Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾರಿಗೆ ಅಂಟು ರೋಗ ಇದೆ ಎಂದು ಜನ ತೀರ್ಮಾನ ಮಾಡ್ತಾರೆ: ಸಿದ್ದರಾಮಯ್ಯಗೆ ಬೊಮ್ಮಾಯಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಯಾರಿಗೆ ಅಂಟು ರೋಗ ಇದೆ ಎಂದು ಜನ ತೀರ್ಮಾನ ಮಾಡ್ತಾರೆ: ಸಿದ್ದರಾಮಯ್ಯಗೆ ಬೊಮ್ಮಾಯಿ ತಿರುಗೇಟು

Districts

ಯಾರಿಗೆ ಅಂಟು ರೋಗ ಇದೆ ಎಂದು ಜನ ತೀರ್ಮಾನ ಮಾಡ್ತಾರೆ: ಸಿದ್ದರಾಮಯ್ಯಗೆ ಬೊಮ್ಮಾಯಿ ತಿರುಗೇಟು

Public TV
Last updated: November 23, 2022 10:13 pm
Public TV
Share
3 Min Read
Basavaraj Bommai 1 1
SHARE

ಹಾಸನ: ಸಿದ್ದರಾಮಯ್ಯ ಅವರ ಸರ್ಕಾರವಿದ್ದಾಗ ಆಗಿರುವ ಹಗರಣಗಳ ದಾಖಲೆ ಬಿಡುಗಡೆ ಮಾಡುತ್ತಿದ್ದು, ಸತ್ಯ ಏನೆಂಬುದು ತಿಳಿಯಲಿದೆ. ಆಗ ಯಾರಿಗೆ ಅಂಟು ರೋಗ ಇದೆ ಎಂದು ಜನ ತೀರ್ಮಾನ ಮಾಡ್ತಾರೆ ಎಂದು ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿರುಗೇಟು ನೀಡಿದರು.

ಹಾಸನ (Hassan) ಜಿಲ್ಲೆಯ ಬೇಲೂರು ತಾಲೂಕಿನ ಮಾಯಗೊಂಡನಹಳ್ಳಿ ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸತ್ಯವನ್ನು ಎದುರಿಸುವ ಕೆಲಸವನ್ನು ಮಾಡಲಿ. ಅದು ಬಿಟ್ಟು ನಮ್ಮ ಕಾಲದಲ್ಲಿ ಈ ರೀತಿ ಆಗಿಲ್ಲ, ನಮ್ಮ ಕಾಲದಲ್ಲಿ ಆಗಿದ್ರೆ, ಈ ರೀತಿ ಮಾತನಾಡುವುದು ಜವಾಬ್ದಾರಿ ಕೆಲಸ ಅಲ್ಲ. ನಾವೇನು ಹೇಳಿದ್ದೇವು ಅದಕ್ಕೆ ದಾಖಲೆಯನ್ನು ಕೊಡುತ್ತಿದ್ದೇವೆ. ಅವರು ಅದನ್ನು ಎದುರಿಸಲಿ ಅಷ್ಟೇ ಎಂದು ಸವಾಲು ಹಾಕಿದರು.

SIDDARAMAIAH 6

ಮಂಗಳೂರಿನಲ್ಲಿ (Mangaluru) ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೆಲವು ಸ್ಲೀಪರ್ ಸೆಲ್‍ಗಳು ಕರ್ನಾಟಕದಲ್ಲಿ ಹಿಂದೆ ಇದ್ದ ಸಂದರ್ಭದಲ್ಲಿ ನಾನು ಹೋಂ ಮಿನಿಸ್ಟರ್ ಆಗಿದ್ದೆ. ಸುಮಾರು 18 ಜನ ಸ್ಲೀಪರ್ ಸೆಲ್‍ಗಳನ್ನು ತಿಹಾರ್ ಜೈಲಿಗೆ ಕಳುಹಿಸಿದ್ದೇನೆ. ಪಕ್ಕದ ರಾಜ್ಯ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಹಲವಾರು ಜನ ಟ್ರೈನಿಂಗ್ ತಗಳೋದು, ಬರೋದು ನಿರಂತರವಾಗಿ ನಡೆಯುತ್ತಿರುವ ಒಂದು ಪ್ರಕ್ರಿಯೆ ಆಗಿದೆ. ವಿಶೇಷವಾಗಿ ನರೇಂದ್ರ ಮೋದಿ ಅವರು ಬಂದ ಮೇಲೆ ಎಲ್ಲೂ ಕೂಡ ಅವಕಾಶ ಕೊಟ್ಟಿಲ್ಲ. ಹಿಂದೆ ನಾವೆಲ್ಲ ನೋಡಿದ್ದೇವೆ, ಬೆಂಗಳೂರು, ಮುಂಬೈನಲ್ಲಿ ಬ್ಲಾಸ್ಟ್ ಆಗಿತ್ತು ಅನ್ನೋದನ್ನ, ಹೀಗೆ ಆಗಿರುತ್ತಿರುವುದನ್ನು ನಿಲ್ಲಿಸಿದ್ದೇವೆ. ಆದರೂ ಕೂಡ ಕೆಲವು ಕಡೆ ಇದೆ ಎಂದು ಹೇಳಿದರು.

