Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಿಎಂ ಚಾಲನೆ – ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗುವಂತೆ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಿಎಂ ಚಾಲನೆ – ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗುವಂತೆ ಕರೆ

Bengaluru City

ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಿಎಂ ಚಾಲನೆ – ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗುವಂತೆ ಕರೆ

Public TV
Last updated: August 13, 2022 6:07 pm
Public TV
Share
3 Min Read
FLAG 1
SHARE

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಸ್ವಾತಂತ್ರ‍್ಯ ಅಮೃತ ಮಹೋತ್ಸವ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ `ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.

ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ “ಮನೆ ಮನೆಯಲ್ಲಿ ತ್ರಿವರ್ಣಧ್ವಜ" ಅಭಿಯಾನಕ್ಕೆ ಚಾಲನೆ.#HarGharTiranga @narendramodi @AmitShah @JPNadda @BJP4Karnataka pic.twitter.com/EJ9bJWW5Y2

— Basavaraj S Bommai (@BSBommai) August 13, 2022

ಬಳಿಕ ಅಭಿಯಾನವನ್ನುದ್ದೇಶಿಸಿ ಮಾತನಾಡಿದ ಸಿಎಂ, ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗಬೇಕು. ದೇಶ ಮೊದಲು, ದೇಶದ ನಂತರ ನಾವೆಲ್ಲರೂ ಎಂಬುದನ್ನು ಪ್ರತಿಪಾದಿಸಬೇಕು. ಸಂಕುಚಿತ, ಸ್ವಾರ್ಥ ಮನೋಭಾವ ತೊರೆದು, ದೇಶಕ್ಕಾಗಿ ನಿಲ್ಲುವ ಕರ್ತವ್ಯ ನಮ್ಮೆಲ್ಲರದ್ದಾಗಿದೆ ಎಂದು ಕರೆ ನೀಡಿದರು. ಇದನ್ನೂ ಓದಿ: ತ್ರಿಕೋನ ಪ್ರೇಮ ಪ್ರಕರಣ – ರೆಡ್ ಹ್ಯಾಂಡಾಗಿ ಗೆಳೆಯನೊಂದಿಗೆ ಸಿಕ್ಕಿಬಿದ್ದ ಪ್ರೇಯಸಿಗೆ ನಡು ರಸ್ತೆಯಲ್ಲೇ ಚಾಕು ಇರಿದ ಪ್ರಿಯಕರ

FLAG

ಸ್ವಾತಂತ್ರ‍್ಯ ಪೂರ್ವದಲ್ಲಿ ಜನರು ದೇಶಕ್ಕಾಗಿ ಪ್ರಾಣ ಕೊಡುತ್ತಿದ್ದರು. ಈಗ ದೇಶಕ್ಕಾಗಿ ಬದುಕಿ, ದುಡಿಯಬೇಕು. ಇನ್ನು ಮುಂದಿನ 25 ವರ್ಷಗಳ ಕಾಲ ದೇಶಕ್ಕಾಗಿ ನಾನೇನು ಮಾಡಿದ್ದೇನೆ ಎಂಬುದಕ್ಕೆ ಉತ್ತರ ಕಂಡುಕೊಳ್ಳಬೇಕು. ದೇಶಕ್ಕೆ ಯುವಜನರೆಂದರೆ ಶಕ್ತಿ, ಯುವಜನರೆಂದರೆ ಭವಿಷ್ಯ. ನವಕರ್ನಾಟಕದಿಂದ ನವಭಾರತ ನಿರ್ಮಾಣ ಮಾಡಬೇಕಿದೆ. ಪ್ರಧಾನಮಂತ್ರಿಗಳು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಸಂಕಲ್ಪ ಮಾಡಿದ್ದು, ಅದಕ್ಕೆ ಕರ್ನಾಟಕದಿಂದ 1 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕೊಡುಗೆಯನ್ನು ನೀಡುವ ಗುರಿ ಇದೆ ಎಂದು ಹೇಳಿದರು.

