-ಮನೆ ಕಳೆದುಕೊಂಡವರಿಗೆ ಮಾಸಿಕ 5 ಸಾವಿರ ರೂ.
ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಉದ್ಯಮಿಗಳೊಂದಿಗೆ ನಡೆದ ಸಭೆಯಲ್ಲಿ ಸಿಎಂ ಮಹತ್ವದ ನಿರ್ಧಾರವನ್ನು ತಿಳಿದಿದ್ದು, 10 ಕೋಟಿ ರೂ.ಗಳಿಗೂ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನು ಗ್ರಾಮಗಳಿಗೆ ನಾಮಕರಣ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ನೆರೆ ಪೀಡಿತ ಗ್ರಾಮಗಳ ಪುನಶ್ಚೇತನಕ್ಕೆ 10 ಕೋಟಿ ರೂ.ಗಳಿಗೂ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನು ಪುನಶ್ಚೇತನಗೊಳ್ಳುವ ಗ್ರಾಮಗಳಿಗೆ ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ಇತ್ತ ನೆರೆ ಸಂತ್ರಸ್ತರಿಗೆ ಸಹಾಯ ಮಾಡಲು ಸಿಎಂ ಅವರು ಮಾಡಿದ್ದ ಮನವಿಗೆ ಸಹಾಯದ ಹಸ್ತಚಾಚಿರುವ 60ಕ್ಕೂ ಹೆಚ್ಚು ಕೈಗಾರಿಕೋದ್ಯಮಿಗಳು ಸಿಎಂ ಅವರಿಗೆ ನೆರವಿನ ಭರವಸೆಯನ್ನು ನೀಡಿದ್ದಾರೆ.
ಮುಖ್ಯಮಂತ್ರಿ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಆಗಸ್ಟ್ 9ರಿಂದ ಈವರೆಗೆ 4.09 ಕೋಟಿ ರೂ. ದೇಣಿಗೆ ಸಂಗ್ರಹವಾಗಿದೆ.
ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಬಯಸುವವರು https://t.co/L62FUnX45i ವೆಬ್ ತಾಣದಲ್ಲಿ ಆರ್.ಟಿ. ಜಿ.ಎಸ್. ಅಥವಾ ಎನ್.ಇ.ಎಫ್.ಟಿ. ಮೂಲಕ ನೇರವಾಗಿ ಹಣ ಪಾವತಿಸಬಹುದು.https://t.co/L62FUnX45i
— CM of Karnataka (@CMofKarnataka) August 14, 2019
ಪ್ರಮುಖವಾಗಿ ಬ್ರಿಟಾನಿಯಾ ಕಂಪನಿಯು ಆಹಾರ ಪದಾರ್ಥಗಳ ಕೊಡುಗೆ. ಟಿವಿಎಸ್ ಮೋಟಾರು ಸಂಸ್ಥೆ 1 ಕೋಟಿ ರೂ., ಜಿಎಸ್ಕೆ ಸಂಸ್ಥೆ ಹಾಗೂ ಯೂನಿವರ್ಸಲ್ ಬಿಲ್ಡರ್ಸ್ ಎಲ್ಲಾ ಜಿಲ್ಲೆಯಲ್ಲೂ ಪ್ರಾಥಮಿಕ ಆರೋಗ್ಯ ಕೇಂದ್ರ ಪುನಶ್ಚೇತನಕ್ಕೆ ಆದ್ಯತೆ ನೀಡುವ ಭರವಸೆಯನ್ನು ನೀಡಿದೆ. ಶಾಹಿ ಎಕ್ಸ್ ಪೋಟ್ರ್ಸ್ ಮಹಿಳೆಯರಿಗೆ ಸೀರೆ ಹಾಗೂ ಉಡುಪುಗಳ ನೆರವು. ಕಾರ್ಪೋರೇಷನ್ ಬ್ಯಾಂಕ್ ಒಂದು ವಾರದಲ್ಲಿ ದೇಣಿಗೆ ಮೊತ್ತವನ್ನು ಸಿಎಂ ಪರಿಹಾರ ನಿಧಿಗೆ ನೀಡಲು ತೀರ್ಮಾನ ಮಾಡಿದೆ. ಟಯೋಟ ಸಂಸ್ಥೆಯಿಂದ 2 ಕೋಟಿ ರೂ., ಲೋಗೋಸ್ಗ್ರೂಪ್ 25 ಲಕ್ಷ ರೂ., ಕ್ರೆಡಾಯ್ ಸಂಸ್ಥೆಯಿಂದ 3 ಕೋಟಿ ರೂ. ಹಾಗೂ ವೋಲ್ವೋ ಗ್ರೂಪ್ನ ನೌಕರರ ಒಂದು ದಿನದ ಸಂಬಳ ಕೊಡಲು ನಿರ್ಧಾರ ಮಾಡಲಾಗಿದೆ. ಯುನೈಟೆಡ್ ಟೆಕ್ನಾಲಜಿಯಿಂದ ಅಗತ್ಯ ಮೂಲಸೌಕರ್ಯ ಪೂರೈಕೆ, ಜೆಕೆ ಸಿಮೆಂಟ್, ಆಹಾರ ಪದಾರ್ಥಗಳ ನೆರವು ನೀಡುವ ಭರವಸೆ ನೀಡಿದೆ ಎಂಬ ಮಾಹಿತಿ ಲಭಿಸಿದೆ.
*ದುಂದುವೆಚ್ಚವಿಲ್ಲದ ಸಾಂಪ್ರದಾಯಿಕ ದಸರಾ ಆಚರಣೆ–ಮುಖ್ಯಮಂತ್ರಿ ಯಡಿಯೂರಪ್ಪ*
ನಾಡಹಬ್ಬ ಮೈಸೂರು ದಸರಾವನ್ನು ಈ ಬಾರಿ ದುಂದುವೆಚ್ಚವಿಲ್ಲದೆ ಸಾಂಪ್ರದಾಯಿಕವಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.https://t.co/KhPpbtbTGR pic.twitter.com/4Sj6pnBkoy
— CM of Karnataka (@CMofKarnataka) August 14, 2019
ಮಾಸಿಕ 5 ಸಾವಿರ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಮಾಡಿರುವ ಸರ್ಕಾರ, ಪ್ರವಾಹದಲ್ಲಿ ಸಂಪೂರ್ಣ ಮನೆಯನ್ನು ಕಳೆದುಕೊಂಡವರಿಗೆ ಮಾಸಿಕ 5 ಸಾವಿರ ರೂ.ಗಳನ್ನು 10 ತಿಂಗಳ ಅವಧಿಗೆ ನೀಡಲು ಒಪ್ಪಿಗೆ ನೀಡಲಾಗಿದೆ. ಆಯಾ ಜಿಲ್ಲೆಯಗಳ ಅಧಿಕಾರಿಗಳಿಗೆ ದಾಖಲೆಗಳನ್ನು ನೀಡಿ ನೆರವು ಪಡೆಯಲು ಸೂಚಿಸಲಾಗಿದೆ.
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದ ಹಿನ್ನೆಲೆಯಲ್ಲಿ ದಸರಾವನ್ನು ಸರಳವಾಗಿ ಆಚರಣೆ ಮಾಡಲು ನಿರ್ಧಾರ ಮಾಡಲಾಗಿದ್ದು, 20.5 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ನಿರ್ಧಾರ ಮಾಡಲಾಗಿದೆ. ತಕ್ಷಣ ಪ್ರವಾಹ ಸಂತ್ರಸ್ಥರಿಗೆ ಪರಿಹಾರ ನೀಡಲು ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿದೆ. ಎನ್.ಡಿ.ಆರ್.ಎಫ್.ನಿಂದ ಲಭಿಸುವ 6,200 ರೂ.ಗಳೊಂದಿಗೆ ರಾಜ್ಯ ಸರ್ಕಾರದ 3,800 ರೂ.ಗಳನ್ನು ಸೇರಿಸಿ ಒಟ್ಟು 10 ಸಾವಿರ ರೂ.ಗಳ ಪರಿಹಾರವಾಗಿ ನೀಡಲಾಗುತ್ತದೆ.