ಗಾಂಧೀನಗರ: ಕರ್ನಾಟಕದಲ್ಲಿ (Karnataka) ಇತ್ತೀಚೆಗೆ ಮುಖ್ಯಮಂತ್ರಿ ಬದಲಾವಣೆ ಮಾಡಲಾಗಿದೆ. ಇದರಿಂದ ಕಾಂಗ್ರೆಸ್ (Congress) ವಿರುದ್ಧವೂ ಸಾರ್ವಜನಿಕರ ತೀವ್ರ ಆಕ್ರೋಶವಿದೆ ಎಂದು ಪ್ರಧಾನಿ ಮೋದಿ (PM Modi) ಹೇಳಿದ್ದಾರೆ.
ಗುಜರಾತ್ಗೆ ಭೇಟಿ ನೀಡಿದ ಸಂದರ್ಭದಲ್ಲಿ `ಸ್ವಾವಲಂಬಿ ಭಾರತ’ ಅಭಿಯಾನದಡಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದರು. ಕಾಂಗ್ರೆಸ್ ಅಥವಾ ರಾಹುಲ್ ಗಾಂಧಿಯ ಹೆಸರನ್ನು ಉಲ್ಲೇಖಿಸದೇ, ಕೆಲವರು ಭಾರತವನ್ನು ಕೆಣಕಲು ಬಯಸುತ್ತಾರೆ. ಬಿಜೆಪಿಯ ರಾಜಕೀಯ ಯಶಸ್ಸನ್ನು ಉಲ್ಲೇಖಿಸಿದ ಅವರು, ದೇಶವು ಅವ್ಯವಸ್ಥೆ, ಅನಿಶ್ಚಿತತೆ ಮತ್ತು ಹತಾಶೆಯನ್ನು ಮೆಚ್ಚುವುದಿಲ್ಲ. ಕಳೆದ 12 ವರ್ಷಗಳಿಂದ, ಕಾಂಗ್ರೆಸ್ ಅವ್ಯವಸ್ಥೆ ಮತ್ತು ಅನಿಶ್ಚಿತತೆಯನ್ನು ಹರಡುವ ಮೂಲಕ ಅವಕಾಶಗಳನ್ನು ಹುಡುಕುತ್ತಿದೆ, ಆದರೆ ದೇಶದ ಜನರು ಪದೇ ಪದೇ ಸೂಕ್ತ ಉತ್ತರವನ್ನು ನೀಡಿದ್ದಾರೆ. ನೀವು ಕಾಂಗ್ರೆಸ್ ಅನ್ನು ಅಂಚಿನಲ್ಲಿಟ್ಟಿದ್ದೀರಿ. ಕಾಂಗ್ರೆಸ್ ಸರ್ಕಾರಗಳಿರುವಲ್ಲೆಲ್ಲಾ ಜನರು ಕಾಂಗ್ರೆಸ್ನ ದುರಾಡಳಿತದಿಂದ ಬೇಸತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿಯಾದ ಬಸವರಾಜ್ ಬೊಮ್ಮಾಯಿ
ಕರ್ನಾಟಕದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಬದಲಾವಣೆ ಮಾಡಲಾಗಿದೆ. ಇದರಿಂದ ಕಾಂಗ್ರೆಸ್ ವಿರುದ್ಧವೂ ಸಾರ್ವಜನಿಕರ ತೀವ್ರ ಆಕ್ರೋಶವಿದೆ. ಹಿಮಾಚಲದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಉಲ್ಲೇಖಿಸಿ ಅಲ್ಲಿನ ಜನರು ಕಾಂಗ್ರೆಸ್ನ ದುರಾಡಳಿತವನ್ನು ತಿರಸ್ಕರಿಸಿದರು. ಕಳೆದ ವರ್ಷ, ಹರಿಯಾಣ ಮತ್ತು ಪಂಜಾಬ್ನ ಜನರು ಸಹ ಕಾಂಗ್ರೆಸ್ಗೆ ಸ್ಪಷ್ಟ ಸಂದೇಶವನ್ನು ಕಳುಹಿಸಿದ್ದಾರೆ. ಗೊಂದಲದಲ್ಲಿ ಅವಕಾಶವನ್ನು ಕಂಡುಕೊಳ್ಳುವ ಕಾಂಗ್ರೆಸ್ನ ರಾಜಕೀಯವು ಕೆಲಸ ಮಾಡುವುದಿಲ್ಲ ಎಂದು ಸಾರ್ವಜನಿಕರು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಸೂರತ್ನ ಹಜೀರಾ ಹಾಗೂ ಅಂತರರಾಜ್ಯ ರಸ್ತೆ ಜಾಲವನ್ನು ಉಲ್ಲೇಖಿಸಿ, ಕೆಲವರು ದೇಶದಲ್ಲಿ ಹತಾಶೆಯ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ ಮೋದಿ, ಯಾರನ್ನೂ ಹೆಸರಿಸದೆ, ಹತಾಶೆಯ ವಾತಾವರಣವನ್ನು ಸೃಷ್ಟಿಸುವುದರ ಜೊತೆಗೆ, ಈ ಜನರು ಸ್ವಾವಲಂಬಿ ಭಾರತ ಅಭಿಯಾನವನ್ನು ಸಹ ಅಪಹಾಸ್ಯ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: 3,395 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ
