Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರೈತರ ಬದುಕಿನ ಅನಿಶ್ಚಿತತೆ ಹೋಗಲಾಡಿಸಲು ವೈಜ್ಞಾನಿಕ ಔಟ್‌ಲುಕ್ ವರದಿ ಅಗತ್ಯ – ಸಿಎಂ

Public TV
Last updated: January 20, 2023 7:18 pm
Public TV
Share
5 Min Read
basavaraj bommai 10
SHARE

ಬೆಂಗಳೂರು: ರೈತರ ಬದುಕಿನ ಅನಿಶ್ಚಿತತೆಯನ್ನು ಬದಲಾಯಿಸಲು ಔಟ್‌ಲುಕ್ ವರದಿಯನ್ನು ವೈಜ್ಞಾನಿಕವಾಗಿ ಸಿದ್ಧಪಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯಪಟ್ಟರು.

ಶುಕ್ರವಾರ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ- 2023 (International Millets & Organic Mela) ಉದ್ಘಾಟಿಸಿ ಮಾತನಾಡಿದ ಅವರು, ಬೇರೆ ದೇಶಗಳಲ್ಲಿ ಮುಂದಿನ ಋತುವಿಗೆ ಎಷ್ಟು ಮಳೆಯಾಗಬಹುದು ಎಂದು ಕಳೆದ 10 ವರ್ಷಗಳ ಮಳೆ ಮಾದರಿಯನ್ನು ಆಧರಿಸಿ, ಬಿತ್ತನೆ, ಉತ್ಪಾದನೆ, ಅಂತರರಾಷ್ಟ್ರೀಯ ಮಾರುಕಟ್ಟೆ, ಸ್ಥಳೀಯ ಮಾರುಕಟ್ಟೆಗಳನ್ನು ಪರಿಶೀಲಿಸಿ, ಒಂದು ಬೆಲೆಯನ್ನು ನಿಗದಿ ಮಾಡುವ ಔಟ್‍ಲುಕ್ ವರದಿ ತಯಾರಿಸುತ್ತಾರೆ. ಈ ವರದಿಯನ್ನು ಸಿದ್ಧಪಡಿಸಬೇಕು. ರೈತ ಬೆಳೆಯುವ ಬೆಳೆಗೆ ಎಷ್ಟು ಖರ್ಚು ತಗುಲಿ, ಎಷ್ಟು ಧಾರಣೆ ದೊರೆಯುತ್ತದೆ ಎಂದು ತಿಳಿದರೆ, ಈ ಮೊತ್ತದೊಳಗೆಯೇ ಖರ್ಚು ಮಾಡುತ್ತಾನೆ. ಬೆಳೆ ಉಳಿಸುವ ಸಲುವಾಗಿ ಖರ್ಚು ಮಾಡುವ ಈ ವಿಧಾನದ ಬಗ್ಗೆ ಚರ್ಚೆ ಮಾಡಿ ನಿರ್ಧಾರಕ್ಕೆ ಬರಲಾಗುವುದು. ಈ ವರದಿಯನ್ನು ಇಲಾಖೆ ಹಾಗೂ ಕೃಷಿ ದರ ಆಯೋಗದ ಸಹಯೋಗದೊಂದಿಗೆ ಸಿದ್ಧಪಡಿಸಬೇಕು ಎಂದರು. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅಂತ ಬಿಜೆಪಿ ನಮ್ಮ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ: ಡಿಕೆಶಿ

