Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉರಿಗೌಡ-ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆ ಪ್ರಶ್ನೆಯೇ ಇಲ್ಲ- ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಉರಿಗೌಡ-ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆ ಪ್ರಶ್ನೆಯೇ ಇಲ್ಲ- ಬೊಮ್ಮಾಯಿ

Dharwad

ಉರಿಗೌಡ-ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆ ಪ್ರಶ್ನೆಯೇ ಇಲ್ಲ- ಬೊಮ್ಮಾಯಿ

Public TV
Last updated: March 21, 2023 12:50 pm
Public TV
Share
3 Min Read
BASAVARAJ BOMMAI 3
SHARE

ಹುಬ್ಬಳ್ಳಿ: ಉರಿಗೌಡ-ನಂಜೇಗೌಡ (Urigowda-Nanjegowda) ಪ್ರಕರಣದಲ್ಲಿ ಹಿನ್ನಡೆಯಾಗಿರುವ ಪ್ರಶ್ನೆಯೇ ಇಲ್ಲ. ಸತ್ಯ ಸಂಶೋಧನೆಯಾಗಿ ಸತ್ಯ ಹೊರಗೆ ಬಂದಾಗ ಜಯ ದೊರೆಯಲಿದೆ ಎಂದು ಸಿಎಂ ಬೊಮ್ಮಾಯಿ (Basavaraj Bommai) ಹೇಳಿದರು.

ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವಾರು ಐತಿಹಾಸಿಕ ಸತ್ಯಗಳನ್ನು ಮರೆಮಾಚಲಾಗಿದೆ. ಇತಿಹಾಸವನ್ನು ಭಾರತ ಹಾಗೂ ಕರ್ನಾಟಕದಲ್ಲಿ ತಿರುಚಿರುವ ಕೆಲಸವಾಗಿದೆ. ಆ ಸಂದರ್ಭದಲ್ಲಿ ಯಾರು ಪ್ರಮುಖ ಪಾತ್ರವಹಿಸಿದ್ದರು ಎಂಬುವುದು ಜಗಜ್ಜಾಹೀರಾಗಿದೆ. ಸತ್ಯವನ್ನು ಹೇಳಿದರೆ ಇವರಿಗೆ ತಡೆಯಲು ಆಗುವುದಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ನಾಳೆ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – ಡಿಕೆಶಿ 

rahul gandhi

ರಾಹುಲ್ ಗಾಂಧಿ (Rahul Gandhi) ರಾಜ್ಯಕ್ಕೆ ಆಗಮಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿಯವರು ರಾಜ್ಯಕ್ಕೆ ಭೇಟಿ ನೀಡಿರುವುದರಿಂದ ಯವುದೇ ಪರಿಣಾಮ ಬೀರಲ್ಲ. ಇವರು ಭಾರತ್ ಜೋಡೋ ಯಾತ್ರೆಯನ್ನು ಮಾಡಿದ್ದು, ಯಾವುದೇ ಪರಿಣಾಮ ಉಂಟಾಗಲಿಲ್ಲ. ಸೋಮವಾರ ಹುಬ್ಬಳ್ಳಿಯಲ್ಲಿ ಮಾಡಿದ ಘೋಷಣೆಗಳಿಂದ ಯಾವುದೇ ಪರಿಣಾಮವಾಗುವುದಿಲ್ಲ. ಅವರು ಕಳೆದ ಬಾರಿ ರಾಜ್ಯಕ್ಕೆ ಬಂದಿರುವುದಕ್ಕೆ ಹಾಗೂ ಈ ಸಲ ಬಂದಿರುವುದಕ್ಕೆ ಬಹಳಷ್ಟು ವ್ಯತ್ಯಾಸಗಳಿವೆ. ಲಂಡನ್ ವಿಶ್ವವಿದ್ಯಾಲಯದಲ್ಲಿ (London University) ಅವರು ಮಾತನಾಡಿರುವುದು ದೇಶ ವಿರೋಧಿಯಾಗಿದೆ. ಇಡಿ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಈ ಬಗ್ಗೆ ಖಂಡನೆಯಾಗಿದೆ. ಅವರ ಮಾತಿಗೆ ಜನರು ಯಾವುದೇ ಬೆಲೆಯನ್ನು ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದರು. ಇದನ್ನೂ ಓದಿ: ದೆಹಲಿ ಬಜೆಟ್ ಅನ್ನು ತಡೆಯಬೇಡಿ : ಮೋದಿಗೆ ಕೇಜ್ರಿವಾಲ್ ಪತ್ರ

