Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ, ಪ್ರತಿ ಮಂಗಳವಾರ ಕ್ಯಾಬಿನೆಟ್ ಸಭೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ, ಪ್ರತಿ ಮಂಗಳವಾರ ಕ್ಯಾಬಿನೆಟ್ ಸಭೆ

Bengaluru City

ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ, ಪ್ರತಿ ಮಂಗಳವಾರ ಕ್ಯಾಬಿನೆಟ್ ಸಭೆ

Public TV
Last updated: August 26, 2019 9:02 pm
Public TV
Share
3 Min Read
bs yeddyurppa
SHARE

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ 5 ಲಕ್ಷ ರೂ. ವೆಚ್ಚದಲ್ಲಿ ಹೊಸ ಮನೆ ನಿರ್ಮಾಣ ಮಾಡಿಕೊಡಲು ನಿರ್ಧರಿಸಲಾಗಿದೆ.

ಕರ್ನಾಟಕದಲ್ಲಿ ಉಂಟಾದ ಪ್ರವಾಹ ಪರಿಹಾರ ಸೇರಿದಂತೆ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಚುರುಕು ಮುಟ್ಟಿಸುವ ಹಿನ್ನೆಲೆಯಲ್ಲಿ ಇಂದಿನ ಸಂಪುಟ ಸಭೆ ಬಹುಮುಖ್ಯವಾಗಿತ್ತು. ಈ ಸಭೆಯಲ್ಲಿ ಸಚಿವರಾದ ಶ್ರೀರಾಮುಲು, ಜೆಸಿ ಮಾಧುಸ್ವಾಮಿ, ಗೋವಿಂದ ಕಾರಜೋಳ, ಸಿಸಿ ಪಾಟೀಲ್, ವಿ ಸೋಮಣ್ಣ, ನಾಗೇಶ್, ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಸಭೆಯಲ್ಲಿ ಪ್ರವಾಹದಿಂದ ಸಮಸ್ಯೆ ಎದುರಿಸಿದ್ದ ರಾಜ್ಯದ ಜನರಿಗೆ ಪರಿಹಾರ, ಪುನರ್ವಸತಿ ನೀಡುವ ಕಲ್ಪಿಸುವ ಬಗ್ಗೆ ಪ್ರಮುಖ ಚರ್ಚೆ ನಡೆಸಲಾಯಿತು.

CM BSY

ಕ್ಯಾಬಿನೆಟ್ ನಿರ್ಣಯಗಳು:
ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣಕ್ಕೆ ಒಪ್ಪಿಗೆ ನೀಡಿತು. ಅಲ್ಲದೇ ನೆರೆ ಪೀಡಿತ ಪ್ರದೇಶಗಳ ಕುಟುಂಬಗಳಿಗೆ ತಲಾ 10 ಸಾವಿರ ರೂ. ನೀಡುವ ನಿರ್ಧಾರದಂತೆ ಈಗಾಗಲೇ 1.35 ಲಕ್ಷ ಜನರಿಗೆ ಹಣ ಬಿಡುಗಡೆ ಮಾಡಲಾಯಿತು. ಈ ವೇಳೆ ಪರಿಹಾರ ಪಡೆಯಲು ಮತ್ತೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿ ಅವರಿಗೂ 10 ಸಾವಿರ ರೂ.ಗಳನ್ನು ನೀಡಲು ಒಪ್ಪಿಗೆ ನೀಡಿದರು.

ಕಳೆದ ಕ್ಯಾಬಿನೆಟ್ ಸಭೆಯ ವೇಳೆ ಸಂಪುಟ ವಿಸ್ತರಣೆ ಹಿನ್ನೆಲ್ಲಿ ಉಳಿದುಕೊಂಡಿದ್ದ ಸನ್ನಡತೆಯ ಆಧಾರದಲ್ಲಿ ಕೈದಿಗಳನ್ನು ಬಿಡುಗಡೆ ಮಾಡುವ ಪಟ್ಟಿಗೆ ಇಂದಿನ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. ಸ್ವತಂತ್ರ್ಯ ದಿನದ ಹಿನ್ನೆಲೆಯಲ್ಲಿ ಈ ಬಾರಿ ಬಿಡುಗಡೆಯಾಗಬೇಕಿದ್ದ ಒಬ್ಬ ಮಹಿಳಾ ಕೈದಿ ಸೇರಿ 140 ಜನರ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ತೀರ್ಮಾನಿಸಲಾಯಿತು.

