Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಹೆಚ್ಚು ಹೂಡಿಕೆ ಮಾಡಲು ಜಾಗತಿಕ ಕಂಪನಿಗಳ ಆಸಕ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಹೆಚ್ಚು ಹೂಡಿಕೆ ಮಾಡಲು ಜಾಗತಿಕ ಕಂಪನಿಗಳ ಆಸಕ್ತಿ

Bengaluru City

ರಾಜ್ಯದಲ್ಲಿ ಹೆಚ್ಚು ಹೂಡಿಕೆ ಮಾಡಲು ಜಾಗತಿಕ ಕಂಪನಿಗಳ ಆಸಕ್ತಿ

Public TV
Last updated: January 23, 2020 11:21 pm
Public TV
Share
2 Min Read
CM BSY DAVOS
SHARE

ದಾವೋಸ್: ವಿಶ್ವ ಆರ್ಥಿಕ ಸಮ್ಮೇಳನದ ಮೂರನೇ ದಿನವಾದ ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಉನ್ನತ ಮಟ್ಟದ ನಿಯೋಗವು ಹಲವಾರು ಜಾಗತಿಕ ಕಂಪನಿಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿತು. ಜೆಮಿನಿ ಕಾರ್ಪೊರೇಷನ್, ಕೋಕಾಕೋಲಾ ಕಂಪನಿ, ಉಬರ್, ಎಸ್‍ಎಪಿ ಲ್ಯಾಬ್ಸ್, ಜನರಲ್ ಎಲೆಕ್ಟ್ರಿಕ್ (ಜಿಇ), ಸ್ವಿಸ್‍ರೆ ಮತ್ತು ಮಿತ್ಸುಬಿಷಿ ಹೆವಿ ಇಂಡಸ್ಟ್ರೀಸ್ ನ ಪ್ರಮುಖರೊಂದಿಗೆ ಕರ್ನಾಟಕದಲ್ಲಿ ಬಂಡವಾಳ ತೊಡಗಿಸುವ ಬಗ್ಗೆ ಚರ್ಚೆ ನಡೆಸಿದರು.

ಕರ್ನಾಟಕದಲ್ಲಿ ಉದ್ದಿಮೆಗಳ ವಿಸ್ತರಣೆ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ತಮ್ಮ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ. ಸರ್ಕುಲರ್ ಎಕಾನಮಿ, ಇಂಧನ ಮತ್ತು ಮೊಬಿಲಿಟಿ ಕ್ಷೇತ್ರಕ್ಕೆ ಸಂಬಂಧಿಸಿದ ಕಂಪನಿಗಳ ಪ್ರತಿನಿಧಿಗಳೊಂದಿಗಿನ ತಮ್ಮ ಚರ್ಚೆಯಲ್ಲಿ ಮುಖ್ಯಮಂತ್ರಿಗಳು ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಿದರು.

CM BSY DAVOS a

ಇದೇ ವೇಳೆ ಉಬರ್ ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾರಾ ಖೋಸ್ರೋವ್ ಶಾಹಿ ಅವರು ಬೆಂಗಳೂರಿನಲ್ಲಿ ತಮ್ಮ ಉದ್ಯಮದ ವಿಸ್ತರಣೆ ಮಾಡಲಾಗುತ್ತದೆ ಮತ್ತು ಇನ್ನೂ ಹೆಚ್ಚಿನ ಬಂಡವಾಳ ಹೂಡಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು.

