಡೆದುಕೊಂಡು ಕಾರ್ಯನಿರ್ವಹಿಸಿ, ಜನರ ಸಮಸ್ಯೆ ಬಗೆಹರಿಸಿ ಎಂದು ತಿಳಿಸಿದರು.

TAGGED:basavarj bommaiCEOCoronavaccineಕೊರೊನಾಬಸವರಾಜ ಬೊಮ್ಮಾಯಿಲಸಿಕೆಸಿಇಓ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
8 minutes ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
16 minutes ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
18 minutes ago
Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
35 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
40 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?