Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ಬದುಕು ಶಾಶ್ವತವಲ್ಲ, ನಾವು ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ: ಸಿಎಂ ವೈರಾಗ್ಯದ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಈ ಬದುಕು ಶಾಶ್ವತವಲ್ಲ, ನಾವು ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ: ಸಿಎಂ ವೈರಾಗ್ಯದ ಮಾತು

Districts

ಈ ಬದುಕು ಶಾಶ್ವತವಲ್ಲ, ನಾವು ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ: ಸಿಎಂ ವೈರಾಗ್ಯದ ಮಾತು

Public TV
Last updated: December 19, 2021 5:24 pm
Public TV
Share
3 Min Read
c m bommai 1
SHARE

ಹಾವೇರಿ: ಈ ಬದುಕು ಶಾಶ್ವತವಲ್ಲ. ನಾವು ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ ಹೇಳಿ ಸಿಎಂ ಬಸವರಾಜ ಬೊಮ್ಮಾಯಿ ಭಾವುಕರಾದರು.

ಶಿಗ್ಗಾಂವಿ ಪಟ್ಟಣದ ಸಂತೆ ಮೈದಾನದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ ಹಾಗೂ ಸಮುದಾಯ ಭವನದ ಅಡಿಗಲ್ಲು ಸಮಾರಂಭಕ್ಕೆ ಸಿಎಂ ಆಗಮಿಸಿದ್ದರು.

c m bommai 2

ಎರಡು ಪೀಠದ ಸ್ವಾಮೀಜಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ. ಇದು ಸಂತರ ನಾಡು, ಇಲ್ಲಿ ವೈಚಾರಿಕ ಕ್ರಾಂತಿಯನ್ನ ಮಾಡಿದ ಗುರುಗಳಿದ್ದಾರೆ. ಕನಕದಾಸರು, ಸಂತ ಶಿಶುನಾಳ ಶರೀಫರು ಇದ್ದ ತಾಲೂಕು. ಯಾವುದು ಶಾಶ್ವತವಲ್ಲ, ಈ ಬದುಕು ಶಾಶ್ವತವಲ್ಲ. ನಾವು ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ. ಸ್ಥಾನಮಾನಗಳು ಶಾಶ್ವತವಲ್ಲ ಎಂದು ಹೇಳಿ ಭಾವುಕರಾದರು. ಇದನ್ನೂ ಓದಿ: ಸಾವರ್ಕರ್‌ರನ್ನು ಭಾರತದಲ್ಲಿ ಬಿಟ್ಟರೆ ನಾವು ದೇಶ ಬಿಡಬೇಕಾಗುತ್ತೆ ಅನ್ನೋದು ಬ್ರಿಟಿಷರಿಗೆ ಗೊತ್ತಿತ್ತು: ಬೊಮ್ಮಾಯಿ

c m bommai 4

ನಿಮ್ಮೆಲ್ಲರ ಆಶೀರ್ವಾದದಿಂದ ಈ ರಾಜ್ಯದ ಮುಖ್ಯಮಂತ್ರಿಯಾಗಿ ನಿಂತಿದ್ದೇನೆ. ಕ್ಷೇತ್ರದ ಹೊರಗಡೆ ಇದ್ದಾಗ ನಾನು ಸಿಎಂ, ಗೃಹ ಸಚಿವ. ಆದರೆ ಕ್ಷೇತ್ರದ ಒಳಗಡೆ ಬಂದಾಗ ನಾನು ಬಸವರಾಜ ಬೊಮ್ಮಾಯಿ ಆಗಿ ಉಳಿಯುತ್ತೇನೆ. ಬಸವರಾಜ ಬೊಮ್ಮಾಯಿ ಅನ್ನೋದು ಶಾಶ್ವತ. ಅದರ ಹಿಂದಿರೋ ಪದನಾಮಗಳು ಶಾಶ್ವತವಲ್ಲ. ನಾನು ನಿಮ್ಮೂರಿಗೆ ಬಂದಾಗ ರೊಟ್ಟಿ ತಿನ್ನಿಸಿದ್ದೀರಿ, ನವಣಿ ಅಕ್ಕಿ ಅನ್ನ ಮಾಡಿ ಹಾಕಿದ್ದೀರಿ. ನಾನೇನು ಕೆಲಸ ಮಾಡಿದ್ರೂ ಆ ಋಣ ತೀರಿಸಲು ಆಗೋದಿಲ್ಲ ಎಂದು ಭಾವುಕರಾದರು.

