Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಓಮಿಕ್ರಾನ್ ಜೊತೆಗೆ ಡೆಲ್ಟಾ ವೈರಸ್ ಬಗ್ಗೆ ಎಚ್ಚರವಹಿಸಿ: ಸಿಎಂ ಸಭೆಯಲ್ಲಿ ತಜ್ಞರ ಸಲಹೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಓಮಿಕ್ರಾನ್ ಜೊತೆಗೆ ಡೆಲ್ಟಾ ವೈರಸ್ ಬಗ್ಗೆ ಎಚ್ಚರವಹಿಸಿ: ಸಿಎಂ ಸಭೆಯಲ್ಲಿ ತಜ್ಞರ ಸಲಹೆ

Bengaluru City

ಓಮಿಕ್ರಾನ್ ಜೊತೆಗೆ ಡೆಲ್ಟಾ ವೈರಸ್ ಬಗ್ಗೆ ಎಚ್ಚರವಹಿಸಿ: ಸಿಎಂ ಸಭೆಯಲ್ಲಿ ತಜ್ಞರ ಸಲಹೆ

Public TV
Last updated: December 3, 2021 5:20 pm
Public TV
Share
3 Min Read
coronavirus alert
SHARE

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್ ರಾಜ್ಯದಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಂದು ಮಹತ್ವದ ಸಭೆ ನಡೆಸಲಾಯಿತು. ಪರಿಣತರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಒಮಿಕ್ರಾನ್ ಜೊತೆಗೆ ಡೆಲ್ಟಾ ವೈರಸ್ ಸೋಂಕಿನ ಬಗ್ಗೆ ಎಚ್ಚರವಹಿಸಿ ಎಂದು ತಜ್ಞರು ಸಲಹೆ ನೀಡಿದರು.

CORONA 2 1

ಸಭೆಯ ಮುಖ್ಯಾಂಶಗಳು:
ಓಮಿಕ್ರಾನ್ ರೂಪಾಂತರಿ ತಳಿಯ ವೈರಸ್ ನಿಂದ ಎರಡು ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ. ಇಡೀ ವಿಶ್ವದಲ್ಲಿ ಸುಮಾರು 400 ಪ್ರಕರಣಗಳು ಈ ವರೆಗೆ ವರದಿಯಾಗಿದೆ. ಅಧಿಕೃತವಾಗಿ ಈ ಪ್ರಕರಣಗಳ ಕುರಿತು ಯಾವುದೇ ಅಧ್ಯಯನ ವರದಿ ಬಂದಿಲ್ಲ. ಆದರೆ ಅನೌಪಚಾರಿಕವಾಗಿ ದೊರೆತ ಮಾಹಿತಿಯ ಪ್ರಕಾರ ಈ ವೈರಸ್ ಸೋಂಕು ಹೆಚ್ಚು ತೀವ್ರ ಪರಿಣಾಮ ಬೀರಿಲ್ಲ. ಸೋಂಕಿತರಿಗೆ mild symptoms ಕಂಡು ಬಂದಿದೆ. ಸಾವಿನ ಪ್ರಕರಣಗಳು ವರದಿಯಾಗಿಲ್ಲ. ಈಗ ವರದಿಯಾಗಿರುವ ಎರಡೂ ಪ್ರಕರಣಗಳ ಪರೀಕ್ಷಾ ವರದಿಯನ್ನು ವಿಶ್ಲೇಷಿಸಿ ಸಲಹೆ ನೀಡುವಂತೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೆ ಬೊಮ್ಮಾಯಿ ತಿಳಿಸಿದರು. ಇದನ್ನೂ ಓದಿ: ಪೋಷಕರು 2 ಡೋಸ್ ಲಸಿಕೆ ಪಡೆಯದಿದ್ದರೆ ಮಕ್ಕಳು ಶಾಲೆಗೆ ಬರುವಂತಿಲ್ಲ: ಅಶೋಕ್

