ಆಯನೂರು ಮಂಜುನಾಥ್ ಪುತ್ರಿ ವಿವಾಹ ಸಮಾರಂಭದಲ್ಲಿ ಸಿಎಂ ಬಿಎಸ್‍ವೈ

Public TV
0 Min Read
BS Yeddyurappa 1

ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಪುತ್ರಿಯ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಿ ನೂತನ ವಧು, ವರರಿಗೆ ಶುಭ ಹಾರೈಸಿದರು.

ನಗರದ ಸಾಗರ ರಸ್ತೆಯಲ್ಲಿರುವ ಪ್ರೇರಣಾ ಹಾಲ್ ನಲ್ಲಿ ನಡೆದ ಆಯನೂರು ಮಂಜುನಾಥ್ ಪುತ್ರಿ ಶಮಾತ್ಮಿಕ ಹಾಗೂ ಮಹೇಶ್ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಸಿಎಂ ಬಿಎಸ್ ವೈ ಕುಟುಂಬ ಸದಸ್ಯರೊಂದಿಗೆ ಭಾಗವಹಿಸಿದ್ದರು.

ಸಿಎಂ ಜೊತೆ ಸಂಸದರಾದ ಶಿವಕುಮಾರ ಉದಾಸಿ, ಬಿ.ವೈ.ರಾಘವೇಂದ್ರ, ಸಚಿವ ಸಿ.ಟಿ.ರವಿ, ರಾಜ್ಯಸಭೆ ಸದಸ್ಯ ಪ್ರಭಾಕರ್ ಕೋರೆ ಸೇರಿದಂತೆ ಶಾಸಕರು ಹಾಗೂ ಕಾಂಗ್ರೆಸ್, ಜೆಡಿಎಸ್ ಮುಖಂಡರು ಹಾಜರಿದ್ದರು.

Share This Article
Leave a Comment

Leave a Reply

Your email address will not be published. Required fields are marked *