Mangaluru Blast Case The Shariq cooker bomb capable of blowing up the bus FSL Investigation report 1

ವಿಶೇಷವಾಗಿ ಕರಾವಳಿ ಪ್ರದೇಶದಲ್ಲಿ ಅವರು ಆ್ಯಕ್ಟಿವ್ ಆಗಿರುವುದನ್ನು ಗಮನಿಸಿ ಶಿರಸಿ, ಭಟ್ಕಳ, ಮಂಗಳೂರು ಭಾಗದಿಂದ ನಾವು ಸುಮಾರು ಜನರನ್ನು ಹಿಡಿದು ಸ್ಲೀಪರ್ ಸೆಲ್‍ಗಳನ್ನು ತಿಹಾರ್ ಜೈಲಿಗೆ ಕಳುಹಿಸಿದ್ದೇವೆ. ನಾನು ಹಿಂದೆ ಗೃಹಸಚಿವ ಆಗಿದ್ದಾಗ ಎಲ್ಲಾ ದಕ್ಷಿಣ ಭಾರತದ ಡಿಜಿಗಳಿಗೆ ಕರೆ ಕೊಟ್ಟಿದ್ದೆ. ಬಹಳಷ್ಟು ಜನ ಕೃತ್ಯವನ್ನು ಮಾಡಿ ಬಾರ್ಡರ್ ಕ್ರಾಸ್ ಮಾಡಿ ಅಲ್ಲಿಗೆ ಹೋಗ್ತಿದ್ದಾರೆ, ಅಲ್ಲಿಯವರು ಇಲ್ಲಿ ಬರ್ತಿದ್ದಾರೆ. ಬಾರ್ಡರ್‌ಗಳು ಬಹಳ ಪ್ರೆಜರ್ ಇರೋದ್ರಿಂದ ಕೇರಳದಲ್ಲಿ ಮಾಡಿ ಇಲ್ಲಿ ಬರ್ತಾರೆ, ಇಲ್ಲಿ ಮಾಡಿ ಅಲ್ಲಿಗೆ ಹೋಗ್ತಾರೆ ಎಂದರು.

ಈಗ ದಕ್ಷಿಣದ ಭಾರತದ ಎಲ್ಲಾ ರಾಜ್ಯಗಳು ಒಗ್ಗಟ್ಟಾಗಿ ಒಂದು ಗುಪ್ತಚರ ಮಾಹಿತಿ ಶೇರ್ ಮಾಡಬೇಕು. ಅಲ್ಲಿರುವಂತಹ ಆ್ಯಂಟಿ ಟೆರರಿಸ್ಟ್ ಆ್ಯಕ್ಟಿವಿಟಿಸ್‍ಗಳನ್ನು ಶೇರ್ ಮಾಡಿ, ಪ್ರಯತ್ನ ಪಟ್ಟರೆ ಬಹಳಷ್ಟು ನಿಯಂತ್ರಣ ಮಾಡಲು ಸಾಧ್ಯ. ಇದರ ಬಗ್ಗೆ ಮುಂದಿನ ದಿನಗಳಲ್ಲಿ ಬೇರೆ ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆಯಲಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಹಿಂದೂಗಳನ್ನ ನಾಶ ಮಾಡುವ ಪ್ರಯತ್ನ ನಡೆಯುತ್ತಿದೆ: ಕಲ್ಲಡ್ಕ ಪ್ರಭಾಕರ್