ಸಿದ್ದರಾಮಯ್ಯನವರು (Siddaramaiah) ಬೋಗಸ್ ಕಾರ್ಡ್ ಬಗ್ಗೆ ಮಾತನಾಡುತ್ತಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಈ ರೀತಿಯ ಆಶ್ವಾಸನೆಗಳನ್ನು ನೀಡಿದ್ದು, ಇಂದಿಗೂ ಈಡೇರಿಸಲಿಲ್ಲ. ಇದು ಅವರ ಟ್ರ್ಯಾಕ್ ರೆಕಾರ್ಡ್. ರಾಜಸ್ಥಾನ (Rajasthan)‌ ಹಾಗೂ ಛತ್ತೀಸ್‌ಗಢದಲ್ಲಿ (Chattisgarh) ಘೋಷಣೆ ಮಾಡಿದ್ದನ್ನು ಅವರು ಈಡೇರಿಸಲಿಲ್ಲ. ಛತ್ತೀಸ್‌ಗಡದಲ್ಲಿ ಪ್ರತಿ ಮನೆಗೆ ಒಂದು ಸಾವಿರ ರೂ. ನೀಡುವುದಾಗಿ ಹೇಳಿದ್ದರು. ನಾಲ್ಕು ವರ್ಷ ನೀಡದೇ ಕೊನೆಯ ವರ್ಷ ಕೊಡಲು ಓಡಾಡಿದರು. ಈ ರೀತಿಯಾಗಿ ಜನರನ್ನು ಯಾಮಾರಿಸುತ್ತಾರೆ. ಅದು ಗ್ಯಾರಂಟಿ ಕಾರ್ಡ್ ಅಲ್ಲ, ಬರೀ ವಿಸಿಟಿಂಗ್ ಕಾರ್ಡ್ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: Breaking- ಉರಿಗೌಡ ನಂಜೇಗೌಡ ಬಗ್ಗೆ ಟ್ವೀಟ್: ನಟ ಚೇತನ್ ಬಂಧನ 

siddaramaiah 1 1

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ರೀಡೂ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಭ್ರಷ್ಟಾಚಾರದ (Corruption) ಆರೋಪವಿದೆ. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆಂದರೆ ಇದ್ದಿಲು ಮಸಿಗೆ ಬುದ್ಧಿ ಹೇಳಿದಂತೆ. ಕಾಂಗ್ರೆಸ್ ಅಧ:ಪತನಕ್ಕೆ ಸಿದ್ಧವಾಗಿದೆ. ಭಾರತ ದೇಶದಲ್ಲಿ ಎಲ್ಲಾ ಕಡೆ ಪತನವಾಗಿದೆ. ಸಿದ್ದರಾಮಯ್ಯ ಅವರ ಸರ್ಕಾರದ 59 ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಡೆಸಲು ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ತೀರ್ಮಾನವಾಗುತ್ತದೆ. 59 ಪ್ರಕರಣಗಳಲ್ಲಿ ಕೆಲವನ್ನು ವಹಿಸಲಾಗಿದೆ. ಬಾಕಿ ಇರುವುದನ್ನು ವಹಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ರೆಡ್‌ ಕಾರ್ನರ್‌ ನೋಟಿಸ್‌ ಪಟ್ಟಿಯಿಂದ ಔಟ್‌- ಇನ್ನು ಮುಂದೆ ವಿಶ್ವದೆಲ್ಲೆಡೆ ವಂಚಕ ಮೆಹುಲ್‌ ಚೋಕ್ಸಿ ಸಂಚರಿಸಬಹುದು