FLAG 2

ಭಾರತದ ಶಕ್ತಿ ಇಡೀ ವಿಶ್ವವೇ ಗಮನಿಸುತ್ತಿದೆ: ಯುವಕರು ಭಾರತದ ಮುಂದಿನ ಭವಿಷ್ಯವನ್ನು ನಿರ್ಮಿಸುವ ಭಾಗ್ಯಶಾಲಿಗಳು. 75 ವರ್ಷ ವ್ಯಕ್ತಿಗಾದರೆ ದೊಡ್ಡ ವಯಸ್ಸು. ಯುವಕರಿಗೆ ಸೇರಿರುವ ಯುವ ದೇಶ, ಭವ್ಯ ಭವಿಷ್ಯವಿರುವ ದೇಶ ನಮ್ಮದು. ಶೇ.46 ಯುವಶಕ್ತಿ ಇರುವ ದೇಶ ಭಾರತ. ಸರ್ಕಾರದ ವತಿಯಿಂದ 1.8 ಕೋಟಿ ಧ್ವಜಗಳನ್ನು ನೀಡಿದ್ದೇವೆ. ಜನ ಸ್ವಪ್ರೇರಣೆಯಿಂದ ಧ್ವಜ ಕೊಂಡಿದ್ದಾರೆ. 25 ಲಕ್ಷ ಮನೆಗಳ ಮೇಲೆ ಧ್ವಜ ಹಾರಾಡುತ್ತಿವೆ. ಪ್ರತಿ ಗ್ರಾಮ, ಮನೆಯಲ್ಲಿ ಧ್ವಜ ಹಾರಾಡುತ್ತಿದೆ. ತ್ರಿವರ್ಣದ ಶಕ್ತಿ ಎಲ್ಲರನ್ನು ಒಗ್ಗೂಡಿಸುವ ಶಕ್ತಿಯಾಗಿದ್ದು, ಭಾರತದ ಶಕ್ತಿಯನ್ನು ಇಡೀ ವಿಶ್ವವೇ ಗಮನಿಸುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಭೂಮಿಯ ತೇವಾಂಶ ಹೆಚ್ಚಾಯ್ತು – ಮಲೆನಾಡಲ್ಲಿ ಮಳೆ ಕಡಿಮೆಯಾದ್ರೂ ಅನಾಹುತ ಕಡಿಮೆಯಾಗ್ತಿಲ್ಲ

ಸನ್ಮಾನ್ಯ ಪ್ರಧಾನಿ ಮೋದಿಜಿ ಅವರ ಕರೆಯ ಮೇರೆಗೆ 'ಹರ್ ಘರ್ ತಿರಂಗ' ಅಭಿಯಾನ ಇಂದಿನಿಂದ ಪ್ರಾರಂಭವಾಗುತ್ತದೆ. ಈಗಾಗಲೇ ರಾಜ್ಯದೆಲ್ಲೆಡೆ 'ಮನೆ ಮನೆಯಲ್ಲೂ ತ್ರಿವರ್ಣ ಧ್ವಜ' ಮತ್ತು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆ ಪ್ರಾರಂಭವಾಗಿದೆ.
1/2 pic.twitter.com/wkWYKnMQho