ಭಾರತ ಸರ್ಕಾರಕ್ಕೆ ಪತ್ರ ಬರೆದು, ಎನ್‍ಸಿಬಿಎಸ್ ಪ್ರಯೋಗಾಲಯದ ವಿವರವಾದ ವರದಿ ಒದಗಿಸುವಂತೆ ಮನವಿ ಮಾಡಲಾಗುವುದು. ಇದರೊಂದಿಗೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಪರೀಕ್ಷೆ ನಡೆಸಿ, ನೆಗೆಟಿವ್ ವರದಿ ಬಂದ ನಂತರವೇ ಹೊರಗೆ ಕಳುಹಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ಪರೀಕ್ಷಾ ಯಂತ್ರಗಳನ್ನು ಹೆಚ್ಚುವರಿಯಾಗಿ ಅಳವಡಿಸಲಾಗುತ್ತಿದೆ. ಏರ್‌ಲೈನ್ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿ, ಪ್ರಯಾಣಿಕರಿಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ. ಓಮಿಕ್ರಾನ್ ಜೊತೆಗೆ ಈಗಾಗಲೇ ಕಂಡು ಬಂದಿರುವ ಡೆಲ್ಟಾ ವೈರಸ್ ಸೋಂಕಿನ ಕುರಿತು ಸಹ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದ್ದು, ಸಿನೆಮಾ, ಮಾಲ್ ಗಳಿಗೆ ಭೇಟಿ ನೀಡುವವರಿಗೆ, ಶಾಲೆಗೆ ಹಾಜರಾಗುವ ಮಕ್ಕಳ ಪೋಷಕರಿಗೆ ಲಸಿಕೆ ಪಡೆಯುವುದು ಕಡ್ಡಾಯ ಮಾಡಲಾಗುವುದು. ಸರ್ಕಾರಿ ನೌಕರರಿಗೆ ಲಸಿಕೆ ಪಡೆಯುವುದು ಕಡ್ಡಾಯಗೊಳಿಸಲಾಗುವುದು ಎಂದು ನಿರ್ಧರಿಸಲಾಗಿದೆ.

ನರ್ಸಿಂಗ್, ಅರೆವೈದ್ಯಕೀಯ ತರಬೇತಿ ಸಂಸ್ಥೆಗಳಲ್ಲಿ ಶೇ.100 ರಷ್ಟು ಪರೀಕ್ಷೆ ನಡೆಸುವುದು. 65 ವರ್ಷ ಮೇಲಿನ ವ್ಯಕ್ತಿಗಳು ಹಾಗೂ ಇತರ ಆರೋಗ್ಯ ಸಮಸ್ಯೆ ಇರುವ ವ್ಯಕ್ತಿಗಳಿಗೆ ಸಹ ಪರೀಕ್ಷೆ ನಡೆಸಲಾಗುವುದು. ಶಾಲೆ, ಕಾಲೇಜುಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ. ಯಾವುದೇ ಸಮ್ಮೇಳನ, ಮದುವೆ ಮತ್ತಿತರ ಕಾರ್ಯಕ್ರಮ, ಸಭೆ ಸಮಾರಂಭಗಳಲ್ಲಿ ಸೇರುವ ಜನರ ಸಂಖ್ಯೆಯನ್ನು 500ಕ್ಕೆ ಸೀಮಿತಗೊಳಿಸಲಾಗುವುದು. ಶಾಲೆಗಳಲ್ಲಿ ಸದ್ಯಕ್ಕೆ ತರಗತಿಗಳನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲಾಗುವುದು. ಅದಾಗ್ಯೂ ಶಾಲೆಗಳಲ್ಲಿ ತೀವ್ರ ನಿಗಾ ವಹಿಸಲು ಸೂಚಿಸಲಾಗಿದೆ. ಪರೀಕ್ಷಾ ಸಾಮರ್ಥ್ಯ ಹಾಗೂ ಪರೀಕ್ಷಾ ಪ್ರಮಾಣದ ಗುರಿ ಹೆಚ್ಚಿಸಲಾಗುವುದು. (increased to 1 lakh) ವಿಶೇಷವಾಗಿ ಆರೋಗ್ಯ ಕಾರ್ಯಕರ್ತರ ಪರೀಕ್ಷೆ ಹೆಚ್ಚಿಸಬೇಕೆಂದು ಸೂಚನೆ ನೀಡಲಾಗಿದೆ. ಇದಕ್ಕೆ ಅಗತ್ಯ ಮಾನವ ಸಂಪನ್ಮೂಲ ಒದಗಿಸಲು ತೀರ್ಮಾನಿಸಲಾಯಿತು. ಇದನ್ನೂ ಓದಿ: ಓಮಿಕ್ರಾನ್ ಆತಂಕ- ಮದುವೆ ಸಮಾರಂಭಗಳಲ್ಲಿ 500 ಮಂದಿಗಷ್ಟೇ ಅವಕಾಶ

