Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಿ ನಿಯಂತ್ರಣದ ದೇಗುಲಗಳಿಗೆ ಶೀಘ್ರ ಸ್ವಾತಂತ್ರ್ಯ- ಆದಾಯ ದೇವಾಲಯಗಳ ಅಭಿವೃದ್ಧಿಗೆ ಮೀಸಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಸರ್ಕಾರಿ ನಿಯಂತ್ರಣದ ದೇಗುಲಗಳಿಗೆ ಶೀಘ್ರ ಸ್ವಾತಂತ್ರ್ಯ- ಆದಾಯ ದೇವಾಲಯಗಳ ಅಭಿವೃದ್ಧಿಗೆ ಮೀಸಲು

Dharwad

ಸರ್ಕಾರಿ ನಿಯಂತ್ರಣದ ದೇಗುಲಗಳಿಗೆ ಶೀಘ್ರ ಸ್ವಾತಂತ್ರ್ಯ- ಆದಾಯ ದೇವಾಲಯಗಳ ಅಭಿವೃದ್ಧಿಗೆ ಮೀಸಲು

Public TV
Last updated: December 29, 2021 6:58 pm
Public TV
Share
3 Min Read
BOMMAI 5
SHARE

– ಹಿಂದುತ್ವದ ಅಸ್ತ್ರ ಪ್ರಯೋಗಿಸಿದ ಸಿಎಂ

ಹುಬ್ಬಳ್ಳಿ: ಇತ್ತೀಚಿಗೆ ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅನುಮೋದನೆ ವೇಳೆ ಸಚಿವ ಈಶ್ವರಪ್ಪ ಒಂದು ಮಾತು ಹೇಳಿದ್ರು. ಹಿಂದೂ ಧರ್ಮದ ಉದ್ಧಾರಕ್ಕಾಗಿ, ಹಿತಕ್ಕಾಗಿ ಇನ್ನೂ ಮೂರು ಕಾಯ್ದೆ ತರ್ತೀವಿ ಎಂದು ಘೋಷಿಸಿದ್ರು. ಇದಕ್ಕೆ ಪೂರಕವಾದ ಬೆಳವಣಿಗೆಗಳು, ತಯಾರಿಗಳು ಪಕ್ಷದ ಒಳಗಿಂದೊಳಗೆ ಅತ್ಯಂತ ವೇಗವಾಗಿ ನಡೀತಿವೆ.

KUKKE

ಇಂದು ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿಯ ಸಮಾರೋಪ ಭಾಷಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿಂದುತ್ವದ ಅಸ್ತ್ರ ಪ್ರಯೋಗಿಸಿದ್ದಾರೆ. ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ ದೇವಾಲಯಗಳನ್ನು ಶೀಘ್ರವೇ ಮುಕ್ತ ಮಾಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ನನ್ನ ವಿರುದ್ಧ ದೆಹಲಿಯಲ್ಲಿ ಎರಡೂ ಪಕ್ಷಗಳು ಷಡ್ಯಂತ್ರ ಮಾಡುತ್ತಿವೆ: ಡಿ.ಕೆ. ಶಿವಕುಮಾರ್

TEMPLE

ಇತರೆ ಧರ್ಮಗಳ ಪ್ರಾರ್ಥನಾ ಮಂದಿರಗಳು ಸ್ವಾತಂತ್ರ್ಯವಾಗಿವೆ. ಆದರೆ ನಮ್ಮ ಹಿಂದೂ ದೇವಾಲಯಗಳು ಮಾತ್ರ ಹಲವು ನಿಯಂತ್ರಣಕ್ಕೆ ಒಳಪಟ್ಟಿವೆ. ಹಲವು ಕಟ್ಟುಪಾಡುಗಳಿಗೆ ಒಳಪಟ್ಟು ಕಿರುಕುಳ ಅನುಭವಿಸ್ತಿವೆ. ದೇವಸ್ಥಾನದ ಆದಾಯ ಬೇರೆ ಕಡೆ ಹರಿದುಹೋಗದಂತೆ, ದೇವಸ್ಥಾನಗಳ ಆದಾಯವನ್ನು ದೇವಸ್ಥಾನಗಳಿಗೆ ಬಳಸುವ ಕಾರ್ಯವನ್ನು ನಮ್ಮ ಸರ್ಕಾರ ಜಾರಿಗೆ ತರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಬಜೆಟ್ ಅಧಿವೇಶನಕ್ಕೆ ಮುನ್ನವೇ ಇದಕ್ಕೆ ಸಂಬಂಧಿಸಿದ ಕಾನೂನು ಜಾರಿ ಮಾಡುವ ಸುಳಿವನ್ನು ಮುಖ್ಯಮಂತ್ರಿ ಬೊಮ್ಮಾಯಿ ನೀಡಿದ್ದಾರೆ.

TEMPLE 6

ಇದೇ ವೇಳೆ ನಮ್ಮ ಅಜೆಂಡಾ ಕ್ಲಿಯರ್ ಆಗಿದ್ದು, ಕೊಪ್ಪಳದ ಅಂಜನಾದ್ರಿ ಕ್ಷೇತ್ರವನ್ನು ಅಯೋಧ್ಯೆಯ ಶ್ರೀರಾಮಚಂದ್ರನ ಮಂದಿರದಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಪಡಿಸಿ ಪ್ರಧಾನಿ ಮೋದಿಯಿಂದಲೇ ಉದ್ಘಾಟನೆ ಮಾಡಿಸೋದಾಗಿ ಹೇಳಿದ್ದಾರೆ. ಇನ್ನು ಮತಾಂತರ ನಿಗ್ರಹ ಕಾಯ್ದೆ ಜಾರಿಗಾಗಿ ವಿಶೇಷ ಟಾಸ್ಕ್ ಫೋರ್ಸ್ ರಚಿಸುವುದಾಗಿ ಸಿಎಂ ಬೊಮ್ಮಾಯಿ ಪ್ರಕಟಿಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದಕರನ್ನು ಬೆಳೆಸಿದ ಕಾಂಗ್ರೆಸ್, ಹಿಂದೂ ನಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದೆ: ಯೋಗಿ

TEMPLE 5

ಹೊಸ ಕಾನೂನು ಜಾರಿಗೆ ಬಂದ್ರೇ ರಾಜ್ಯದ 34,558 ದೇಗುಲಗಳು ಮುಕ್ತಗೊಳ್ಳಲಿವೆ. ಇದರಲ್ಲಿ ಎ ಗ್ರೇಡ್ ದೇಗುಲಗಳೇ 132 ಇದೆ. ಇವು 25 ಲಕ್ಷ ಮೇಲ್ಪಟ್ಟು ಅಧಿಕ ಆದಾಯ ತಂದುಕೊಡುವ ದೇಗುಲಗಳಾಗಿವೆ. ಐದರಿಂದ 25 ಲಕ್ಷದ ಒಳಗೆ ವಾರ್ಷಿಕ ಆದಾಯ ತಂದುಕೊಡುವ ಬಿ ಶ್ರೇಣಿಯ ದೇಗುಲಗಳ ಸಂಖ್ಯೆಯೇ 180 ಇದೆ. 5 ಲಕ್ಷದ ಒಳಗೆ ಸರ್ಕಾರಕ್ಕೆ ಆದಾಯ ತಂದುಕೊಡುವ ದೇಗುಲಗಳ ಸಂಖ್ಯೆ 34,246.

TEMPLE 4

ಈ ದೇಗುಲಗಳಿಗೆ ಶೀಘ್ರ ಸ್ವಾತಂತ್ರ್ಯ?
* ಚಾಮುಂಡಿ ದೇಗುಲ, ಚಾಮುಂಡಿ ಬೆಟ್ಟ, ಮೈಸೂರು
* ಶ್ರೀಕಂಠೇಶ್ವರ ದೇಗುಲ, ನಂಜನಗೂಡು
* ಕುಕ್ಕೆ ಸುಬ್ರಹ್ಮಣ್ಯ ದೇವಳ
* ಘಾಟಿ ಸುಬ್ರಹ್ಮಣ್ಯ ದೇಗುಲ
* ಕೊಲ್ಲೂರು ಮೂಕಾಂಬಿಕೆ ದೇಗುಲ
* ಸವದತ್ತಿ ಯಲ್ಲಮ್ಮ ದೇಗುಲ
* ಬಾದಾಮಿ ಬನಶಂಕರಿ ದೇಗುಲ
* ಬೆಂಗಳೂರು ಬನಶಂಕರಿ ದೇಗುಲ
* ಹಾಸನಾಂಬೆ ದೇವಾಲಯ, ಹಾಸನ
* ನಿಮಿಷಾಂಬ ದೇವಾಲಯ, ಶ್ರೀರಂಗಪಟ್ಟಣ