BLG NH 4 A

ಹೊಸ ಪಿಂಚಣಿ ವ್ಯವಸ್ಥೆ ಅಡಿ ಪಿಂಚಣಿಯನ್ನು ರಾಜ್ಯದ ಪಾಲು ನೀಡುತ್ತ ಮೊತ್ತವನ್ನು ಶೇ.10 ರಿಂದ ಶೇ.14ಕ್ಕೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. 2019 ಏಪ್ರಿಲ್ ನಿಂದ ಹೊಸ ಪಿಂಚಣಿ ವ್ಯವಸ್ಥೆ ಅನ್ವಯವಾಗುವಂತೆ ನಿರ್ಣಯ ಕೈಗೊಳ್ಳಲಾಗಿದೆ.

ಮುಂದಿನ ಅವಧಿಯಲ್ಲಿ ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವ ದೃಷ್ಟಿಯಿಂದ ಪ್ರತಿ ಮಂಗಳವಾರ ಕ್ಯಾಬಿನೆಟ್ ಸಭೆ ನಡೆಸಲು ತೀರ್ಮಾನ ಮಾಡಲಾಯಿತು.

ಬರ ಪ್ರದೇಶಗಳಲ್ಲಿ ಬೋರ್‍ವೆಲ್ ಹಾಗೂ ಇನ್ನಿತರ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಮುಕ್ತಿಗೆ ಕ್ಯಾಬಿನೆಟ್ ನೀಡಿತು. 5 ಲಕ್ಷ ರೂ.ವರೆಗಿನ ಕಾಮಗಾರಿಗಳಿಗೆ ಟೆಂಡರ್ ಇಲ್ಲದೆಯೇ ಕಾಮಗಾರಿ ಆರಂಭಿಸುವ ಪ್ರಮುಖ ನಿರ್ಧಾರವನ್ನು ಕೈಗೊಳ್ಳಲಾಗಿದೆ.

rcr election bara 2

ಸಂಪುಟ ಉಪಸಮಿತಿ: ಅಂತರ್ ರಾಜ್ಯ ಜಲ ವಿವಾದಗಳ ನಿರ್ವಹಣೆ ಸೇರಿದಂತೆ ಕೇಂದ್ರದ ಜೊತೆ ಜಲ ವಿಚಾರವಾಗಿ ಸಮನ್ವಯ ಸಾಧಿಸಲು ಸಚಿವ ಸಂಪುಟ ಉಪ ಸಮಿತಿ ನೇಮಕ ಮಾಡಲಾಯಿತು. ಸಿಎಂ ಬಿಎಸ್‍ವೈ ನೇತೃತ್ವದಲ್ಲಿ ರಚನೆಯಾದ ಉಪ ಸಮಿತಿಯಲ್ಲಿ ಬಸವರಾಜ ಬೊಮ್ಮಾಯಿ, ಅಶೋಕ್, ಗೋವಿಂದ ಕಾರಜೋಳ ಸಮಿತಿ ಸದಸ್ಯರಾಗಿದ್ದಾರೆ.