ಜಿಇ ಕಂಪನಿಯ ವಿಲಿಯಂ ಮೊ ಕೊವನ್ ಅವರನ್ನು ಭೇಟಿ ಮಾಡಿದ ಯಡಿಯೂರಪ್ಪ ಅವರು, ಆರೋಗ್ಯ ಕ್ಷೇತ್ರ, ವಿದ್ಯುತ್ ವಿತರಣೆ ಮತ್ತು ಪವನ ವಿದ್ಯುತ್ ಉತ್ಪಾದನೆಗೆ ಸಂಬಂಧಿಸಿದಂತೆ ರೂಪಿಸಿರುವ ಯೋಜನೆಗಳ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ, ಕೋಕಾಕೋಲಾದ ಪ್ರತಿನಿಧಿಗಳು 25 ದಶಲಕ್ಷ ಅಮೆರಿಕನ್ ಡಾಲರ್ ನಷ್ಟು ಬಂಡವಾಳವನ್ನು ಹೂಡಲಾಗುತ್ತದೆ ಮತ್ತು ಇದನ್ನು ಮುಂಬರುವ ದಿನಗಳಲ್ಲಿ 200 ದಶಲಕ್ಷ ಡಾಲರ್ ಗಳಿಗೆ ಹೆಚ್ಚಿಸಲಾಗುತ್ತದೆ. ಈ ಬಂಡವಾಳದಿಂದ ರೈತರಿಗೆ, ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ವಿನಿಯೋಗ ಮಾಡಲಾಗುತ್ತದೆ ಎಂದು ವಿವರಿಸಿದರು.

l

ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಸ್ಟ್ರಾಟೆಜಿಕ್ ಔಟ್ ಲುಕ್ ಇಂಡಿಯಾ ಫಾರ್ ಯುಎಸ್ ಡಾಲರ್ 5 ಟ್ರಿಲಿಯನ್ ಎಕಾನಮಿ ಫಾರ್ ಇಂಡಿಯಾ ಎಂಬ ಸಂವಾದದಲ್ಲಿ ಪಾಲ್ಗೊಂಡರು. ಈ ಸಂವಾದದಲ್ಲಿ ಕೇಂದ್ರ ರೈಲ್ವೆ ಮತ್ತು ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್, ಎಸ್ ಬಿಐ ನ ಅಧ್ಯಕ್ಷ ರಜನೀಶ್ ಕುಮಾರ್ ಸೇರಿದಂತೆ ಮತ್ತಿತರೆ ಪ್ರಮುಖರು ಹಾಜರಿದ್ದರು.

ಯುಎಸ್ ಡಾಲರ್ 5 ಟ್ರಿಲಿಯನ್ ಎಕಾನಮಿ ಗುರಿ ತಲುಪಲು ಭಾರತದ ಎಲ್ಲಾ ರಾಜ್ಯಗಳು ಕೈಜೋಡಿಸುತ್ತಿವೆ. ನಮ್ಮ ರಾಜ್ಯ ಕರ್ನಾಟಕ 250 ಬಿಲಿಯನ್ ಯುಎಸ್ ಡಾಲರ್ ನಷ್ಟು ಜಿಡಿಪಿಯನ್ನು ಹೊಂದಿದ್ದು, ಶೇ.9ರ ಪ್ರಮಾಣದಲ್ಲಿ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಾವು ಇಲ್ಲಿ ವಿಶ್ವ ಆರ್ಥಿಕ ಸಮ್ಮೇಳನದ ಮೂಲಕ ನಮ್ಮ ರಾಜ್ಯಗಳಲ್ಲಿ ಹೂಡಿಕೆ ಮಾಡಲು ಉದ್ಯಮಿಗಳಿಗೆ ಮತ್ತು ವಾಣಿಜ್ಯೋದ್ಯಮಿಗಳಿಗೆ ಮುಕ್ತ ಆಹ್ವಾನ ನೀಡುತ್ತಿದ್ದೇವೆ ಎಂದು ಯಡಿಯೂರಪ್ಪ ತಿಳಿಸಿದರು.

CM BSY FOREIGN 1

ಯಡಿಯೂರಪ್ಪ ನೇತೃತ್ವದ ನಿಯೋಗದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಜಗದೀಶ್ ಶೆಟ್ಟರ್, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಐಟಿ, ಬಿಟಿ ಮತ್ತು ಎಸ್&ಟಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕಾಭಿವೃದ್ಧಿ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ ಸೇರಿದಂತೆ ರಾಜ್ಯ ಸರ್ಕಾರದ ಉನ್ನತಾಧಿಕಾರಿಗಳು ಇದ್ದರು.