BOMMAI 1 2

ಸಿಎಂ ಬಸವರಾಜ ಬೊಮ್ಮಾಯಿಯವರ ಘೋಷಣೆಗೆ ಪ್ರೇರಣೆ ಆಗಿದ್ದು ಬಹುಷಃ ಇತ್ತೀಚಿಗೆ ಉತ್ತರಾಖಂಡ್ ಸರ್ಕಾರ ತೆಗೆದುಕೊಂಡ ಖಡಕ್ ತೀರ್ಮಾನ. ಡಿಸೆಂಬರ್ ಮೂರರಂದು ವಿವಾದಾತ್ಮಕ ಚಾರ್‍ಧಾಮ್ ದೇವಸ್ಥಾನಗಳ ನಿರ್ವಹಣಾ ಮಂಡಳಿ ಕಾಯ್ದೆಯನ್ನು ಅಲ್ಲಿನ ಸಿಎಂ ಪುಷ್ಕರ್ ಸಿಂಗ್ ಧಾಮಿ ರದ್ದು ಮಾಡಿದ್ದರು. ಈ ಮೂಲಕ ಚಾರ್‍ಧಾಮ್ ಕ್ಷೇತ್ರಗಳಾದ ಗಂಗೋತ್ರಿ, ಯಮುನೋತ್ರಿ, ಕೇದಾರ್‍ನಾಥ್, ಬದರಿನಾಥ್ ಸೇರಿ 53 ದೇಗುಲಗಳಿಗೆ ಸ್ವಾತಂತ್ರ್ಯ ನೀಡಿದ್ದರು. ವಿಧಾನಸಭೆ ಚುನಾವಣೆ ಸನಿಹದಲ್ಲಿರುವುದರಿಂದ ಉತ್ತರಾಖಂಡ್ ಬಿಜೆಪಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂಬ ಟೀಕೆಗಳು ಕೇಳಿಬಂದಿದ್ದವು.

kukke

ದ್ರಾವಿಡ ನಾಡು ತಮಿಳುನಾಡಿನಲ್ಲೂ ಇದಕ್ಕೆ ಸಂಬಂಧಿಸಿದ ಹೋರಾಟ ತೀವ್ರಗೊಂಡಿದೆ. ದೇಗುಲಗಳನ್ನು ಸರ್ಕಾರದ ವಶಕ್ಕೆ ಪಡೆಯುವ ಕೆಲಸ ಆರಂಭ ಮಾಡಿದ್ದು ಬ್ರಿಟೀಷರು. 1863ರಲ್ಲಿಯೇ ಧಾರ್ಮಿಕ ದತ್ತಿ ಕಾಯ್ದೆಯನ್ನು ಈಸ್ಟ್ ಇಂಡಿಯಾ ಕಂಪನಿ ಜಾರಿಗೊಳಿಸಿತ್ತು. ಇದನ್ನೇ ಈವರೆಗೂ ಸರ್ಕಾರಗಳು ಅನುಸರಿಸಿಕೊಂಡು ಬರುತ್ತಿದ್ದವು. ಆದರೆ ದೇಗುಲಗಳು ಸರ್ಕಾರದ ಹಿಡಿತದಲ್ಲಿ ಇರಬಾರದು ಎಂದು ಬಿಜೆಪಿ ಹೋರಾಟ ಆರಂಭಿಸಿತ್ತು. ಕಳೆದ ಅಕ್ಟೋಬರ್ ತಿಂಗಳಲ್ಲಷ್ಟೇ ವಿಹೆಚ್‍ಪಿ ದೇಶಾವ್ಯಾಪಿ ಆಂದೋಲನ ನಡೆಸಿತ್ತು. ಅಧಿಕಾರಕ್ಕೆ ಬಂದ ರಾಜ್ಯಗಳಲ್ಲಿ ದೇಗುಲಗಳಿಗೆ ಮುಕ್ತಿ ಕೊಡುವ ಕೆಲಸದಲ್ಲಿ ಬಿಜೆಪಿ ನಿರತವಾಗಿದೆ.