 Organic Mela

ಗ್ರಾಮೀಣ ಸಾಲ ಪದ್ದತಿ ಬದಲಾಗಬೇಕು
ಗ್ರಾಮೀಣ ಆರ್ಥಿಕತೆ ಸುಧಾರಿಸಲು ಗ್ರಾಮೀಣ ಸಾಲ ಪದ್ದತಿ ಬದಲಾಗಬೇಕು. ಭೂಮಿಯಿಂದ ಸಾಲದ ಅನುಪಾತವನ್ನು ಯಾರೂ ನಿರ್ವಹಣೆ ಮಾಡಿಲ್ಲ. 20 ಸಾವಿರ ನೀಡಬೇಕಾದರೆ 7 ರಿಂದ 8 ಸಾವಿರ ನೀಡಲಾಗುತ್ತದೆ. ನಿಖರವಾಗಿ ಸಾಲ ನೀಡಿದರೆ ರೈತ ಮಾರವಾಡಿಗಳ ಎದುರು ಕೈ ಚಾಚುವುದನ್ನು ನಿಲ್ಲಿಸುತ್ತಾನೆ. ಗ್ರಾಮೀಣ ಸಾಲ ಪದ್ದತಿ ಬದಲಾಗಬೇಕು ಎಂದು ಕೇಂದ್ರ ಹಣಕಾಸು ಸಚಿವರು ಹಾಗೂ ಕೃಷಿ ಸಚಿವರಿಗೆ ಒತ್ತಾಯವನ್ನು ಮಾಡಿದ್ದು, ರಚನೆ ಬದಲಾಯಿಸಿ, ನಬಾರ್ಡ್ ಈ ಸಾಲ ಪದ್ದತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ. ಈ ಕೆಲಸಗಳಾದರೆ ರೈತರ ಬದುಕಿಗೆ ನಿಶ್ಚಿತತೆಯನ್ನು ತರಬಹುದು. ರಾಜ್ಯ ಸರ್ಕಾರ ಈ ವರ್ಷ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲದ ನೆರವು ನೀಡಿದ್ದು, 3 ಲಕ್ಷ ಹೊಸ ರೈತರಿಗೆ ಸಾಲ ನೀಡಿರುವುದು ದಾಖಲೆ. ರೈತಶಕ್ತಿ ಯೋಜನೆ 10 ದಿನಗಳ ಕಾಲದಲ್ಲಿ ಪ್ರಾರಂಭಿಸಲಾಗಿದೆ. ಯಶಸ್ವಿನಿ ಯೋಜನೆಯನ್ನು ಮರುಪ್ರಾರಂಭಿಸಲಾಗಿದೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ. 10 ಹೆಚ್‌ಪಿ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈ ಯೋಜನೆಗೆ ಶುಲ್ಕ ಪಡೆಯಬೇಕೆಂದು ಹಿಂದಿನ ಸರ್ಕಾರಗಳು ಆಜ್ಞೆ ಮಾಡಿದ್ದವು. ಒಂದು ಪಂಪ್‌ಗೆ 10 ಸಾವಿರ ರೂ.ಗಳನ್ನು ಪಡೆಯಬೇಕೆಂಬ ಪ್ರಸ್ತಾವನೆ ಹಿಂದಿನ ಸರ್ಕಾರದಲ್ಲಿತ್ತು. ಆದರೆ ಈ ಪ್ರಸ್ತಾವನೆಯನ್ನು ಅನುಷ್ಠಾನ ಮಾಡುವ ಧೈರ್ಯ ಮಾಡಲಿಲ್ಲ. ನಮ್ಮ ರಾಜ್ಯ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡುತ್ತಿರುವುದರಿಂದ ಹಾಗೂ ಸೋಲಾರ್ ಕೃಷಿ ಪಂಪ್‍ಸೆಟ್‌ಗಳಿಗೆ ನರೇಂದ್ರ ಮೋದಿಯವರ ಸರ್ಕಾರ ಯೋಜನೆಗಳನ್ನು ನೀಡಿ ದೊಡ್ಡ ಪ್ರಾಮಾಣದಲ್ಲಿ ಪ್ರೋತ್ಸಾಹಿಸಲಾಗುತ್ತಿದೆ. ರೈತ ವಿದ್ಯಾ ನಿಧಿಯಡಿ 11 ಲಕ್ಷ ರೈತರ ಮಕ್ಕಳು ಪ್ರಯೋಜನ ಪಡೆದಿದ್ದಾರೆ ಎಂದು ತಿಳಿಸಿದರು.