TAGGED:CM BS YeddyurappaCM BSYDavosGlobal OrganizationindustryPublic TVಕೈಗಾರಿಕೆಜಾಗತಿಕ ಸಂಸ್ಥೆದಾವೋಸ್ಪಬ್ಲಿಕ್ ಟಿವಿಸಿಎಂ ಬಿಎಸ್ ಯಡಿಯೂರಪ್ಪಸಿಎಂ ಬಿಎಸ್‍ವೈ
Share This Article
Facebook Whatsapp Whatsapp Telegram

Cinema news

Koppal Anjanadri Temple Rishab Shetty
ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ರಿಷಬ್ ಶೆಟ್ಟಿ ದಂಪತಿ ಭೇಟಿ
Cinema Districts Karnataka Koppal Latest Sandalwood Top Stories
sudeep darshan
ದರ್ಶನ್‌ಗೆ ಯಾವಾಗ್ಲೂ ಒಳ್ಳೆಯದಾಗಲಿ ಎಂದು ಬಯಸುತ್ತೇನೆ: ಸುದೀಪ್
Cinema Latest Main Post Sandalwood
Sangeetha Bhat
ನೀಳ ಕೇಶರಾಶಿಗೆ ಕತ್ತರಿ ಹಾಕಿದ ಸಂಗೀತಾ ಭಟ್
Cinema Latest Sandalwood Top Stories
Rashmika Mandanna Mysaa
ರಶ್ಮಿಕಾ ಮಂದಣ್ಣ `ಮೈಸಾ’ ಸಿನಿಮಾದ ಮೊದಲ ಗ್ಲಿಂಪ್ಸ್‌ ರಿಲೀಸ್
Cinema Latest South cinema Top Stories

You Might Also Like

pm modi 6
Bengaluru City

Chitradurga Bus Accident| PNRF ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ: ಮೋದಿ ಸಂತಾಪ

Public TV
By Public TV
19 minutes ago
7 Killed As Bus Collides With 2 Cars After Tyre Explodes In Tamil Nadu
Crime

ಟೈರ್ ಸ್ಫೋಟಗೊಂಡು 2 ಕಾರಿಗೆ ಡಿಕ್ಕಿ ಹೊಡೆದ ಬಸ್‌ – 7 ಮಂದಿ ದುರ್ಮರಣ

Public TV
By Public TV
1 hour ago
hiriyur bus accident truck hits diesel tank Bus Catches Fire Seabird Company 1
Bengaluru City

ಬಸ್ಸಿನ ಡೀಸೆಲ್‌ ಟ್ಯಾಂಕ್‌ಗೆ ಟ್ರಕ್‌ ಗುದ್ದಿದ್ದರಿಂದ ದುರಂತ – ಸೀಬರ್ಡ್‌ ಮಾಲೀಕ

Public TV
By Public TV
1 hour ago
Ravikanthe Gowda IGP
Chitradurga

ಬಸ್ಸಿನಲ್ಲಿದ್ದ 8 ಪ್ರಯಾಣಿಕರು, ಲಾರಿ ಡ್ರೈವರ್‌ ಸೇರಿ 9 ಮಂದಿ ಸಾವು: ಐಜಿಪಿ ರವಿಕಾಂತೇಗೌಡ

Public TV
By Public TV
2 hours ago
Bus Cleaner react on 10 killed as bus catches fire after collision with truck in hiriyur chitradurg
Chitradurga

ಹಿರಿಯೂರು | ಖಾಸಗಿ ಬಸ್‌ ದುರಂತ – ಏನಾಗಿದೆ ಅಂತಾನೇ ಗೊತ್ತಾಗಲಿಲ್ಲ: ಶಾಕ್‌ನಲ್ಲೇ ವಿವರಿಸಿದ ಕ್ಲೀನರ್‌

Public TV
By Public TV
2 hours ago
17 killed as bus catches fire after collision with truck in hiriyur chitradurga 1
Chitradurga

ಹಿರಿಯೂರು| ಲಾರಿ ಡಿಕ್ಕಿಗೆ ಖಾಸಗಿ ಬಸ್ ಧಗಧಗ – 10 ಮಂದಿ ಸಜೀವ ದಹನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?