TAGGED:Basavaraj Bommaichief ministerhubballitempleದೇವಸ್ಥಾನಬಸವರಾಜ ಬೊಮ್ಮಾಯಿಸಿಎಂಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

p.c.shekhar
‘ಜಸ್ಟ್ ಅಸ್’ ಅಂತ ವೆಬ್ ಸಿರೀಸ್ ಲೋಕಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಎಂಟ್ರಿ
Cinema Latest Sandalwood Top Stories
srimurali
ಪ್ರಶಾಂತ್ ನೀಲ್ ಜೊತೆಗಿನ ಉಗ್ರಂ ವೀರಂ ಸಿನಿಮಾ ಬಗ್ಗೆ ಶ್ರೀಮುರಳಿ ಹೇಳಿದ್ದೇನು?
Cinema Latest Sandalwood Top Stories
Rukmini Vasanth
ಬಾಲಿವುಡ್‌ಗೆ ಜಿಗಿದ ʻಕನಕವತಿʼ – ರಶ್ಮಿಕಾ, ಶ್ರೀಲೀಲಾ ಹಾದಿಯಲ್ಲಿ ರುಕ್ಮಿಣಿ ವಸಂತ್!
Bollywood Cinema Latest Sandalwood
Rashmika Mandanna Srilanka Trip
2 ದಿನ ರಜೆ ಸಿಕ್ತು ಅಂತ ರಶ್ಮಿಕಾ ಹೋಗಿದ್ದೆಲ್ಲಿಗೆ..?
Cinema Latest Top Stories

You Might Also Like

Dharmasthala Chinnayya
Dakshina Kannada

ಧರ್ಮಸ್ಥಳದ ಬುರುಡೆ ಚಿನ್ನಯ್ಯನಿಗೆ ಕೊನೆಗೂ ಬಿಡುಗಡೆ ಭಾಗ್ಯ – ಶೀಘ್ರವೇ ಜೈಲಿನಿಂದ ರಿಲೀಸ್‌

Public TV
By Public TV
9 minutes ago
gaurav bhatia
Latest

ಗಾಂಧಿ ಕುಟುಂಬ ರಾಜಕೀಯದಲ್ಲಿ ಅತ್ಯಂತ ಭ್ರಷ್ಟ ಕುಟುಂಬ – ಬಿಜೆಪಿ ವಕ್ತಾರ ಗೌರವ್ ಭಾಟಿಯಾ

Public TV
By Public TV
29 minutes ago
Ramalinga Reddy
Belgaum

ಬೌದ್ಧ ಬಿಕ್ಕುಗಳಿಗೆ ಸರ್ಕಾರದಿಂದ ಮಾಸಿಕ ಗೌರವ ಧನ: ರಾಮಲಿಂಗಾರೆಡ್ಡಿ

Public TV
By Public TV
46 minutes ago
Krishna Byre Gowda
Bagalkot

ಕೂಡಲಸಂಗಮ ಅಭಿವೃದ್ಧಿ ಮಂಡಳಿ ಯೋಜನೆ ನಮ್ಮ ಕೂಸು, ಮುಗಿಸುವ ಬದ್ಧತೆ ನಮಗಿದೆ: ಕೃಷ್ಣ ಬೈರೇಗೌಡ

Public TV
By Public TV
51 minutes ago
Krishna Byregowda
Belgaum

ಕಾವೇರಿ-2, ಇ-ಸ್ವತ್ತು ಡಿಜಿಟಲ್ ಡೇಟಾ ಲಿಂಕ್‌ಗೆ ತ್ವರಿತ ಪರಿಹಾರ: ಕೃಷ್ಣ ಬೈರೇಗೌಡ

Public TV
By Public TV
1 hour ago
RG Kar Medical College
Court

ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಚಾರ ಕೇಸ್;‌ ಕೋಲ್ಕತ್ತಾ ಹೈಕೋರ್ಟ್‌ಗೆ ಪ್ರಕರಣ ಹಸ್ತಾಂತರಿಸಿದ ಸುಪ್ರೀಂ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?