ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿಯ (BJP) ಬಿರುಗಾಳಿ ಬೀಸುತ್ತಿದೆ. ಈ ಬಾರಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆಯಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ (Vijay Sankalp Abhiyan) ಬೊಮ್ಮಾಯಿ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂರನ್ನು ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದರು. ಪಟಾಕಿ ಸಿಡಿಸಿ, ಜೆಸಿಬಿಯಲ್ಲಿ ಹೂ ಮಳೆಗೈದರು. ಮಹಿಳೆಯರು ಆರತಿ ಎತ್ತಿ ಮುಖ್ಯಮಂತ್ರಿಗಳನ್ನು ಸ್ವಾಗತ ಮಾಡಿದರು. ಇದನ್ನೂ ಓದಿ: ಕಟೀಲ್ದು ಎಲುಬಿಲ್ಲದ ನಾಲಿಗೆ.. ಬಚ್ಚಲು ಬಾಯಿ: ಡಿಕೆಶಿ ವಾಗ್ದಾಳಿ
ವಿಜಯ ಸಂಕಲ್ಪ ಅಭಿಯಾನದ ವೇಳೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಕರ್ನಾಟಕದಲ್ಲಿ ಬಿಜೆಪಿಯ ಬಿರುಗಾಳಿ ಬೀಸುತ್ತಿದೆ. ಪ್ರಧಾನಿ ಮೋದಿ ಅವರು ಹೋದ ಕಡೆ ಲಕ್ಷಾಂತರ ಜನ ಸೇರುತ್ತಿದ್ದಾರೆ. ಇದು ಬಿಜೆಪಿ ಪರ ರಾಜ್ಯದಲ್ಲಿ ಅಲೆ ಇರೋದನ್ನು ತೋರಿಸುತ್ತದೆ. ಈ ಬಾರಿ ನೆಲಮಂಗಲದಲ್ಲಿ ಬಿಜೆಪಿಯ ವಿಜಯ ಪತಾಕೆ ಹಾರಲಿದೆ. ನೂರಕ್ಕೆ ನೂರು ಈ ಬಾರಿ ನೆಲಮಂಗಲದಲ್ಲಿ ಬಿಜೆಪಿ ಗೆಲ್ಲಲಿದೆ. ಇಡೀ ಕರ್ನಾಟಕದಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆದು ಅಧಿಕಾರ ಹಿಡಿಯಲಿದೆ. ಡಬಲ್ ಎಂಜಿನ್ ಸರ್ಕಾರ ಮತ್ತೆ ರಾಜ್ಯ ಮತ್ತು ಕೇಂದ್ರದಲ್ಲಿ ಅಧಿಕಾರ ಹಿಡಿಯಲಿದೆ ಅಂತ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಮಿತ್ ಶಾ ಮತ್ತೊಂದು ಟೂರ್ – ಬೆಂಗಳೂರು, ಮಂಡ್ಯ ಗೇಮ್ ಪ್ಲ್ಯಾನ್?
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k