ಬಾಬುರಾವ್ ಚಿಂಚನಸೂರ್ (Baburao Chinchansur) ಅವರು ಕಾಂಗ್ರೆಸ್‌ನಲ್ಲಿದ್ದವರು. ಈಗ ವಾಪಸ್ ಕಾಂಗ್ರೆಸ್ (Congress) ಪಕ್ಷಕ್ಕೆ ಸೇರಿದ್ದಾರೆ. ಆ ಕ್ಷೇತ್ರದಲ್ಲಿ ನಮ್ಮ ಸಂಘಟನೆ ಉತ್ತಮವಾಗಿದೆ. ಗುರುಮಿಠಕಲ್ (Gurumitkal) ಕ್ಷೇತ್ರದಲ್ಲಿ ಬಿಜೆಪಿ (BJP) ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾರ್ಚ್ 25 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು (Narendra Modi) ಹಾಗೂ ಮಾರ್ಚ್ 24 ಮತ್ತು 26 ರಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ (Amit Shah) ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅದೇ ರೀತಿ ಬೇಡಿಕೆ ಈಡೇರಿದ್ದಕ್ಕಾಗಿ ಸಾರಿಗೆ ನೌಕರರ ಸಂಘದವರು ಪ್ರತಿಭಟನೆ ಹಿಂಪಡೆದಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ನನ್ನನ್ನು ಕೋರ್ಟ್‌ನಲ್ಲೂ ಕೊಲ್ಬೋದು – ಪಾಕ್ ನ್ಯಾಯಮೂರ್ತಿಗೆ ಪತ್ರ ಬರೆದ ಇಮ್ರಾನ್ ಖಾನ್

TAGGED:Basavaraj Bommaibjpcongresshubballinarendra modiRahul Gandhisiddaramaiahurigowda nanjegowdaಉರಿಗೌಡ ನಂಜೇಗೌಡಕಾಂಗ್ರೆಸ್ನರೇಂದ್ರ ಮೋದಿಬಸವರಾಜ್ ಬೊಮ್ಮಾಯಿಬಿಜೆಪಿರಾಹುಲ್ ಗಾಂಧಿಸಿದ್ದರಾಮಯ್ಯಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

IND vs SA
Cricket

ವಿಶ್ವಕಪ್ ಸೂಪರ್ 8ರಲ್ಲಿ ಇಂದಿನಿಂದ ಮಹಾಕದನ – ಸೂಪರ್ ಸಂಡೇಯಂದೇ ದಕ್ಷಿಣ ಆಫ್ರಿಕಾ v/s ಭಾರತ

Public TV
By Public TV
4 minutes ago
pakistan Airstrikes In Afghanistan
Latest

ಅಫ್ಘಾನ್‌ ಮೇಲೆ ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿ – 12 ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸಾವು

Public TV
By Public TV
34 minutes ago
Kamalakar Bhat
Crime

ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪೋಕ್ಸೊ ಕೇಸ್ ದಾಖಲು

Public TV
By Public TV
39 minutes ago
Accident
Chitradurga

ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರಿಗೆ ಗಾಯ

Public TV
By Public TV
1 hour ago
INDIA AI
Latest

India AI Summit: ಆಶಾ ಕಾರ್ಯಕರ್ತೆಯರು, ರೈತರಿಂದ ಹಿಡಿದು ಸರ್ಕಾರಿ ಶಾಲಾ ಮಕ್ಕಳವರೆಗೆ – ಭಾರತಕ್ಕೆ ಎಐನಿಂದ ಆಗೋ ಲಾಭಗಳೇನು?

Public TV
By Public TV
1 hour ago
Cyber Crime
Bengaluru City

ವರ್ಕ್ ಫ್ರಮ್ ಹೋಂ ಹೆಸರಲ್ಲಿ ಸೈಬರ್ ಕಿರಾತಕರು ಆಕ್ಟೀವ್ – ಮಗನ ಮಾತು ಕೇಳಿ 40,000 ರೂ. ಕಳೆದುಕೊಂಡ ಮಹಿಳೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?