ಕೇಂದ್ರಕ್ಕೆ ನಿಯೋಗ: ರಾಜ್ಯದಲ್ಲಿ ಭೂವಿಜ್ಞಾನಿಗಳ ಕೊರತೆ ಹಿನ್ನೆಲೆ ನಿವೃತ್ತ ಭೂ ವಿಜ್ಞಾನಿಗಳನ್ನ ಗುತ್ತಿಗೆ ಆಧಾರದಲ್ಲಿ ಮುಂದುವರಿಸಲು ತೀರ್ಮಾನ ಮಾಡಲಾಗಿದೆ. ನೆರೆಯಿಂದ ಹಾನಿಯಾದ ಕಬ್ಬು, ಕಾಫಿ, ಅಡಿಕೆ ಸೇರಿದಂತೆ ಇನ್ನಿತರ ಬೆಳೆಗಳಿಗೆ ವಿಮಾ ಸೌಲಭ್ಯ ಸೇರಿದಂತೆ ವಿಶೇಷ ಪ್ಯಾಕೇಜ್ ನೀಡಲು ಪ್ರಧಾನಿ ಮಂತ್ರಿಗಳ ಬಳಿ ಜನಪ್ರತಿನಿಧಿಗಳ ನಿಯೋಗ ತೆಗೆದುಕೊಂಡು ಹೋಗಲು ತೀರ್ಮಾನ ಮಾಡಲಾಗಿದೆ.

ಸಂಪುಟ ವಿಸ್ತರಣೆಯಾದ ಬಳಿಕ ನಡೆದ ಮೊದಲ ಸಭೆಗೆ ಆರ್ ಅಶೋಕ್ ತಡವಾಗಿ ಆಗಮಿಸಿದರು. ಸಂಪುಟ ವಿಸ್ತರಣೆ ಆದರೂ ಖಾತೆ ಹಂಚಿಕೆಯಾಗದ(ರಾತ್ರಿ 8 ಗಂಟೆಯ ವೇಳೆಗೆ ಖಾತೆ ಹಂಚಿಕೆ ಅಧಿಕೃತವಾಗಿ ಪ್ರಕಟಗೊಂಡಿತ್ತು) ಹಿನ್ನೆಲೆಯಲ್ಲಿ ನಾಯಕರ ಮುಖದಲ್ಲಿ ಅಸಮಾಧಾನ ಕಂಡು ಬಂತು. ಸಭೆ ಬಳಿಕ ಮಾತನಾಡಿದ ಸಚಿವ ಮಾಧುಸ್ವಾಮಿ, ನೆರೆ ಹಾವಳಿ ಹಿನ್ನೆಲೆ ಸಚಿವರು ಪ್ರವಾಸ ಮಾಡಿದ್ದೆವು. ಇಂದಿನ ಸಭೆಯಲ್ಲಿ ಪ್ರವಾಸ ಮಾಡಿದ್ದ ಸಂದರ್ಭದಲ್ಲಿ ಪಡೆದ ಮಾಹಿತಿಯೊಂದಿಗೆ ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ಚರ್ಚೆ ನಡೆಸಲಾಯಿತು. ಹೊಸ ಪಿಂಚಣಿ ಅನ್ವಯ ಶೇ.14 ರಷ್ಟು ನೀಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದ್ದು, ಇದರಿಂದ ರಾಜ್ಯ ಸರ್ಕಾರಕ್ಕೆ 250 ಕೋಟಿ ರೂ. ಹೊಣೆಯಾಗುತ್ತದೆ ಎಂದರು.

TAGGED:bengalurucabinet meetingCM BS YeddyurappadroughtKarnataka Flood ReliefPublic TVಕರ್ನಾಟಕ ಪ್ರವಾಹ ಪರಿಹಾರಕ್ಯಾಬಿನೆಟ್ ಸಭೆಪಬ್ಲಿಕ್ ಟಿವಿಬರಗಾಲಬೆಂಗಳೂರುಸಿಎಂ ಬಿಎಸ್ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
55 minutes ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
1 hour ago
01 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-1

Public TV
By Public TV
2 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
2 hours ago
02 6
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-2

Public TV
By Public TV
2 hours ago
03 5
Big Bulletin

ಬಿಗ್‌ ಬುಲೆಟಿನ್‌ 07 April 2026 ಭಾಗ-3

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?