ಸಿರಿಧಾನ್ಯದ ಬೆಳೆ ಬಗ್ಗೆ ರೈತರಲ್ಲಿ ಜಾಗೃತಿ
ರಾಜ್ಯದಲ್ಲಿ ನವಣಿ, ಸಾವೆ, ರಾಗಿ ಜೋಳ ಸೇರಿದಂತೆ ಎಲ್ಲ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದೆ. ಆಗ ಕೃಷಿ ಕೇವಲ ಆಹಾರ ಉತ್ಪಾದನೆಗೆ ಮಾತ್ರ ಸೀಮಿತವಾಗಿತ್ತು. ಈಗ ವಾಣಿಜ್ಯ ಉದ್ದೇಶಕ್ಕೆ ಕೃಷಿ ಮಾಡಲಾಗುತ್ತಿದೆ. ಆಹಾರ ಧಾನ್ಯ ಉತ್ಪಾದನೆ ಹಾಗೂ ವಾಣಿಜ್ಯ ಬೆಳೆಗಳ ನಡುವೆ ಸಮತೋಲನವನ್ನು ಕಾಯ್ದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಆಹಾರ ಸುರಕ್ಷತೆಗೆ ತೊಂದರೆಯುಂಟಾಗಬಹುದು. ಬರುವ ದಿನಮಾನದಲ್ಲಿ ಆಹಾರ ಕೊರತೆ ಉಂಟಾಗಬಹುದೆಂದು ವಿಶ್ವ ಆಹಾರ ತಜ್ಞರು ತಿಳಿಸಿದ್ದಾರೆ. ಆಹಾರದ ಪ್ರಮಾಣ, ಧಾನ್ಯಗಳು, ನಾರಿನಾಂಶ, ಪೌಷ್ಟಿಕಾಂಶ ಇರಬೇಕು ಎಂಬ ಬಗ್ಗೆ ಅಧ್ಯಯನ ಮಾಡಿ ಈ ವಿಷಯಗಳಲ್ಲಿ ರೈತರಲ್ಲಿ ಜಾಗೃತಿಯನ್ನು ಮೂಡಿಸಬೇಕು ಎಂದರು. ಇದನ್ನೂ ಓದಿ: ಕಾಂಗ್ರೆಸ್-ಜೆಡಿಎಸ್ ಸಭೆಗಳಲ್ಲಿ ಚಪ್ಪಲಿ ಹಿಡಿದು ಕಿತ್ತಾಟ – ಬಿಜೆಪಿ ಸಭೆಯಲ್ಲಿ ಮಾತ್ರ ಶಿಸ್ತು: ನಳಿನ್ ಕುಮಾರ್ ಕಟೀಲ್

ಇಂದು ಬೆಂಗಳೂರಿನಲ್ಲಿ ಆಯೋಜನೆಗೊಂಡಿದ್ದ ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯುವ ಮೇಳ- 2023ನ್ನು ಉದ್ಘಾಟಿಸಿ,ಮಾತನಾಡಿದೆನು.ಇಂದಿನ ಒತ್ತಡದ ಜೀವನಶೈಲಿಯನ್ನು ನಿಭಾಯಿಸಲು, ಸಿರಿಧಾನ್ಯ ಆಹಾರ ಪದಾರ್ಥಗಳು ಮಾನವನಿಗೆ ಸಂಜೀವಿನಿಯಂತೆ ದೊರೆತಿವೆ. pic.twitter.com/08LEsVDYwv

— Basavaraj S Bommai (@BSBommai) January 20, 2023

ಪಡಿತರದಲ್ಲಿ ಜೋಳ ಮತ್ತು ರಾಗಿ
ವಾಣಿಜ್ಯ ಬೆಳೆಯಾದ ಅಡಿಕೆ ಕಳೆದ ಎರಡು ವರ್ಷದಲ್ಲಿ ಇಳುವರಿ ಹೆಚ್ಚಾಗಿದೆ. ಸಿರಿಧಾನ್ಯಗಳ ಉತ್ತಮ ನೀರಾವರಿ ಹೆಚ್ಚಾಗಿದ್ದರಿಂದ ದೊಡ್ಡ ಪ್ರಮಾಣದಲ್ಲಿ ಭತ್ತ ಬೆಳೆಯಲಾಗುತ್ತಿದೆ. ರಾಜ್ಯದಲ್ಲಿ ಜೋಳ ಮತ್ತು ರಾಗಿಯನ್ನು ಜನ ಹೆಚ್ಚಾಗಿ ಬಳಸುತ್ತಾರೆ. ಕಳೆದ ಮೂರು ವರ್ಷದಿಂದ ಜೋಳ ಮತ್ತು ರಾಗಿಯನ್ನು ನಮ್ಮ ಪಡಿತರ ವ್ಯವಸ್ಥೆಯಲ್ಲಿ ಕೊಡಲಾಗುತ್ತಿದೆ. ಇದರಿಂದ ರೈತರು ಬೆಳೆದ ಬೆಳೆಗೆ ಹೆಚ್ಚಿನ ಬೆಲೆ ದೊರೆಯುತ್ತದೆ. ರಾಗಿಗೆ ದೊಡ್ಡ ಪ್ರಮಾಣದಲ್ಲಿ ಬೇಡಿಕೆ ಇದ್ದು, ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡಿ ರಾಗಿ ಖರೀದಿಸುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಿದೆ ಎಂದು ಹೇಳಿದರು.