c m bommai 5

ಶಾಶ್ವತವಾಗಿ ನಿಮ್ಮ ಪ್ರೀತಿ ವಿಶ್ವಾಸ ಉಳಿಸಿಕೊಂಡು ಹೋಗಬೇಕೆಂಬ ಆಸೆಯಿದೆ. ನಾನು ಭಾವನಾತ್ಮಕವಾಗಿ ಮಾತನಾಡಬಾರ್ದು ಅಂದ್ಕೊಂಡಿದ್ದೆ. ನಿಮ್ಮನ್ನೆಲ್ಲ ನೋಡಿದಾಗ ಭಾವನೆಗಳು ಬರುತ್ತವೆ. ಎಲ್ಲ ಸಮುದಾಯಗಳ ಭಾವನೆಗೆ ಸ್ಪಂದಿಸೋದು ಸೇರಿದಂತೆ ದೊಡ್ಡ ಜವಾಬ್ದಾರಿ ನನ್ನ ಮೇಲಿದೆ. ಸರ್ಕಾರಕ್ಕೆ ಸವಾಲುಗಳಿವೆ, ಅವುಗಳನ್ನ ಎದುರಿಸಿಕೊಂಡು ಹೋಗಬೇಕಿದೆ ಎಂದರು.

ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದು, ಯಾವುದೋ ಒಂದು ರಾಜ್ಯ ಪಡೆದುಕೊಳ್ಳಲು ಅಲ್ಲ. ವಿಸ್ತರಣೆಗಾಗಿ ಹೋರಾಟ ಮಾಡಲಿಲ್ಲ. ತನ್ನ ರಾಜ್ಯದ ಜನರ ರಕ್ಷಣೆ ಮತ್ತು ಸ್ವಾಭಿಮಾನಕ್ಕಾಗಿ ಹೋರಾಟ ಮಾಡಿದಳು. ಎಲ್ಲ ಸಮುದಾಯದವರನ್ನ ಸೇರಿಸಿಕೊಂಡು ಚೆನ್ನಮ್ಮ ರಾಜ್ಯವನ್ನ ಉಳಿಸೋ ಕೆಲಸ ಮಾಡಿದಳು. ಸಂಗೊಳ್ಳಿ ರಾಯಣ್ಣ ಸೆರೆಯಾದಾಗ ಕಿತ್ತೂರು ಚೆನ್ನಮ್ಮ ಕುಸಿದು ಹೋದಳು. ಅಲ್ಲಿಯವರೆಗೂ ಕಿತ್ತೂರು ಚೆನ್ನಮ್ಮ ಬ್ರಿಟಿಷರ ಯಾವುದಕ್ಕೂ ಕುಸಿದಿರಲಿಲ್ಲ. ಸಾಧಕರಿಗೆ ಸಾವು ಅಂತ್ಯವಲ್ಲ ಎಂದು ಸ್ಪೂರ್ತಿ ಮಾತುಗಳನ್ನು ಆಡಿದರು.

c m bommai 3

ಕಿತ್ತೂರು ಚೆನ್ನಮ್ಮ ಅಂದು ಯುದ್ಧ ಮಾಡಿದ್ದನ್ನ ಇಂದು ನಾವು ನೆನಪಿಸಿಕೊಳ್ತಿದ್ದೇವೆ. ಈಗಾಗಲೇ ಅಂಬೇಡ್ಕರ್ ಮೂರ್ತಿ ಕೂಡ ತಯಾರಾಗಿದೆ. ಏಪ್ರಿಲ್ ಒಳಗಾಗಿ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾಡ್ತೇವೆ. ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನೂ ಪ್ರತಿಷ್ಠಾಪನೆ ಮಾಡ್ತೇವೆ. ಪಂಚಮಸಾಲಿ ಸಮಾಜಕ್ಕೆ 2ಎ ಕೊಡೋ ಬಗ್ಗೆ ಈಗಾಗಲೇ ಸಭೆಯಲ್ಲಿ ಹೇಳಿದ್ದೇನೆ. ಹಿಂದುಳಿದ ವರ್ಗದ ಆಯೋಗಕ್ಕೆ ಸಹಕಾರ ಕೊಡಿ. ಈ ನಾಡಿದ ಬಹುತೇಕ ಜನರಿಗಾಗಿ ಒಳ್ಳೆಯ ದಿನಗಳು, ನ್ಯಾಯ ಕೊಡಲು ನಿರ್ಣಯ ತೆಗೆದುಕೊಳ್ಳುತ್ತೇವೆ. ನನಗೆ ಶಿಗ್ಗಾಂವಿ-ಸವಣೂರು ಏತ ನೀರಾವರಿ ಯೋಜನೆಯ ಕೆರೆ ತುಂಬಿಸೋ ಕೆಲಸ ಮಾಡಬೇಕು ಅಂತಾ ಇತ್ತು. ಅದು ಪೂರ್ಣವಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಅಕ್ಕ-ಪಕ್ಕದಲ್ಲಿ ಓಮಿಕ್ರಾನ್ ಹಾವಳಿ ಇದ್ದರೂ ಕೊಡಗಿನಲ್ಲಿ ಪ್ರವಾಸಿಗರದ್ದೇ ದರ್ಬಾರ್