— Basavaraj S Bommai (@BSBommai) August 13, 2022

ಸ್ವಾತಂತ್ರ‍್ಯ ಹೋರಾಟಕ್ಕೆ ದಿವ್ಯ ಇತಿಹಾಸವಿದೆ: ಸ್ವಾತಂತ್ರ‍್ಯ ಸುಲಭವಾಗಿ ಬಂದಿಲ್ಲ. ಹಲವರ ಹೋರಾಟ, ತ್ಯಾಗ, ಬಲಿದಾನದಿಂದ ಬಂದಿದೆ. ಸಾವಿರಾರು ಜನ ಅನಾಮಧೇಯ ಹೋರಾಟಗಾರರು ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ‍್ಯ ಎಲ್ಲರ ಹಕ್ಕು. ಹೋರಾಟವೂ ಸಾವಿರಾರು ಅನಾಮಧೇಯರಿಗೆ ಸೇರಿದೆ. ಯಾರದ್ದೇ ಸ್ವತ್ತಲ್ಲ. ಹೋರಾಟದಲ್ಲಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ವಿದ್ಯಾವಂತರು ಎಲ್ಲರೂ ಸೇರಿದ್ದರು. ಸ್ವಾತಂತ್ರ‍್ಯ ಹೋರಾಟಕ್ಕೆ ದಿವ್ಯ ಇತಿಹಾಸವಿದೆ. ಮೊಟ್ಟ ಮೊದಲು ಸ್ವಾತಂತ್ರ‍್ಯ ಹೋರಾಟದ ಕಹಳೆಯನ್ನು ಮೊಳಗಿಸಿದ್ದು ಕನ್ನಡ ನಾಡಿನ ಹೆಮ್ಮೆಯ ರಾಣಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ. ಸ್ವಾತಂತ್ರ‍್ಯಕ್ಕಾಗಿ ಪ್ರಾಣ ಕೊಟ್ಟವರು ರಾಜ್ಯದಲ್ಲಿ ಇದ್ದಾರೆ. ಮೈಲಾರ ಮಹಾದೇವಪ್ಪ ಬ್ರಿಟಿಷರ ಗುಂಡಿಗೆ ಬಲಿಯಾದರು. ಸಾಹುಕಾರ ಚೆನ್ನಯ್ಯ, ಇವರನ್ನು ನೆನಪಿಡಬೇಕು. ಇತಿಹಾಸದಲ್ಲಿದ್ದವರು ಭಾರತದ ಭವಿಷ್ಯ ಬರೆದಿದ್ದಾರೆ ಎಂದರು. ಇದನ್ನೂ ಓದಿ: ಒಡಿಶಾ ಸರ್ಕಾರದಿಂದ ನವ ವಿವಾಹಿತರಿಗೆ ಕಾಂಡೋಮ್, ಪ್ರೆಗ್ನೆನ್ಸಿ ಟೂಲ್ ಹೊಂದಿದ `ವೆಡ್ಡಿಂಗ್ ಕಿಟ್’ ಗಿಫ್ಟ್

02 1

ಭಾರತವನ್ನು ಶ್ರೇಷ್ಠವಾಗಿಸುವ ಜವಾಬ್ದಾರಿ ಯುವಕರ ಮೇಲಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶವನ್ನು ದಕ್ಷತೆಯಿಂದ ನಡೆಸುತ್ತಿದ್ದಾರೆ. ಧೀಮಂತ ನಾಯಕರಾದ ಅವರು ಸಶಕ್ತ, ಸಂಪದ್ಭರಿತ ಭಾರತ ಕಟ್ಟಲು ಶ್ರಮಿಸುತ್ತಿದ್ದಾರೆ. ಆತ್ಮನಿರ್ಭರ ಭಾರತ ಎಂದು ಕರೆ ಕೊಟ್ಟಿದ್ದಾರೆ. ರೈತರು, ವಿದ್ಯಾರ್ಥಿಗಳು, ಬಡವರು, ಮಹಿಳೆಯರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು `ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್’ ಎಂಬುದು ಪ್ರಧಾನ ಮಂತ್ರಿಯವರ ಮೂಲಮಂತ್ರ. ಸ್ವಾತಂತ್ರ‍್ಯೋತ್ಸವ 75 ವರ್ಷಗಳ ಮುಂದಿನ 25 ವರ್ಷದ ಅಮೃತಕಾಲದಲ್ಲಿ ವಿಶ್ವದಲ್ಲಿ ಭಾರತವನ್ನು ಶ್ರೇಷ್ಠವಾಗಿಸುವ ಜವಾಬ್ದಾರಿ ನಮ್ಮೆಲ್ಲ ಯುವಕರ ಮೇಲಿದೆ. ಇದು ನಮ್ಮ ಬದ್ಧತೆ ಮತ್ತು ಸಂಕಲ್ಪ. ಸಮಬಾಳಿನ, ಸಮಪಾಲಿನ ಭಾರತ ನಿರ್ಮಾಣದ ಸಂಕಲ್ಪ ಮಾಡಬೇಕೆಂದು ಯುವಕರಿಗೆ ಕರೆ ನೀಡಿದರು.

Live Tv
[brid partner=56869869 player=32851 video=960834 autoplay=true]

TAGGED:Basavaraj BommaibjpCentral GovernmentHarGharTirangaindianarendra modinational flagPrimeMinisterYouth Powerಕೇಂದ್ರ ಸರ್ಕಾರನರೇಂದ್ರ ಮೋದಿಭಾರತಯುವಜನರಾಷ್ಟ್ರಧ್ವಜಹರ್ ಘರ್ ತಿರಂಗಾ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
2 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
12 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
19 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
38 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
51 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?