ಸಿರಿಧಾನ್ಯ ಕೃಷಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಪ್ರೋತ್ಸಾಹ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿರಿಧಾನ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ದೊರೆಯುತ್ತಿದೆ. ಈ ವರ್ಷ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಣೆ ಮಾಡಿದ್ದರಿಂದ ರಾಜ್ಯದಲ್ಲಿ ರೈತರಿಗೆ ಹೆಚ್ಚಿನ ಅನುಕೂಲವಾಗಿದೆ. ಕೇಂದ್ರ ಸರ್ಕಾರ ಸಿರಿಧಾನ್ಯ ಬೆಳೆಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ಅನುದಾನವನ್ನು ರಾಜ್ಯಕ್ಕೆ ನೀಡಿದೆ. ಜನರಿಗೆ ಆರೋಗ್ಯ ಹಾಗೂ ರೈತರಿಗೆ ಲಾಭವನ್ನು ತರುವಂತಹ ಸಿರಿಧಾನ್ಯ ಕೃಷಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡಲು ಸಿರಿಧಾನ್ಯ ಮೇಳವನ್ನು ಆಯೋಜಿಸಲಾಗಿದೆ ಎಂದರು.

Organic Mela1

ಕೃಷಿ ವಿವಿಗಳು ಕ್ಯಾಂಪಸ್‌ನ್ನು ಬಿಟ್ಟು ಹೊರಬರಬೇಕು
ಕೃಷಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಆಗಲಿದೆ. ಹವಾಮಾನದ ಬದಲಾವಣೆಗೆ ಅನುಗುಣವಾಗಿ ಕೃಷಿ ಕ್ಷೇತ್ರವನ್ನು ಸಜ್ಜುಗೊಳಿಸಲು ಕೃಷಿ ವಿಶ್ವವಿದ್ಯಾಲಯಗಳು ಸನ್ನದ್ದವಾಗಬೇಕು. ಕೃಷಿ ಕ್ಷೇತ್ರದಲ್ಲಿನ ಇಂದಿನ ಸವಾಲುಗಳ ಬಗ್ಗೆ ಸಂಶೋಧನೆಗಳನ್ನು ಮಾಡಬೇಕು. ಹವಾಮಾನ ಬದಲಾವಣೆ, ಮಣ್ಣಿನ ಸವಕಳಿ, ಹೆಚ್ಚಿನ ನೀರು ಬಳಕೆ, ಜವುಳು, ಭೂಮಿಯ ಮೇಲೆ ರಾಸಾಯನಿಕದಿಂದ ಆಗುತ್ತಿರುವ ಸಮಸ್ಯೆ, ಕಳಪೆ ಹಾಗೂ ನಕಲಿ ಬೀಜ ಮಾರಾಟ ತಡೆಯುವ ಬಗ್ಗೆ ವಿಶ್ವವಿದ್ಯಾಲಯಗಳು ಕ್ರಮ ಕೈಗೊಳ್ಳಬೇಕು. ಕೃಷಿ ವಿವಿಗಳು ಕ್ಯಾಂಪಸ್‌ನ್ನು ಬಿಟ್ಟು ಹೊರ ಬನ್ನಿ. ರೈತನ ಹೊಲವನ್ನೇ ಕ್ಯಾಂಪಸ್‌ನ್ನಾಗಿ‌ ಮಾಡಿಕೊಳ್ಳಿ. ರೈತನ ಹೊಲದಲ್ಲಿ ಎಲ್ಲವೂ ಅನಿಶ್ಚಿತತೆಯಿಂದ ಕೂಡಿದೆ. ರೈತರ ಈ ಅನಿಶ್ಚಿತತೆಯನ್ನು ನಿವಾರಿಸಲು ಉತ್ತಮ ಬೀಜ, ಕೃಷಿ ವಿಧಾನ, ಒಳ್ಳೆಯ ಔಷಧಿ ಸಿಂಪಡಣೆ ಅಗತ್ಯವಿದೆ ಸಲಹೆ ನೀಡಿದರು. ಇದನ್ನೂ ಓದಿ: ತನಿಖೆ ಮಾಡಿದ್ರೆ ಕಾಂಗ್ರೆಸ್ಸಿನವರಿಗೋಸ್ಕರ ಹೊಸ ಜೈಲು ತೆರೆಯಬೇಕಾಗುತ್ತೆ: ಆರಗ ತಿರುಗೇಟು