ಮತ್ತೊಮ್ಮೆ ಗುಪ್ತಚರ ಇಲಾಖೆ ವೈಫಲ್ಯ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ಗುಪ್ತಚರ ವೈಫಲ್ಯ ಎಂಬ ಪ್ರಶ್ನೆ ಇಲ್ಲ ಇಲ್ಲಿ. ಎಲ್ಲಾ ಕಾಲದಲ್ಲೂ ಈ ಘಟನೆಗಳು ನಡೆದಿವೆ. ಅವರು ಇಲ್ಲಿನ ಸ್ಥಳೀಯರಿಗಿಂತ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೋಡಿವೇಟೆಡ್ ಆಗಿರುವಂತಹವರು. ಇಲ್ಲಿಗೆ ಬಹಳಷ್ಟು ಬಾಂಗ್ಲಾದೇಶಿಗರು ಬಂದಿದ್ದಾರೆ. ಅವರನ್ನು ನಾವು ಗುರುತಿಸಿ ಸಾಕಷ್ಟು ಜನರನ್ನು ಬಾರ್ಡರ್‍ಗೆ ಬಿಟ್ಟು ಬಂದಿದ್ದೀವೆ. ಆದರೂ ಈ ರೀತಿ ಹತ್ತು ಹಲವಾರು ಕಾರಣಗಳಿವೆ. ಅದು ಸಿದ್ದರಾಮಯ್ಯ ಅವರಿಗೆ ಗೊತ್ತಿದೆ, ರಾಜಕಾರಣಕ್ಕಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.

ವೋಟರ್ ಐಡಿ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿರುವ ಕುರಿತು ಮಾತನಾಡಿದ ಅವರು, ಕಾಂಗ್ರೆಸ್‍ನವರು ದೂರು ಕೊಡಲಿ, ಚುನಾವಣಾ ಆಯೋಗ ನೋಡಿಕೊಳ್ಳುತ್ತದೆ ಎಂದರು. ಇದನ್ನೂ ಓದಿ: ಅಭಿವೃದ್ಧಿ ಕೆಲಸ ಮಾಡಿದ್ದರೆ ಟಿಫಿನ್ ಬಾಕ್ಸ್ ಹಂಚುವ ಅವಶ್ಯಕತೆ ಇರುತ್ತಿರಲಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಂಜಯ್ ಪಾಟೀಲ್ ಟಾಂಗ್

Live Tv
[brid partner=56869869 player=32851 video=960834 autoplay=true]

TAGGED:Basavaraj Bommaiಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿಮಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Robert Vadra
Districts

ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ರಾಬರ್ಟ್ ವಾದ್ರಾ

Public TV
By Public TV
7 minutes ago
Jitendra Shelke
Latest

ನಾಸಿಕ್‌ ಸ್ವಯಂಘೋಷಿತ ದೇವಮಾನವನ ಆಪ್ತ ಸಹಾಯಕ, ಆತನ ಪತ್ನಿ ಅಪಘಾತದಲ್ಲಿ ದುರ್ಮರಣ

Public TV
By Public TV
13 minutes ago
arch collapses on people in manvi two children dead four women seriously injured
Crime

ನಾಟಕ ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು – ಇಬ್ಬರು ಮಕ್ಕಳು ಸಾವು, ನಾಲ್ವರು ಮಹಿಳೆಯರಿಗೆ ಗಂಭೀರ ಗಾಯ

Public TV
By Public TV
17 minutes ago
Beluru Elephant
Districts

ಮೂರು ದಿನಗಳ ಆಪರೇಷನ್‌ ಯಶಸ್ವಿ – ನರಹಂತಕ ಕಾಡಾನೆ ಸೆರೆ

Public TV
By Public TV
53 minutes ago
Vinay Kulkarni Darshan
Bengaluru City

ಪರಪ್ಪನ ಅಗ್ರಹಾರದ ಕ್ವಾರಂಟೈನ್ ಸೆಲ್‌ನಲ್ಲಿ ವಿನಯ್ ಕುಲಕರ್ಣಿ, ಗ್ಯಾಂಗ್ – ದರ್ಶನ್ ಸೆಲ್‌ನ ಕೂಗಳತೆ ದೂರದಲ್ಲೇ ಇರೋ ಕೈದಿಗಳು

Public TV
By Public TV
55 minutes ago
Hyderbad Bus Fire
Latest

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ – ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಬದುಕುಳಿದ 18ಕ್ಕೂ ಅಧಿಕ ಪ್ರಯಾಣಿಕರು

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?