c m bommai

ನೂರಕ್ಕಿಂತ ಹೆಚ್ಚು ಕೆರೆಗಳು ತುಂಬಿವೆ. ನಿಮ್ಮ ಬೆಂಬಲ, ಆರ್ಶೀವಾದಕ್ಕೆ ಶ್ರೇಯಸ್ಸು ತರೋ ಕೆಲಸ ಮಾಡ್ತೇನೆ. ಎಲ್ಲರೂ ಬಹಳ ಚೆನ್ನಾಗಿ ಮಾತನಾಡಿದ್ದೀರಿ. ಇವತ್ತು ನನಗೆ ಬಹಳ ಸಂತೋಷ ಆಗಿದೆ. ಸಮುದಾಯದ ಅಭಿವೃದ್ಧಿ ಬಗ್ಗೆ ಇಬ್ಬರು ಪರಮಪೂಜ್ಯರು ಹೇಳಿದ ವಿಚಾರಗಳನ್ನ ಶಿರಸಾ ವಹಿಸಿ ಮಾಡ್ತೇನೆ. ಇವತ್ತಿನಿಂದ ಕಿತ್ತೂರು ಚೆನ್ನಮ್ಮ ನಾವು ಮಾಡೋದನ್ನ ನೋಡ್ತಿದ್ದಾಳೆ ಅನ್ನೋ ಅರಿವಿನಿಂದ ಕೆಲಸ ಮಾಡೋಣ. ಹರಜಾತ್ರೆ ಮತ್ತು ಕೂಡಲಸಂಗಮ ಸಂಕ್ರಮಣ ಕಾರ್ಯಕ್ರಮ ಎರಡಕ್ಕೂ ಕರೆದಿದ್ದಾರೆ. ಸಮಯ ನಿಗದಿ ಮಾಡಿಕೊಂಡು ಎರಡೂ ಕಡೆ ಬರೋ ಕೆಲಸವನ್ನ ಮಾಡ್ತೇನೆ. ಈ ಕ್ಷೇತ್ರದ ಅಭಿವೃದ್ಧಿಯಲ್ಲಿ ಯಾವುದೇ ಸಮುದಾಯ ಕಡೆಗಣಿಸದೆ ಎಲ್ಲರಿಗೂ ನ್ಯಾಯ ಕೊಡೋ ಕೆಲಸವನ್ನ ಮಾಡ್ತೇವೆ ಎಂದು ಭರವಸೆಯ ಮಾತುಗಳನ್ನು ಆಡಿದರು.

TAGGED:CM Basavaraja BommaihaveriKittur ChennammaShiggaonviಕಿತ್ತೂರು ಚೆನ್ನಮ್ಮಶಿಗ್ಗಾವಿಸಿಎಂ ಬಸವರಾಜ ಬೊಮ್ಮಾಯಿಹಾವೇರಿ
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
23 minutes ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
44 minutes ago
Vinobanagar Police Station
Crime

ಗಾಂಜಾ ಸೇವಿಸಿ ವಿಚಿತ್ರ ವರ್ತನೆ – ವಿದ್ಯಾರ್ಥಿ ವಿರುದ್ಧ ಸುಮೊಟೊ ಕೇಸ್ ದಾಖಲು

Public TV
By Public TV
1 hour ago
hd kumaraswamy mb patil 1
Automobile

2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

Public TV
By Public TV
2 hours ago
Mantralaya Ragavendraswamy Mutt Bichchali Land Dispute
Districts

ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ

Public TV
By Public TV
2 hours ago
ARVIND KEJRIWAL
Court

ನೀವು ಆರ್‌ಎಸ್‌ಎಸ್‌ ಸಂಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೀರಿ: ದೆಹಲಿ ಹೈಕೋರ್ಟ್‌ನಲ್ಲಿ ಕೇಜ್ರಿವಾಲ್‌ ವಾದ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?