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಛಲವಾದಿ ನಾರಾಯಣಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:agricultureBasavaraj Bommaibengalurufarmersಕೃಷಿಬಸವರಾಜ ಬೊಮ್ಮಾಯಿಬೆಂಗಳೂರುರೈತರು
Share This Article
Facebook Whatsapp Whatsapp Telegram

Cinema Updates

Chitradurga Renukaswamy Father
ಮಗನ ಸಾವಿನ ನೋವು ನಿರಂತರವಾಗಿ ಕಾಡ್ತಿದೆ – ಮೃತ ರೇಣುಕಾಸ್ವಾಮಿ ತಂದೆ
5 hours ago
virat kohli sumalatha ambareesh
ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ: ಸುಮಲತಾ ಬೇಸರ
7 hours ago
madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
1 day ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
2 days ago

You Might Also Like

BANDIPUR 2
Chamarajanagar

ಬಂಡೀಪುರದಲ್ಲಿ ಸಿದ್ಧವಾಯ್ತು ಟೈಗರ್ ರಿಸರ್ಚ್ ಮಾನಿಟರಿಂಗ್ ಸೆಲ್

Public TV
By Public TV
1 hour ago
hassan daughter killed by her mother
Crime

ಹಾಸನ| ನೀರಿನ ತೊಟ್ಟಿಯಲ್ಲಿ ಮುಳುಗಿಸಿ 6 ವರ್ಷದ ಮಗಳನ್ನೇ ಕೊಂದ ತಾಯಿ

Public TV
By Public TV
2 hours ago
suresh kumar head constable
Bengaluru City

ಕಮಿಷನರ್‌, ಪೊಲೀಸರ ಸಸ್ಪೆಂಡ್‌ ಖಂಡಿಸಿ ಪ್ರತಿಭಟನೆ – ಹೆಡ್‌ಕಾನ್‌ಸ್ಟೇಬಲ್‌ ಜೊತೆ ಫೋನಲ್ಲಿ ಮಾತನಾಡಿ ಸುರೇಶ್‌ ಕುಮಾರ್‌ ಬೆಂಬಲ

Public TV
By Public TV
2 hours ago
Mobile 1
Crime

ನಕಲಿ ಆನ್‌ಲೈನ್‌ ಕ್ಲೀನಿಂಗ್‌ ಸೇವೆಗೆ 9 ರೂ. ಪಾವತಿಸಿ 99,000 ರೂ. ಕಳೆದುಕೊಂಡ ಮಹಿಳೆ

Public TV
By Public TV
2 hours ago
MC Sudhakar
Chikkaballapur

ಚಿನ್ನಸ್ವಾಮಿ ಕಾಲ್ತುಳಿತ | ಮೃತ ಪ್ರಜ್ವಲ್, ಶ್ರವಣ್ ನಿವಾಸಕ್ಕೆ ಸಚಿವ ಎಂ.ಸಿ ಸುಧಾಕರ್ ಭೇಟಿ

Public TV
By Public TV
3 hours ago
heavy Rain in haasan
Districts

ಹಾಸನ | ಬಿರುಗಾಳಿ ಸಹಿತ ಧಾರಾಕಾರ ಮಳೆ – ರೈತರ ಮೊಗದಲ್ಲಿ ಮಂದಹಾಸ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?