CORONA1

ಆರೋಗ್ಯ ಇಲಾಖೆ ಚಿಕಿತ್ಸಾ ಸೌಲಭ್ಯ ಒದಗಿಸಲು ಸಿದ್ಧತೆ ನಡೆಸಿಕೊಳ್ಳಬೇಕು. ಆಕ್ಸಿಜನೇಟೆಡ್ ಬೆಡ್ ಗಳನ್ನು ಸಜ್ಜುಗೊಳಿಸಬೇಕು, ಆಕ್ಸಿಜನ್ ಪ್ಲಾಂಟ್‍ಗಳನ್ನು ಸಜ್ಜುಗೊಳಿಸಬೇಕು ಎಂದು ಸೂಚಿಸಲಾಗಿದೆ. ಆಕ್ಸಿಜನ್ ಲಭ್ಯತೆ, ಸಾಗಾಣಿಕೆ, ಪೂರೈಕೆ ಜಾಲವನ್ನು ಜಾಗೃತಗೊಳಿಸಬೇಕು. ಔಷಧಗಳ ಲಭ್ಯತೆ ಖಾತರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಸಂಪರ್ಕಿತರ ಪತ್ತೆಯ ಪ್ರಮಾಣ ಹೆಚ್ಚಿಸಲು ಸೂಚಿಸಲಾಗಿದೆ. ರಾಜ್ಯಾದ್ಯಂತ ನಿಯಂತ್ರಣ ಕೊಠಡಿ ಪ್ರಾರಂಭಿಸಲು ನಿರ್ಧರಿಸಲಾಯಿತು. ದಕ್ಷಿಣ ಆಫ್ರಿಕಾದಿಂದ ಪ್ರಯಾಣಿಸಿದ ಓಮಿಕ್ರಾನ್ ವೈರಸ್ ಸೋಂಕಿತ ವ್ಯಕ್ತಿಯ ಪರೀಕ್ಷಾ ವರದಿಗಳಲ್ಲಿ ವೈರುಧ್ಯ ಕಂಡು ಬಂದಿರುವ ಕುರಿತು ಕೂಲಂಕಷ ತನಿಖೆ ನಡೆಸುವಂತೆ ಹೈ ಗ್ರೌಂಡ್ ಪೊಲೀಸರಿಗೆ ಸೂಚಿಸಲಾಯಿತು. ಇದನ್ನೂ ಓದಿ: ಸಂಭವನೀಯ ಮೂರನೇ ಅಲೆ ಸಂಬಂಧಿಸಿದ ಚಿಕಿತ್ಸೆಗೆ ಮೆಡಿಕಲ್ ಕಾಲೇಜುಗಳಲ್ಲಿ ಸಿದ್ಧತೆ: ಸುಧಾಕರ್

CORONA

TAGGED:Basavaraj BommaiCoronaCorona VirusCovid 19karnatakaOmicronಓಮಿಕ್ರಾನ್‌ಕೊರೊನಾಕೋವಿಡ್‌-19ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

PM Narendramodi and Emmanuel Macron virtually inaugurated the Tata Airbus Light Helicopter Final Assembly Line facility at Vemagal in Kolar
Karnataka

ಕೋಲಾರದಲ್ಲಿ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಚಾಲನೆ – 20 ವರ್ಷಗಳಲ್ಲಿ 500 ಕಾಪ್ಟರ್ ನಿರ್ಮಾಣ

Public TV
By Public TV
36 minutes ago
DK Shivakumar 3
Bengaluru City

ಮಹದೇವಪ್ಪ ದೊಡ್ಡವರು, ಈಗ ಅವ್ರೂ ನಮ್ಮ ಹೈಕಮಾಂಡ್‌ನ ಭಾಗ: ಡಿಕೆಶಿ ಸೈಲೆಂಟ್‌ ಪಂಚ್‌

Public TV
By Public TV
39 minutes ago
indian railways
Bengaluru City

ಹೋಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Public TV
By Public TV
57 minutes ago
Big Bash League
Cricket

ಭಾರತದಲ್ಲಿ ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ – ಪಾಕ್‌ ಆಟಗಾರರ ಕಥೆ ಏನು?

Public TV
By Public TV
1 hour ago
Tarique Rahman 2
Latest

ಬಾಂಗ್ಲಾ ಪ್ರಧಾನಿಯಾಗಿ ತಾರೀಖ್ ರೆಹಮಾನ್ ಪ್ರಮಾಣವಚನ – ಹಿಂದೂ ಸಂಸದನಿಗೂ ಮಂತ್ರಿಸ್ಥಾನ

Public TV
By Public TV
1 hour ago
T20 World Cup Australia out Zimbabwe reach Super 8 stage after Pallekele washout
Cricket

ಟಿ-20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ – ಸೂಪರ್‌-8ಕ್ಕೆ ಜಿಂಬಾಬ್ವೆ ಜಿಗಿತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?