ಸಿಎಂ ಬಂದ್ರು ಚೇರ್ ಕೊಡ್ರಪ್ಪ: ಸಿದ್ದರಾಮಯ್ಯ

Public TV
1 Min Read
Siddu Hospital with Ticker

– ರಾಜಾಹುಲಿ ಮೀಟ್ಸ್ ಹುಲಿಯಾ
– ಮಾಜಿ ಸಿಎಂ ಆರೋಗ್ಯ ವಿಚಾರಿಸಿದ ಬಿಜೆಪಿ ನಾಯಕರು

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ಮಾಡಿ ಆರೋಗ್ಯದ ಕುರಿತು ವಿಚಾರಿಸಿದರು. ಸಚಿವ ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಸಿದ್ದರಾಮಯ್ಯ ಭೇಟಿ ವೇಳೆ ಹಾಜರಿದ್ದರು.

ಸಿಎಂ ಬಿಎಸ್‍ವೈ ಆಗಮಿಸುತ್ತಿರುವುದನ್ನು ಕಂಡ ಕೂಡಲೇ ಅಚ್ಚರಿಗೊಂಡ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿಗಳು ಬಂದಿದ್ದಾರೆ. ಅವರಿಗೆ ಕುಳಿತುಕೊಳ್ಳಲು ಚೇರ್ ನೀಡಿ ಎಂದು ಹೇಳಿದರು. ಸಿದ್ದರಾಮಯ್ಯ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದ ಸಿಎಂ, ಸಂಪೂರ್ಣ ಚೇತರಿಕೆ ಆಗುವವರೆಗೂ ಆಸ್ಪತ್ರೆಯಲ್ಲೇ ಇದ್ದು, ಸಂಪೂರ್ಣವಾಗಿ ವಿಶ್ರಾಂತಿ ಪಡೆಯಿರಿ ಎಂದರು.

CM BSY SIDDARAMAIAH copy

ಸಿಎಂ ಸಲಹೆ ಪಡೆದ ಸಿದ್ದರಾಮಯ್ಯ ಅವರು ಡಾಕ್ಟರ್ ಇಲ್ಲೇ ಇದ್ದಾರೆ, ಸಂಪೂರ್ಣ ವಿಶ್ರಾಂತಿ ಪಡೆದಿಯುತ್ತೇನೆ ಎಂದರು. ಈ ವೇಳೆ ಮಧ್ಯ ಪ್ರವೇಶ ಮಾಡಿದ ಈಶ್ವರಪ್ಪ ಅವರು, ನಿಮಗೂ ಹಾರ್ಟ್ ಇದೆ ಎಂದು ಗ್ಯಾರಂಟಿ ಆಯ್ತು ಎಂದರು. ಈ ಮಾತಿಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ನನಗೆ ಹೃದಯ ಇಲ್ಲ ಎಂದುಕೊಂಡಿದ್ದೀರಾ ಎಂದು ಪ್ರಶ್ನಿಸಿದರು. ಹೃದಯ ಇಲ್ಲ ಎಂದು ನಾನು ಯಾವಾಗಲಾದರೂ ಬಾಯಿ ಬಿಟ್ಟು ಹೇಳಿದ್ದೇನಾ? ಎಂದು ನಗೆಚಟಾಕಿ ಹಾರಿಸಿದರು. ಈಶ್ವರಪ್ಪ ಮಾತಿನಿಂದ ನಗೆ ಬೀರಿದ ಸಿದ್ದರಾಮಯ್ಯ ಅವರು, ಹ್ಯೂಮನ್ ಆನಾಟಮಿ ಏನ್ ಓದ್ಕೋಂಡಿದ್ದೀಯಾಪ್ಪ….! ಎಂದರು.

ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಬಿಎಸ್‍ವೈ, ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಅವರು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಮನೆಗೆ ತೆರಳಿದರೆ ಹೆಚ್ಚಿನ ಕಾರ್ಯಕರ್ತರು ಅಗಮಿಸುವ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿಯೇ ಹೆಚ್ಚಿನ ವಿಶ್ರಾಂತಿ ಪಡೆಯುತ್ತಿದ್ದಾರೆ. ನಮ್ಮ ಭೇಟಿಯಿಂದ ಸಿದ್ದರಾಮಯ್ಯ ಅವರು ಸಂತಸ ವ್ಯಕ್ತಪಡಿಸಿದರು ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *